ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬದನಗೋಡು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸುತ್ತಮುತ್ತಲಿನ ಜನರ ತೀರಾ ಅಗತ್ಯವಾಗಿದ್ದು, ಇದಕ್ಕೆ ಕಾಯಕಲ್ಪ ನೀಡುವ ಅಗತ್ಯವಿದೆ.
ಈ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವಿದ್ದು, ಆರೋಗ್ಯ ಸಲಕರಣೆಗಳ ಕೊರತೆ ಕೇಂದ್ರದಲ್ಲಿ ಕಾಡುತ್ತಿದೆ. ಶಿವಮೊಗ್ಗ ಹಾಗೂ ಹಾವೇರಿ ಜಿಲ್ಲೆಯ ಗಡಿ ಭಾಗವಾದ ಈ ಪ್ರದೇಶದಲ್ಲಿ ಸುತ್ತಮುತ್ತಲ ಹಲವು ಗ್ರಾಮಸ್ಥರು ಇಲ್ಲಿಗೆ ಚಿಕಿತ್ಸೆಗಾಗಿ ಬರುತ್ತಾರೆ. ಆದರೆ, ಇಲ್ಲಿನ ವೈದ್ಯರಿಗೆ ಚಿಕಿತ್ಸೆ ನೀಡಲು ವೈದ್ಯಕೀಯ ಸಲಕರಣೆಗಳ ಕೊರತೆ ಕಾಡುತ್ತಿದ್ದು, ಇದು ರೋಗಿಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ ಎಂದು ಸಾರ್ವಜನಿಕರು ಆರೋಪಿಸುತ್ತಾರೆ.
ಈ ಹಿನ್ನೆಲೆಯಲ್ಲಿ ತಾಲೂಕು ಆಡಳಿತ ಹಾಗೂ ಜಿಲ್ಲಾಡಳಿತ ಈ ಬಗ್ಗೆ ಗಮನಹರಿಸಿ, ಈ ಆರೋಗ್ಯ ಕೇಂದ್ರಕ್ಕೆ ಅಗತ್ಯವಿರುವ ವೈದ್ಯಕೀಯ ಸಲಕರಣೆಗಳು ಹಾಗೂ ಔಷಧಿ ಸರಬರಾಜಿಗೆ ಕ್ರಮ ಕೈಗೊಳ್ಳಬೇಕಾಗಿದೆ.
Get in Touch With Us info@kalpa.news Whatsapp: 9481252093
Discussion about this post