Sunday, June 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಭದ್ರಾವತಿ ತಾಪಂ ಸಭೆಯಲ್ಲಿ ನೀರಾವರಿ ಅಧಿಕಾರಿಗೆ ಹಿಗ್ಗಾಮುಗ್ಗಾ ತರಾಟೆ

June 25, 2019
in Small Bytes, ಭದ್ರಾವತಿ
0 0
0
Share on facebookShare on TwitterWhatsapp
Read - 2 minutes

ಭದ್ರಾವತಿ: ತಾಪಂ ಸಭಾಂಗಣದಲ್ಲಿ ಆಶಾ ಶ್ರೀಧರ್ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಾಮಾನ್ಯ ಸಭೆಯಲ್ಲಿ ನೀರಾವರಿ ಇಲಾಖೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಕೊಟ್ರಪ್ಪ ರವರನ್ನು ಸದಸ್ಯರು ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು.

ಕಾರ್ಯನಿರ್ವಾಹಕ ಅಧಿಕಾರಿ ತಮ್ಮಣ್ಣಗೌಡ ತಾಲೂಕಿನ ಡಿ.ಬಿ.ಹಳ್ಳಿ ಗ್ರಾಮದ ನೀರಾವರಿ ಇಲಾಖೆಯ ಅಧಿಕಾರಿಗಳನ್ನು ಸಭೆಗೆ ಮಾಹಿತಿ ನೀಡುವಂತೆ ಸೂಚಿಸಿದಾಗ ತಬ್ಬಿಬ್ಬಾದ ಅಧಿಕಾರಿ ಕೊಟ್ರಪ್ಪ ರವರನ್ನು ಸದಸ್ಯ ಧರ್ಮೇಗೌಡ (ಕುಮ್ರಿ ಚಂದ್ರಣ್ಣ) ಸಭೆಗೆ ಆಗಮಿಸುವ ಮುನ್ನ ತಯಾರಿ ಮಾಡಿಕೊಂಡು ಬರದೆ ಸಭೆಯಲ್ಲಿ ನಡಾವಳಿಗಳನ್ನು ಓದಿ ತಿಳಿಸುವುದಾದರೆ ಸಭೆಗೆ ಏಕೆ ಬರುತ್ತೀರಿ ಎಂದು ಸಭೆಯ ಆರಂಭಕ್ಕೂ ಮುನ್ನ ಕಿಡಿ ಕಾರಿದಾಗ ದನಿ ಗೂಡಿಸಿದ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ತಿಪ್ಪೇಶ್ ರಾವ್ ಹಾಗು ಮಂಜುನಾಥ್ ಅಧಿಕಾರಿಗಳ ಮೇಲೆ ಹರಿಹಾಯ್ದರು.

ಕುಡಿಯುವ ನೀರು ಸರಬರಾಜು ಮಾಡುವ ಕೆರೆಗಳಲ್ಲಿ ಆಳೆತ್ತರ ಗಿಡಗಂಟಿಗಳು ಬೆಳದು ಕೆರೆಗಳನ್ನು ಅಶುದ್ದ ಗೊಳಿಸಿವೆ. ಈ ಕೆರೆಗಳಿಂದ ಸರಬರಾಜಾಗುವ ನೀರು ಸಾರ್ವಜನಿಕರ ಸೇವಿಸುವುದರಿಂದ ಆರೋಗ್ಯದ ಮೇಲೆ ದುಶ್ಪರಿಣಾಮ ಬೀರುತ್ತಿದೆ. ಸಭೆಯಲ್ಲಿ ಅಧಿಕಾರಿಗಳು ಶುದ್ದ ಕುಡಿಯುವ ನೀರು ಒದಗಿಸುತ್ತಿರುವುದಾಗಿ ಹೇಳುತ್ತಾರೆ. ಕೆರೆಯ ಸ್ವಚ್ಚತೆ ಇಲ್ಲದಾಗ ನೀರು ಎಲ್ಲಿ ಸ್ವಚ್ಚವಾಗಿರುತ್ತದೆ. ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಶುದ್ದ ಕುಡಿಯುವ ನೀರಿನ ಘಟಕ ಸ್ಥಾಪಿಸುವಂತೆ ಸಭೆಯಲ್ಲಿ ಒತ್ತಾಯಿಸಿ, ಕುಡಿಯುವ ನೀರಿಗೆ ಹೆಚ್ಚಿನ ಆಧ್ಯತೆ ಕೊಡಬೇಕಾಗಿರುವುದು ಜನಪ್ರತಿನಿಧಿಗಳ ಹಾಗು ಅಧಿಕಾರಿಗಳ ಜವಾಬ್ದಾರಿಯಾಗಿದೆ. ಆರೋಗ್ಯ ಇಲಾಖೆ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯೊಂದಿಗೆ ಕೈ ಜೋಡಿಸುವ ಮೂಲಕ ಜನರ ಆರೋಗ್ಯ ಕಾಪಾಡಲು ಮುಂದಾಗಬೇಕು ಎಂದು ಸದಸ್ಯ ಧರ್ಮೇಗೌಡ ಸಭೆಯಲ್ಲಿ ತಿಳಿಸಿದರು.

ಧ್ವನಿ ಗೂಡಿಸಿದ ಸದಸ್ಯ ಪ್ರೇಮ್ ಕುಮಾರ್ ಬಾರಂದೂರು ಗ್ರಾಮದಲ್ಲಿಯೂ ಶುದ್ದ ಕುಡಿಯುವ ನೀರಿನ ಘಟಕವಿಲ್ಲದೆ ಹೊಳೆಯಿಂದ ಬರುತ್ತಿರುವ ನೀರನ್ನು ಕುಡಿಯಲು ಬಳಸಲಾಗುತ್ತಿದೆ. ಕುಡಿಯುವ ನೀರನ್ನು ಶುದ್ದಿಕರಿಸಿ ಸರಬರಾಜು ಮಾಡುವಂತೆ ಸಭೆಗೆ ಎಚ್ಚರಿಸಿದಾಗ, ಸಮಾಜಾಯಿಸಿ ನೀಡಿದ ತಾಪಂ ಇಒ ತಮ್ಮಣ್ಣಗೌಡ ಕುಡಿಯುವ ನೀರಿನ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಆರೋಗ್ಯ ಹಾಗು ಕುಡಿಯುವ ನೀರು ಸರಬರಾಜು ಇಲಾಖೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಶಿಕ್ಷಣ ಇಲಾಖೆವತಿಯಿಂದ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡಲಾಗುತ್ತಿರುವ ಬೈಸಿಕಲ್‍ಗಳನ್ನು ಕಳೆದ ಭಾರಿ ಪರೀಕ್ಷೆ ಮುಗಿದರು ನೀಡಿರಲಿಲ್ಲ. ಅವುಗಳ ಮಾಹಿತಿಯನ್ನು ಶಿಕ್ಷಣ ಇಲಾಖೆ ಸಭೆಗೆ ತಿಳಿಸುವಂತೆ ಸದಸ್ಯ ಧರ್ಮೆಗೌಡ ಒತ್ತಾಯಿಸಿದಾಗ ಬಿಇಒ ಎಂ.ಸಿ.ಆನಂದ್ ಕಳೆದ ಬಾರಿ ಎಲ್ಲಾ ಶಾಲೆಗಳಿಗೆ ನಿಗದಿತ ಅವಧಿಯಲ್ಲಿ ಸೈಕಲ್ ವಿತರಣೆ ಮಾಡಲಾಗಿತ್ತು. ತಾಂತ್ರಿಕ ತೊಂದರೆಯಿಂದ ಕೆಲ ಶಾಲೆಗಳಿಗೆ ತಡವಾಗಿ ಏಪ್ರಿಲ್ ತಿಂಗಳಲ್ಲಿ ನೀಡಲಾಯಿತು ಎಂದು ಸಮಜಾಯಿಸಿ ನೀಡಿದರು.

ತಾಪಂ ಕಛೇರಿಯಲ್ಲಿ ಖಾಲಿ ಸ್ಥಾನಗಳನ್ನು ತುಂಬದಿರುವುದರಿಂದ ಕರ್ತವ್ಯ ನಿರ್ವಹಿಸುತ್ತಿರುವವರಿಗೆ ಹೆಚ್ಚಿನ ಹೊರೆಯಾಗಿದೆ. ಇರುವ ಸಿಬ್ಬಂದಿಗಳಿಗೆ ಕೆಲಸದ ಅರಿವಿಲ್ಲದಂತಾಗಿ ಸಮಸ್ಯೆಗಳ ಮಾಹಿತಿ ಕೇಳಿದಾಗ ಕೆಲಸ ಹೇಳಿದರೆ ನಾವೇ ಮಾಡಬೇಕಾ ಎನ್ನುತ್ತಾರೆಂದು ಸದಸ್ಯ ಕೆ.ಮಂಜುನಾಥ್ ಇಓ ರವನ್ನು ಕೇಳಿದಾಗ ಸಮಸ್ಯೆಗಳ ಕುರಿತು ಸರಕಾರಕ್ಕೆ ಮಾಹಿತಿ ನೀಡಲಾಗಿದೆ ಎಂದು ತಿಳಿಸಿದರು.

ಸದಸ್ಯ ದಿನೇಶ್ ಮಾತನಾಡಿ, ಸೈದರ ಕಲ್ಲಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಹಲವಾರು ತಿಂಗಳಿಂದ ಬೆಳಿಗ್ಗೆ 10 ಕ್ಕೆ ವಿದ್ಯುತ್ ನೀಡುತ್ತಿದ್ದಾರೆ. ಶಾಲೆಗಳು ಆರಂಭವಾಗಿರುವುದರಿಂದ ಮಕ್ಕಳಿಗೆ ಬೆಳಗಿನ ಆಹಾರ ತಯಾರಿಸಲು ಅನಾನುಕೂಲವಾಗಿದೆ. “ದೋಸೆ ಮಾಡಿ ಚಟ್ನಿ ರುಬ್ಬಲು ಪರ್ಯಾಯವಾಗಿರುವ ಮನೆಗಳನ್ನು ಹುಡುಕುವಂತಾಗಿದೆ”. ಸಮಯ ಬದಲಿಸಿ ಬೆಳಿಗ್ಗೆ 6 ಗಂಟೆಯಿಂದ ವಿದ್ಯುತ್ ನೀಡುವುದರಿಂದ ಅನುಕೂಲವಾಗಲಿದೆ ಎಂದಾಗ, ಹೊಳೆಹೊನ್ನೂರು ಮೆಸ್ಕಾಂ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಚಂದ್ರಪ್ಪ ನಿರಂತರ ವಿದ್ಯುತ್ ಸರಬರಾಜು ಮಾಡುವ ಮೂಲಕ ಸಮಸ್ಯೆ ಸರಿಪಡಿಸುವುದಾಗಿ ಹೇಳಿದರು. ಗ್ರಾಮದಲ್ಲಿ ಕುಡಿಯುವ ನೀರಿನ ಸರಬರಾಜಿಗೆ ನೂತನವಾಗಿ ಟ್ರಾನ್ಸ್‍ಫರ್ಮರ್ ಅವಶ್ಯಕತೆ ಇದ್ದು ವ್ಯವಸ್ಥೆ ಮಾಡಿಕೊಳ್ಳುವಂತೆ ಮೆಸ್ಕಾಂ ಇಂಜಿನಿಯರ್ ಚಂದ್ರಪ್ಪ ರವರಿಗೆ ಇಓ ತಮ್ಮಣ್ಣಗೌಡ ಆದೇಶಿಸಿದರು.

ಅರಬಿಳಚಿ ಗ್ರಾಪಂ ವ್ಯಾಪ್ತಿಯಲ್ಲಿ ವಿದ್ಯುತ್ ತಂತಿಗಳು ಜೋತು ಬಿದ್ದಿವೆ. ಇವುಗಳನ್ನು ಸರಿಪಡಿಸುವಂತೆ ಹಲವಾರು ಬಾರಿ ದೂರವಾಣಿ ಮೂಲಕ ಮಾಹಿತಿ ನೀಡಿದ್ದರು ಸಹ ಕ್ರಮಕ್ಕೆ ಮುಂದಾಗಿರುವುದಿಲ್ಲ ಎಂದು ಸದಸ್ಯ ಅಣ್ಣಾಮಲೈ ಅಧಿಕಾರಿಗಳ ಮೇಲೆ ಹರಿಹಾಯ್ದಾಗ ಮೆಸ್ಕಾಂ ಇಂಜಿನಿಯರ್ ಲಿಖಿತ ದೂರು ನೀಡುವಂತೆ ಸದಸ್ಯರಿಗೆ ತಿಳಿಸಿದರು.

ಸದಸ್ಯ ದಿನೇಶ್ ಮಾತನಾಡಿ, ಅರಶಿನಘಟ್ಟ ಗ್ರಾಮದ ರಸ್ತೆ ಯೂಟರ್ನ್ ಮಾದರಿಯಲ್ಲಿದ್ದು ಈ ರಸ್ತೆಯಲ್ಲಿ ಏನಾದರು ಅನಾಹುತವಾದರೆ ಅಧಿಕಾರಿಗಳೆ ಹೊಣೆ. ಸಭೆಯ ಠರಾವು ಪುಸ್ತಕದಲ್ಲಿ ದಾಖಲಿಸುವಂತೆ ಒತ್ತಾಯಿಸಿದಾಗ, ಹಲವಾರು ಗ್ರಾಮ ವ್ಯಾಪ್ತಿಗಳಲ್ಲಿ ವಿದ್ಯುತ್ ಕಂಬಗಳು ಮುರಿದು ಬೀಳುವ ಸ್ಥಿತಿಯಲ್ಲಿವೆ. ಅಪಾಯಕ್ಕು ಮುನ್ನ ಅವುಗಳನ್ನು ಬದಲಿಸುವಂತೆ ತಾಪಂ ಅಧ್ಯಕ್ಷೆ ಆಶಾ ಶ್ರೀಧರ್ ಮೆಸ್ಕಾಂ ಅಧಿಕಾರಿಗಳಿಗೆ ತಿಳಿಸಿದರು.

ಗ್ರಾಮಾಂತರ ಪ್ರದೇಶಗಳಲ್ಲಿ ನಡೆಯುವ ಕಾಮಗಾರಿಗಳನ್ನು ಮಳೆಗಾಲಕ್ಕು ಮುನ್ನ ಮುಗಿಸಬೇಕು. ಹಲವಾರು ಭಾಗಗಳಲ್ಲಿ ರಸ್ತೆ, ಚರಂಡಿ ಕಾಮಗಾರಿಗಳು ಅಪೂರ್ಣಗೊಂಡು ಸಂಚಾರಕ್ಕೆ ತೊಂದರೆಯಾಗಿದೆ. ರಸ್ತೆ ಬದಿಯ ಮಣ್ಣು ಸರಿಯಾದ ರೀತಿಯಲ್ಲಿ ಹಾಕದೆ ಇರುವುದರಿಂದ ಸಮಸ್ಯೆಗಳು ಎದುರಾಗಿವೆ ಕೂಡಲೆ ಸಮಸ್ಯೆಗಳಿಗೆ ಸ್ಪಂಧಿಸುವಂತೆ ಆಗ್ರಹಿಸಿದರು.

ಸಭೆಯಲ್ಲಿ ಕೃಷಿ ಇಲಾಖೆ, ಆರೋಗ್ಯ, ತೋಟಗಾರಿಕೆ, ಲೋಕೋಪಯೋಗಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು. ತಾಪಂ ಉಪಾಧ್ಯಕ್ಷೆ ಸರೋಜಮ್ಮ ಹಾಜ್ಯಾನಾಯ್ಕ ಉಪಸ್ಥಿತರಿದ್ದರು.

(ವರದಿ: ಆರ್.ವಿ. ಕೃಷ್ಣ, ಭದ್ರಾವತಿ)

Tags: BhadravathiDrinking WaterIrrigation DepartmentKannada NewsMalnad NewsTaluk Panchayatಕುಡಿಯುವ ನೀರುತಾಲೂಕು ಪಂಚಾಯತ್ನೀರಾವರಿ ಇಲಾಖೆಭದ್ರಾವತಿ
Previous Post

ಯಶ್-ರಾಧಿಕಾ ಮಗಳ ನಾಮಕರಣ ಫೋಟೋ ನೋಡಿ: ಹೆಸರೇನು ಗೊತ್ತಾ?

Next Post

ಯಕ್ಷಗಾನ: ಯಕ್ಷಕನ್ನಿಕೆ ಗುರುರಕ್ಷಿತ್ ಶೆಟ್ಟಿ ಮೆಚ್ಚುವಂತಹ ಸಾಧನೆ ಮಾಡಿದ ಅವರ ಶಿಷ್ಯ ಮಂದಾರ ಪೂಜಾರಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಯಕ್ಷಗಾನ: ಯಕ್ಷಕನ್ನಿಕೆ ಗುರುರಕ್ಷಿತ್ ಶೆಟ್ಟಿ ಮೆಚ್ಚುವಂತಹ ಸಾಧನೆ ಮಾಡಿದ ಅವರ ಶಿಷ್ಯ ಮಂದಾರ ಪೂಜಾರಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

May 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!