ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಚಿತ್ರದುರ್ಗ: ಭಾರತದಲ್ಲೇ ಇದ್ದುಕೊಂಡು ನಮ್ಮ ದೇಶದ ವಿರುದ್ಧವೇ ಮಾತನಾಡುವವರನ್ನು ಕಂಡಲ್ಲಿ ಗುಂಡಿಟ್ಟು ಕೊಲ್ಲುವ ಕಾನೂನನ್ನು ತರಬೇಕಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದೊಳಗೇ ಇದ್ದುಕೊಂಡು ದೇಶದ ವಿರುದ್ಧ ಮಾತನಾಡುವವರು ಹಾಗೂ ಪಾಕಿಸ್ಥಾನ ಪರವಾಗಿ ಘೋಷಣೆ ಕೂಗುವವರನ್ನು ಕಂಡಲ್ಲಿ ಗುಂಡಿಟ್ಟು ಕೊಲ್ಲುವ ಕಾನೂನು ಬೇಕಿದೆ. ಇದಕ್ಕಾಗಿ, ಹೊಸ ಕಾನೂನು ರೂಪಿಸಲು ನಾನು ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿನಂತಿಸುತ್ತೇನೆ ಎಂದಿದ್ದಾರೆ.
ಭಾರತ ಅನ್ನ, ನೀರು, ಗಾಳಿ ಸೇವಿಸಿ, ಇಲ್ಲಿಯ ಸೌಲಭ್ಯಗಳನ್ನು ಬಳಸಿಕೊಂಡು ಬೆಳೆದು ನಮ್ಮ ಶತ್ರು ರಾಷ್ಟ್ರ ಪಾಕಿಸ್ಥಾನ ಜಿಂದಾಬಾದ್ ಎನ್ನುವುದು ಅಕ್ಷಮ್ಯ ಅಪರಾಧ ಹಾಗೂ ದೇಶದ್ರೋಹವಾಗುತ್ತದೆ. ಚೀನಾದಲ್ಲಿ ತಮ್ಮ ದೇಶದ ವಿರುದ್ಧ ಮಾತನಾಡಲು ಹೆದರುತ್ತಾರೆ. ಅಂತಹ ಒಂದು ಕಠಿಣ ಕಾನೂನು ಜಾರಿ ಮಾಡುವ ಅಗತ್ಯತೆ ಈಗ ನಮ್ಮ ದೇಶದಲ್ಲಿ ತುರ್ತು ಇದೆ. ಇದಕ್ಕಾಗಿ ಪ್ರಧಾನಿ ಮೋದಿಯವರಲ್ಲಿ ನಾನು ಮನವಿ ಮಾಡುತ್ತೇನೆ ಎಂದಿದ್ದಾರೆ.
Get in Touch With Us info@kalpa.news Whatsapp: 9481252093
Discussion about this post