ರಾಣಿಬೆನ್ನೂರು: ರಾಜ್ಯದಲ್ಲಿ ಉಪಚುನಾವಣೆ ಘೋಷಣೆಯಾಗಿರುವ ಬೆನ್ನಲ್ಲೇ ರಾಣೆಬೆನ್ನೂರು ಕ್ಷೇತ್ರಕ್ಕೆ ಸಚಿವ ಕೆ.ಎಸ್. ಈಶ್ವರಪ್ಪ ಅವರ ಪುತ್ರ ಶಿವಮೊಗ್ಗ ಜಿಲ್ಲಾ ಪಂಚಾಯತ್ ಸದಸ್ಯ ಕೆ.ಈ. ಕಾಂತೇಶ್ ಬಿಜೆಪಿಯಿಂದ ಸ್ಪರ್ಧಿಸುತ್ತಾರೆ ಎನ್ನಲಾಗಿದೆ.



ಇನ್ನೊಂದೆಡೆ ಉಪಚುನಾವಣೆಯಲ್ಲಿ ಅತೃಪ್ತ ಶಾಸಕರು ಸ್ಪರ್ಧಿಸುವಂತಿಲ್ಲ ಎಂದು ರಾಜ್ಯ ಚುನಾವಣಾಧಿಕಾರಿ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಉಪಚುನಾವಣೆಯನ್ನು ಮುಂದೂಡುವಂತೆ ಕೋರಿ ನಾಳೆ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಕೆಯಾಗಲಿದೆ.
ಅನರ್ಹಗೊಂಡ ಕರ್ನಾಟಕದ ಒಟ್ಟು 15 ಶಾಸಕರು ಉಪ ಚುನಾವಣೆಯನ್ನು ಮುಂದೂಡುವಂತೆ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲು ಮುಂದಾಗಿದ್ದು, ಇದೇ ಕಾರಣಕ್ಕಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ತುರ್ತು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.








Discussion about this post