No Result
View All Result
ಪಶ್ಚಿಮ ಬಂಗಾಳದಲ್ಲಿ 200ರ ಗಡಿ ಮುಟ್ಟಿ ಇತಿಹಾಸ ನಿರ್ಮಿಸಿದ ಬಿಜೆಪಿ | ಟಿಎಂಸಿ ಧೂಳಿಪಟ
English Articles

Political Turmoil in Tamil Nadu: BJP Faces Wave of Resignations

by ಕಲ್ಪ ನ್ಯೂಸ್
June 6, 2026
0

Kalpa Media House  |  Chennai  | A major political development is unfolding in Tamil Nadu as a series of resignations...

Read moreDetails
ಶಿವಮೊಗ್ಗಕ್ಕೆ ಇಂಡಿಗೋ ಬೆನ್ನಲ್ಲೇ ಸ್ಪೈಸ್ ಜೆಟ್ ವಿಮಾನ ಸೇವೆಯೂ ಸ್ಥಗಿತ | ಕಾರಣವೇನು?

SpiceJet Flights to Shivamogga Suspended After IndiGo Exit | What’s the Reason?

June 6, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026 | ಮೊದಲ ದಿನವೇ ಐದು ಚಿನ್ನದ ಪದಕ ಗೆದ್ದ ಭಾರತ!

India Dominates World Yogasana Championship 2026, Wins 5 Golds on Opening Day

June 6, 2026
INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

June 5, 2026
From the Village Tracks to International Triumphs: The Inspiring Saga of Geetha A. Shetty

From the Village Tracks to International Triumphs: The Inspiring Saga of Geetha A. Shetty

June 5, 2026
  • Advertise With Us
  • Grievances
  • About Us
  • Contact Us
Sunday, June 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಮಿಜೋರಾಂ | ಬೈರಾಬಿ-ಸೈರಾಂಗ್ ನೂತನ ರೈಲು ಮಾರ್ಗದ ಪ್ರಯೋಜನಗಳೇನು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 11, 2025
in Special Articles
0
ಮಿಜೋರಾಂ | ಬೈರಾಬಿ-ಸೈರಾಂಗ್ ನೂತನ ರೈಲು ಮಾರ್ಗದ ಪ್ರಯೋಜನಗಳೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮಿಜೋರಾಂನಿಂದ ಪ್ರತ್ಯಕ್ಷ ವರದಿ-4  |

ಸುಮಾರು 5300 ಕಿಲೋ ಮೀಟರ್’ಗೂ ಅಧಿಕ ಗಡಿ ಪ್ರದೇಶ, 1132 ಮೀಟರ್ ಸಮುದ್ರ ಮಟ್ಟದಿಂದ ಎತ್ತರ, ವಿಭಿನ್ನ, ವಿಶಿಷ್ಠ ಪ್ರಾಕೃತಿಕ ಸಂಪತ್ತಿನ ಸೌಂದರ್ಯದ ಜೊತೆಯಲ್ಲಿ ಭಯಾನಕ ಪ್ರಪಾತ, ಕಣಿವೆಗಳನ್ನೂ ಸಹ ಹೊಂದಿರುವ ರಾಜ್ಯ. ಅದೇ ಮಿಜೋರಾಂ.

ಇಲ್ಲಿನ ಭೌಗೋಳಿಕ ಪ್ರದೇಶ ಹೇಗಿದೆ ಎಂದರೆ ಐಜ್ವಾಲ್ ಸೇರಿದಂತೆ ಇಡೀ ಮಿಜೋರಾಂ ರಾಜ್ಯದ ಜನರ ಜೀವನವೇ ಅಕ್ಷರಶಃ ಒಂದು ಸಾಹಸ.

ಸ್ಥಳೀಯ ಮೀಜೋ ಭಾಷೆಯಲ್ಲಿ ಮಿಜೋರಾಂ ಎಂದರೆ ಬೆಟ್ಟಗಳಲ್ಲಿ ವಾಸಿಸುವ ಜನರರಿವ ಸ್ಥಳ. ಬೃಹತ್ ಪರ್ವತಗಳು, ದಟ್ಟಾರಣ್ಯದ ನಡುವೆ ತನ್ನದೇ ಆದ ರೀತಿಯಲ್ಲಿ ರೂಪುಗೊಂಡಿರುವ ಮಿಜೋರಾಂ ಅದರಲ್ಲೂ ಐಜ್ವಾಲ್’ಗೆ ಈಗ ಹೊಸದೊಂದು ಜೀವಕಳೆ ಬಂದಿದೆ.ಹೌದು… ಐಜ್ವಾಲ್ ಜನರ ದಶಕಗಳ ಕನಸನ್ನು ನನಸಾಗುತ್ತಿರುವ ಸೈರಾಂಗ್ – ಬೈರಾಬಿ ನಡುವಿನ ನೂತನ ರೈಲು ಮಾರ್ಗ ಲೋಕಾರ್ಪಣೆ ಸನಿಹಕ್ಕೆ ಬಂದಿದ್ದು, ಉದ್ಘಾಟನೆಯ ನಂತರ ಹೊಸದೊಂದು ಅಧ್ಯಾಯ ಆರಂಭವಾಗಲಿದೆ.

ಯೋಜನೆಯ ಹಿನ್ನೆಲೆ
ಸೈರಾಂಗ್ – ಬೈರಾಬಿ ರೈಲು ಸಂಪರ್ಕಕ್ಕಾಗಿ ಪ್ರಾಥಮಿಕ ಇಂಜಿನಿಯರಿಂಗ್ ಮತ್ತು ಸಂಚಾರ ಸಮೀಕ್ಷೆ (ಪಿಇಟಿ)ಯನ್ನು ಈಶಾನ್ಯ ಗಡಿನಾಡು ರೈಲ್ವೆಗಳು ಮಾರ್ಚ್ 2006 ರಲ್ಲಿ ನಡೆಸಿದ್ದವು. ಇದರ ಆಧಾರದ ಮೇಲೆ, ಬೈರಾಬಿ-ಸೈರಾಂಗ್’ನಿಂದ ಹೊಸ ರೈಲ್ವೆ ಮಾರ್ಗಕ್ಕಾಗಿ 2008 ರಲ್ಲಿ ನಿರ್ಮಾಣ ಪೂರ್ವ ಸಮೀಕ್ಷೆ ಮತ್ತು ಭೂ-ತಾಂತ್ರಿಕ ತನಿಖೆಯನ್ನು ಕೈಗೊಳ್ಳಲು ಆರ್’ಐಟಿಇಎಸ್ ಅನ್ನು ಕೇಳಲಾಯಿತು. ಅದರಂತೆ, ಆರ್’ಐಟಿಇಎಸ್ ತನ್ನ ಅಂತಿಮ ವರದಿಯನ್ನು ಆಗಸ್ಟ್ 2011 ರಲ್ಲಿ ಸಲ್ಲಿಸಿತು. ಯೋಜನೆಯ ಮಹತ್ವವನ್ನು ಪರಿಗಣಿಸಿ – ಮಿಜೋರಾಂ ಅನ್ನು ಭಾರತದ ಉಳಿದ ಭಾಗಗಳಿಗೆ ರೈಲು ಮೂಲಕ ಸಂಪರ್ಕಿಸುವ ಈ ಯೋಜನೆಯ ಬಗ್ಗೆ, ಆಗಿನ ಯುಪಿಎ ಸರ್ಕಾರವು 2008-09 ರಲ್ಲಿ ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಿತು. ತರುವಾಯ, ಪ್ರಧಾನಿ ಮೋದಿ ನವೆಂಬರ್ 29, 2014 ರಂದು ಇದರ ಅಡಿಪಾಯ ಹಾಕಿದ್ದರು.

ಎನ್’ಎಫ್ ರೈಲ್ವೇಸ್ 2014-2015 ರ ವೇಳೆಗೆ ಭೂಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸಿತು ಮತ್ತು ಒಂದು ವರ್ಷದ ನಂತರ, 2015-16 ರಲ್ಲಿ, ಅದು ಪೂರ್ಣ ಪ್ರಮಾಣದಲ್ಲಿ ನಿರ್ಮಾಣವನ್ನು ಪ್ರಾರಂಭಿಸಿತು.ಏನೆಲ್ಲಾ ಪ್ರಯೋಜನವಾಗಲಿದೆ?
ದಕ್ಷಿಣ, ಉತ್ತರ ಸೇರಿ ಭಾರತದ ಇತರ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ಈಶಾನ್ಯ ರಾಜ್ಯಗಳ ಜನರು ಹೆಚ್ಚು ಶ್ರಮಜೀವಿಗಳು. ಪಪ್ರಮುಖವಾಗಿ ಮಿಜೋರಾಂನ ಪ್ರತ್ಯಕ್ಷ ಅನುಭವ ಹೇಳುವುದಾದರೆ ಇಲ್ಲಿನ ಭೌಗೋಳಿಕ ಪರಿಸ್ಥಿತಿಯಲ್ಲಿ ಇಲ್ಲಿನ ಜನರ ಜೀವನವೇ ಸವಾಲಿನದ್ದು. ಕೃಷಿಯೇ ಮೂಲವಾಗಿರುವ ಇಲ್ಲಿನ ಜನರಿಗೆ ಬೃಹತ್ ಕೈಗಾರಿಕೆಗಳು, ದೊಡ್ಡ ಉದ್ಯಮ ಹಾಗೂ ಶಿಕ್ಷಣ ಸಂಸ್ಥೆಗಳು ಎನ್ನುವುದು ಮರೀಚಿಕೆಯಾಗಿದೆ.
ಪ್ರಮುಖವಾಗಿ, ವಾಯು ಹಾಗೂ ರಸ್ತೆ ಮಾರ್ಗವೇ ಇಲ್ಲಿಗೆ ಈವರೆಗೂ ಆಧಾರವಾಗಿತ್ತು. ಅಲ್ಲಿನ ರಸ್ತೆ ಮಾರ್ಗ ಅತ್ಯಂತ ಕಠಿಣವಾದುದು.

ಬೈರಾಬಿ-ಸೈರಾಂಗ್ ಹೊಸ ರೈಲು ಮಾರ್ಗ ಯೋಜನೆಯು ಮೊದಲ ಬಾರಿಗೆ ರಾಜ್ಯ ರಾಜಧಾನಿ ಐಜ್ವಾಲ್’ಗೆ ನೇರ ರೈಲು ಸಂಪರ್ಕವನ್ನು ಕಲ್ಪಿಸಿದೆ. ಈ ಐತಿಹಾಸಿಕ ಸಾಧನೆಯು ಪ್ರಯಾಣಿಕರು ಮತ್ತು ಸರಕು ಸಾಗಣೆಯನ್ನು ಗಮನಾರ್ಹವಾಗಿ ಹೆಚ್ಚಿಸುತ್ತದೆ, ಸಾಮಾಜಿಕ-ಆರ್ಥಿಕ ಬೆಳವಣಿಗೆಯನ್ನು ಹೆಚ್ಚಿಸುತ್ತದೆ ಮತ್ತು ಮಿಜೋರಾಂ ಜನರ ದೀರ್ಘಕಾಲದ ಆಕಾಂಕ್ಷೆಯನ್ನು ಪೂರೈಸುತ್ತದೆ.ಮಿಜೋರಾಂಗೆ ಬಹುತೇಕ ಎಲ್ಲಾ ಅಗತ್ಯ ವಸ್ತುಗಳನ್ನು ಅಸ್ಸಾಂನ ಸಿಲ್ಚಾರ್’ನಿಂದ ತರಲಾಗುತ್ತದೆ. ಇದು ರಸ್ತೆಯ ಮೂಲಕ ಸುಮಾರು 10 ಗಂಟೆಗಳ ಪ್ರಯಾಣ. ಹೊಸ ಮಾರ್ಗ ಕಾರ್ಯಾರಂಭದೊಂದಿಗೆ, ಪ್ರಯಾಣದ ಸಮಯ ಸುಮಾರು ಮೂರು ಗಂಟೆಗಳವರೆಗೆ ಕಡಿಮೆಯಾಗುತ್ತದೆ. ಇದರಿಂದಾಗಿ ಪುಟ್ಟ ರಾಜ್ಯದ ನಿವಾಸಿಗಳಿಗೆ ಭಾರಿ ಪರಿಹಾರ ಸಿಗುತ್ತದೆ.

ಸಿಲ್ಚಾರ್’ನಿಂದ ಐಜ್ವಾಲ್’ಗೆ ರಸ್ತೆಯ ಮೂಲಕ ಒಂದು ಇಡೀ ದಿನದ ಪ್ರಯಾಣ ಬೇಸರದ ಸಂಗತಿಯಾಗಿತ್ತು. ಪ್ರಯಾಣಿಕ ಮತ್ತು ಸರಕು ಸಾಗಣೆ ಎರಡೂ ರೈಲು ಸೇವೆಗಳು ಕೈಗೆಟುಕುವ ದರಗಳು ಮತ್ತು ಸುಂಕಗಳನ್ನು ನೀಡುವ ಮೂಲಕ ಸಂಪರ್ಕದಲ್ಲಿ ಹೆಚ್ಚು ಅಗತ್ಯತೆಗಳನ್ನು ಪೂರೈಸುತ್ತದೆ. ಎರಡೂ ಸ್ಥಳಗಳ ನಡುವಿನ ರಸ್ತೆ ಅಂತರವು 172 ಕಿಲೋ ಮೀಟರ್ ಆಗಿದ್ದರೆ, ರೈಲು ಅಂತರವು 154 ಕಿಲೋ ಮೀಟರ್ ಆಗಿದೆ. ಇದು, ಪ್ರಯಾಣದ ಸಮಯವು ನಾಲ್ಕು ಗಂಟೆಗಳಿಗಿಂತ ಕಡಿಮೆಯಿರುತ್ತದೆ ಎಂದು ನಿರೀಕ್ಷಿಸಲಾಗಿದೆ.ಸ್ಥಳೀಯ ಅರಣ್ಯ ಉತ್ಪನ್ನಗಳು, ಮಿಜೋರಾಂ ಜನರ ಸಾಂಪ್ರದಾಯಿಕ ಉತ್ಪನ್ನಗಳು, ಅವರದೇ ಶೈಲಿಯ ಸಂಪ್ರದಾಯಿಕ ಉಡುಪುಗಳು, ಇವರು ಪ್ರಮುಖವಾಗಿ ಬೆಳೆಯುವ ಕೃಷಿ ಉತ್ಪನ್ನಗಳಾದ ಅನಾನಸ್, ಶುಂಠಿ, ವಿಶ್ವ ಮಾನ್ಯತೆ ಪಡೆದಿರುವ ಅರಿಶಿನ ಪುಡಿ, ಸಣ್ಣ ಮೆಣಸಿನಕಾಯಿ, ತೋಟಗಾರಿಕಾ ಉತ್ಪನ್ನಗಳ ರಫ್ತಿಗೆ ಈವರೆಗೂ ಇವರು ಕಷ್ಟಪಡಬೇಕಿತ್ತು.

ನೂತನ ರೈಲು ಮಾರ್ಗದಿಂದ ಮಿಜೋರಾಂನಿಂದ ಹೊರಭಾಗಕ್ಕೆ ರಫ್ತು ಮಾಡಲು ಅದರಲ್ಲು ಕಡಿಮೆ ವೆಚ್ಚದಲ್ಲಿ ಸಾಗಾಟ ಮಾಡಲು ಅನುಕೂಲವಾಗಲಿದೆ.
ಅಲ್ಲದೇ, ಇಲ್ಲಿಗೆ ಅಗತ್ಯವಿರುವ ವಸ್ತುಗಳನ್ನು ಹೊರಗಿನಿಂದ ಸರಬರಾಜು ಮಾಡುವ ಕಾರ್ಯಕ್ಕೂ ಸಹ ಅನುಕೂಲವಾಗುತ್ತದೆ. ಈ ಮಾರ್ಗ ಕಾರ್ಯರೂಪಕ್ಕೆ ಬಂದ ನಂತರ, ಭಾರತೀಯ ಆಹಾರ ನಿಗಮ ಸಾರ್ವಜನಿಕ ವಿತರಣಾ ವ್ಯವಸ್ಥೆಗೆ ಸರಕುಗಳನ್ನು ರೈಲಿನ ಮೂಲಕ ಸಾಗಿಸಲು ಸಾಧ್ಯವಾಗುತ್ತದೆ. ಇದು ಇತರ ರಾಜ್ಯಗಳಿಂದ ಸರಕುಗಳು, ತರಕಾರಿಗಳು ಮತ್ತು ಇತರ ವಸ್ತುಗಳನ್ನು ಸಾಗಿಸುವ ವೆಚ್ಚವನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ. ಆರಂಭದಲ್ಲಿ, ಪ್ರಯಾಣಿಕರ ಸೇವೆಗಳು ಸೈರಾಂಗ್ ಮತ್ತು ಸಿಲ್ಚಾರ್ ನಡುವೆ ಚಲಿಸಬಹುದಾಗಿದೆ.

ಪ್ರಾಕೃತಿಕ ಸೊಬಗಿನ ಈ ಪ್ರದೇಶದಲ್ಲಿ ನೂತನ ರೈಲು ಮಾರ್ಗ ಪ್ರವಾಸೋದ್ಯಮಕ್ಕೆ ರಾಜಪಥವನ್ನು ತೆರೆಯಲಿದೆ. ಇದಕ್ಕೆ ಪೂರಕವಾಗಿ, 2025ರ ಆಗಸ್ಟ್’ನಲ್ಲಿ ಐಅರ್’ಸಿಟಿಸಿಯು ಮಿಜೋರಾಂ ಸರ್ಕಾರದೊಂದಿಗೆ 2 ವರ್ಷಗಳ ಪ್ರವಾಸೋದ್ಯಮ ಪ್ರೋತ್ಸಾಹಕ್ಕೆ ಒಪ್ಪಂದ ಮಾಡಿಕೊಂಡಿದೆ.ಪ್ರವಾಸೋದ್ಯಮ ವೃದ್ಧಿಯಿಂದಾಗಿ ಸ್ಥಳೀಯ ಉದ್ಯಮಗಳು, ಹೊಟೇಲ್, ಗೈಡ್, ಟೂರಿಸ್ಟ್ ವಾಹನಗಳ ಸೇರಿದಂತೆ ಹಲವು ರೀತಿಯಲ್ಲಿ ಉದ್ಯೋಗವಕಾಶಕ್ಕೆ ಪ್ರೋತ್ಸಾಹಕಾರಿಯಾಗಿದೆ.

ಪ್ರಮುಖವಾಗಿ, ಮಿಜೋರಾಂ ಜನರ ಸಾಂಪ್ರದಾಯಿಕ ಹಸ್ತಕಲೆ, ವಸ್ತ್ರ ಹಾಗೂ ಕೃಷಿ ಸಂಬಂಧಿತ ವ್ಯಾಪಾರಗಳಿಗೆ ಇದು ಬಾಗಿಲು ತೆರೆಯಲಿದೆ. ಈ ಮೂಲಕ ಇಲ್ಲಿನ ಜನರ ಜೀವನ ಸುಧಾರಣೆಯಾಗಲಿದೆ.

ಈ ನೂತನ ರೈಲು ಮಾರ್ಗ ರಾಷ್ಟ್ರೀಯ ಸಂಪರ್ಕ ಜಾಲಕ್ಕೆ ಸೇರಿಕೊಳ್ಳುವ ಹಿನ್ನೆಲೆಯಲ್ಲಿ ಐಜ್ವಾಲ್ ಸೇರಿದಂತೆ ಸುತ್ತಮುತ್ತಲ ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ರಹದಾರಿಯಾಗಲಿದೆ.

(ಸೈರಾಂಗ್-ಬೈರಾಬಿ ನಡುವಿನ ಈ ಯೋಜನೆಯ ಪ್ರತ್ಯಕ್ಷ ಅನುಭವ ಪಡೆಯಲು ಭಾರತೀಯ ರೈಲ್ವೆ ಆಯೋಜಿಸಿದ್ದ ಮೂರು ದಿನಗಳ ಕ್ಷೇತ್ರ ಭೇಟಿಯಲ್ಲಿ ಕಲ್ಪ ನ್ಯೂಸ್ ಸಂಪಾದಕರು ಪಾಲ್ಗೊಂಡಿದ್ದ ಖುದ್ಧು ಅನುಭವದ ಲೇಖನ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

Tags: AizwalEastern StateIndian RailwayIRCTCKannada News WebsiteLatest News KannadaMizoramRailOneಐಜ್ವಾಲ್ಕಣಿವೆಪ್ರಪಾತಭೌಗೋಳಿಕ ಪ್ರದೇಶಮಿಜೋರಾಂ
Share196Tweet123Send
Previous Post

ನಟ ವಿಷ್ಣುವರ್ಧನ್, ನಟಿ ಸರೋಜಾದೇವಿಗೆ ಮರಣೋತ್ತರ `ಕರ್ನಾಟಕ ರತ್ನ` ಪ್ರಶಸ್ತಿ ಘೋಷಣೆ

Next Post

ಹುಬ್ಬಳ್ಳಿ ರೈಲ್ವೆ ಯಾರ್ಡ್’ನಲ್ಲಿ ಒಂದರ ಮೇಲೊಂದು ಬಿದ್ದಿದ್ದ ಬೋಗಿಗಳು | ಏನಾಗಿತ್ತು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಹುಬ್ಬಳ್ಳಿ ರೈಲ್ವೆ ಯಾರ್ಡ್’ನಲ್ಲಿ ಒಂದರ ಮೇಲೊಂದು ಬಿದ್ದಿದ್ದ ಬೋಗಿಗಳು | ಏನಾಗಿತ್ತು?

ಹುಬ್ಬಳ್ಳಿ ರೈಲ್ವೆ ಯಾರ್ಡ್'ನಲ್ಲಿ ಒಂದರ ಮೇಲೊಂದು ಬಿದ್ದಿದ್ದ ಬೋಗಿಗಳು | ಏನಾಗಿತ್ತು?

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ವೆಂಕಟಾಚಲಧಾಮದ 15ನೇ ವಾರ್ಷಿಕೋತ್ಸವ | ಚಿನ್ನದ ಕಿರೀಟ ಸಮರ್ಪಣೆ

ವೆಂಕಟಾಚಲಧಾಮದ 15ನೇ ವಾರ್ಷಿಕೋತ್ಸವ | ಚಿನ್ನದ ಕಿರೀಟ ಸಮರ್ಪಣೆ

June 6, 2026
ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸಿದ ಕುಮದ್ವತಿ ರೆಸಿಡೆನ್ಷಿಯಲ್ ಸ್ಕೂಲ್ | ಹೇಗಿತ್ತು ಆಚರಣೆ?

ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸಿದ ಕುಮದ್ವತಿ ರೆಸಿಡೆನ್ಷಿಯಲ್ ಸ್ಕೂಲ್ | ಹೇಗಿತ್ತು ಆಚರಣೆ?

June 6, 2026
ಯುಗಾದಿ | ಯಶವಂತಪುರ-ಹೊಸಪೇಟೆ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು

ತಾಳಗುಪ್ಪ-ಶಿವಮೊಗ್ಗ-ಮೈಸೂರಿನ ನಾಲ್ಕು ರೈಲುಗಳ ಕುರಿತಾಗಿ ಅಪ್ಡೇಟ್

June 6, 2026
ಸಚಿವರ ಅಸಮಾಧಾನ ಆಡಳಿತದ ಮೇಲೆ ಪರಿಣಾಮ: ಸಿ.ಟಿ. ರವಿ

ಸಚಿವರ ಅಸಮಾಧಾನ ಆಡಳಿತದ ಮೇಲೆ ಪರಿಣಾಮ: ಸಿ.ಟಿ. ರವಿ

June 6, 2026
ಶಿವಮೊಗ್ಗ | ಕ್ರೇನ್’ಗೆ ಸಿಲುಕಿ ಬೆಳ್ತಂಗಡಿ ಮೂಲದ ಕಾರ್ಮಿಕ ದಾರುಣ ಸಾವು

ಶಿವಮೊಗ್ಗ | ಕ್ರೇನ್’ಗೆ ಸಿಲುಕಿ ಬೆಳ್ತಂಗಡಿ ಮೂಲದ ಕಾರ್ಮಿಕ ದಾರುಣ ಸಾವು

June 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL