ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ನವದೆಹಲಿ: ಡಿ.22ರಂದು ಇಲ್ಲಿನ ರಾಮಲೀಲಾ ಮೈದಾನದಲ್ಲಿ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿಯವರ ಬೃಹತ್ ರ್ಯಾಲಿ ಪಾಕಿಸ್ಥಾನ ಮೂಲಕ ಉಗ್ರರ ಟಾರ್ಗೆಟ್ ಆಗಿದೆ ಎಂಬ ಆತಂಕಕಾರಿ ವಿಚಾರ ಹೊರಬಿದ್ದಿದೆ.
ಡಿ.22ರಂದು ಬಿಜೆಪಿ ಆಯೋಜಿಸಿರುವ ಬೃಹತ್ ರ್ಯಾಲಿಯಲ್ಲಿ ಪಾಲ್ಗೊಳ್ಳಲಿರುವ ಪ್ರಧಾನಿ ಮೋದಿಯವರು ಅಂದು ಲಕ್ಷಾಂತರ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಆದರೆ, ಈ ಕಾರ್ಯಕ್ರಮವನ್ನು ಪಾಕಿಸ್ಥಾನದ ಜೈಷ್ ಎ ಮೊಹಮದ್ ಉಗ್ರ ಸಂಘಟನೆ ಗುರಿಯಾಗಿಸಿಕೊಂಡು ಭಾರೀ ದಾಳಿ ನಡೆಸಲು ಸಿದ್ದತೆ ಮಾಡಿಕೊಂಡಿದೆ ಎನ್ನಲಾಗಿದ್ದು, ಈ ಕುರಿತ ಮಾಹಿತಿ ರಾಷ್ಟ್ರೀಯ ಮಾಧ್ಯಮಗಳಲ್ಲಿ ಪ್ರಕಟಗೊಂಡಿದೆ.
ಭಯೋತ್ಪಾದಕರ ಬೆದರಿಕೆಯಿರುವ ಹಿನ್ನೆಲೆಯಲ್ಲಿ ಇಡಿಯ ಪ್ರದೇಶವನ್ನು ಈಗಾಗಲೇ ಭದ್ರತಾ ಪಡೆಗಳು ವಶಕ್ಕೆ ಪಡೆದಿದ್ದು, ಎಸ್’ಪಿಜಿ ಹಾಗೂ ದೆಹಲಿ ಪೊಲೀಸರು ಭದ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಅಲ್ಲದೇ, ವಿಶೇಷವಾಗಿ ಗುಂಡು ನಿರೋಧಕ ಭದ್ರತಾ ವ್ಯವಸ್ಥೆ ಹೊಣೆ ಹೊತ್ತಿರುವ ಹಿರಿಯ ಅಧಿಕಾರಿಗಳ ತಂಡವೂ ಸಹ ಸೂಕ್ತ ಭದ್ರತಾ ವ್ಯವಸ್ಥೆ ಮಾಡುತ್ತಿದೆ.
Get in Touch With Us info@kalpa.news Whatsapp: 9481252093
Discussion about this post