ಕಲ್ಪ ಮೀಡಿಯಾ ಹೌಸ್ | ವಾರಣಾಸಿ |
ಲೋಕಸಭಾ ಚುನಾವಣೆಗೆ #LoksabhaElection2024 ವಾರಣಾಸಿ ಕ್ಷೇತ್ರದಿಂದ ಮೂರನೇ ಬಾರಿ ನಾಮಪತ್ರ ಸಲ್ಲಿಸಿರುವ ಪ್ರಧಾನಿ ನರೇಂದ್ರ ಮೋದಿ #PMNarendraModi ಅವರು ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ.
ನಾಮಪತ್ರ ಸಲ್ಲಿಕೆಗೂ ಮುನ್ನ ದಿನ ಪ್ರಧಾನಿಯವರು ವಾರಣಾಸಿಯಲ್ಲಿ #Varanasi ನಡೆಸಿದ ಅದ್ದೂರಿ ರೋಡ್ ಶೋ ಭಾವನಾತ್ಮಕ ಸನ್ನಿವೇಶವಾಗಿ ಬದಲಾಗಿದ್ದು ವಿಶೇಷವಾಗಿತ್ತು.
ವಿಶೇಷವೆಂದರೆ 1200 ವರ್ಷಗಳ ಹಿಂದೆ ಆದಿಗುರು ಶಂಕರಾಚಾರ್ಯರು #Shankaracharya ಸಂಚರಿಸಿದರು ಎಂಬ ನಂಬಿಕೆ ಹೊಂದಿರುವ ರಸ್ತೆಯಲ್ಲೇ ಪ್ರಧಾನಿಯವರು ಈಗ ರೋಡ್ ಶೋ ನಡೆಸಿದ್ದು, ಸಂತ ರವಿದಾಸ್ ಗೇಟ್, ಅಸ್ಸಿ ಘಾಟ್, ಶಿವಲೀಲಾ ಘಾಟ್, ಸೋನಾರ್ಪುರ, ಜಂಗಮವಾಡಿ, ಗೋದೌಲಿಯಾವನ್ನು ಹಾದು ಹೋಗಿದೆ.ಮೋದಿ ಸಾಗಿದ ರಸ್ತೆಯಲ್ಲಿ 25 ದೇವಸ್ಥಾನಗಳು, 60ಕ್ಕೂ ಹೆಚ್ಚು ಆಶ್ರಮಗಳಿದ್ದು, ದಾರಿಯುದ್ದಕ್ಕೂ ಸಾವಿರಾರು ಮಂದಿ ಮೋದಿಗೆ ಹೂಮಳೆಯ ಸ್ವಾಗತ ನೀಡಿದರು.
ಬಹಳಷ್ಟು ಮಂದಿ ತಮ್ಮ ಮನೆಯ ಬಾಲ್ಕನಿಗಳಲ್ಲಿ ನಿಂತು ಅಲ್ಲಿಂದಲೇ ಮೋದಿಯವರಿಗೆ ಆರತಿ ಎತ್ತಿ, ಶುಭ ಹಾರೈಸಿದರು.
ಬಿಸ್ಮಿಲ್ಲಾ ಖಾನ್ ಕುಟುಂಬದ ಶಹನಾಯಿ ವಾದನವೂ ಇತ್ತು. ಕಲಾ ತಂಡಗಳ ವೈಭವವೂ ಕಂಡುಬಂದಿತು. 5000ಕ್ಕೂ ಹೆಚ್ಚು ಮಹಿಳೆಯರು, ಗುಜರಾತಿಗಳು, ಮರಾಠಿಗಳು, ಬೆಂಗಾಲಿಗಳು, ತಮಿಳರು, ಪಂಜಾಬಿಗಳು. ಹೀಗೆ ದೇಶದ ಎಲ್ಲಾ ಭಾಗದ ಮಂದಿ ಮೋದಿ ರೋಡ್ ಶೋನಲ್ಲಿ ಪಾಲ್ಗೊಂಡಿದ್ದರು.
Also read: ಆ ತಿಮಿಂಗಿಲ ಹಿಡೀರಿ, ಎಲ್ಲವೂ ಹೊರ ಬರುತ್ತೆ | ಎಚ್.ಡಿ. ಕುಮಾರಸ್ವಾಮಿ ಹೀಗೆ ಹೇಳಿದ್ದೇಕೆ?
ಗಂಗಾರತಿ ನೆರವೇರಿಸಿದ ಮೋದಿ
ನಾಮಪತ್ರ ಸಲ್ಲಿಕೆ ಮಾಡುವುದಕ್ಕೆ ಮೊದಲು ದಶಾಶ್ವಮೇಧ ಘಾಟ್’ನಲ್ಲಿ ಗಂಗಾ ನದಿಗೆ ಗಂಗಾ ಆರತಿ ಮಾಡಿದರು. ನಂತರ ವಾರಣಾಸಿ ಕಾಲಭೈರವ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ವಾರಣಾಸಿ ಜಿಲ್ಲಾ ಕೇಂದ್ರಕ್ಕೆ ಆಗಮಿಸಿ ಮೂರನೇ ಬಾರಿ ನಾಮಪತ್ರ ಸಲ್ಲಿಕೆ ಮಾಡಿದರು.
ಮಂಗಳವಾರವೇ ನಾಮಪತ್ರ ಸಲ್ಲಿಕೆ ಏಕೆ?
ಆಚಾರ ವಿಚಾರಗಳನ್ನು ಪಾಲಿಸುವ ಪ್ರಧಾನಿಯವರು ಮಂಗಳವಾರವೇ ಯಾಕೆ ನಾಮಪತ್ರ ಸಲ್ಲಿಸಿದರು ಎಂಬ ಪ್ರಶ್ನೆ ಬಹಳಷ್ಟು ಮಂದಿಗೆ ಕಾಡಿದೆ. ಅದಕ್ಕೆ ಉತ್ತರ ಇಲ್ಲಿದೆ.
ಹಿಂದೂಗಳ ಪಾಲಿಗೆ ಪರಮಪವಿತ್ರ ದಿನವಾದ ಗಂಗಾ ಸಪ್ತಮಿ ಇಂದು. ಗಂಗೆ ಜನಿಸಿದಳು ಎಂಬ ನಂಬಿಕೆಯಿದೆ. ಗಂಗಾ ಸಪ್ತಮಿಯಂದು ಶುಭ ಅಭಿಜಿನ್ ಲಗ್ನದಲ್ಲಿ ಮೋದಿ ನಾಮಪತ್ರ ಸಲ್ಲಿಸುವುದು ಶ್ರೇಯಸ್ಕರ ಎಂದು ಪಂಡಿತ್ ಗಣೇಶ್ವರ್ ಶಾಸ್ತ್ರಿ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಮೋದಿ ನಾಮಪತ್ರ ಸಲ್ಲಿಕೆ ಮಾಡಿದರು. ರಾಮಮಂದಿರ ಲೋಕಾರ್ಪಣೆಗೆ ಮಹೂರ್ತವನ್ನು ಪಂಡಿತ್ ಗಣೇಶ್ವರ್ ಶಾಸ್ತ್ರಿ ನೀಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post