Monday, June 23, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

370ನೆಯ ವಿಧಿ ರದ್ದು ಹಿಂದಿನ ಗಮ್ಮತ್ತು ವಿವರಿಸಿದ ಮೋದಿ, ದೇಶವನ್ನುದ್ದೇಶಿಸಿ ಹೇಳಿದ್ದೇನು ಗೊತ್ತಾ?

August 8, 2019
in ರಾಷ್ಟ್ರೀಯ
0 0
0
File Photo

File Photo

Share on facebookShare on TwitterWhatsapp
Read - 2 minutes

ನವದೆಹಲಿ: 370 ಹಾಗೂ 35ಎ ವಿಧಿಯನ್ನು ರದ್ದು ಮಾಡುವ ಮೂಲಕ ಸರ್ದಾರ್ ವಲ್ಲಭಾಬಾಯ್ ಪಟೇಲ್, ಡಾ.ಬಿ.ಆರ್. ಅಂಬೇಡ್ಕರ್, ಶ್ಯಾಮ್ ಪ್ರಸಾದ್ ಮುಖರ್ಜಿ, ಅಟಲ್ ಜೀ ಕನಸನ್ನು ನಾವು ನನಸು ಮಾಡಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದು ಮಾಡಿದ ಮೂಲಕ ಇದೇ ಮೊದಲ ಬಾರಿಗೆ ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ಜಮ್ಮು ಕಾಶ್ಮೀರ, ಲಡಾಕ್ ಸೇರಿದಂತೆ ಇಡಿಯ ದೇಶವನ್ನು ನಾನು ಸಂಭ್ರಮದಿಂದ ಅಭಿನಂದಿಸುತ್ತೇನೆ ಎಂದಿದ್ದಾರೆ.

ನಾವು ಒಂದು ದೇಶವಾಗಿ, ಒಂದು ಕುಟುಂಬವಾಗಿ ಇಂತಹ ಒಂದು ಐತಿಹಾಸಿಕ ನಿರ್ಧಾರವನ್ನು ಕೈಗೊಂಡಿದ್ದೇವೆ. ಜಮ್ಮು ಕಾಶ್ಮೀರದ ನಮ್ಮ ಅಕ್ಕ ತಂಗಿಯರು, ಅಣ್ಣ ತಮ್ಮಂದಿರು ಕಳೆದುಕೊಂಡಿದ್ದ ಹಕ್ಕುಗಳನ್ನು ನಾವು ಪುರ್ನಸ್ಥಾಪಿಸಿದ್ದೇವೆ. ಈ ನಿರ್ಧಾರದ ಮೂಲಕ ಕಣಿವೆ ರಾಜ್ಯ ಅಭಿವೃದ್ಧಿಗೆ ನಾವು ನಾಂದಿ ಹಾಡಿದ್ದೇವೆ ಎಂದರು.

My address to the people of India. https://t.co/f0q8rEUSkH

— Narendra Modi (@narendramodi) August 8, 2019

ಈವರೆಗೂ ಜಮ್ಮು ಕಾಶ್ಮೀರದಲ್ಲಿ ನಡೆಯುತ್ತಿದ್ದ ಅನ್ಯಾಯದ ವಿರುದ್ಧ ಯಾರೊಬ್ಬರೂ ಚರ್ಚೆ ಮಾಡಲಿಲ್ಲ, ಅದನ್ನು ಪರಿಹಾರ ಮಾಡುವ ಕುರಿತಾಗಿ ಗಂಭೀರ ಪ್ರಯತ್ನಗಳನ್ನು ಮಾಡಲೇ ಇಲ್ಲ. ರದ್ದಾದ ವಿಧಿ ಹೇಗೆ ಕಣಿವೆ ರಾಜ್ಯಕ್ಕೆ ಮಾರಕವಾಗಿತ್ತು ಎಂಬ ಕುರಿತಾಗಿ ಹಿಂದಿನ ಸರ್ಕಾರಗಳು ಚಿಂತಿಸಲೇ ಇಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.

ಹಿಂದಿನ ವ್ಯವಸ್ಥೆಯಂತೆ ಬದಲಾವಣೆ ಮಾಡುವ ಮುನ್ನ ರಾಷ್ಟ್ರಪತಿ ಆಡಳಿತದ ಅಡಿಯಲ್ಲಿ ಅಲ್ಲಿನ ಸಂಪೂರ್ಣ ವ್ಯವಸ್ಥೆ ಕೇಂದ್ರದ ಪರಿಧಿಗೆ ಬಂದಿತ್ತು. ಈಗ 370ನೆಯ ವಿಧಿಯನ್ನು ರದ್ದುಗೊಳಿಸುವ ಮೂಲಕ ಅಭಿವೃದ್ಧಿಯ ದೃಷ್ಠಿಯಿಂದ ಜಮ್ಮು ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶ ಮಾಡಿ, ನೇರವಾಗಿ ಕೇಂದ್ರದ ಆಡಳಿತಕ್ಕೆ ತಂದಿದ್ದೇವೆ. ಈ ಮೂಲಕ ರಾಜ್ಯವನ್ನು ಸಮಗ್ರವಾಗಿ ಅಭಿವೃದ್ಧಿ ಮಾಡುವ ಪರ್ವಕ್ಕೆ ನಾಂದಿ ಹಾಡಿದ್ದೇವೆ ಎಂದಿದ್ದಾರೆ.

ಪಾಕಿಸ್ಥಾನ ಮೂಲಕ ಈ ವಿಧಿಯನ್ನೊಂದು ಅಸ್ತ್ರವನ್ನಾಗಿ ಬಳಸಲಾಗುತ್ತಿತ್ತು. ಮಾತ್ರವಲ್ಲದೆ ಇದರಿಂದಾಗಿ ಈ ಏಳು ದಶಕಗಳಲ್ಲಿ ಸರಿಸುಮಾರು 42 ಸಾವಿರ ನಿರ್ದೋಷಿಗಳು ತಮ್ಮ ಪ್ರಾಣತ್ಯಾಗ ಮಾಡಬೇಕಾದ ದುರ್ದೈವ ಉಂಟಾಗಿತ್ತು ಎಂದು ಖೇದ ವ್ಯಕ್ತಪಡಿಸಿದ್ದಾರೆ.

ನಾವು ರೂಪಿಸುವ ಕಾನೂನುಗಳ ಫಲ ಜಮ್ಮು ಕಾಶ್ಮೀರದ ನಾಗರಿಕರಿಗೆ ಲಭ್ಯವಾಗುತ್ತಿರಲಿಲ್ಲ. ದೇಶದೆಲ್ಲೆಡೆ ಮಕ್ಕಳಿಗೆ ಸಿಗುತ್ತಿರುವ ಶಿಕ್ಷಣ ಸೌಲಭ್ಯ ಜಮ್ಮು ಕಾಶ್ಮೀರದ ಮಕ್ಕಳಿಗೆ ಸಿಗುತ್ತಿರಲಿಲ್ಲ. ಮಹಿಳೆಯರಿಗೆ ದೇಶದೆಲ್ಲೆಡೆ ಅನ್ವಯವಾಗುವ ಕಾನೂನು ಇಲ್ಲಿನ ಮಹಿಳೆಯರ ಪಾಲಿಗೆ ಗಗನಕುಸುಮವಾಗಿತ್ತು ಎಂದ ಪ್ರಧಾನಿ, ಅದು ಕಾರ್ಮಿಕ ಕಾನೂನಾಗಿರಬಹುದು, ಸಫಾಯಿ ಕರ್ಮಚಾರಿಗಳಿಗೆ ಸಿಗುವ ಸೌಲಭ್ಯವಾಗಿರಬಹುದು ಇವೆಲ್ಲದರಿಂದಲೂ ಇದುವರೆಗೆ ಜಮ್ಮು ಕಾಶ್ಮೀರದ ನಾಗರಿಕರು ವಂಚಿತರಾಗಿದ್ದರು ಎಂದರು.

ಕೇಂದ್ರ ಮತ್ತು ರಾಜ್ಯ ಸರಕಾರಗಳು ತನ್ನ ಉದ್ಯೋಗಿಗಳಿಗೆ ನೀಡುವ ಯಾವುದೇ ಸರಕಾರಿ ವೇತನ ಸೌಲಭ್ಯಗಳಿಂದಲೂ ಈ ಭಾಗದ ಸರಕಾರಿ ಉದ್ಯೋಗಿಗಳು ವಂಚಿತರಾಗಿದ್ದರು. ಇನ್ನು ಮುಂದೆ ಜಮ್ಮು ಕಾಶ್ಮೀರದಲ್ಲಿ ಸೇನಾ ನೇಮಕಾತಿ ರ್ಯಾಲಿಗಳನ್ನು ಆಯೋಜಿಸಲಾಗುವುದು. ಕೇಂದ್ರದಿಂದ ಒದಗಿಸಲಾಗುವ ವಿವಿಧ ವಿದ್ಯಾರ್ಥಿ ವೇತನ ಯೋಜನೆಗಳನ್ನು ಕಣಿವೆ ರಾಜ್ಯದ ವಿದ್ಯಾರ್ಥಿಗಳಿಗೂ ಉಪಯೋಗವಾಗುವಂತೆ ವಿಸ್ತರಿಸಲಾಗುವುದು ಎಂದರು.

ತಮಿಳು, ತೆಲುಗು, ಹಿಂದಿ, ಕನ್ನಡ ಸೇರಿದಂತೆ ಅಲ್ಲಿನ ಚಿತ್ರರಂಗಗಳು ವಿಶ್ವದ ಗಮನ ಸೆಳೆದಿವೆ. ಅದೇ ರೀತಿಯಲ್ಲೇ ಜಮ್ಮು ಕಾಶ್ಮೀರ ಚಿತ್ರರಂಗವೂ ಸಹ ಉದಯಿಸಬೇಕಿದೆ ಎಂದಿದ್ದಾರೆ.

ಜಮ್ಮು ಕಾಶ್ಮೀರ ಹಾಗೂ ಲಡಾಕ್’ನ ಸಮಸ್ಯೆಗಳು ಕೇವಲ ಅವರದ್ದು ಮಾತ್ರವಲ್ಲ, ನಮ್ಮದೂ ಸಹ. ಅವರ ಜವಾಬ್ದಾರಿಯನ್ನು ನಾವು ತೆಗೆದುಕೊಂಡಿದ್ದು, ಮುಂದಿನ ಅಭಿವೃದ್ಧಿ ಹಾಗೂ ಅಲ್ಲಿನ ಜನಗಳಿಗೆ ಸಂತೋಷದ ದಿನಗಳನ್ನು ತರುವುದು ನಮ್ಮ ಬಾಧ್ಯತೆ ಎಂದಿದ್ದಾರೆ.

ಅತ್ಯಾಶ್ಚರ್ಯ ವಿಚಾರವೆಂದರೆ, ದಶಕಗಳ ಕಾಲ ಲೋಕಸಭೆಗೆ ಮತದಾನ ಮಾಡುವ ಅವಕಾಶವನ್ನೇ ಕಣಿವೆ ರಾಜ್ಯದ ಮಂದಿ ಕಳೆದುಕೊಂಡಿದ್ದರು. 1947ರ ಸ್ವತಂತ್ರಾ ನಂತರದ ಭಾರತಕ್ಕೆ ಸೇರ್ಪಡೆಯಾದ ಜನರಿಗೂ ಸಹ ಈ ವಿಧಿ ನಿರಂತರ ಅನ್ಯಾಯವನ್ನು ಮಾಡುತ್ತಲೇ ಇತ್ತು. ಇದನ್ನು ನಾವು ಈಗ ಸರಿಪಡಿಸಿದ್ದೇವೆ ಎಂದರು.

Tags: 370 ಹಾಗೂ 35ಎ ವಿಧಿJammu KashmirKannada NewsModi on LivePM Narendra Modiಪ್ರಧಾನಿ ನರೇಂದ್ರ ಮೋದಿ
Previous Post

370 ವಿಧಿ ರದ್ಧತಿಗೆ ಸೇಡು ತೀರಿಸಿಕೊಳ್ಳಲು ಭಾರೀ ವಿಧ್ವಂಸಕ ಕೃತ್ಯಕ್ಕೆ ಜೈಷ್ ಉಗ್ರರ ಸಂಚು: ಹೈ ಅಲರ್ಟ್

Next Post

ಮತ್ತೆ ಮಿಡಿದ ಕರ್ನಾಟಕದ ಮಾತೃ ಹೃದಯಿ: ನೆರೆ ಸಂತ್ರಸ್ಥರ ಸಹಾಯಕ್ಕೆ ಸುಧಾಮೂರ್ತಿ 10 ಕೋಟಿ ರೂ. ದೇಣಿಗೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮತ್ತೆ ಮಿಡಿದ ಕರ್ನಾಟಕದ ಮಾತೃ ಹೃದಯಿ: ನೆರೆ ಸಂತ್ರಸ್ಥರ ಸಹಾಯಕ್ಕೆ ಸುಧಾಮೂರ್ತಿ 10 ಕೋಟಿ ರೂ. ದೇಣಿಗೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಯಶಸ್ಸಿನ ಬೆನ್ನು ಹತ್ತಲು ಆತ್ಮವಿಶ್ವಾಸ ಬಹಳ ಮುಖ್ಯ: ಚಂದನ್ ರಾವ್

June 23, 2025

ಸೀಳುತುಟಿ | ಮುಂಜಾಗ್ರತೆಯಿಂದ ತಡೆ ಸಾಧ್ಯವೇ? ಡಾ. ನಾಗೇಂದ್ರ ಹೇಳಿದ್ದೇನು?

June 23, 2025

ಶಾಸಕ ಸುನೀಲ್ ಕುಮಾರ್ ನೈತಿಕತೆಯ ಬಗ್ಗೆ ತಿಳಿದುಕೊಂಡು ಮಾತನಾಡಲಿ

June 23, 2025

ಪ್ರತಿಯೊಬ್ಬರು ಯೋಗವನ್ನು ನಿತ್ಯ ಪರಂಪರೆಯಾಗಿ ಅಳವಡಿಸಿಕೊಳ್ಳಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

June 23, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಯಶಸ್ಸಿನ ಬೆನ್ನು ಹತ್ತಲು ಆತ್ಮವಿಶ್ವಾಸ ಬಹಳ ಮುಖ್ಯ: ಚಂದನ್ ರಾವ್

June 23, 2025

ಸೀಳುತುಟಿ | ಮುಂಜಾಗ್ರತೆಯಿಂದ ತಡೆ ಸಾಧ್ಯವೇ? ಡಾ. ನಾಗೇಂದ್ರ ಹೇಳಿದ್ದೇನು?

June 23, 2025

ಶಾಸಕ ಸುನೀಲ್ ಕುಮಾರ್ ನೈತಿಕತೆಯ ಬಗ್ಗೆ ತಿಳಿದುಕೊಂಡು ಮಾತನಾಡಲಿ

June 23, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!