Sunday, June 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ತೀರ್ಥಹಳ್ಳಿ

ಮೋದಿ ಸರ್ಕಾರ ರೈತರನ್ನು ಕಡೆಗಣಿಸಿದೆ: ತೀರ್ಥಹಳ್ಳಿ ಪ್ರಚಾರದಲ್ಲಿ ಮಧು ಬಂಗಾರಪ್ಪ ವಾಗ್ದಾಳಿ

April 2, 2019
in ತೀರ್ಥಹಳ್ಳಿ
0 0
0
Share on facebookShare on TwitterWhatsapp
Read - 2 minutes

ತೀರ್ಥಹಳ್ಳಿ: ಸುಳ್ಳು ಭರವಸೆಗಳನ್ನು ನೀಡಿದ ಅಧಿಕಾರಕ್ಕೆ ಬಂದ ಪ್ರಧಾನಿ ನರೇಂದ್ರ ಮೋದಿ, ದೇಶದ ರೈತರನ್ನು ಕಡೆಗಣಿಸಿದ್ದಾರೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ವಾಗ್ದಾಳಿ ನಡೆಸಿದರು.

ತೀರ್ಥಹಳ್ಳಿಯಲ್ಲಿ ನಡೆದ ಜೆಡಿಎಸ್-ಕಾಂಗ್ರೆಸ್ ಜಂಟಿ ಸಭೆಯಲ್ಲಿ ಮಾತನಾಡಿದ ಅವರು, ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಮತದಾರರು ಪ್ರಬುದ್ಧರು ಹಾಗೂ ಸುಸಂಸ್ಕೃತರು ಸಜ್ಜನರಿದ್ದು, ಈ ಹಿಂದಿನ ಎಲ್ಲ ಲೋಕಸಭಾ ಚುನಾವಣೆಯಲ್ಲಿ ಜಾತ್ಯತೀತ ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸಿಕೊಂಡು ಬಂದಿರುವ ಹೆಗ್ಗಳಿಕೆ ಇದೆ ಎಂದಿದ್ದಾರೆ.

ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಸಂಪಕಟ್ಟೆಯಲ್ಲಿ ಮಧು ಬಂಗಾರಪ್ಪ ಪ್ರಚಾರ

ಇತ್ತೀಚೆಗೆ ಶಾಂತವೇರಿ ಗೋಪಾಲ ಗೌಡರು ಜನ್ಮವೆತ್ತಿದ ಹಾಗೂ ಕುವೆಂಪು ಅವರು ಹುಟ್ಟಿದ ಈ ಮಣ್ಣಿನಲ್ಲಿ ಕೋಮುವಾದಿಗಳ ಅಬ್ಬರ ಹೆಚ್ಚಾಗಿರುವುದು ನೋವಿನ ಸಂಗತಿ. ಈಗಿನ ಕೇಂದ್ರ ಸರಕಾರ ಅಧಿಕಾರಕ್ಕೆ ಬಂದು ಕಳೆದ ಐದು ವರ್ಷಗಳಲ್ಲಿ ರೈತರನ್ನು ಸಂಪೂರ್ಣವಾಗಿ ಕಡೆಗಣಿಸಿರುವುದು ನಮ್ಮೆಲ್ಲರಿಗೂ ತಿಳಿದ ವಿಷಯ. ಒಂದು ವರ್ಷಕ್ಕೆ ಒಂದು ಕೋಟಿ ಉದ್ಯೋಗವನ್ನು ನೀಡುತ್ತೇನೆ ಎಂದು ಸುಳ್ಳು ಹೇಳಿ ಅಧಿಕಾರಕ್ಕೆ ಬಂದು, ಈ ದೇಶದ ಕೋಟ್ಯಂತರ ಯುವಕರನ್ನು ನಿರುದ್ಯೋಗ ಸಮಸ್ಯೆ ಕಾಡುವಂತೆ ಮಾಡಿ ಕೋಟ್ಯಂತರ ಯುವಕರು ಇವತ್ತು ನಿರುದ್ಯೋಗಿಗಳಾಗಿ ಅನಾಥ ಪ್ರಜ್ಞೆ ಕಾಡುವಂತೆ ಮಾಡಿದೆ ಎಂದು ವಾಗ್ದಾಳಿ ನಡೆಸಿದರು.

ಮಧು ಬಂಗಾರಪ್ಪ ಅವರು ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಕೋಣಂದೂರು ಹಿರೇಸರ ಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದು ನಂತರ ಊರಿನ ಪ್ರಮುಖರಾದ ರಾಜಗೋಪಾಲಾಚಾರಿ ಅವರ ಮನೆಗೆ ಭೇಟಿ ಲೋಕಸಭಾ ಚುನಾವಣಾ ಪೂರ್ವಭಾವಿ ಚರ್ಚೆ ನಡೆಸಿದರು.

ನೋಟ್ ಬ್ಯಾನ್ ಮುಖಾಂತರ ಆರ್ಥಿಕ ವ್ಯವಸ್ಥೆ ಅಲ್ಲೋಲ ಕಲ್ಲೋಲ ಆಗುವಂತೆ ತಪ್ಪು ಹೆಜ್ಜೆಯನ್ನಿಟ್ಟು ಸರ್ವಾಧಿಕಾರಿ ಧೋರಣೆ ತೋರಿದೆ. ಜಿಎಸ್’ಟಿ ಜಾರಿಯಿಂದ ಸಣ್ಣಪುಟ್ಟ ವ್ಯಾಪಾರಸ್ಥರು ಸಣ್ಣಪುಟ್ಟ ಉದ್ದಿಮೆದಾರರು ಇವತ್ತು ತಮ್ಮ ಉದ್ಯೋಗವನ್ನು ಬಂದ್ ಮಾಡಿ ನಷ್ಟವನ್ನು ಅನುಭವಿಸುವಂತಾಗಿದೆ. ರಾಮನ ಹೆಸರು ಹೇಳಿ ಅಧಿಕಾರಕ್ಕೆ ಬಂದ ಇವರು ಈಗ ರಾಮನ ಜಪವನ್ನು ಮರೆತು ಮೋದಿ ಜಪ ಮಾಡಿ ಮತ್ತೆ ಅಧಿಕಾರಕ್ಕೆ ಬಂದು ತಮ್ಮ ದುರಾಡಳಿತವನ್ನು ಮುಂದುವರಿಸುವ ಅಪಾಯವಿದೆ. ಪ್ರಜಾಪ್ರಭುತ್ವದ ಉಳಿವಿಗಾಗಿ ಜಾತ್ಯತೀತ ರಾಷ್ಟ್ರದ ಗಟ್ಟಿಯ ನೆಲೆಗಟ್ಟಾಗಿ ಜಾತ್ಯತೀತ ಪಕ್ಷಕ್ಕೆ ಮತ ನೀಡುವ ಅವಶ್ಯಕತೆ ಇದೆ ಎಂದರು.

ಮಧು ಬಂಗಾರಪ್ಪ ಅವರು ತೀರ್ಥಹಳ್ಳಿಯ ಸುನ್ನಿ ಜಾಮಿಯಾ ಮಸೀದಿಗೆ ಭೇಟಿ ನೀಡಿ, ಬೆಂಬಲ ಕೋರಿದ ಸಂದರ್ಭ.

ರಾಜ್ಯದ ಕುಮಾರಸ್ವಾಮಿಯವರ ನೇತೃತ್ವದ ಸಮ್ಮಿಶ್ರ ಸರ್ಕಾರ ಅತ್ಯಂತ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸುತ್ತಿದ್ದು, ಎಲ್ಲ ವರ್ಗದ ರೈತರ, ಕಾರ್ಮಿಕರ, ಮಹಿಳೆಯರ, ಯುವಕರ ಗೌರವವನ್ನು ಕಾಪಾಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ. ಕಳೆದ ಬಜೆಟ್’ನಲ್ಲಿ ಶಿವಮೊಗ್ಗ ಜಿಲ್ಲೆಗೆ ಅತಿ ಹೆಚ್ಚು ನೀರಾವರಿ ಯೋಜನೆಗೆ, ವಿಮಾನ ನಿಲ್ದಾಣಕ್ಕೆ ಹಾಗೂ ಇನ್ನಿತರ ಕಾರ್ಯಕ್ರಮಕ್ಕೆ ಹೆಚ್ಚು ಅನುದಾನವನ್ನು ನೀಡಿ ಅಭಿವೃದ್ಧಿಯತ್ತ ಶಿವಮೊಗ್ಗ ಜಿಲ್ಲೆ ಕೊಂಡೊಯ್ಯುವಲ್ಲಿ ಪ್ರಾಮಾಣಿಕ ಪ್ರಯತ್ನವನ್ನು ಮಾಡಿದ್ದಾರೆ ಎಂದರು.

ತೀರ್ಥಹಳ್ಳಿಯ ಚರ್ಚ್‌ಗೆ ಭೇಟಿ ನೀಡಿ, ಸಹಕಾರ ಕೋರಿದ ಸಮಯ

ಮುಖ್ಯವಾಗಿ ಈ ಜಿಲ್ಲೆಯ ಬಗರ್ ಹುಕುಂ ರೈತರ ಸ್ವಾಭಿಮಾನವನ್ನು ಅವರ ಬದುಕನ್ನು ಕಾಪಾಡುವ ದೊಡ್ಡ ಜವಾಬ್ದಾರಿ ನಮ್ಮ ಮೇಲಿದೆ. ಸುಪ್ರೀಂ ಕೋರ್ಟ್’ನ ಆದೇಶದ ಮೇಲೆ ಮೇಲ್ಮನವಿಯನ್ನು ಸಲ್ಲಿಸದೇ ಬೇಜವಾಬ್ದಾರಿಯನ್ನು ನಿರ್ವಹಿಸಿರುವ ಸಂಸದರನ್ನು ನಾವು ನೋಡಿದ್ದೇವೆ. ಈ ಹಿಂದಿನ ಎಲ್ಲ ಚುನಾವಣೆಗಳನ್ನು ಬಂಗಾರಪ್ಪ ಅವರನ್ನು ತಾವುಗಳು ಬೆಂಬಲಿಸಿ ಆಶೀರ್ವದಿಸಿದ್ದಾರೆ. ಅದೇ ರೀತಿ ಈ ಬಾರಿಯ ಚುನಾವಣೆಯಲ್ಲಿ ನನ್ನನ್ನು ಕೂಡ ಬೆಂಬಲಿಸಿ ಆಶೀರ್ವದಿಸಿ ಅತಿ ಹೆಚ್ಚಿನ ಮತದಿಂದ ಆಯ್ಕೆಯಾಗಲು ಎಲ್ಲ ಕಾರ್ಯಕರ್ತರು ಮುಖಂಡರು ಸಹಕರಿಸಬೇಕಾಗಿ ವಿನಂತಿಸಿದರು.

ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಕಿಮ್ಮನೆ ರತ್ನಾಕರ, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಮಂಜುನಾಥ ಗೌಡರು, ಜಿಲ್ಲಾ ಪಂಚಾಯಿತಿ ಸದಸ್ಯ ರತ್ನಾಕರ, ಜಿಲ್ಲಾ ಕಾಂಗ್ರೆಸ್ ಮುಖಂಡ ಮಂಜುನಾಥ್ ಭಂಡಾರಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್. ಸುಂದರೇಶ್, ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಸಭೆಯಲ್ಲಿ ಉಪಸ್ಥಿತರಿದ್ದರು.

Tags: congressJDSKagodu timmappaKalpa NewsKannada NewsLoksabha election 2019Madhu BangarappaThirthalliತೀರ್ಥಹಳ್ಳಿಮಧು ಬಂಗಾರಪ್ಪಲೋಕಸಭಾ ಚುನಾವಣೆ-2019
Previous Post

ಗುರು ಇಲ್ಲದೇ ಗುರಿ ತಲುಪುತ್ತಿರುವ 10 ವರ್ಷದ ಈ ‘ಯಶಸ್ವಿ’ ಡಬ್ಸ್‌’ಮ್ಯಾಶ್ ಕ್ವೀನ್

Next Post

ನರೇಂದ್ರ ಮೋದಿ ಮತ್ತೆ ಪ್ರಧಾನಿ: ಸಿ ವೋಟರ್ಸ್‌ ಸಮೀಕ್ಷೆ ಬಹಿರಂಗ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನರೇಂದ್ರ ಮೋದಿ ಮತ್ತೆ ಪ್ರಧಾನಿ: ಸಿ ವೋಟರ್ಸ್‌ ಸಮೀಕ್ಷೆ ಬಹಿರಂಗ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

May 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!