Tuesday, July 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ಶತ್ರು ಸಂಹಾರಕ್ಕೆ ಶೀಘ್ರ ದೊಡ್ಡ ಸರ್ಜಿಕಲ್ ಸ್ಟ್ರೈಕ್ ಗೆ ಮೋದಿ ಸರ್ಕಾರ ಸಿದ್ಧ?

June 22, 2018
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - 3 minutes

ಹೌದು… ಅಂತಹುದ್ದೊಂದು ಬಲವಾದ ಅನುಮಾನ ಹಾಗೂ ಕುತೂಹಲಗಳನ್ನು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ನಿರ್ಧಾರ ಹಾಗೂ ಭಾರತೀಯ ಸೇನೆಯ ನಡೆಗಳು ಹುಟ್ಟುಹಾಕಿವೆ. ನಿರೀಕ್ಷೆ ನಿಜವೇ ಆದರೆ, ಶೀಘ್ರದಲ್ಲೇ 2016ರಲ್ಲಿ ನಡೆದಕ್ಕಿಂತಲೂ ದೊಡ್ಡ ಪ್ರಮಾಣದಲ್ಲಿ ಸರ್ಜಿಕಲ್ ಸ್ಟ್ರೈಕ್ ನಡೆಯುವ ಸಾಧ್ಯತೆಯಿದೆ.

ಮತ್ತೊಂದು ದೊಡ್ಡ ಸರ್ಜಿಕಲ್ ಸ್ಟ್ರೈಕ್ ನಡೆಯುವ ಸಾಧ್ಯತೆಯ ಅನುಮಾನಗಳನ್ನು ಹುಟ್ಟುಹಾಕಿರುವ ಸಂದರ್ಭಗಳ ವಿಶ್ಲೇಷಣೆ ಹೀಗಿದೆ ನೋಡಿ:

ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ದೊಡ್ಡ ಉದ್ದೇಶಗಳನ್ನು ಇಟ್ಟುಕೊಂಡಿದ್ದ ಬಿಜೆಪಿ 2016ರಲ್ಲಿ ನಡೆದ ಚುನಾವಣೆಯಲ್ಲಿ ಬಹುಮತ ಪಡೆಯಲು ಸಾಧ್ಯವಾಗದಿದ್ದರೂ ಪಿಡಿಪಿಗೆ ಬೆಂಬಲ ನೀಡಿ, ಸಮ್ಮಿಶ್ರ ಸರ್ಕಾರದಲ್ಲಿ ಅಧಿಕಾರ ಹಿಡಿಯಿತು. ಈ ಮೂಲಕ ಯಾವಾಗಲೂ ಹೊತ್ತಿ ಉರಿಯುವ ಕಾಶ್ಮೀರವನ್ನು ಹಿಡಿತಕ್ಕೆ ತೆಗೆದುಕೊಳ್ಳಬಹುದು ಎಂಬ ಬಿಜೆಪಿಯ ಆಸೆಗೆ ಮುಖ್ಯಮಂತ್ರಿಯಾಗಿದ್ದ ಮೆಹಬೂಬಾ ಮುಫ್ತಿ ತಣ್ಣೀರು ಎರಚುತ್ತಾ ಬಂದರು.

ಈಗ ರಂಜಾನ್ ತಿಂಗಳಲ್ಲಿ ಶತ್ರುಗಳಿಂದ ನಡೆದ ದಾಳಿಗೆ ಭಾರತದ ಪ್ರತಿದಾಳಿ ಹಾಗೂ ರಂಜಾನ್ ಮುಗಿದೊಡನೆಯೇ ಜಮ್ಮು ಕಾಶ್ಮೀರದಲ್ಲಿ ಉಗ್ರರನ್ನು ಬೇಟೆಯಾಡುವ ಸೇನಾ ಕಾರ್ಯಾಚರಣೆಯನ್ನು ಪುನರಾರಂಭಿಸುವ ಕೇಂದ್ರ ಸರ್ಕಾರದ ನಿರ್ಧಾರ ಪಿಡಿಪಿ ಮುಖ್ಯಸ್ಥೆ ಮತ್ತು ಸಿಎಂ ಮೆಹಬೂಬ ಮುಫ್ತಿ ಅವರ ಅಸಮಾಧಾನಕ್ಕೆ ಕಾರಣವಾಗಿತ್ತು.

ಅಲ್ಲಿಗೆ ಮುಫ್ತಿ ಮುಖ್ಯಮಂತ್ರಿಯಾಗಿರುವವರೆಗೂ ತಮ್ಮ ಕಾರ್ಯಾಚರಣೆಗೆ ಅವರ ತೊಡಕಾಗುತ್ತಾರೆ ಎನ್ನುವುದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಾಗೂ ಬಿಜೆಪಿಗೆ ಸ್ಪಷ್ಟವಾಗಿತ್ತು. ದೇಶದ ಭದ್ರತೆ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಲು ಒಪ್ಪದ ಮೋದಿಯವರ ಇಚ್ಛೆಯಂತೆ ಪಿಡಿಪಿಗೆ ನೀಡಿದ್ದ ಬೆಂಬಲವನ್ನು ವಾಪಾಸು ಪಡೆದ ತತಕ್ಷಣ, ಕಣಿವೆ ರಾಜ್ಯದಲ್ಲಿ ರಾಜ್ಯಪಾಲರ ಆಡಳಿತ ಅರ್ಥಾತ್ ಕೇಂದ್ರ ಸರ್ಕಾರ ಹಿಡಿತ ಸಿಕ್ಕಂತಾಯಿತು. ಅಲ್ಲಿಗೆ, ಉಗ್ರರ ವಿರುದ್ದ ಕಾರ್ಯಾಚರಣೆಗೆ ಅಡ್ಡಿಯಿಲ್ಲ ಎಂದಾಯಿತು.

ಗಡಿಯಲ್ಲಿ ಪಾಕ್ ಸೇನೆ ಹಾಗೂ ಉಗ್ರರ ಉಪಟಳ ತೀರಾ ಹೆಚ್ಚಾಗಿದ್ದು, ಸಚಿವ ರವಿಶಂಕರ್ ಪ್ರಸಾದ್ ನೀಡಿರುವ ಅಂಕಿಅಂಶದಂತೆ 2017ರಲ್ಲಿ 217 ಹಾಗೂ 2018ರ ಮೇ ತಿಂಗಳವರೆಗೂ 75 ಉಗ್ರರನ್ನು ಬೇಟೆಯಾಡಲಾಗಿದೆ. ಇದೇ ವೇಳೆ ನಮ್ಮ ಸೈನಿಕರಲ್ಲಿ ಹಲವರು ವೀರಸ್ವರ್ಗವನ್ನೂ ಸೇರಿದ್ದಾರೆ. ಗಡಿಯಲ್ಲಿ ಇವರ ಉಪಟಳವಾದರೆ, ರಾಜ್ಯದೊಳಗೆ ಪ್ರತ್ಯೇಕತಾವಾದಿಗಳ ಹಾವಳಿಯಿದೆ. ಸೈನಿಕರಿಗೆ ಕಲ್ಲು ಹೊಡೆಯುವುದು, ದಾಂಧಲೆ ಎಬ್ಬಿಸುವುದು ಹೀಗೆ.

ಇನ್ನು, ಮುಫ್ತಿ ಸರ್ಕಾರ ಪತನಗೊಳ್ಳುವ ಮುನ್ನ ಬಿಜೆಪಿ ಕಚೇರಿಯಲ್ಲಿ ರಾಜಕೀಯ ತಂತ್ರಗಾರಿಕೆಯ ಸಭೆ ನಡೆದಿದ್ದು, ಅದೇ ವೇಳೆ ಗೃಹ ಸಚಿವ ರಾಜನಾಥ್ ಸಿಂಗ್ ಅವರ ನಿವಾಸದಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಉಪಸ್ಥಿತಿಯಲ್ಲಿ ಸಭೆ ನಡೆದಿದ್ದು, ಇದರ ಬೆನ್ನಲ್ಲೇ ಪಿಡಿಪಿಗೆ ನೀಡಿದ್ದ ಬೆಂಬಲವನ್ನು ಬಿಜೆಪಿ ಹಿಂತೆಗೆದಿದ್ದು ನೋಡಿದರೆ ಆಶ್ಚರ್ಯವೆನಿಸುತ್ತದೆ.

ಇನ್ನೊಂದೆಡೆ, ಅಮರನಾಥ ಯಾತ್ರೆ ಆರಂಭವಾಗಿದ್ದು, ಮೋಸ್‌ಟ್ ವಾಂಟೆಡ್ ಎನಿಸಿರುವ ಸುಮಾರು 21 ಉಗ್ರ ನಾಯಕರ ನೇತೃತ್ವದಲ್ಲಿ ಭಯೋತ್ಪಾದಕರು ದಾಳಿ ನಡೆಸಲು ಕಾರ್ಯಾಚರಣೆ ಮಾಡುತ್ತಿದ್ದಾರೆ ಎಂಬ ಮಾಹಿತಿ ಇದೆ. ಇದಕ್ಕಾಗಿ ಬಿಎಸ್‌ಎಫ್ ಸ್ನೈಪರ್ ತಂಡವನ್ನು ವಿಶೇಷವಾಗಿ ತರಬೇತುಗೊಳಿಸಿ ನಿಯೋಜನೆ ಮಾಡಲಾಗುತ್ತಿದೆ.

ಮತ್ತೊಂದೆಡೆ, ಇದ್ದಕ್ಕಿಂದತೆಯೇ, ರಾಷ್ಟ್ರೀಯ ಭದ್ರತಾ ಪಡೆ(ಎನ್‌ಎಸ್‌ಜಿ) ಯ ಸುಮಾರು 14 ಯೋಧರಿಗೆ ಸ್ನೈಪರ್ ವಿಶೇಷ ತರಬೇತಿ ಆರಂಭವಾಗಿದ್ದು, ಸುಮಾರು 100 ಯೋಧರಿಗೆ ಇನ್ನೊಂದು ತಿಂಗಳ ಒಳಗಾಗಿ ಈ ತರಬೇತಿ ನೀಡಲಾಗುತ್ತದೆ ಎಂದು ವರದಿಯಾಗಿದೆ.

ಎಲ್ಲಕ್ಕೂ ಪ್ರಮುಖವಾಗಿ, ಜಮ್ಮು ಕಾಶ್ಮೀರದ ರಾಜ್ಯಪಾಲರ ಸಲಹೆಗಾರರನ್ನಾಗಿ ನಿವೃತ್ತ ಐಪಿಎಸ್ ಅಧಿಕಾರಿ ವಿಜಯ್ ಕುಮಾರ್ ಅವರನ್ನು ಮೋದಿ ಸರ್ಕಾರ ನೇಮಿಸಿದೆ.

ವಿಜಯ್ ಕುಮಾರ್: ಈ ಹೆಸರು ಕೇಳಿದರೇ ಕ್ರಿಮಿನಲ್‌ಗಳ ಚೆಡ್ಡಿ ಒದ್ದೆಯಾಗುತ್ತದೆ. ಹೌದು ಆ ವ್ಯಕ್ತಿ ದಕ್ಷಿಣ ಭಾರತವನ್ನೇ ನಡುಗಿಸಿ, 35 ವರ್ಷಗಳ ಕಾಲ ಮೂರು ರಾಜ್ಯಗಳಿಗೆ ತಲೆ ನೋವಾಗಿ ಪರಿಣಮಿಸಿ, ಇನ್ನಿಲ್ಲದಂತೆ ಕಾಡಿದ್ದ ನರಹಂತಕ, ದಂತಚೋರ ವೀರಪ್ಪನ್ ನನ್ನು ತಮ್ಮ ಬುದ್ದಿವಂತಿಕೆಯಿಂದ ಅರಣ್ಯದಿಂದ ಹೊರಕ್ಕೆ ಬರುವಂತೆ ಮಾಡಿ ಹೊಡೆದುರುಳಿಸಿದ ದಕ್ಷ ಹಾಗೂ ಚಾಣಾಕ್ಷ ಅಧಿಕಾರಿ ಇವರು.

K Vijay Kumar

ಇವರ ಬುದ್ದಿವಂತಿಕೆಗೆ ಹಾಗೂ ಸೇವೆಯನ್ನು ಪರಿಗಣಿಸಿದ್ದ ಮೋದಿ ಸರ್ಕಾರ ಅವರನ್ನು ಕೇಂದ್ರ ಗೃಹ ಸಚಿವಾಲಯದಲ್ಲಿ ಹಿರಿಯ ಭದ್ರತಾ ಸಲಹೆಗಾರರಗಾಗಿ ಸೇವೆ ಸಲ್ಲಿಸಿಕೊಂಡಿತ್ತು. ಇಂತಹ ಅಧಿಕಾರಿಯನ್ನು ಏಕಾಏಕಿ ಜಮ್ಮು ಕಾಶ್ಮೀರಕ್ಕೆ ಸರ್ಕಾರ ನೇಮಿಸಿರುವ ಹಿಂದೆ ದೊಡ್ಡ ಮಟ್ಟದ ಗುರಿ ಇದ್ದಿರಲೇಬೇಕು.
ಈ ಎಲ್ಲಾ ವಿಚಾರಗಳ ಜೊತೆಯಲ್ಲಿ ಕಳೆದ ಒಂದು ವಾರದಿಂದ ಗಡಿಯಲ್ಲಿ ಉಗ್ರರ ಹಾವಳಿ ಹೆಚ್ಚಾಗಿದೆ. ಇಂದು ಒಂದೇ ದಿನ ನಾಲ್ವರು ಉಗ್ರರನ್ನು ಭಾರತೀಯ ಸೇನೆ ಅಟ್ಟಾಡಿಸಿ ಕೊಂದಿದೆ. ಅಲ್ಲಿಗೆ ಸೇನೆ ಶತ್ರುಗಳ ವಿರುದ್ಧ ವ್ಯಘ್ರಗೊಂಡಿದೆ.

ಇನ್ನೊಂದೆಡೆ, ಹೇಗಾದರೂ ಮಾಡಿ ಕಾಶ್ಮೀರವನ್ನು ಹತೋಟಿಗೆ ತೆಗೆದುಕೊಂಡು, ಶಾಂತಿ ನೆಲೆಸುವಂತೆ ಮಾಡಬೇಕು ಎಂಬ ಗುರಿಯನ್ನು ಮೋದಿ ಸರ್ಕಾರ ಹೊಂದಿದೆ.

ಈ ಎಲ್ಲ ಅಂಶಗಳನ್ನು ಕೂಲಂಕಶವಾಗಿ ಚಿಂತಿಸಿದರೆ, ಶೀಘ್ರದಲ್ಲೇ ದೊಡ್ಡ ಮಟ್ಟದಲ್ಲಿ ಸರ್ಜಿಕಲ್ ಸ್ಟ್ರೈಕ್ ನಡೆಸುವ ಮೂಲಕ ತಡೆದುಕೊಳ್ಳಲಾರದ ಪೆಟ್ಟು ನೀಡಿ, ಶತ್ರುಗಳ ಹೆಡೆಮುರಿ ಕಟ್ಟಲು ಮೋದಿ ಸರ್ಕಾರ ಹಾಗೂ ಸೇನೆ ಯೋಜನೆ ರೂಪಿಸಿದೆ ಎಂಬ ಬಲವಾದ ಅನುಮಾನಗಳು ವ್ಯಕ್ತವಾಗುತ್ತವೆ.

ಒಂದು ವೇಳೆ ಇದು ನಿಜವೇ ಆದರೆ, ಈ ಬಾರಿ ಇಡಿಯ ವಿಶ್ವವೇ ತಿರುಗಿ ನೋಡುವಂತೆ ಶತ್ರುಗಳನ್ನು ಹುಟ್ಟಡಗಿಸಲಿದೆ ಸೇನೆ. ಆ ಮೂಲಕ ಕಾಶ್ಮೀರವನ್ನು ಕೇಂದ್ರ ಸರ್ಕಾರ ಸಂಪೂರ್ಣ ಹಿಡಿತಕ್ಕೆ ತೆಗೆದುಕೊಂಡರೂ ಆಶ್ಚರ್ಯವಿಲ್ಲ.
ಏನಾಗಲಿದೆ? ಕಾದು ನೋಡಬೇಕಷ್ಟೇ!!

-ಎಸ್.ಆರ್. ಅನಿರುದ್ಧ ವಸಿಷ್ಠ
9008761663

Tags: ajit dovalBJPindian armyJammu KashmirMehbooba MuftiPDPPM Narendra ModiPrakash AmmannayaS R Aniruddha Vasishtasurgical strike
Previous Post

ರಾಹುಲ್‌ಗಾಂಧಿ ಮಾನಸಿಕ ದುರ್ಬಲ ವ್ಯಕ್ತಿ: ಬಿಜೆಪಿ ಎಂಪಿ ಕುಹಕ

Next Post

Highlights: 23.06.2018

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

Highlights: 23.06.2018

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮಕ್ಕಳ ಹಲ್ಲಿನ ಆರೋಗ್ಯದ ಬಗ್ಗೆ ಗಮನವಿರಿಸಿ: ಡಾ. ಸೌಮ್ಯ

July 1, 2025

ಕಲಾತ್ಮಕತೆ ಪ್ರದರ್ಶಿಸುವ ಜಾಗತಿಕ ಗುಣಮಟ್ಟದ ಸಿನಿಮಾಗಳು ಅಗತ್ಯ: ಪ್ರೊ. ಶರತ್ ಅನಂತಮೂರ್ತಿ

July 1, 2025

ಚಿಕ್ಕಮಗಳೂರಿನಿಂದ ತಿರುಪತಿಗೆ ನೇರ ನೂತನ ರೈಲು | ಯಾವತ್ತು ಸಂಚಾರ? ಎಲ್ಲೆಲ್ಲಿ ನಿಲುಗಡೆ?

July 1, 2025

ಜು.2 : ಕುವೆಂಪು ವಿವಿ 38ನೇ ಸಂಸ್ಥಾಪನಾ ದಿನಾಚರಣೆ

July 1, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮಕ್ಕಳ ಹಲ್ಲಿನ ಆರೋಗ್ಯದ ಬಗ್ಗೆ ಗಮನವಿರಿಸಿ: ಡಾ. ಸೌಮ್ಯ

July 1, 2025

ಕಲಾತ್ಮಕತೆ ಪ್ರದರ್ಶಿಸುವ ಜಾಗತಿಕ ಗುಣಮಟ್ಟದ ಸಿನಿಮಾಗಳು ಅಗತ್ಯ: ಪ್ರೊ. ಶರತ್ ಅನಂತಮೂರ್ತಿ

July 1, 2025

ಚಿಕ್ಕಮಗಳೂರಿನಿಂದ ತಿರುಪತಿಗೆ ನೇರ ನೂತನ ರೈಲು | ಯಾವತ್ತು ಸಂಚಾರ? ಎಲ್ಲೆಲ್ಲಿ ನಿಲುಗಡೆ?

July 1, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!