ನವದೆಹಲಿ: ಇದೇ ಶುಕ್ರವಾರ ಮಂಡನೆಯಾಗಲಿರುವ ಕೇಂದ್ರ ಬಜೆಟ್’ನಲ್ಲಿ ಸಾರ್ವತ್ರಿಕ ಕನಿಷ್ಠ ಆದಾಯ ಯೋಜನೆ ಘೋಷಣೆ ಮಾಡಲು ಪ್ರಧಾನಿ ಮೋದಿ ನಿರ್ಧರಿಸಿದ್ದಾರೆ ಎನ್ನಲಾಗಿದ್ದು, ಈ ಮೂಲಕ ರಾಹುಲ್ ಗಾಂಧಿಗೆ ಸೆಡ್ಡು ಹೊಡಯಲು ಮಾಸ್ಟರ್ ಪ್ಲಾನ್ ಮಾಡಿದ್ದಾರೆ ಎಂದು ವರದಿಯಾಗಿದೆ.
ಕಾಂಗ್ರೆಸ್ ಅಧಿಕಾರಕ್ಕೆ ಬಂದಿರೆ ಬಡವರಿಗೆ ಕನಿಷ್ಠ ಆದಾಯ ಖಾತರಿ ಯೋಜನೆ ಜಾರಿಗೊಳಿಸುವುದಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಘೋಷಿಸಿದ್ದರು. ಇದರ ಬೆನ್ನಲ್ಲೆ, ಕಾಂಗ್ರೆಸ್’ಗೆ ಶಾಕ್ ನೀಡಲು ಮೋದಿ ಸರ್ಕಾರ ಮುಂದಾಗಿದೆ.
ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಹಿನ್ನಡೆಯಾದ ನಂತರ ಎಚ್ಚೆತ್ತುಕೊಂಡಿರುವ ಪ್ರಧಾನಿ ಮೋದಿ, ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಸಾರ್ವತ್ರಿಕ ಕನಿಷ್ಠ ಆದಾಯ ಯೋಜನೆಯನ್ನು ಜಾರಿಗೊಳಿಸಲು ನಿರ್ಧರಿಸಿದ್ದಾರೆ. ಆದರೆ ಈ ಯೋಜನೆಯ ನಿಜವಾದ ಫಲಾನುಭವಿಗಳು ಯಾರು ಮತ್ತು ಇದರ ಇತಿ, ಮಿತಿಗಳು ಏನೆಂದು ಇನ್ನೂ ಸ್ಪಷ್ಟವಾಗಿಲ್ಲ.
2016-17ನೇ ಸಾಲಿನ ಆರ್ಥಿಕ ಸಮೀಕ್ಷೆ ಪ್ರಕಾರ, ಶೇ.75ರಷ್ಟು ಬಡವರಿಗೆ ಕನಿಷ್ಠ ಆದಾಯ ಖಾತ್ರಿ ನೀಡಬೇಕು. ಆದರೆ ಮೋದಿ ಸರ್ಕಾರ ಈ ಯೋಜನೆಗೆ ಹಣ ಹೇಗೆ ಹೊಂದಿಸುತ್ತದೆ ಎಂಬುದು ಈಗ ಬಹುದೊಡ್ಡ ಪ್ರಶ್ನೆಯಾಗಿದೆ. ಈಗಾಗಲೇ ಆಹಾರ ಸಬ್ಸಿಡಿಗಾಗಿ 1 ಲಕ್ಷ 70 ಸಾವಿರ ಕೋಟಿ, ಎಂಎನ್ ಆರ್ ಇಜಿಗೆ 55 ಸಾವಿರ ಕೋಟಿ ರುಪಾಯಿ ನೀಡಲಾಗುತ್ತಿದ್ದು, ಹಣಕಾಸಿನ ಸಮತೋಲನ ಸಾಧಿಸಲು ಸಾಧ್ಯವೆ? ಎಂಬುದು ಪ್ರಶ್ನೆಯಾಗಿದೆ.
Discussion about this post