No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Saturday, August 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಕಲಿತಿದ್ದೇನೆಂಬ ಅಹಂಕಾರ ಬೇಡ ಎಂಬ ಪುತ್ರಿಗಾಗಿ ಸ್ವತಃ ನೃತ್ಯ ಕಲಿತ ತಾಯಿ

ಫೆ.9ರಂದು ಮೈಸೂರಿನಲ್ಲಿ ಭರತನಾಟ್ಯ ರಂಗ ಪ್ರವೇಶ | ವಿದುಷಿ ಕೃಪಾ ಫಡ್ಕೆ ಶಿಷ್ಯೆ

kalpa News by kalpa News
February 7, 2025
in Special Articles, ಮೈಸೂರು
0
ಕಲಿತಿದ್ದೇನೆಂಬ ಅಹಂಕಾರ ಬೇಡ ಎಂಬ ಪುತ್ರಿಗಾಗಿ ಸ್ವತಃ ನೃತ್ಯ ಕಲಿತ ತಾಯಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |  ಲೇಖನ: ಶ್ರೀ ರಾಮ  |

ಸಾಂಸ್ಕೃತಿಕ ನಗರಿ ಮೈಸೂರಿನ ಪ್ರಖ್ಯಾತ ಸಂಸ್ಥೆ ನೃತ್ಯ ಗಿರಿ-ಪ್ರದರ್ಶಕ ಕಲೆಗಳ ಸಂಶೋಧನಾ ಕೇಂದ್ರವು ಫೆ. 9ರಂದು ಆಯೋಜಿಸಿರುವ ಕಾರ್ಯಕ್ರಮದಲ್ಲಿ ಯುವ ಕಲಾವಿದೆ ತನುಶ್ರೀ ಎಸ್. ಚಿನ್ನಯ್ಯ ಭರತನಾಟ್ಯ ರಂಗ ಪ್ರವೇಶ ಮಾಡಲಿದ್ದಾರೆ.

ಮೈಸೂರಿನ ವಿನೋಬಾ ರಸ್ತೆಯ ಕರ್ನಾಟಕ ಕಲಾಮಂದಿರದಲ್ಲಿ ಸಂಜೆ 5:30ಕ್ಕೆ ರಂಗಾರೋಹಣ ಸಂಪನ್ನಗೊಳ್ಳಲಿದೆ.

ರಂಗಕರ್ಮಿ ಮತ್ತು ಚಿತ್ರನಟ ಮಂಡ್ಯ ರಮೇಶ್, ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ ನಿರ್ದೇಶಕಿ ಡಾ.ಎಂ. ಪುಷ್ಪಾವತಿ, ಚಾಮರಾಜನಗರ ಜಿಲ್ಲಾ ಡಿಡಿಪಿಐ ರಾಮಚಂದ್ರ ರಾಜೇ ಅರಸ್ ಸಾಕ್ಷಿಯಾಗಲಿದ್ದಾರೆ. ಹಿರಿಯ ವಿದುಷಿ, ನೃತ್ಯ ಗಿರಿ ಸಂಸ್ಥೆ ನಿರ್ದೇಶಕಿ ಕೃಪಾ ಫಡ್ಕೆ, ಚಿನ್ನಯ್ಯ, ಸುಮಲತಾ ಹಾಜರಿರಲಿದ್ದಾರೆ.

Also Read>> ಸ್ಥಳೀಯ ಜನರ ವಿಶ್ವಾಸ ಪಡೆದು ಪರಿಸರ ಯೋಜನೆ ರೂಪಿಸಿ: ಕಲ್ಕುಳಿ ವಿಠ್ಠಲ ಹೆಗಡೆ

ಗುರುವಂದನೆ
ಇದೇ ಸಂದರ್ಭ ಹಿರಿಯ ವಿದುಷಿಯರಾದ ಡಾ. ಆರ್.ಎನ್. ಶ್ರೀಲತಾ, ಡಾ. ಕೃಪಾ ಫಡ್ಕೆ ಮತ್ತು ಕೆ.ಆರ್. ಶ್ರೀಲತಾ ವಲ್ಲೀಶ ಅವರಿಗೆ ಗುರುವಂದನೆ ಸಮರ್ಪಣೆಯೂ ನೆರವೇರಲಿದೆ.ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯಲ್ಲಿ ತೃತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿರುವ ತನುಶ್ರೀ, ಭರತನಾಟ್ಯ ಮತ್ತು ಕರ್ನಾಟಕ ಶಾಸ್ತ್ರೀಯ ಸಂಗೀತದಲ್ಲಿ ವಿದ್ವತ್ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದಾರೆ.

ವಿವಿಧೆಡೆ ಕಲಾ ಪ್ರಸ್ತುತಿ
ತಿರುಪತಿ ಬ್ರಹ್ಮೋತ್ಸವ, ವಿಶ್ವವಿಖ್ಯಾತ ಮೈಸೂರು ದಸರಾ, ಮಹಾಶಿವರಾತ್ರಿ ಉತ್ಸವ, ಶೃಂಗೇರಿ ಶಂಕರ ಮಠದ ಶರನ್ನವರಾತ್ರಿ ಮಹೋತ್ಸವ ಸೇರಿದಂತೆ ವಿವಿಧ ಪ್ರತಿಷ್ಠಿತ ವೇದಿಕೆಗಳಲ್ಲಿ ತನುಶ್ರೀ ಈಗಾಗಲೇ ಸಂಗೀತ- ನೃತ್ಯ ಪ್ರದರ್ಶನ ನೀಡಿದ ಸಾಧನೆಗೆ ಪಾತ್ರರಾದ್ದಾರೆ. ತನುಶ್ರೀ ರಂಗಪ್ರವೇಶಕ್ಕೆ ವಿದ್ವಾಂಸರಾದ ಪೂಜಾ ಸುಗಂ ನಟವಾಂಗ, ಆರ್. ರಾಜೀವ್ ಗಾಯನ, ಜಿ.ಎಸ್. ನಾಗರಾಜ್ ಮೃದಂಗ ಮತ್ತು ಎ.ಪಿ. ಕೃಷ್ಣಪ್ರಸಾದ್ ಕೊಳಲು ವಾದನದ ಹಿಮ್ಮೇಳ ಸಹಕಾರ ನೀಡಲಿದ್ದಾರೆ.

ಕಲಿತಿದ್ದೇನೆ ಎಂಬ ಅಹಂಕಾರ ಬೇಡವೇ ಬೇಡ…
ಕಲಾ ರಂಗದಲ್ಲಿ ಸಾಧನೆ ಎಂಬುದು ಅನಂತವಾಗಿದೆ. ಮಾಡಿದಷ್ಟೂ ಇನ್ನೂ ಮಾಡಬೇಕು ಎನಿಸುತ್ತದೆ. ಸದಾ ಕಲಿಯುತ್ತಲೇ ಇರುವುದು, ಅದರಲ್ಲಿ ಅಲ್ಲಲ್ಲಿ ಆನಂದ ಕಾಣುವುದು, ‘ಕಲಿತುಬಿಟ್ಟಿದ್ದೇನೆ’ ಎಂಬ ಅಹಂಕಾರದಿಂದ ದೂರ ಇರುವುದು ಉತ್ತಮ ಎಂಬುದು ನನ್ನ ಅಭಿಮತ ಎನ್ನುತ್ತಾರೆ ಯುವ ಕಲಾವಿದೆ ತನುಶ್ರೀ. ಅಮ್ಮನ ( ಸುಮಲತಾ) ಉತ್ಕಟ ಅಪೇಕ್ಷೆಗಳನ್ನು ಈಡೇರಿಸಲು ಸಂಗೀತ- ಭರನತಾಟ್ಯದಲ್ಲಿ ಸಂಪೂರ್ಣ ತೊಡಗಿಸಿಕೊಂಡಿರುವ ಈಕೆಗೆ ವಾಕ್ ಮತ್ತು ಶ್ರವಣ ವಿಷಯದ ಪದವಿ ಅಧ್ಯಯನ ಬಿಟ್ಟರೆ ಕಲಾ ಪ್ರಪಂಚವೇ ಕಾಣುವುದು ಒಂದು ವಿಶೇಷ. ಅದರಲ್ಲಿ ಹೆಮ್ಮೆ ಮತ್ತು ಖುಷಿ ಇದೆ ಎನ್ನುತ್ತಾರೆ. ಆಧುನಿಕ ಬದುಕಿನ ಆಡಂಬರಗಳಿಂದ ದೂರ ಇರಬೇಕು. ಗುರುವನ್ನು ಇನ್ನೂ, ಇನ್ನೂ ಅನುಸರಿಸಬೇಕು ಎಂಬುದೇ ಈಕೆಯ ಧ್ಯೇಯ.

ಗುರು ಡಾ. ಕೃಪಾ ಫಡ್ಕೆಯೊಂದಿಗೆ…

9ನೇ ತರಗತಿ ವ್ಯಾಸಂಗದ ಸಂದರ್ಭದಲ್ಲೇ ಪಾಲಕರು ನನಗೆ ರಂಗ ಪ್ರವೇಶ ಮಾಡಿಸುವ ನಿರ್ಧಾರ ಮಾಡಿದ್ದರು. ಆದರೆ ನನಗೆ ಆ ಹಂತದ ಕಲಿಕೆ ತೃಪ್ತಿ ನೀಡಿರಲಿಲ್ಲ. ಮುಂದೆ ಯಾವಾಗಲಾದರೂ ಮಾಡೋಣ ಎಂದುಕೊಂಡು ಸುಮ್ಮನಾಗಿದ್ದೆ. ನೃತ್ಯಕ್ಕೆ ಸಂಗೀತವೂ ಅತಿ ಅನಿವಾರ್ಯ ಎಂದರಿತು ಅಲ್ಲೂ ತಾಲೀಮು ಮಾಡಿದೆ. ನನ್ನ ಮನಸ್ಸಿಗೆ ಹಿತಕೊಡುವಷ್ಟೂ ವೇಳೆ ಕಲಿಯುತ್ತಲೇ ಇರಬೇಕು ಎಂಬ ಸಂಕಲ್ಪ ನನ್ನದಾಗಿ.
-ತನುಶ್ರೀ, ಯುವ ಕಲಾವಿದೆ

ಶಿಕ್ಷಕನ ಪುತ್ರಿ ಸದಾ ವಿದ್ಯಾರ್ಥಿ…
ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಚಿನ್ನಯ್ಯ – ಅಭಿಯೋಜನಾ ಇಲಾಖೆ ಪ್ರಥಮ ದರ್ಜೆ ಸಹಾಯಕಿ ಸುಮಲತಾ ಅವರ ಪುತ್ರಿ ತನುಶ್ರೀಗೆ ಬಾಲ್ಯದಲ್ಲಿಯೇ ಸಂಗೀತ ಮತ್ತು ನೃತ್ಯಗಳ ಬಗ್ಗೆ ವಿಶೇಷ ಆಸಕ್ತಿ ಮೂಡಿತ್ತು. ವಿಷುಷಿ ಲೋಲಾಕ್ಷಿ ಹಾಸನ ಅವರಲ್ಲಿ ನೃತ್ಯದ ಪ್ರಥಮ ಹೆಜ್ಜೆಗಳನ್ನು ಕಲಿತುಕೊಂಡ ಈಕೆ ತನ್ನ ಐದನೇ ವರ್ಷದಲ್ಲಿ ಮೈಸೂರಿನ ವಿದುಷಿ ಕೃಪಾ ಫಡ್ಕೆ ಅವರ ಶಿಷ್ಯತ್ವ ಸ್ವೀಕರಿಸಿದರು.

Also Read>> ಗಮನಿಸಿ ! ಫೆ.8ರಂದು ಶಿವಮೊಗ್ಗ ನಗರದ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

17 ವರ್ಷದಿಂದ ನರ್ತನ ಅಭ್ಯಾಸ ಮಾಡಿ, ಜೂನಿಯರ್, ಸೀನಿಯರ್ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿ ಪಡೆದಿದ್ದು ಹೆಮ್ಮೆ. ಇದರೊಂದಿಗೆ ಕರ್ನಾಟಕ ಶಾಸ್ತ್ರೀಯ ಸಂಗೀತವನ್ನೂ ವಿದುಷಿ ಲತಾ ವಲ್ಲೀಶ, ನಂತರದಲ್ಲಿ ವಿದುಷಿ ಡಾ. ಆರ್.ಎನ್. ಶ್ರೀಲತಾ ಅವರಲ್ಲಿ ಅಭ್ಯಾಸ ಮಾಡಿದ್ದಾರೆ. ಸಂಗೀತ- ನೃತ್ಯ ಎರಡರಲ್ಲೂ ವಿದ್ವತ್ ಪರೀಕ್ಷೆಗೆ ತಾಲೀಮು ನಡೆಸುತ್ತಿರುವುದು ಇನ್ನೊಂದು ಹೆಚ್ಚುಗಾರಿಕೆ. ಈ ನಡುವಿನ ಅವಧಿಯಲ್ಲಿ ರಂಗಾರೋಹಣ ಸಂಭ್ರಮ.

ಅಮ್ಮನೂ ನನಗೋಸ್ಕರ ನೃತ್ಯ ಕಲಿತಳು…
ನಾನು ಎಷ್ಟೇ ಕಲಿತರೂ, ಯಾವುದೇ ವೇದಿಕೆಯಲ್ಲಿ ಕಲಾಭಿವ್ಯಕ್ತಿ ಮಾಡಿದರೂ ಅಮ್ಮನಿಗಂತೂ ‘ಸಂಪೂರ್ಣ ತೃಪ್ತಿ’ ಎಂಬುದೇ ಆಗುವುದಿಲ್ಲ. ಚನ್ನಾಗಿತ್ತು. ಆದರೆ ಇನ್ನೂ ಚನ್ನಾಗಿ ಭಾವ ತುಂಬಬೇಕಿತ್ತು ಎಂಬಲ್ಲಿಗೆ ಅಮ್ಮನ ವಿಮರ್ಷೆ ನಿಲ್ಲುತ್ತದೆ. ಇದು ಪ್ರತೀ ಹಂತದಲ್ಲಿ ನನ್ನ ಬೆಳವಣಿಗೆಯನ್ನು ಆರಂಭಿಸುತ್ತದೆ. ಅಮ್ಮನ ಖುಷಿ ಮತ್ತು ತೃಪ್ತಿಗಾಗಿ ನಾನು ಮತ್ತೆ ಮತ್ತೆ ಹೊಸ ಹೊಸ ಕಲಿಕೆಗೆ ತೆರೆದುಕೊಳ್ಳುವೆ ಎನ್ನುವಾಗ ತನುಶ್ರೀ ಕಣ್ಣುಗಳು ತೇವಗೊಂಡಿದ್ದವು. ಮಕ್ಕಳಲ್ಲಿ ಇಂಥ ಸಂಸ್ಕಾರ ಇರುವುದೂ ಇಂದಿನ ಕಾಲದಲ್ಲಿ ಬಹು ಅಪರೂಪ!ನನ್ನನ್ನು ಗುರು ಕೃಪಾ ಅವರಲ್ಲಿ ನೃತ್ಯ ಅಭ್ಯಾಸಕ್ಕೆ ಸೇರಿಸಿದ ಅಮ್ಮನಿಗೆ ಮೊದಲಿನಿಂದಲೂ ನರ್ತನದ ಬಗ್ಗೆ ವಿಶೇಷ ಪ್ರೀತಿ. ನಾನು ಕಲಿತದ್ದನ್ನು ಮನೆಯಲ್ಲಿ ತಿದ್ದಲೇಬೇಕು ಎಂಬ ಛಲ. ಈ ಉತ್ಕಟತೆಗೇ ಆಕೆಯೂ ಭರತನಾಟ್ಯ ತರಗತಿ ಸೇರಿದರು. ಜೂನಿಯರ್ ಪಾಸ್ ಮಾಡಿಕೊಂಡರು. ನಾನು ಅಭ್ಯಾಸ ಮಾಡುವಾಗಲೆಲ್ಲಾ ಎದುರಿಗೆ ಕುಳಿತು, ಕಲಾ ಪ್ರದರ್ಶನಗಳಲ್ಲಿ ಮುಂದಿನ ಸಾಲಿನಲ್ಲೇ ಉಪಸ್ಥಿತಿ ಪಡೆದು ನನ್ನ ತಪ್ಪು ಹುಡುಕಿ ಹೇಳಿ, ‘ಕಡೆಗೆ ಚೆನ್ನಾಗಿ ಬಂತು…’ ಎಂದಷ್ಟೇ ಹೇಳುವುದು, ಇನ್ನೂ ಚಂದ ಮಾಡಬಹುದಿತ್ತು ಎಂಬಲ್ಲಿಗೆ ಅಲ್ಪ ವಿರಾಮ ಹಾಕುವುದು…. ನನ್ನ ಈ ಹಂತದ ಸಾಧನೆಗೆ ಬದುದೊಡ್ಡ ಸ್ಫೂರ್ತಿ ಎಂಬುದು ತನುಶ್ರೀ ಅಂತರಂಗದ ನುಡಿ. ಆಕೆ ಮುದ್ದು, ಮಮತೆಗಾಗಿ ಎಂದೋ ಒಂದು ದಿನ ‘ ನೀನೇ ಪರಿಪೂಣ’ ಎಂದು ಬಿಟ್ಟಿದ್ದರೆ ನನ್ನ ಬೆಳವಣಿಗೆ ಅಂದೇ ನಿಲ್ಲುತ್ತಿತ್ತು. ಆಕೆಗೆ ಪರಿಪೂರ್ಣ ತೃಪ್ತಿ ಆಗುವಲ್ಲೀವರೆಗೂ ನಾನು ವಿದ್ಯಾರ್ಥಿಯೇ ಎಂಬುವಾಗ ತನುಶ್ರೀ ಅದಮ್ಯ ಉತ್ಸಾಹ ಪ್ರಕಟವಾಗುತ್ತದೆ.

ಕುಟುಂಬ ಮಾಡರ್ನ್ ಆಗಿಲ್ಲ
ಹಲವು ಕುಟುಂಬ ಆಧುನಿಕ ಕಾಲಘಟ್ಟಕ್ಕೆ ತಕ್ಕಂತೆ ‘ಮಾಡರ್ನ್’ ಆಗಿಬಿಟ್ಟಿವೆ. ಆದರೆ ನನ್ನ ಅಪ್ಪ- ಅಮ್ಮ ಬದುಕಿನ ಅರ್ಥ ಮತ್ತು ಆಳ ಅರಿತು ಎಂದೂ ಬಣ್ಣದ ಜೀವನಕ್ಕೆ ಮರುಳಾಗಿಲ್ಲ. ಹಾಗಾಗಿ ಇಬ್ಬರೂ ಪೂಜ್ಯರು. ಮತ್ತು ಅಮ್ಮನಷ್ಟೇ ಪ್ರೀತಿ ಭರಿಸುವ ನನ್ನ ಗುರು ಕೃಪಾ ಮೇಡಂ ಶ್ರೇಷ್ಠರು. ಕಲಾ ವಿದ್ಯಾರ್ಥಿಗಳಾದ ನಾವು ಹಲವು ಪ್ರಸಂಗದಿಂದ ಪಾಠ ಕಲಿತು ‘ಮಾಡಿಫೈ ಮತ್ತು ಬ್ಯೂಟಿಫೈ’ ಆಗಬೇಕು ಎಂಬುದು ತನುಶ್ರೀ ಅಭಿಮತ.

ವೃತ್ತಿ ಮತ್ತು ಪ್ರವೃತ್ತಿ ಸಮನ್ವಯ ಮಾಡುವೆ
ವಾಕ್ ಮತ್ತು ಶ್ರವಣ ಪದವಿ ನಂತರ ಪೆಥಾಲಜಿಸ್ಟ್ ಆಗುವ ನಾನು ವೃತ್ತಿ ಮತ್ತು ಕಲಾ ಪ್ರವೃತ್ತಿಯನ್ನು ಸರಿಸಮನಾಗಿ ದುಡಿಸಿಕೊಂಡು ಹೋಗುವ ಸಂಕಲ್ಪ ಮಾಡಿದ್ದೇನೆ ಎನ್ನುತ್ತಾಳೆ ಈ ಯುವ ಕಲಾವಿದೆ. ಆಯಿಷ್‌ನಲ್ಲಿ ಅನೇಕ ಅಂಗವಿಕಲ ಮತ್ತು ಮಾತನಾಡಲು ಬಾರದ ಚಿಕ್ಕ ಚಿಕ್ಕ ಮಕ್ಕಳನ್ನು ನೋಡಿದಾಗ ಕರುಳು ಚುರುಕ್ ಎನ್ನುತ್ತದೆ. ಸಂಗೀತ- ನೃತ್ಯದ ಪಟ್ಟುಗಳನ್ನು ಬಳಸಿಕೊಂಡು ಥೆರಪಿ ಮಾಡಿ, ವಿಕಲಚೇತನರನ್ನೂ ಮುಖ್ಯವಾಹಿನಿಗೆ ತರಬೇಕು ಎಂಬ ದೊಡ್ಡ ಕನಸು ಇದೆ. ಇದಕ್ಕಾಗಿ ಸಮಾಜದ ಹತ್ತು ಹಲವು ಸಾಧಕ, ದಾನಿ, ಕಲಾ ಪ್ರೇಮಿಗಳನ್ನು ಒಂದೆಡೆ ಸಂಗಮ ಮಾಡಿ, ನಾನೇ ಒಂದು ಸೇವಾ ಸಂಸ್ಥೆ ಸ್ಥಾಪಿಸಿ ಸಮಾಜಕ್ಕೆ ಏನಾದರೂ ಉತ್ತಮ ಕೊಡುಗೆ ನೀಡಬೇಕೆಂಬ ಹೆಬ್ಬಯಕೆಯನ್ನು ಈಕೆ ಈ ಸಂದರ್ಭ ಹರವಿ ಇಟ್ಟಿರುವುದು ಮಹತ್ವಪೂರ್ಣ ಆಶಾಭಾವದ ಪ್ರತೀಕ ಎನಿಸಿದೆ.

ವಂಶದಲ್ಲಿ ಕಲಾ ಸಾಧಕರು ಇಲ್ಲದಿದ್ದರೂ ತನುಶ್ರೀ ಕಲಾಭಿರುಚಿ, ಸಾಧನೆ ಉತ್ತಮವಾಗಿದೆ. ಕಲೆಗೆ ಉತ್ತೇಜಿಸುವ ಗುಣ ತಂದೆ ಚಿನ್ನಯ್ಯಗೆ, ಸಾಹಿತ್ಯ, ಸಂಗೀತ ಒಲವು ತಾಯಿ ಸುಮಲತಾಗೆ ಇರುವುದೇ ಮಗಳ ಕಲಾಭಿವ್ಯಕ್ತಿಗೆ ಪ್ರೇರಕವಾಗಿದೆ. ತನುಶ್ರೀ ಕಲಾಯಾನ ಇನ್ನಷ್ಟು ಮೈಲಿಗಲ್ಲು ಸಾಧಿಸಲಿ.
-ವಿದುಷಿ ಕೃಪಾ ಫಡ್ಕೆ, ಭರತನಾಟ್ಯ ಗುರು, ನೃತ್ಯಗಿರಿ ಸಂಸ್ಥೆ ನಿರ್ದೇಶಕಿ

ಬಹುಮುಖಿ
ಸಂಗೀತ- ನೃತ್ಯದೊಂದಿಗೆ ತನುಶ್ರೀಗೆ ಸ್ಕೇಟಿಂಗ್, ಚಿತ್ರಕಲೆ, ವರ್ಣಕಲೆ, ನಿಸರ್ಗ ಛಾಯಾಗ್ರಹಣದ ಹವ್ಯಾಸವೂ ಇದೆ.ಬೇಸರದ ಪ್ರಸಂಗವೇ ಇಲ್ಲ
ಕಳೆದ ವರ್ಷ ನಮ್ಮ ನೃತ್ಯಗಿರಿ ವಾರ್ಷಿಕೋತ್ಸವದಲ್ಲಿ ಪೂತನಿ ಪಾತ್ರ ಮಾಡಿದೆ. ಆಗ ಅಮ್ಮನ ಕಣ್ಣಲ್ಲಿ ಧಾರಾಕಾರ ನೀರು ಬಂದಿತ್ತು. ಅಮ್ಮನಿಗೆ ಪಾತ್ರ ಅತ್ಯಂತ ಪ್ರಿಯವಾಗಿತ್ತಂತೆ. ಅದೇ ನನ್ನ ಬದುಕಿನ ಅತ್ಯಂತ ಸಂತೋಷದ ಕ್ಷಣ. ಇನ್ನು ನನಗೆ ಬೇಸರ ಎಂಬ ಪದವೇ ಗೊತ್ತಿಲ್ಲ. ಹಾಗೇನಾದರೂ ಅಂಥಾ ಪ್ರಸಂಗ ಬಂದಿದ್ದರೆ ಅದನ್ನು ಮರೆತುಬಿಡುವೆ.

ಪ್ರಾಥಮಿಕ ಶಾಲೆಯಲ್ಲಿ ಹಲವು ಮಿತ್ರರು ನನ್ನನ್ನು ‘ಕಪ್ಪು’ ಎಂದು ಮೊದಲಿಸಿದರೂ ಅಮ್ಮ ‘ನೀನು ಕೃಷ್ಣನ ಹಾಗೆ’ ಎಂದು ಹುರಿದುಂಬಿಸುತ್ತಿದ್ದಳು. ನಾನು ಏನೆಂಬುದು ನನ್ನ ಅಂತರಾತ್ಮಕ್ಕೆ ಗೊತ್ತು. ಹಾಗಾಗಿ ಹೊರಗಿನ ಯಾವುದೇ ಟೀಕೆ ಮೂದಲಿಕೆ, ಕಪ್ಪು- ಬಿಳುಪು, ಬಣ್ಣಗಳ ಗೊಡವೆಯೇ ಬೇಡ. ಎಲ್ಲವನ್ನೂ ಧನಾತ್ಮಕವಾಗಿ ಕಂಡು ದಿಟ್ಟ ಸಾಧನೆ ಎಡೆಗೆ, ಧೀರೋದ್ದಾತವಾಗಿ ಸಾಗಬೇಕು ಎಂದು ಹೇಳುವಾಗ ಬದುಕಿನ ಬಗ್ಗೆ ಈಕೆಯ ಉತ್ಕಟ ಆಕಾಂಕ್ಷೆ ಪ್ರತಿಫಲಿಸುತ್ತದೆ. ಹಾಗಾಗಿಈಕೆ ಯುವಜನರಿಗೆ ಒಂದು ಮಾದರಿಯೂ ಹೌದು.

ಗುರು ಇದ್ದರೆ ಹೀಗಿರಬೇಕು…
ಕಲಾ ಚಟುವಟಿಕೆಗಳಲ್ಲಿ ಇರುವವರು ತಮ್ಮನ್ನು ತಾವು ಅಂತರ್ಗತವಾಗಿ ಶೋಧನೆಗಳನ್ನು ಮಾಡಿಕೊಳ್ಳುತ್ತಲೇ ಇರಬೇಕು ಆ ನಿಟ್ಟಿನಲ್ಲಿ ನನ್ನನ್ನು ನಾನು ಅವಲೋಕಿಸಿಕೊಂಡಾಗ ಕುಳಿತರೆ, ನಿಂತರೆ ನನ್ನ ಗುರು ಕೃಪಾ ಅವರ ಮಹಾ ಕೃಪೆಯೇ ಕಣ್ಣೆದುರಿಗೆ ಬರುತ್ತದೆ. ಇಂಥವರ ಗರಡಿಯಲ್ಲಿ ಪಳಗಿ ನಾನು ರಾಷ್ಟ್ರಮಟ್ಟದ ಕಲಾವಿದೆ ಆಗಬೇಕು. ನಾಟಕ, ಧಾರಾವಾಹಿ, ಸಿನಿಮಾ ಯಾವುದೇ ಅವಕಾಶ ಬಂದರೂ ಅದನ್ನು ನಿಯಮಿತವಾಗಿ ಬಳಸಿ, ಬದುಕಿನ ಪ್ರಮುಖ ಉದ್ದೇಶಕ್ಕೆ ಮನ್ನಣೆ ನೀಡಬೇಕು ಎಂಬುದು ತನುಶ್ರೀ ದಿಟ್ಟ ನಿಲುವು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Kalahamsa Infotech private limited

Tags: All India Institute of Speech and HearingBharatanatyamChamarajanagarKannada News WebsiteLatest News KannadaMandya Rameshmysoreಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಚಾಮರಾಜನಗರತನುಶ್ರೀ ಎಸ್. ಚಿನ್ನಯ್ಯಬ್ರಹ್ಮೋತ್ಸವಭರತನಾಟ್ಯಮಂಡ್ಯ ರಮೇಶ್ಮೈಸೂರುರಂಗ ಪ್ರವೇಶಸಾಂಸ್ಕೃತಿಕ ನಗರಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

6 ಲಕ್ಷ ಕ್ವಿಂಟಾಲ್ ಬೀಜೋತ್ಪಾದನೆ ಗುರಿ ಸಾಧನೆಗೆ ಸಿದ್ದತೆ ನಡೆಸಿ | ಕೃಷಿ ಸಚಿವರ ಸೂಚನೆ

Next Post

ರೋಬೋಟ್‌ ನೆರವಿನ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆ | ಶೀಘ್ರ ಚೇತರಿಕೆಗೆ ಸಹಕಾರಿ | ಸಚಿವ ರಾಮಲಿಂಗಾರೆಡ್ಡಿ

kalpa News

kalpa News

Next Post
ರೋಬೋಟ್‌ ನೆರವಿನ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆ | ಶೀಘ್ರ ಚೇತರಿಕೆಗೆ ಸಹಕಾರಿ | ಸಚಿವ ರಾಮಲಿಂಗಾರೆಡ್ಡಿ

ರೋಬೋಟ್‌ ನೆರವಿನ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆ | ಶೀಘ್ರ ಚೇತರಿಕೆಗೆ ಸಹಕಾರಿ | ಸಚಿವ ರಾಮಲಿಂಗಾರೆಡ್ಡಿ

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL