ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಭದ್ರಾವತಿಯ ಜೀವನಾಡಿಗಳಲ್ಲಿ ಒಂದಾಗಿ ಇಂದು ಮುಚ್ಚಿಹೋಗಿರುವ ಎಂಪಿಎಂ ಕಾರ್ಖಾನೆಯನ್ನು ಮರು ಆರಂಭಗೊಳಿಸಿ, ಪುನಶ್ಚೇತನಗೊಳಿಸುವ ನಿಟ್ಟಿನಲ್ಲಿ ಸಂಸದ ಬಿ.ವೈ. ರಾಘವೇಂದ್ರ ಪ್ರಯತ್ನ ಮುಂದುವರೆಸಿದ್ದು, ಈ ವಿಚಾರದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಮಹತ್ವದ ಚರ್ಚೆ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಅಧಿಕೃತ ಕಚೇರಿ ಕೃಷ್ಣಾದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗೌರವ್’ಗುಪ್ತ ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ಇಂದು ಮಹತ್ವದ ಸಭೆ ನಡೆಸಿದ ಸಂಸದರು, ಎಂಪಿಎಂ ಕಾರ್ಖಾನೆಯನ್ನು ಮುಂಬರುವ ದಿನಗಳಲ್ಲಿ ಪುನಶ್ಚೇತನಗೊಳಿಸುವ ಕುರಿತು ಸುದೀರ್ಘವಾಗಿ ಚರ್ಚಿಸಿದರು.
ಈ ಯೋಜನೆಗಾಗಿ ಮುಂಬರುವ ಆಯವ್ಯಯದಲ್ಲಿ ಅಗತ್ಯವಾಗಿರುವ ಅನುದಾನವನ್ನು ಮೀಸಲಿರಿಸುವ ಸಾಧ್ಯತೆಗಳ ಕುರಿತಾಗಿ ಅಧಿಕಾರಿಗಳೊಂದಿಗೆ ಚರ್ಚಿಸಿದ ಅವರು, ಈ ವಿಚಾರವನ್ನು ಮುಖ್ಯಮಂತ್ರಿಗಳೊಂದಿಗೂ ಚರ್ಚಿಸುವುದಾಗಿ ತಿಳಿಸಿದರು.
ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ, ಮುಖಂಡ ಜ್ಯೋತಿ ಪ್ರಕಾಶ್ ಉಪಸ್ಥಿತರಿದ್ದರು.
Get in Touch With Us info@kalpa.news Whatsapp: 9481252093
Discussion about this post