ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿಕಾರಿಪುರ: ಕೋವಿಡ್19 ವೈರಸ್ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶೀಘ್ರ ಗುಣಮುಖರಾಗಲಿ ಎಂದು ಸಂಸದ ಬಿ.ವೈ. ರಾಘವೇಂದ್ರ ಅವರು ಹುಚ್ಚರಾಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಇಂದು ಮುಂಜಾನೆ ದೇವಾಲಯಕ್ಕೆ ತೆರಳಿದ ಸಂಸದರು, ತಮ್ಮ ತಂದೆ ಶೀಘ್ರ ಗುಣಮುಖರಾಗಿ, ಅವರಿಗೆ ಆಯಸ್ಸು, ಆರೋಗ್ಯ ಕರುಣಿಸು ಎಂದು ಹುಚ್ಚರಾಯ ಸ್ವಾಮಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ, ಪೂಜೆ ಸಲ್ಲಿಸಿದರು.
Get In Touch With Us info@kalpa.news Whatsapp: 9481252093
Discussion about this post