ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ನಗರದಲ್ಲಿ ಎ.27ರ ನಾಳೆ ನಗರಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಇಂದು ಸಂಜೆ ಪೊಲೀಸ್ ಇಲಾಖೆಯಿಂದ ಜಾಗೃತಿ ಪಥಸಂಚಲನ ನಡೆಸಲಾಯಿತು.
ಶಾಂತಿಯುತ ಮತದಾನ ಕುರಿತು ಜಾಗೃತಿ ಮೂಡಿಸಲು ನಗರದ ಪ್ರಮುಖ ರಸ್ತೆಗಳಲ್ಲಿ ಪಥ ಸಂಚಲನ ನಡೆಸಲಾಗಿದ್ದು, ಭದ್ರತೆಗಾಗಿ ನಿಯೋಜನೆಗೊಂಡಿರುವ ಸಿಬ್ಬಂದಿಗಳು ಪಾಲ್ಗೊಂಡಿದ್ದರು.
ಚುನಾವಣೆಯ ಭದ್ರತೆಗಾಗಿ ಇಬ್ಬರು ಡಿವೈಎಸ್ಪಿ, ನಾಲ್ವರು ಸರ್ಕಲ್ ಇನ್ಸ್ಪೆಕ್ಟರ್, 16 ಸಬ್ ಇನ್ಸ್ಪೆಕ್ಟರ್, 37 ಎಎಸ್ಐ ಹಾಗೂ 231 ಪೊಲೀಸ್ ಕಾನ್ಸ್ಟೇಬಲ್ಗಳನ್ನು ನಿಯೋಜಿಸಲಾಗಿದೆ.
ಮತಗಟ್ಟೆಗಳಿಗೆ ಮತದಾರರು ನಿರ್ಭೀತಿಯಿಂದ ಆಗಮಿಸುವ ಜೊತೆಗೆ ಮಾಸ್ಕ್, ಸ್ಯಾನಿಟೈಜರ್ ಬಳಕೆ, ಸಾಮಾಜಿಕ ಅಂತರ ಸೇರಿದಂತೆ ಕೋವಿಡ್ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ಮತದಾನ ಯಶಸ್ವಿಗೊಳಿಸುವಂತೆ ಇಲಾಖೆ ವತಿಯಿಂದ ಮನವಿ ಮಾಡಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news









Discussion about this post