ಕಲ್ಪ ಮೀಡಿಯಾ ಹೌಸ್
ಮೈಸೂರು: ಜಿಲ್ಲೆಗೆ ಸದ್ಯದಲ್ಲೇ ಇನ್ನೂ 1 ಲಕ್ಷ ಕೋವಿಡ್ ಲಸಿಕೆ ಪೂರೈಕೆಯಾಗಲಿದೆ ಎಂದು ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.
ಕೋವಿಡ್ ಪರಿಸ್ಥಿತಿ ಬಗ್ಗೆ ಸೋಮವಾರ ಅಧಿಕಾರಿಗಳ ಸಭೆ ನಡೆಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.

ಈಗ 1 ಲಕ್ಷ ಲಸಿಕೆ ನೀಡಲಾಗುವುದು, ಹಂತ ಹಂತವಾಗಿ ಬೇಡಿಕೆಗೆ ಅನುಗುಣವಾಗಿ ಪೂರೈಸಲಾಗುವುದು ಎಂದು ಡಾ. ಸುಧಾಕರ್ ಅವರು ತಿಳಿಸಿರುವುದಾಗಿ ಸಚಿವರು ಹೇಳಿದರು.

ಯಾವ ಪ್ರವಾಸಿ ತಾಣವನ್ನು ಸ್ಥಗಿತಗೊಳಿಸುವುದಿಲ್ಲ. ಕೆಲವು ನಿರ್ಬಂಧಗಳನ್ನು ಮಾಡಲು ತೀರ್ಮಾನಿಸಿದ್ದೇವೆ. ಊರ ಹಬ್ಬ, ಸಣ್ಣ ಪುಟ್ಟ ಜಾತ್ರೆಗಳನ್ನು ಆಯೋಜಿಸಲು ಅನುಮತಿ ಪಡೆದುಕೊಳ್ಳಬೇಕು. ಕೆಲವು ನಿರ್ಬಂಧಗಳನ್ನು ಹಾಕಿ ಅನುಮತಿ ನೀಡಲು ನಿರ್ಧರಿಸಿದ್ದೇವೆ ಎಂದರು.

ಸಭೆಯಲ್ಲಿ ಶಾಸಕರಾದ ಎಲ್. ನಾಗೇಂದ್ರ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಬಿ.ಸಿ.ಪರಿಮಳ ಶ್ಯಾಂ, ಉಪಾಧ್ಯಕ್ಷೆ ಗೌರಮ್ಮ ಸೋಮಶೇಖರ್, ಮುಡಾ ಅಧ್ಯಕ್ಷ ಹೆಚ್.ವಿ.ರಾಜೀವ್, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ, ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ.ಬಿ.ರಿಷ್ಯಂತ್, ಜಿಲ್ಲಾ ಪಂಚಾಯಿತಿ ಸಿ.ಇ.ಇ. ಎ.ಎಂ.ಯೋಗೀಶ್, ಮೆಡಿಕಲ್ ಕಾಲೇಜಿನ ಡೀನ್, ಡಾ. ನಂಜರಾಜ, ಜಿಲ್ಲಾ ಆಸ್ಪತ್ರೆ ಸರ್ಜನ್ ಡಾ. ರಾಜೇಶ್ವರಿ, ಡಿ.ಹೆಚ್.ಒ. ಡಾ. ಟಿ. ಅಮರನಾಥ್, ಮಹಾನಗರ ಪಾಲಿಕೆ ಆರೋಗ್ಯಾಧಿಕಾರಿ ಡಾ. ನಾಗರಾಜ್ ಮತ್ತಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news







Discussion about this post