ಕಲ್ಪ ಮೀಡಿಯಾ ಹೌಸ್ | ಮೈಸೂರು |
ಇಲ್ಲಿನ ಜನವಸತಿ ಪ್ರದೇಶವಾದ ಆರ್ ಟಿ ನಗರದಲ್ಲಿ ನಿನ್ನೆ ರಾತ್ರಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಆತಂಕಕ್ಕೆ ಕಾರಣವಾಗಿದೆ.
ಆರ್ ಟಿ ನಗರದಲ್ಲಿ ನಿನ್ನೆ ರಾತ್ರಿ ಚಿರತೆಯೊಂದು ಕಾಣಿಸಿಕೊಂಡಿದ್ದು, ಕಾರಿನಿಂದ ಸಾರ್ವಜನಿಕರೊಬ್ಬರು ಮೊಬೈಲ್’ನಲ್ಲಿ ಇದನ್ನು ಚಿತ್ರೀಕರಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದು, ಚಿರತೆಯನ್ನು ಸೆರೆ ಹಿಡಿಯವಂತೆ ಒತ್ತಾಯಿಸಿದ್ದಾರೆ. ಈ ಭಾಗದಲ್ಲಿ ಸಾರ್ವಜನಿಕರು ಒಬ್ಬರೇ ಓಡಾಡಬೇಡಿ ಅಲ್ಲದೇ ರಾತ್ರಿ ವೇಳೆ ಸಂಚರಿಸುವಾಗಿ ಕೊಂಚ ಜಾಗ್ರತೆ ವಹಿಸಿ.
ಮೈಸೂರಿನಲ್ಲಿ ಇತ್ತೀಚೆಗೆ ಚಿರತೆಗಳ ಸಂಖ್ಯೆ ಹಾಗೂ ಹಾವಳಿ ಹೆಚ್ಚಾಗಿದೆ. ನಗರ ಪ್ರದೇಶಗಳಲ್ಲಿ ವನ್ಯಜೀವಿಗಳ ಸಂತತಿ ಹೆಚ್ಚುತ್ತಿರುವುದು ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ನಗರ ಪ್ರದೇಶದಲ್ಲಿ ಇರುವ ವನ್ಯ ಮೃಗಗಳನ್ನು ಅರಣ್ಯ ಇಲಾಖೆ ಸೆರೆ ಹಿಡಿದು ಅರಣ್ಯ ಪ್ರದೇಶದಲ್ಲಿ ಬಿಟ್ಟರೆ ಪ್ರಾಣಿಗಳ ಸುರಕ್ಷತೆ ಹಾಗೂ ಅದರ ಆವಾಸ ಸ್ಥಾನ ವೃದ್ದಿಯಾಗುತ್ತದೆ ಎಂಬುದು ಸಾರ್ವಜನಿಕರ ನಂಬಿಕೆ.
(ವಿಶೇಷ ವರದಿ: ಪುನೀತ್ ಜಿ. ಕೂಡ್ಲೂರು)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post