ಕಲ್ಪ ಮೀಡಿಯಾ ಹೌಸ್ | ಮೈಸೂರು |
ವಿದ್ಯೆ ಮತ್ತು ಗುರು ಪರಂಪರೆಗೆ ಗೌರವಿಸುವವರಿಗೆ ಮಾತ್ರ ಕಲೆ ಸಿದ್ಧಿಸುತ್ತದೆ ಎಂದು ಹಿರಿಯ ಮೃದಂಗ ವಿದ್ವಾಂಸ ಸಿ. ಚೆಲುವರಾಜು ಹೇಳಿದರು.
ನಗರದ ನಾದಬ್ರಹ್ಮ ಸಂಗೀತ ಸಭಾದಲ್ಲಿ ಪಿಜಿಎಲ್ ಸಂಸ್ಮರಣಾ ವೇದಿಕೆ ಆಯೋಜಿಸಿದ್ದ 17ನೇ ವರ್ಷದ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಅವರು ವಾರ್ಷಿಕ ಪ್ರಶಸ್ತಿ `ನಾದಲಯ ವಿಶಾರದ’ ಸ್ವೀಕರಿಸಿ ಮಾತನಾಡಿದರು.

Also read: ಈ ಸ್ಟೋರ್ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆ: ಕ್ರಮಕ್ಕೆ ಆಗ್ರಹಿಸಿ ಜಿಲ್ಲಾರಕ್ಷಣಾಧಿಕಾರಿಗಳಿಗೆ ಮನವಿ
ಕಲಾರಂಗದ ವಿದ್ಯಾರ್ಥಿಗಳಿಗೆ ಸೌಜನ್ಯ ಮತ್ತು ಸಂಯಮ ಇರಬೇಕು. ವಿದ್ಯೆ ಕಲಿಸುವ ಗುರುವಿಗೆ ಎಂದಿಗೂ ಬದ್ಧರಾಗಿರಬೇಕು ಎಂದು ಅವರು ಕಿವಿಮಾತು ಹೇಳಿದರು. ಪ್ರಖ್ಯಾತ ವಿದ್ವಾಂಸರಾಗಿದ್ದ ಪಿ.ಜಿ. ಲಕ್ಷ್ಮೀನಾರಾಯಣ ಅವರ ಹೆಸರಿನಲ್ಲಿ ನನಗೆ ಇಂದು ಗೌರವ, ಸನ್ಮಾನ ನೀಡಿರುವುದು ಜೀವನದ ಸುಕೃತ ಎಂದವರು ಭಾವುಕರಾಗಿ ನುಡಿದರು.

ನಂತರ ವಿದ್ವಾನ್ ಸಂಪಗೋಡು ವಿಘ್ನರಾಜ ಅವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯನ ಕಛೇರಿ ನಡೆಯಿತು. ಪಕ್ಕವಾದ್ಯದಲ್ಲಿ ವಿದುಷಿ ಸಿಂಧೂ ಸುಚೇತನ (ವಯೋಲಿನ್), ವಿದ್ವಾನ್ ಚೆಲುವರಾಜು (ಮೃದಂಗ) ಮತ್ತು ವಿದ್ವಾನ್ ಶರತ್ ಕೌಶಿಕ್ (ಘಟ) ಸಹಕಾರ ನೀಡಿದರು.










Discussion about this post