Sunday, June 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಮೈಸೂರು

ಶ್ಲೋಕಪಠಣದಲ್ಲಿ ವಿಶ್ವದಾಖಲೆ ನಿರ್ಮಿಸಿದ 7ರ ಪ್ರತಿಭೆ ಪೃಥುಗೆ `ಬಾಲಸ್ತೋತ್ರ ಕಲಾರತ್ನ’ ಪ್ರಶಸ್ತಿ

August 7, 2024
in ಮೈಸೂರು
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಏಳನೇ ವಯಸ್ಸಿನಲ್ಲೇ ಶ್ಲೋಕ ಪಠಣದಲ್ಲಿ ವಿಶ್ವದಾಖಲೆ ನಿರ್ಮಿಸಿದ ಪೃಥು ಪಿ. ಅದ್ವೈತ್ ಅವರಿಗೆ ಮೂಕಾಂಬಿಕಾ ಸಮೃದ್ಧಿ ಬಡಾವಣೆ ನಿವಾಸಿಗಳ ಹಿತರಕ್ಷಣಾ ಸಮಿತಿ ವತಿಯಿಂದ `ಬಾಲಸ್ತೋತ್ರ ಕಲಾರತ್ನ’ ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು.

ಬಡಾವಣೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯ ವಲಯ ಉಪಾಧ್ಯಕ್ಷರಾದ ನಂ. ಶ್ರೀಕಂಠಕುಮಾರ್ ಅವರು ಪೃಥುವಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಈ ವೇಳೆ ಮಾತನಾಡಿದ ಅವರು, ಪೃಥು ಅದ್ವೈತ್ ಅವರು ಏಳನೇ ವಯಸ್ಸಿನಲ್ಲೇ ಇಂತಹ ವಿಶ್ವದಾಖಲೆ ನಿರ್ಮಿಸಿರುವುದು ಅತ್ಯಂತ ಹೆಮ್ಮೆಯ ಸಂಗತಿಯಾಗಿದೆ. ವಿಶ್ವದಾಖಲೆ ಎಂದರೆ ನಾವು ಇದುವರೆಗೂ ಕೇಳಿದ್ದು ಮತ್ತು ನೋಡಿದ್ದು ವಿಶೇಷವಾದ ವಿಚಾರಗಳಿಗಷ್ಟೆ. ಆದರೆ ನಮ್ಮ ಸನಾತನ ಧರ್ಮದ ಮೂಲದ ವಿಚಾರಗಳಾದ ಸ್ತೋತ್ರಪಠಣದಲ್ಲಿ ವಿಶ್ವದಾಖಲೆ ನಿರ್ಮಿಸಿರುವುದು ನಿಜಕ್ಕೂ ಶ್ಲಾಘನೀಯ ಸಾಧನೆಯಗಿದೆ ಎಂದರು.
ಪೃಥುವಿನ ಈ ಸಾಧನೆ ಅವರ ಕುಟುಂಬ, ಬಡಾವಣೆ ಅಥವಾ ಮೈಸೂರಿಗೆ ಮಾತ್ರವಲ್ಲ ಸಮಸ್ತ ಹಿಂದೂ ಧರ್ಮಕ್ಕೆ ಹೆಮ್ಮೆ ಪಡುವ ವಿಷಯ ಎಂದು ತಿಳಿಸಿದರು.

ಆದರ್ಶ ಸೇವಾ ಸಂಘದ ಅಧ್ಯಕ್ಷ ಜಿ.ಆರ್. ನಾಗರಾಜ್ ಮಾತನಾಡಿ, ಅವರು ಪೃಥುವಿನ ವೇದ ಆಸಕ್ತಿ ಗಮನಿಸಿ ಅವನಿಗೆ ಕಳೆದ ವರ್ಷವೇ ಆದರ್ಶ ಬಾಲ ಪ್ರತಿಭಾರತ್ನ ಪ್ರಶಸ್ತಿ ನೀಡಲಾಗಿತ್ತು. ಅವನು ಈ ವಿಶ್ವದಾಖಲೆ ನಿರ್ಮಿಸಿರುವುದನ್ನು ಗಮನಿಸಿ ಸ್ವತಃ ಪೇಜಾವರ ಶ್ರೀಗಳೇ ದೂರವಾಣಿ ಮೂಲಕ ಅವನನ್ನುಅಭಿನಂದಿಸಿದ್ದಾರೆ ಎಂದರೆ ಈ ರೀತಿಯ ವಿಶ್ವದಾಖಲೆಗಳ ಮಹತ್ವವೇ ಬೇರೆ. ಮಕ್ಕಳ ಆಸಕ್ತಿ ಗುರುತಿಸಿ ಅವರನ್ನು ಪ್ರೋತ್ಸಾಹಿಸುವ ಕೆಲಸವನ್ನು ಪೋಷಕರು ಮಾಡಬೇಕು ಹಾಗಾದರೆ ಮಾತ್ರ ಯಶಸ್ಸು ಸಾಧ್ಯ ಎಂದು ತಿಳಿಸಿದರು.

ಸಮಿತಿಯ ನಿರ್ದೇಶಕರಾದ ಪಿ.ಟಿ. ಮಹೇಶಪ್ಪ ಮಾತನಾಡಿ, ಸಮಿತಿಯು ಇದುವರೆಗೂ ಮಾಡಿರುವ ಕೆಲಸಗಳನ್ನು ಸಭೆಗೆ ವಿವರಿಸಿದರು.

http://kalpa.news/wp-content/uploads/2024/04/VID-20240426-WA0008.mp4

ಕಾರ್ಯದರ್ಶಿ ನಾಗಭೂಷಣಾಚಾರಿ ಮಾತನಾಡಿ, ಪೃಥು ತನ್ನ ಏಳನೇ ವಯಸ್ಸಿನಲ್ಲಿ ಇದೂವರೆಗೂ ಮಾಡಿರುವ ಸಾಧನೆಗಳಾದ ಅಂತಾರಾಷ್ಟ್ರೀಯ ಪರೀಕ್ಷೆಗಳಲ್ಲಿ ಆತ ಸತತವಾಗಿ ಶಾಲೆಗೆ ಪಡೆಯುತ್ತಿರುವ ಮೊದಲನೇ ರ‍್ಯಾಂಕ್, ಸ್ಟೈಲಿ ಕಿಡ್ ಅವಾರ್ಡ್, ಸೂಪರ್ ಡ್ಯಾನ್ಸ್ ಶೋಗಳ ಬಗ್ಗೆ ವಿವರಿಸಿದರು.

ಸಮಿತಿಯ ಉಪಾಧ್ಯಕ್ಷರಾದ ರಾಮಕೃಷ್ಣ ಮಾತನಾಡಿ, ನಮ್ಮ ಬಡಾವಣೆಯ ಮಗುವೊಂದು ಇಷ್ಟು ಸಾಧನೆ ಮಾಡಿರುವುದು ನಮಗೆಲ್ಲ ಸಂತೋಷ ತಂದಿದೆ. ಆದ್ದರಿಂದ ನಾವೆಲ್ಲ ಸಮಿತಿಯವರು ಸೇರಿ ಪೃಥುವನ್ನು ಅಭಿನಂದಿಸಬೇಕೆಂದು ತೀರ್ಮಾನಿಸಿದಾಗ ನಮ್ಮ ಕಾರ್ಯದರ್ಶಿಗಳಾದ ನಾಗಭೂಷಣಾಚಾರಿ ಪೃಥುವಿಗೆ ಬಾಲಸ್ತೋತ್ರ ಕಲಾರತ್ನ ಎಂಬ ಬಿರುದನ್ನು ಸಹ ಸೂಚಿಸಿದರು ಎಂದು ತಿಳಿಸಿದರು.

ಕೇಂದ್ರ ರೇಷ್ಮೆ ಮಂಡಳಿಯ ನಿರ್ದೇಶಕರು ಹಾಗೂ ವಿಜ್ಞಾನಿಗಳಾದ ಗಾಂಧಿದಾಸ್, ಮೂಕಾಂಬಿಕ ಸಮೃದ್ಧಿ ಬಡಾವಣೆಯ ನಿವಾಸಿಗಳ ಸಂಘದ ಅಧ್ಯಕ್ಷರಾದ ಕೆ.ಆರ್. ಗಣೇಶ್, ಉಪಾಧ್ಯಕ್ಷ ರಾಮಕೃಷ್ಣ, ಕಾರ್ಯದರ್ಶಿ ನಾಗಭೂಷಣಾಚಾರಿ ಭಾರತಮಾತೆಗೆ ಪುಷ್ಫಾರ್ಚನೆ ಮಾಡಿದರು.
Kalahamsa Infotech private limitedಮೂಕಾಂಬಿಕ ಸಮೃದ್ದಿ ಬಡಾವಣೆಯ ನಿವಾಸಿಗಳು ಹಾಗೂ ಸದಸ್ಯರು, ಆದರ್ಶ ಸೇವಾ ಸಂಘದ ಸದಸ್ಯರು, ಕೇಂದ್ರ ರೇಷ್ಮೇ ಮಂಡಳಿ ನೌಕರರು, ವಿಶ್ವ ಹಿಂದೂ ಪರಿಷತ್, ಶಾರದಾ ದೇವಿ ನಗರ ಬ್ರಾಹ್ಮಣ ಸಂಘ, ಶ್ರೀರಾಂಪುರ ಬ್ರಾಹ್ಮಣ ಸಂಘ, ಸಮಾಜ ಸೇವಕಿ ಕಮಲಾ ನಟರಾಜನ್, ಆರ್.ಜೆ. ಅವಿನಾಶ್ ಸೇರಿದಂತೆ ಹಲವು ಸಂಘ ಸಂಸ್ಥೆಗಳು ಪೃಥುವಿಗೆ ಅಭಿನಂದನೆ ಸಲ್ಲಿಸಿದರು.

ಶುಭಾ ಅರುಣ್ ಮತ್ತು ತಂಡದವರು ಪ್ರಾರ್ಥಿಸಿ, ಖಜಾಂಚಿ ರಮೇಶ್ ಚಂದ್ರ ವಂದನಾರ್ಪಣೆ ಮಾಡಿದರು.
ಪೃಥು ಪಿ. ಅದ್ವೈತ್ ಕುರಿತಾಗಿ…
ಮೈಸೂರಿನ ಶ್ರೀರಾಂಪುರ ಪಟ್ಟಣ ಪಂಚಾಯ್ತಿ ವ್ಯಾಪ್ತಿಯ ಮೂಕಾಂಬಿಕ ಸಮೃದ್ಧಿ ಬಡಾವಣೆಯ ನಿವಾಸಿಗಳಾದ ಪುನೀತ್ ಜಿ. ಕೂಡ್ಲೂರು ಹಾಗೂ ಪೂಜಾ ದಂಪತಿಗಳ ಪುತ್ರ ಪೃಥು ಪಿ. ಅದ್ವೈತ್ ಅವರು ಪೂರ್ಣಚೇತನ ಪಬ್ಲಿಕ್ ಶಾಲೆಯಲ್ಲಿ ಮೂರನೇ ತರಗತಿ ಓದುತ್ತಿದ್ದಾನೆ.

ಶಾಲೆಯಲ್ಲಿ ನಡೆದ ವಿಶ್ವದಾಖಲೆ ಮಹೋತ್ಸವ-2024 ರಲ್ಲಿ ಭಾಗವಹಿಸಿ ಮೂವತ್ತು ನಿಮಿಷದಲ್ಲಿ ನೂರೈವತ್ತು ಶ್ಲೋಕಗಳನ್ನು ಪಠಿಸಿ ಮೂರು ವಿಶ್ವದಾಖಲೆಗಳನ್ನು ಏಕಕಾಲದಲ್ಲಿ ನಿರ್ಮಿಸಿದ್ದಾನೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

Tags: Kannada News WebsiteLatest News KannadmysorePruthu P AdvaithWorld Recordಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾಕೇಂದ್ರ ರೇಷ್ಮೇ ಮಂಡಳಿಪೂರ್ಣಚೇತನ ಪಬ್ಲಿಕ್ ಶಾಲೆಪೃಥು ಪಿ. ಅದ್ವೈತ್ಬಾಲಸ್ತೋತ್ರ ಕಲಾರತ್ನಮೈಸೂರುವಿಶ್ವ ಹಿಂದೂ ಪರಿಷತ್ವಿಶ್ವದಾಖಲೆಶ್ಲೋಕ ಪಠಣ
Previous Post

ಎದೆ ಹಾಲು ಉಣಿಸಲು ಮುಜುಗರ ಬೇಡ | ಸರ್ಜಿ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ.ಪ್ರಶಾಂತ್

Next Post

ಉತ್ತರ ಕನ್ನಡದಲ್ಲಿ ಮತ್ತೊಂದು ದುರಂತ | ಕರ್ನಾಟಕ-ಗೋವಾ ಸಂಪರ್ಕಿಸುತ್ತಿದ್ದ ಕಾಳಿ ಸೇತುವೆ ಕುಸಿತ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಉತ್ತರ ಕನ್ನಡದಲ್ಲಿ ಮತ್ತೊಂದು ದುರಂತ | ಕರ್ನಾಟಕ-ಗೋವಾ ಸಂಪರ್ಕಿಸುತ್ತಿದ್ದ ಕಾಳಿ ಸೇತುವೆ ಕುಸಿತ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

May 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!