ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಮೈಸೂರು: ಬ್ರಾಹ್ಮಣ ಸಮುದಾಯದವರಿಗೆ ಯಾವುದೇ ರೀತಿಯ ಮೀಸಲಾತಿಯ ಅವಶ್ಯಕತೆಯಿಲ್ಲ ಎಂದು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಅಭಿಪ್ರಾಯಪಟ್ಟಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಬ್ರಾಹ್ಮಣ ಸಮುದಾಯದವರಿಗೆ ಮೀಸಲಾತಿ ಕೊಡಿ ಎಂದು ಕೇಳುವುದಿಲ್ಲ. ನಮ್ಮ ಸಮುದಾಯಕ್ಕೆ ಅದರ ಅವಶ್ಯಕತೆಯೂ ಸಹ ಇಲ್ಲ ಎಂದರು.
ಎಲ್ಲ ಸಮುದಾಯದವರು ಮೀಸಲಾತಿ ಪಡೆದು ಉದ್ಯೋಗ ಪಡೆಯುತ್ತಿದ್ದರೆ, ಒಂದು ಕಡೆಯಲ್ಲಿ ಬ್ರಾಹ್ಮಣರಿಗೂ ಸಹ ಉದ್ಯೋಗ ದೊರೆಯಲಿದೆ. ನಮಗೆ ಅಷ್ಟು ಸಾಕು ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news









Discussion about this post