ಕಲ್ಪ ಮೀಡಿಯಾ ಹೌಸ್ | ಮೈಸೂರು |
ದಸರಾ ವೈಭವ ಸಂಪನ್ನಗೊಂಡಿರುವ ಬೆನ್ನಲ್ಲೇ ಈ ಅವಧಿಯಲ್ಲಿ ಅಂಬಾ ವಿಲಾಸ ಅರಮನೆಗೆ 2 ಲಕ್ಷಕ್ಕೂ ಅಧಿಕ ಮಂದಿ ಭೇಟಿ ನೀಡಿದ್ದು, ವಿಶೇಷವಾಗಿದೆ.
ಕೋವಿಡ್ 19 ಸಾಂಕ್ರಾಮಿಕ ರೋಗದಿಂದಾಗಿ ಭಾರೀ ನಷ್ಟಕ್ಕೊಳಗಾಗಿದ್ದ ಪ್ರವಾಸೋದ್ಯಮ ಕ್ಷೇತ್ರ ಮತ್ತೆ ಚೇತರಿಸಿಕೊಳ್ಳುತ್ತಿದೆ. ಕಳೆದ 2-3 ವರ್ಷಗಳಲ್ಲಿ ಇಲ್ಲಿಗೆ ಭೇಟಿ ನೀಡಿದ ಪ್ರವಾಸಿಗರ ಸಂಖ್ಯೆ 2 ಲಕ್ಷ ಗಡಿ ದಾಟಿರಲಿಲ್ಲ. ಆದರೆ, ಈಗ ಕೋವಿಡ್ ಕಡಿಮೆಯಾದ ನಂತರ ಪ್ರವಾಸಿಗರ ಸಂಖ್ಯೆ ಏರಿಕೆಯಾಗಿದೆ.

ಇನ್ನು, ಶ್ರೀ ಚಾಮರಾಜೇಂದ್ರ ಮೃಗಾಲಯಕ್ಕೂ ಇದೇ ಸಂಖ್ಯೆಯ ಜನರು ಭೇಟಿ ನೀಡಿದ್ದಾರೆ ಎಂದು ವರದಿಯಾಗಿದೆ.
Also read: ಮಥುರಾದಲ್ಲಿ ನಿರ್ಮಾಣವಾಗಲಿದೆ ಪೇಜಾವರ ಮಠದ ಶ್ರೀಗೋವಿಂದ ಧಾಮ
ದಸರಾ ಮಹೋತ್ಸವದ ವೇಳೆ ಟಿಕೆಟ್’ನಿಂದಾಗಿ ಒಟ್ಟು 2.6 ಕೋಟಿ ರೂ. ಸಂಗಹವಾಗಿದ್ದು, ಮೃಗಾಲಯದಲ್ಲೂ ಇದೇ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗಿದೆ. 2 ಲಕ್ಷಕ್ಕೂ ಹೆಚ್ಚು ಜನರು ಮೃಗಾಲಯಕ್ಕೆ ಭೇಟಿ ನೀಡಿದ್ದು, ಸಮೀಪದ ಕಾರಂಜಿ ಕೆರೆಯಿಂದ 2.6 ಕೋಟಿ ರೂಪಾಯಿ ಆದಾಯ ಗಳಿಸಿದೆ ಎಂದು ವರದಿಯಾಗಿದೆ.











Discussion about this post