ಕಲ್ಪ ಮೀಡಿಯಾ ಹೌಸ್ | ಮೈಸೂರು |
ಭಾರತೀಯ ಪರಂಪರೆಯ ಸನಾತನ ಧರ್ಮವನ್ನು ದೃಢವಾಗಿ ನಂಬಿ. ಮಕ್ಕಳಿಗೂ ಧರ್ಮ ಪಾಲನೆಯ ಮಾರ್ಗವನ್ನು ಕಲಿಸಿದರೆ ಮಾತ್ರ ನಮ್ಮ ಸಂಸ್ಕೃತಿ ಉಳಿಯುತ್ತದೆ ಎಂದು ಶೃಂಗೇರಿಯ #Sringeri ಪರಮಪೂಜ್ಯ ಜಗದ್ಗುರು ಶ್ರೀ ಶಂಕರಾಚಾರ್ಯ ಶ್ರೀ ವಿಧುಶೇಖರ ಭಾರತೀ ತೀರ್ಥ ಸ್ವಾಮೀಜಿ ಹೇಳಿದರು.
ನಂಜನಗೂಡಿನ ಶೃಂಗೇರಿ ಶಂಕರ ಮಠದ #ShankarMutt ಶಾಖೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಗುರುವಂದನಾ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಅನುಗ್ರಹ ಸಂದೇಶ ನೀಡಿದರು.
ಜವಾಬ್ದಾರಿ ದೊಡ್ಡದಾಗಿದೆ
ಧರ್ಮ, ಸಂಸ್ಕೃತಿ ಬಗ್ಗೆ ಮಕ್ಕಳಿಗೆ ಮನೆಯೇ ಪಾಠಶಾಲೆ. ಜನನಿಯೇ ಮೊದಲ ಗುರು. ಈ ಜವಾಬ್ದಾರಿ ಎಲ್ಲರಿಗೂ ಇದೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕಾದ ತುರ್ತು ಸ್ಥಿತಿ ಇಂದು ಒದಗಿಬಂದಿದೆ. ಋಷಿ ಪರಂಪರೆಯಿಂದ ಬಂದ ನಮ್ಮ ಧರ್ಮದ ಬಗ್ಗೆ ಅನೇಕರಿಗೆ ತಿಳಿವಳಿಕೆ ಇಲ್ಲದ ಸ್ಥಿತಿಯಲ್ಲಿ ನಾವಿದ್ದೇವೆ. ಮೊದಲು ನಾವು ತಿಳಿದು, ನಮ್ಮ ಮಕ್ಕಳಿಗೆ ಚಿಕ್ಕ ಮಟ್ಟದಲ್ಲಾದರೂ ನಮ್ಮ ಸಂಸ್ಕೃತಿ, ಆಚರಣೆಗಳನ್ನು ರೂಢಿಸಿ. ಇದು ಮನೆ, ಕುಟುಂಬ, ವಂಶಕ್ಕೆ ಮಾತ್ರವಲ್ಲ, ದೇಶಕ್ಕೂ ಮಹತ್ತರ ಕೊಡುಗೆಯಾಗುತ್ತದೆ ಎಂದು ಜಗದ್ಗುರುಗಳು ಸಂದೇಶ ನೀಡಿದರು.
Also read: KPTCL goes big on technology, deploys Insulated Aerial Work Platform vehicles for seamless power supply
ಮೊಬೈಲ್ಗಳಿಗೆ ದಾಸರಾಗಬೇಡಿ
ಭಾರತೀಯ ಪರಂಪರೆ ವಿಶ್ವದಲ್ಲೇ ವಿಶಿಷ್ಠವಾದ ಪರಂಪರೆ. ಸಾವಿರಾರು ವರ್ಷ ಕಾಡಿನಲ್ಲಿ ನಮ್ಮ ಋಷಿ- ಮುನಿಗಳು ಘೋರ ತಪಸ್ಸು ಮಾಡಿ, ದೇವರನ್ನು ಪ್ರತ್ಯಕ್ಷ ಒಲಿಸಿಕೊಂಡು ಜೀವನ ಕ್ರಮ ರೂಪಿಸಿದ್ದಾರೆ. ಇಹ ಮತ್ತು ಪರದ ಸಾಧನೆಗಳನ್ನು, ಅಂತರಂಗ- ಬಹಿರಂಗ ವ್ಯಕ್ತಿತ್ವ ರೂಪಿಸಲು ಬೇಕಾದ ಸೂತ್ರಗಳನ್ನು ಕಟ್ಟಿಕೊಟ್ಟಿದ್ದಾರೆ. ಆದರೆ ಇಂದು ಸಾಮಾಜಿಕ ಜಾಲತಾಣ, ಮೊಬೈಲ್ಗಳಿಗೆ #Mobile ದಾಸರಾಗಿರುವ ಅನೇಖರು ಸನಾತನ ಧರ್ಮದ ಮಹೋನ್ನತ ಸಂಗತಿಗಳನ್ನೇ ಮರೆತಿದ್ದಾರೆ. ಇದು ಅಪಾಯಕಾರಿ ಎಂದು ಜಗದ್ಗುರುಗಳು ಎಚ್ಚರಿಸಿದರು.
ಟೀಕೆ ಸಲ್ಲದು
ಕೆಲವರು ನಮ್ಮ ಧರ್ಮದ ಬಗ್ಗೆ ಸಂಪೂರ್ಣ ಅಧ್ಯಯನ ಮಾಡದೇ, ತಿಳಿದುಕೊಳ್ಳದೇ ಬಾಯಿಗೆ ಬಂದಂತೆ ಟೀಕೆ ಮಾಡುತ್ತಿರುತ್ತಾರೆ. ಅವರಿಗೆ ನಾವು ಪ್ರತಿಕ್ರಿಯೆ ಕೊಡುವ ಅಗತ್ಯವಿಲ್ಲ. ಅನುಷ್ಠಾನವಂತರಿಂದ, ಸಾಧಕರಿಂದ ಧರ್ಮ ಉಳಿದೇ ಉಳಿಯುತ್ತದೆ. ನಮ್ಮ ಮುಂದಿನ ಪೀಳಿಗೆ ಅಧರ್ಮ ಮಾರ್ಗದಲ್ಲಿ ಸಾಗದಂತೆ ಎಚ್ಚರ ವಹಿಸುವ ಹೊಣೆಗಾರಿಕೆ ಪಾಲಕರ ಮೇಲಿದೆ ಎಂದು ಶ್ರೀ ವಿಧುಶೇಖರ ಭಾರತೀ ತೀರ್ಥರು #VidhushekharaBharatiSwamiji ಕಿವಿಮಾತು ಹೇಳಿದರು.ಧರ್ಮ ನಾಶ ಮಾಡಲಿದ್ದಾರೆ
ಪ್ರಸ್ತುತ ದಿನಮಾನಗಳಲ್ಲಿ ನಾಸ್ತಿಕರು, ಧರ್ಮ ನಾಶ ಮಾಡುವ ಸಂಕಲ್ಪ ಮಾಡಿದ್ದಾರೆ. ಇದು ಭರತಖಂಡದ ದುರಂತ. ನಾವು -ನಮ್ಮ ಮನೆತನ, ಪರಂಪರೆಯಲ್ಲಿ ಹೇಳಿದ ಜೀವನ ಮಾರ್ಗವನ್ನು ಅನುಸರಿಸುವಲ್ಲಿ ಶ್ರದ್ಧೆ ತೋರಬೇಕು. ಅಜ್ಜ-ಅಜ್ಜಿ ಹೇಗೆ ಜೀವನ ನಿರ್ವಹಿಸಿದ್ದರು ಎಂದು ಒಮ್ಮೆ ಅವಲೋಕಿಸಬೇಕು. ಆಗ ನಮ್ಮ ನಮ್ಮ ಮನೆಯೇ ಮಂದಿರವಾಗುತ್ತದೆ. ಇದಕ್ಕೆ ಹಲವು ವರ್ಷಗಳ ಸಂಯಮ, ತಾಳ್ಮೆಗಳೂ ಬೇಕು. ಆಗ ಮಾತ್ರ ನಮ್ಮ ಮನೆಯ ಮಕ್ಕಳು ಧರ್ಮವಂತರಾಗುತ್ತಾರೆ. ಸಂಸ್ಕಾರದ ಹಾದಿಯಲ್ಲಿ ಸಾಗಿ ಜೀವನ ಸಾರ್ಥಕ ಮಾಡಿಕೊಳ್ಳುತ್ತಾರೆ. ಹಾಗಾಗಿ ಇಂದಿನ ತಂದೆ- ತಾಯಿಯರ ಮೇಲೆ ಬಹಳ ದೊಡ್ಡ ಜವಾಬ್ದಾರಿ ಬಂದಿದೆ ಎಂದು ಶ್ರೀಗಳು ಹೇಳಿದರು.
ನಂಜನಗೂಡು ಶಾಖಾ ಮಠ ಶೀಘ್ರ ಪುನರುತ್ಥಾನ
ಶೃಂಗೇರಿ ದಕ್ಷಿಣಾಮ್ನಾಯ ಶಾರದಾ ಪೀಠಕ್ಕೂ. ನಂಜನಗೂಡಿನ #Nanjanagudu ಶ್ರೀ ಶಂಕರ ಮಠದ ಶಾಖೆಗೂ ನೂರಾರು ವರ್ಷಗಳ ಅವಿನಾ ಸಂಬಂಧ ಇದೆ. ನಮ್ಮ ಪರಂಪರೆಯ ಅನೇಕ ಜಗದ್ಗುರುಗಳು ಈ ಕ್ಷೇತ್ರ ದೇವತೆ ಶ್ರೀಕಂಠೇಶ್ವರನಿಗೆ (ನಂಜುಂಡೇಶ್ವರ) ಪೂಜೆ ಸಮರ್ಪಣೆ ಮಾಡಿದ ಇತಿಹಾಸವಿದೆ ಎಂದು ಜಗದ್ಗುರುಗಳು ಹೇಳಿದರು.
92 ವರ್ಷದ ಹಿಂದೆ ಶೃಂಗೇರಿ #Sringeri ಪರಂಪರೆಯ 34ನೇ ಯತಿ ಶ್ರೀ ಚಂದ್ರಶೇಖರ ಭಾರತೀ ಸ್ವಾಮೀಜಿ ನಂಜನಗೂಡಿನಲ್ಲಿ ಶೃಂಗೇರಿ ಶಾಖಾ ಮಠವನ್ನು ಇಲ್ಲಿ ಆರಂಭಿಸಿದ್ದರು. ಅದೀಗ ಶಿಥಿಲವಾಗಿದೆ. ಶೀಘ್ರವೇ ಪುನರುತ್ಥಾನ ಮಾಡಲಾಗುವುದು. ಮುಂಬರುವ ವರ್ಷಗಳಲ್ಲಿ ಇಲ್ಲಿಯೂ ಮಠದ ಶತಮಾನೋತ್ಸವ ಸಂಭ್ರಮದಿಂದ ನೆರವೇರಲಿದೆ ಎಂದು ಅವರು ಭಕ್ತ ಸಮೂಹಕ್ಕೆ ಭರವಸೆ ನೀಡಿದಾಗ ಹರ್ಷೋದ್ಗಾರದ ಚಪ್ಪಾಳೆ ಮೊಳಗಿತು.
ಸನ್ನಿಧಿ ಸೇವೆಗೆ ಸಮರ್ಪಣೆ
ನಂಜನಗೂಡಿನ ನಾರಾಯಣ ರಾವ್ ಅಗ್ರಹಾರದಲ್ಲಿ ಪುನರುತ್ಥಾನಗೊಂಡ ಶ್ರೀ ಗಣಪತಿ ದೇವಾಲಯದಲ್ಲಿ ಜಗದ್ಗುರುಗಳು ಸೋಮವಾರ ಪೂಜಾ ಕಾರ್ಯ ನೆರವೇರಿಸಿ ಸನ್ನಿಧಿಯನ್ನು ಸೇವೆಗೆ ಸಮರ್ಪಣೆ ಮಾಡಿದರು. ನಂತರ ಅವರು ಪುರಾಣ ಪ್ರಸಿದ್ಧ ಶ್ರೀಕಂಠೇಶ್ವರಸ್ವಾಮಿ ದೇಗುಲ, ಗಟ್ಟವಾಡಿಯಲ್ಲಿರುವ ಶ್ರೀ ಸುಬ್ರಹ್ಮಣೇಶ್ವರಸ್ವಾಮಿ ಸನ್ನಿಧಿಗಳ ದರ್ಶನ ಪಡೆದು ಪೂಜೆ ಸಮರ್ಪಿಸಿದರು.ನಂತರ ನೂರಾರು ಭಕ್ತರಿಗೆ ಶ್ರೀಗಳು ಫಲ ಮಂತ್ರಾಕ್ಷತೆ ಅನುಗ್ರಹಿಸಿದರು.
ಈ ಸಂದರ್ಭ ಮುಖಂಡರಾದ ಎನ್.ಎಸ್.ಸುಬ್ರಹ್ಮಣ್ಯ, ಯು.ಎನ್.ಪದ್ಮನಾಭರಾವ್, ಎನ್.ನರಸಿಂಹಸ್ವಾಮಿ, ಎನ್.ಆರ್.ಕೃಷ್ಣಪ್ಪಗೌಡ, ಮೋಹನ್ಕುಮಾರ್, ಉಮೇಶ್ ಶರ್ಮ, ಬ್ರಾಹ್ಮಣ ಧರ್ಮ ಸಹಾಯ ಸಭಾ ಅಧ್ಯಕ್ಷ ಗೋವರ್ಧನ ಮತ್ತು ಮಠದ ಪದಾಧಿಕಾರಿಗಳು ಇದ್ದರು.
ಆಶೀರ್ವಾದ ಪಡೆದ ಶೋಭಾ ಕರಂದ್ಲಾಜೆ
ಬಿಜೆಪಿ ನಾಯಕಿ ಮತ್ತು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರು ಜಗದ್ಗುರು ಶ್ರೀ ವಿಧುಶೇಖರ ಭಾರತೀ ತೀರ್ಥ ಸ್ವಾಮೀಜಿ ದರ್ಶನ ಮಾಡಿ ಆಶೀರ್ವಾದ ಪಡೆದರು. ಲೋಕಸಭೆ ಚುನಾವಣೆಯಲ್ಲಿ ವಿಜಯ ದೊರೆತು, ಮೋದಿ ಸರ್ಕಾರವೇ ಮತ್ತೆ ಆಡಳಿತಕ್ಕೆ ಬರಲಿ ಎಂದು ಪ್ರಾರ್ಥಿಸಿದ್ದು ವಿಶೇಷವಾಗಿತ್ತು.
ಮಂಗಳವಾರದ ಕಾರ್ಯಕ್ರಮ
ಏ. 2ರಂದು ಬೆಳಗ್ಗೆ 9ರಿಂದ ಮಧ್ಯಾಹ್ನ 1ರವರೆಗೆ ಮೈಸೂರು ಶಂಕರ ಮಠದ ಆವರಣದಲ್ಲಿ ಸಾರ್ವಜನಿಕ ದರ್ಶನ , ಪಾದಪೂಜೆ ಹಾಗೂ ಭಿಕ್ಷಾ ವಂದನೆ ನಡೆಯಲಿದೆ. ಸಂಜೆ 4:30ಕ್ಕೆ ನಗರದ ವಿವಿಧ ದೇವಾಲಯಗಳು ಹಾಗೂ ಸಂಘ-ಸಂಸ್ಥೆಗಳಿಗೆ ಜಗದ್ಗುರುಗಳು ಭೇಟಿ ನೀಡಲಿದ್ದಾರೆ. ರಾತ್ರಿ 8. 30ಕ್ಕೆ ಶ್ರೀ ಮಠದಲ್ಲಿ ಚಂದ್ರಮೌಳೇಶ್ವರ ಪುಜೆ ನಡೆಸಲಿದ್ದಾರೆ.
ಸಂಗೀತ ಕಛೇರಿ
ಏ. 2ರಂದು ಸಂಜೆ 7ಕ್ಕೆ ಮೈಸೂರು ಮಠದ ಆವರಣದಲ್ಲಿ ವಿದ್ವಾನ್ ಕೃಷ್ಣಮೂರ್ತಿ ತಂಡದವರು ನಾಗಸ್ವರ ಕಛೇರಿ ನೀಡಿ ರಂಜಿಸಲಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post