No Result
View All Result
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ
English Articles

Special Train Between Bengaluru Cantt and Chennai

by ಕಲ್ಪ ನ್ಯೂಸ್
April 3, 2026
0

Kalpa Media House  |  Bengaluru  | To clear the extra rush of passengers during the Summer Holiday season, South Western...

Read moreDetails
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
PESITM hosts Mock CET 2026 to Strengthen KCET Preparation

PESITM hosts Mock CET 2026 to Strengthen KCET Preparation

March 31, 2026
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

March 30, 2026
  • Advertise With Us
  • Grievances
  • About Us
  • Contact Us
Sunday, April 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಜ್ಞಾನದ ಹಸಿವು ಇರುವವರಿಗೆ ದೇವರ ಅನುಗ್ರಹ ಸದಾ ಲಭ್ಯ | ಸೋಸಲೆ ಸ್ವಾಮೀಜಿ ಅಭಿಮತ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 2, 2024
in ಮೈಸೂರು
0
ಜ್ಞಾನದ ಹಸಿವು ಇರುವವರಿಗೆ ದೇವರ ಅನುಗ್ರಹ ಸದಾ ಲಭ್ಯ | ಸೋಸಲೆ ಸ್ವಾಮೀಜಿ ಅಭಿಮತ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ದೇವರು ಜ್ಞಾನ ಆಸಕ್ತರನ್ನು, ವಿದ್ಯಾ ವಿಷಯದ ಹಸಿವು ಇರುವವರನ್ನು ಸದಾ ಅನುಗ್ರಹಿಸುತ್ತಾನೆ. ಹಾಗಾಗಿ ಜ್ಞಾನಿಗೆ ವಿಶ್ವದ ಎಲ್ಲೆಡೆ ಮಾನ್ಯತೆ ಇರುತ್ತದೆ ಎಂದು ಜಗದ್ಗುರು ಶ್ರೀ ಮಧ್ವಾಚಾರ್ಯರ ಮೂಲ ಮಹಾಸಂಸ್ಥಾನ ಸೋಸಲೆ ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ ನುಡಿದರು.

ಸೋಸಲೆ ಗ್ರಾಮದ ಶ್ರೀ ಮಠದಲ್ಲಿ ಬೆಂಗಳೂರಿನ ಶ್ರೀ ಸರ್ವಜ್ಞ ಸೇವಾ ಸಮಿತಿ ಚಾರಿಟಬಲ್ ಟ್ರಸ್ಟ್ ಹಮ್ಮಿಕೊಂಡಿದ್ದ 2 ದಿನಗಳ ‘ಶ್ರೀ ಜಗನ್ನಾಥ ದಾಸರ ಹರಿ ಕಥಾಮೃತಸಾರದ ಪ್ರಧಾನ ಪ್ರಮೇಯಗಳನ್ನು ಶಾಸ್ತ್ರ ಗ್ರಂಥಗಳ ಆಧಾರದಿಂದ ವಿವರಿಸುವ ವಿಶೇಷ ಜ್ಞಾನ ಸತ್ರ- ಕ್ಕೆ ಚಾಲನೆ ನೀಡಿ ಅನುಗ್ರಹ ಸಂದೇಶ ನೀಡಿದರು.

ಲೌಕಿಕ ವಿಚಾರಗಳನ್ನು ಕೊಂಚ ಬದಿಗೆ ಇರಿಸಿ ನಾವುಗಳು ತತ್ವ ಜ್ಞಾನದ ಶ್ರವಣ, ಮನನ ಮತ್ತು ನಿಧಿ ಧ್ಯಾಸನದಲ್ಲಿ ಆಸಕ್ತರಾದರೆ ಜೀವನ ಸಾರ್ಥಕವಾಗಲಿದೆ ಎಂದು ಅವರು ಹೇಳಿದರು.
ಹರಿ ಕಥಾಮೃತಸಾರ ಗ್ರಂಥ ಜನ ಸಾಮಾನ್ಯರಿಗೂ ಸರಳವಾಗಿ ಅರ್ಥವಾಗುವ ಕನ್ನಡದ ಕೃತಿ. ದೈವಿಕ ಆಸಕ್ತರನ್ನು ಪಾರಮಾರ್ಥಿಕ ವಿಚಾರಗಳತ್ತ ಸಾಗುವಂತೆ ಮಾಡುವ ವಿಶೇಷ ಪದ್ಯಗಳ ರಚನೆ ಅದರಲ್ಲಿ ಇದೆ. ಇದರ ಪ್ರಧಾನ ಪ್ರಮೇಯಗಳನ್ನು ಶಾಸ್ತ್ರ ಗ್ರಂಥಗಳ ಆಧಾರದಿಂದ ಅರ್ಥ ಮಾಡಿಕೊಳ್ಳುವ ನಿಟ್ಟಿನಲ್ಲಿ ಜ್ಞಾನ ಸತ್ರ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದರು.

ಜಗನ್ನಾಥದಾಸರ ಸೇವೆ ದೊಡ್ಡದು
ಬೆಂಗಳೂರಿನ ಶ್ರೀ ಪೂರ್ಣಪ್ರಜ್ಞ ವಿದ್ಯಾಪೀಠದ ಹಿರಿಯ ವಿದ್ವಾಂಸ ವಿದ್ವಾನ್ ಡಾ. ಎ.ವಿ. ನಾಗಸಂಪಿಗೆ ಆನಂದತೀರ್ಥ ಆಚಾರ್ಯರ  ಪ್ರಸ್ತಾವಿಕವಾಗಿ ಮಾತನಾಡಿ, ದ್ವೈತ ಮತ ಸಿದ್ಧಾಂತಿ ಆಚಾರ್ಯ ಶ್ರೀ ಮಧ್ವರ ಮತ್ತು ಅವರ ಸಂದೇಶಗಳನ್ನು ಜನರಿಗೆ ಸರಳ ಕನ್ನಡದಲ್ಲಿ  ತಿಳಿಸಿಕೊಡುವ ನಿಟ್ಟಿನಲ್ಲಿ ಹರಿ ಕಥಾಮೃತ ಸಾರ ಮಹತ್ವದ ಕಾರ್ಯವನ್ನು ಮಾಡಿದೆ. ಈ ದಿಸೆಯಲ್ಲಿ ದಾಸ ಪರಂಪರೆಯ ಶ್ರೀ ಜಗನ್ನಾಥದಾಸರ ಸಾಹಿತ್ಯ ಜ್ಞಾನ ಮತ್ತು ವಿಚಾರ ಪ್ರತಿಪಾದನೆ ಪರಮೋಚ್ಛವಾಗಿದೆ ಎಂದರು. ದಾಸರ ಕೊಡುಗೆಯನ್ನು ವಿದ್ವತ್ ಪ್ರಪಂಚ ಸದಾ ಸ್ಮರಣೆ ಮಾಡಿಕೊಳ್ಳುತ್ತದೆ ಎಂದವರು ನುಡಿದರು.

ಮೊದಲನೇ ಗೋಷ್ಠಿಯಲ್ಲಿ ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠದ ನಿವೃತ್ತ ಪ್ರಾಧ್ಯಾಪಕ ವಿದ್ವಾನ್ ಬದರಿನಾಥ ಆಚಾರ್ಯ ಅವರು‘ ಬ್ರಹ್ಮ ಸ್ವರೂಪ ಎಂಬ ವಿಷಯವನ್ನು ಮಂಡಿಸಿದರು.
ಪರಬ್ರಹ್ಮನಾದ ಹರಿಯು ಅನಂತ ಕಲ್ಯಾಣ ಗುಣಪೂರ್ಣನಾಗಿದ್ದಾನೆ. ಅವನನ್ನು ವೇದಗಳಿಂದ ಹಾಗೂ ವೇದಾನು ಸಾರಿ ಬ್ರಹ್ಮಸೂತ್ರಾದಿಗಳಿಂದ ಮಾತ್ರ ಸರಿಯಾಗಿ ತಿಳಿಯಲು ಸಾಧ್ಯ. ಈ ವಿಷಯವನ್ನು ಮೊದಲು ಲೋಕಕ್ಕೆ ತಿಳಿಸಿಕೊಟ್ಟವರೇ ಶ್ರೀ ಮಧ್ವಾಚಾರ್ಯರು. ಹಾಗಾಗಿ ಅವರನ್ನು ಪೂರ್ಣಪ್ರಜ್ಞರು ಎಂದು ಲೋಕ ಕೋಂಡಾಡಿತು ಎಂದರು.

ಎರಡನೇ ಗೋಷ್ಠಿಯಲ್ಲಿ ಮೈಸೂರಿನ ಶ್ರೀ ವ್ಯಾಸತೀರ್ಥ ವಿದ್ಯಾಪೀಠದ ಯುವ ವಿದ್ವಾಂಸ ಪ್ರಣವಾಚಾರ್ಯ ಮಾತನಾಡಿದರು. ಅನಂತವಾದ ವೇದಗಳು ಪರಮಾತ್ಮನನ್ನು ಸಮಗ್ರವಾಗಿ ತಿಳಿಸುತ್ತವೆ. ಭಗವಂತನ ಅಧೀನವಾದ ಜೀವಿಗಳು ಭಗವದ್ ಅನುಗ್ರಹದಿಂದ ಮಾತ್ರ ಸುಸ್ಥಿರವಾಗಿರಲು ಸಾಧ್ಯ ಎಂದು ಹೇಳಿದರು.

ಮೈಸೂರಿನ ಹಿರಿಯ ವಿದ್ವಾಂಸ ಆದ್ಯ ಗೋವಿಂದಾಚಾರ್ಯರು ‘ಸುಧಾಮ ಚರಿತ್ರೆ’ ವಿಷಯದ ಹರಿಕಥೆ ನಡೆಸಿಕೊಟ್ಟು ಶ್ರೋತೃಗಳ ಗಮನ ಸೆಳೆದರು.

ಮೂರನೇ ಗೋಷ್ಠಿಯಲ್ಲಿ ಪಂಡಿತ ಕಳಸಾಪುರ ಶ್ರೀಕಾಂತ ಆಚಾರ್ಯ ಅವರು ಧ್ಯಾನದ ಸೋಪಾನಗಳ ಬಗ್ಗೆ ತಿಳಿಸಿರುವ ಪ್ರಮೇಯಗಳನ್ನು ಶ್ರುತಪಡಿಸಿದರು. ನಾಲ್ಕನೇ ಗೋಷ್ಠಿಯಲ್ಲಿ ವಿದ್ವಾನ್ ಸುಘೋಷ ಆಚಾರ್ಯ ಅವರು ‘ಹರಿಕಥಾಮೃತ ಸಾರ’ ಕೃತಿಯ ಕರುಣಾಸಂಧಿಯ ವಿಶೇಷ ವಿಷಯಗಳನ್ನು ಪ್ರತಿಪಾದಿಸಿದರು.

ಕರುಣಾಸಾಗರನಾದ  ಶ್ರೀಹರಿಯು ತನ್ನ ಭಕ್ತರನ್ನು ಕರುಣಾಪೂರ್ಣ ದೃಷ್ಟಿಯಿಂದ ಅನುಗ್ರಹಿಸುತ್ತಾನೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.

ಪಂಡಿತರಾದ ಪಾಂಡುರಂಗ ಮಾಧವಾಚಾರ್ಯರು ಕೃತಿಯಲ್ಲಿರುವ ‘ಸರ್ವ ಸ್ವಾತಂತ್ರ್ಯ ಸಂಧಿ’ ಯನ್ನು ವಿಶ್ಲೇಷಣೆ ಮಾಡಿದರು. ನೂರಾರು ಭಕ್ತರು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Kalahamsa Infotech private limited

Tags: Kannada News WebsiteLatest News KannadaMadhwacharyamysoreSosaleVyasaraja Mathaಜಗನ್ನಾಥದಾಸಜ್ಞಾನ ಸತ್ರಮೈಸೂರುಶ್ರೀ ಮಧ್ವಾಚಾರ್ಯರುಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿಸೋಸಲೆ
Share196Tweet123Send
Previous Post

ಸೆ.1ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಕಾರ್ಯಕ್ರಮ

Next Post

ಕನ್ನಡ ಭಾಷೆಯನ್ನೇ ಪ್ರಧಾನವನ್ನಾಗಿಸುವ ಗಂಭೀರ ಚಿಂತನೆ ಅಗತ್ಯ: ವಿಪ ಸಭಾಪತಿ ಬಸವರಾಜ ಹೊರಟ್ಟಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕನ್ನಡ ಭಾಷೆಯನ್ನೇ ಪ್ರಧಾನವನ್ನಾಗಿಸುವ ಗಂಭೀರ ಚಿಂತನೆ ಅಗತ್ಯ: ವಿಪ ಸಭಾಪತಿ ಬಸವರಾಜ ಹೊರಟ್ಟಿ

ಕನ್ನಡ ಭಾಷೆಯನ್ನೇ ಪ್ರಧಾನವನ್ನಾಗಿಸುವ ಗಂಭೀರ ಚಿಂತನೆ ಅಗತ್ಯ: ವಿಪ ಸಭಾಪತಿ ಬಸವರಾಜ ಹೊರಟ್ಟಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಮಂಗಳೂರಿನಲ್ಲಿ ಫ್ಲಾಟ್ ದರದಲ್ಲಿ ಲಭ್ಯವಿದೆ ಸುಂದರವಾದ Fully Furnished ವಿಲ್ಲ/ಬಂಗ್ಲೆ

ಮಂಗಳೂರಿನಲ್ಲಿ ಫ್ಲಾಟ್ ದರದಲ್ಲಿ ಲಭ್ಯವಿದೆ ಸುಂದರವಾದ Fully Furnished ವಿಲ್ಲ/ಬಂಗ್ಲೆ

April 4, 2026
ತಾಲೂಕು ಆಸ್ಪತ್ರೆಗೆ ತಜ್ಞ ವೈದ್ಯರನ್ನು ಮರು ನೇಮಕ ಮಾಡಲು ಜೆಡಿಎಸ್ ಆಗ್ರಹ

ತಾಲೂಕು ಆಸ್ಪತ್ರೆಗೆ ತಜ್ಞ ವೈದ್ಯರನ್ನು ಮರು ನೇಮಕ ಮಾಡಲು ಜೆಡಿಎಸ್ ಆಗ್ರಹ

April 4, 2026
ಡಾ. ಆತ್ಮಪ್ರಸನ್ನ ಅವರ ಪ್ಯಾಲಿಟಿವ್ ಕೇರ್ ಇನ್ ಇಂಡಿಯಾ ಕೃತಿ ಬಿಡುಗಡೆ

ಡಾ. ಆತ್ಮಪ್ರಸನ್ನ ಅವರ ಪ್ಯಾಲಿಟಿವ್ ಕೇರ್ ಇನ್ ಇಂಡಿಯಾ ಕೃತಿ ಬಿಡುಗಡೆ

April 4, 2026
BOSCON 2026 – ಭವಿಷ್ಯಮುಖಿ ಅಸ್ಥಿ ಶಸ್ತ್ರ ಚಿಕಿತ್ಸೆಯನ್ನು ಬೆಳಗಿಸಿದ ಪ್ರಮುಖ ತಜ್ಞರ ಸಮ್ಮೇಳನ

BOSCON 2026 – ಭವಿಷ್ಯಮುಖಿ ಅಸ್ಥಿ ಶಸ್ತ್ರ ಚಿಕಿತ್ಸೆಯನ್ನು ಬೆಳಗಿಸಿದ ಪ್ರಮುಖ ತಜ್ಞರ ಸಮ್ಮೇಳನ

April 4, 2026
ಕುಡಿಯುವ ನೀರಿನ ಪಂಪ್ ಹೌಸ್‌ಗೆ ಶಾಸಕ ಚನ್ನಬಸಪ್ಪ ಭೇಟಿ: ನೀರು ಸರಬರಾಜು ತಾಂತ್ರಿಕ ಅಡಚಣೆ ಸರಿಪಡಿಸಲು ಸೂಚನೆ

ಕುಡಿಯುವ ನೀರಿನ ಪಂಪ್ ಹೌಸ್‌ಗೆ ಶಾಸಕ ಚನ್ನಬಸಪ್ಪ ಭೇಟಿ: ನೀರು ಸರಬರಾಜು ತಾಂತ್ರಿಕ ಅಡಚಣೆ ಸರಿಪಡಿಸಲು ಸೂಚನೆ

April 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL