No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Monday, September 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಮೈಸೂರಿನ ನೃತ್ಯ ರಸಿಕರಿಗೆ ಸುವರ್ಣಾವಕಾಶ | ಡಿ.23ರಂದು ಸಾಂಸ್ಕೃತಿಕ ನಗರಿಯಲ್ಲಿ ಒಡಿಸ್ಸಿ ಉತ್ಸವ

kalpa News by kalpa News
December 20, 2023
in ಮೈಸೂರು
0
ಮೈಸೂರಿನ ನೃತ್ಯ ರಸಿಕರಿಗೆ ಸುವರ್ಣಾವಕಾಶ | ಡಿ.23ರಂದು ಸಾಂಸ್ಕೃತಿಕ ನಗರಿಯಲ್ಲಿ ಒಡಿಸ್ಸಿ ಉತ್ಸವ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಮೈಸೂರು |

ನಗರದ ರುದ್ರ ನೃತ್ಯಯೋಗ ಶಾಲಾ ವತಿಯಿಂದ, ಭುವನೇಶ್ವರದ ಒಡಿಸ್ಸಿ ಇಂಟರ್’ನ್ಯಾಷನಲ್ ಫೋರಂ, ಪುರಿ ಜಗನ್ನಾಥ ಕಲ್ಚರಲ್ ಅಂಡ್ ವೆಲ್ ಫೇರ್ ಟ್ರಸ್ಟ್ ಹಾಗೂ ಮೈಸೂರು ಒಡಿಸ್ಸಿ ಕುಟುಂಬಗಳ ಸಹಭಾಗಿತ್ವದಲ್ಲಿ ಎರಡನೇ ಬಾರಿಗೆ ಒಡಿಸ್ಸಿ ಉತ್ಸವವನ್ನು ಆಯೋಜಿಸಲಾಗಿದೆ ಎಂದು ನೃತ್ಯಗುರು ಸಿಂಧು ಕಿರಣ್ ಹೇಳಿದರು.

ಮೈಸೂರಿನ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಮಕೃಷ್ಣ ನಗರದ ರಮಾ ಗೋವಿಂದ ರಂಗ ಮಂದಿರದಲ್ಲಿ ಸಂಜೆ 5.30ರಿಂದ ನಡೆಯುವ ಈ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧೆಡೆಗಳಿಂದ ಆಗಮಿಸಿದ ಹೆಸರಾಂತ ಒಡಿಸ್ಸಿ ನೃತ್ಯ ಕಲಾವಿದರು ಪ್ರದರ್ಶನ ನೀಡಲಿದ್ದಾರೆ ಎಂದರು.
ಪತ್ರಕರ್ತ, ಮೈಸೂರು ಒಡಿಸ್ಸಿ ಕುಟುಂಬದ ವೈದ್ಯನಾಥ್ ಮಾತನಾಡಿ, ಒಡಿಸ್ಸಿ ನೃತ್ಯ ಉತ್ಸವದಲ್ಲಿ ಮೈಸೂರಿನ ರುದ್ರ ನೃತ್ಯ ಯೋಗ ಶಾಲೆಯ ಸಿಂಧು ಕಿರಣ್, ದುಬೈನ ಜೋತ್ಸ್ನಾ ಅಪ್ಪಯ್ಯ, ಕೋಲ್ಕತ್ತದ ತಾನಿಯಾ ಮನ್ನಾ, ಬೆಂಗಳೂರಿನ ಲಿಪಿಕಾ ನಾಯಕ್, ಪಾಯಲ್ ಮುಂಜಂದಾರ್ ಮಂಡಲ್, ಏನಾಕ್ಷಿ ಮುಜುಂದಾರ್ ಮಂಡಲ್, ದೀಪಿಕಾ ರತ್ನಾಕರ್, ಜನೀಲ್, ಕೆ. ಜ್ಯೋತಿಮಯಿ ಪಟ್ನಾಯಕ್, ಮೈಸೂರಿನ ಸ್ತುತ್ಯಶ್ರೀ ಪಾಲ್ಗೊಳ್ಳಲಿದ್ದಾರೆ ಎಂದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಪುರಿ ಜಗನ್ನಾಥ ಕಲ್ಚರಲ್ ಅಂಡ್ ವೆಲ್ ಫೇರ್ ಟ್ರಸ್ಟ್ ಅಧ್ಯಕ್ಷ ಘನಶ್ಯಾಮ ಪ್ರಧಾನ್, ಮೈಸೂರಿನ ಭೂಷಣ್ ಅಕಾಡೆಮಿ ಆಫ್ ಪರ್ಫಾಮಿಂಗ್ ಆರ್ಟ್ಸ್ ಬದರಿ ದಿವ್ಯ ಭೂಷಣ್, ಶ್ರೀ ಕೃಷ್ಣ ಸೇವಾ ಸಮಿತಿಯ ಕಾರ್ಯದರ್ಶಿ ಭಾರತಿ ಶ್ರೀಧರ ರಾಜ ಅರಸ್, ಮೈಸೂರು ಯೋಗ ಒಕ್ಕೂಟದ ಕಾರ್ಯಾಧ್ಯಕ್ಷ ಡಾ. ಬಿ.ವಿ. ಮೂರ್ತಿ, ವಿಶೇಷ ಆಹ್ವಾನಿತರಾಗಿ, ಅಂತಾರಾಷ್ಟ್ರೀಯ ಖ್ಯಾತಿಯ ಭರತನಾಟ್ಯ ಕಲಾವಿದ ಬದರಿ ದಿವ್ಯ ಭೂಷಣ ಪಾಲ್ಗೊಳ್ಳಲಿದ್ದಾರೆ. ಒಡಿಸ್ಸಿ ನೃತ್ಯ ಕಲಾವಿದೆ ಪೃಥೆ ಹವಾಲ್ದಾರ್ ಕಾರ್ಯಕ್ರಮವನ್ನು ನಿರ್ವಹಿಸಲಿದ್ದಾರೆ.
ವಿದುಷಿ ಸಿಂಧು ಕಿರಣ್
ಮೈಸೂರು ಒಡಿಸ್ಸಿ ಉತ್ಸವದ ಸಂಚಾಲಕಿ ವಿದುಷಿ ಸಿಂಧು ಕಿರಣ್ ಅವರು, 2006ರಲ್ಲಿ ಸ್ಥಾಪನೆಗೊಂಡ, ಮೈಸೂರಿನ ಗೋಕುಲಂನಲ್ಲಿನ ರುದ್ರ ನೃತ್ಯ ಯೋಗಶಾಲೆಯ ಸಂಸ್ಥಾಪಕರು. ಸಂಗೀತ, ನೃತ್ಯ ಹಾಗೂ ಸಮರ ಕಲೆಯಾದ ಕಲಾರಿ ಪಯಟ್ಟುವಿನಲ್ಲಿ ಪರಿಣಿತಿ ಹೊಂದಿದ ಬಹುಮುಖ ಪ್ರತಿಭೆ. ಸ್ವತಃ ವೀಣಾ ವಾದಕಿಯಾಗಿರುವ ಇವರು, ಓಡಿಸ್ಸಿಯಲ್ಲದೇ ಮೋಹಿನಿ ಅಟ್ಟಂನಲ್ಲಿಯೂ ಗಮನ ಸೆಳೆದಿದ್ದಾರೆ. ನೃತ್ಯದ ಜೊತೆಗೆ ಯೋಗ ಶಿಕ್ಷಣವನ್ನು ಸಹ ನೀಡುತ್ತಿದ್ದಾರೆ.

Also read: ಎಲ್ಲಾ ಕಾಯಿಲೆಗಳಿಗೆ ತಾಯಿ ಎದೆಹಾಲು ಅತ್ಯಂತ ಪರಿಣಾಮಕಾರಿ: ಡಾ. ಧನಂಜಯ್ ಸರ್ಜಿ

ತಮ್ಮ ನಾಲ್ಕನೇ ವಯಸ್ಸಿನಲ್ಲಿಯೇ ಕೇರಳ ಜಾನಪದ ನೃತ್ಯಗಳು ಹಾಗೂ ಭರತ ನಾಟ್ಯಂನಲ್ಲಿ ಆಸಕ್ತಿ ಹೊಂದಿ ಅಭ್ಯಾಸ ಮಾಡಿರುವ ಇವರು, ಹೆಸರಾಂತ ನೃತ್ಯ ಕಲಾವಿದೆ ಪ್ರತಿಮಾ ಗೌರಿ ಬೇಡಿಯವರ ನೃತ್ಯದಿಂದ ಪ್ರಭಾವಿತರಾಗಿ ಬೆಂಗಳೂರಿನ ನೃತ್ಯ ಗ್ರಾಮದಲ್ಲಿ ನೃತ್ಯಾಭ್ಯಾಸ ಮಾಡಿದ್ದಾರೆ.
ನಾಡಿನ ಅತ್ಯಂತ ಗೌರವಾನ್ವಿತ ನೃತ್ಯಗುರು ಪದ್ಮಭೂಷಣ ಪಂಡಿತ್ ಕೇಳು ಚರಣ ಮಾಹಾಪಾತ್ರರವರಲ್ಲಿ ನೃತ್ಯಾಭ್ಯಾಸ ಮಾಡಿರುವ ಹಿರಿಮೆ ಇವರದ್ದು. ನೃತ್ಯಗ್ರಾಮದಲ್ಲಿ ಶಿಕ್ಷಣ ಪಡೆದ ನಂತರ ಒಡಿಸ್ಸಿಯ ಮೂಲ ಸೆಲೆಯಾದ ಭುವನೇಶ್ವರದಲ್ಲಿ ಗುರು ಶ್ರೀ ರತಿಕಾಂತ ಮಹೋಪಾತ್ರ, ಗುರು ಶ್ರೀ ರಮಣಿ ರಂಜನ್ ಜೆನ್ನಾರಲ್ಲಿ ಉನ್ನತ ಶಿಕ್ಷಣವನ್ನು ಪಡೆದಿದ್ದಾರೆ.

ಪ್ರಸಿದ್ಧ ಕಲಾಮಂಡಲಂನ ಕಲ್ಯಾಣಕುಟ್ಟಿ ಅಮ್ಮರವರಲ್ಲಿ ಮೋಹಿನಿ ಆಟ್ಟಂ ಅಭ್ಯಾಸ ಮಾಡಿರುವ ಇವರು, ನಂತರ ಗುರು ಸ್ಮಿತಾ ರಂಜನ್, ಗುರು ಭಾರತೀ ಶಿವಾಜಿಯವರಲ್ಲಿಯೂ ಶಿಕ್ಷಣ ಪಡೆದಿದ್ದಾರೆ.

ನೃತ್ಯ ಗುರು ಸಿಂಧು ಕಿರಣ್ ಅವರ ವಿಶೇಷತೆಯೆಂದರೆ, ತೀವ್ರತರವಾದ ಭಾವಾಭಿವ್ಯಕ್ತಿ. ಅಭಿನಯದಲ್ಲಿ ವಿಶೇಷ ಪರಿಣಿತಿ ಸಾಧಿಸಿರುವ ಇವರು, ಈ ಕುರಿತಾಗಿ ಗುರು ಕಲಾನಿಧಿ ನಾರಾಯಣ್ ಅವರಲ್ಲಿ ತರಬೇತಿ ಪಡೆದಿದ್ದಾರೆ.

ಸಿಂಧು ಕಿರಣ್ ಅವರು, 1992ರಿಂದ ದೇಶ ವಿದೇಶಗಳ ಪ್ರತಿಷ್ಠಿತ ವೇದಿಕೆಗಳಲ್ಲಿ ಕಾರ್ಯಕ್ರಮಗಳನ್ನು ನೀಡಿ ಗಮನ ಸೆಳೆದಿದ್ದಾರಲ್ಲದೇ ಯೂರೋಪ್, ದಕ್ಷಿಣ ಪೂರ್ವ ಏಷ್ಯಾದೇಶಗಳಲ್ಲಿ ಒಡಿಸ್ಸಿ ನೃತ್ಯ ಕುರಿತು ಕಾರ್ಯಾಗಾರಗಳನ್ನು ಸಹ ನಡೆಸಿಕೊಟ್ಟಿದ್ದಾರೆ.

ಶ್ರೇಷ್ಠಿವಾದ ಹಾಗೂ ಈ ಭಾಗದಲ್ಲಿ ಅಪರೂಪ ಎನ್ನಬಹುದಾದ ಒಡಿಸ್ಸಿ ನೃತ್ಯ ಪರಂಪರೆಯನ್ನು ಪರಿಚಯಿಸುವ ದೃಷ್ಟಿಯಿಂದ ಸಿಂಧು ಕಿರಣ್ ಅವರು ಮೈಸೂರು ಓಡಿಸ್ಸಿ ಉತ್ಸವವನ್ನು ಸಂಘಟಿಸಿದ್ದಾರೆ. ದೇಶ ವಿದೇಶಗಳ ಗಣ್ಯ ನೃತ್ಯ ಕಲಾವಿದರನ್ನು ಆಹ್ವಾನಿಸಿದ್ದಾರೆ.
ಒಡಿಸ್ಸಿ ನೃತ್ಯವನ್ನು ಮೈಸೂರಿನ ನೃತ್ಯ ರಸಿಕರು ಕಣ್ತುಂಬಿಕೊಳ್ಳುವ ಅವಕಾಶ ಇದು.

ಪತ್ರಿಕಾಗೋಷ್ಟಿಯಲ್ಲಿ ನೃತ್ಯ ಕಲಾವಿದೆ ಪೃಥೆ ಹವಾಲ್ದಾರ್ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadamysoreNewsinKannadaNewsKannadaಮೈಸೂರು
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಎಲ್ಲಾ ಕಾಯಿಲೆಗಳಿಗೆ ತಾಯಿ ಎದೆಹಾಲು ಅತ್ಯಂತ ಪರಿಣಾಮಕಾರಿ: ಡಾ. ಧನಂಜಯ್ ಸರ್ಜಿ

Next Post

CAA is not about acquiring citizenship but about granting citizenship in the country: Shah

kalpa News

kalpa News

Next Post
CAA is not about acquiring citizenship but about granting citizenship in the country: Shah

CAA is not about acquiring citizenship but about granting citizenship in the country: Shah

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL