ಕಲ್ಪ ಮೀಡಿಯಾ ಹೌಸ್ | ಮೈಸೂರು |
ಶ್ರೀರಾಂಪುರದ ರಿಂಗ್ ರಸ್ತೆಯ ಹತ್ತಿರ ಮೂಕಾಂಬಿಕಾ ಸಮೃದ್ದಿ ಬಡಾವಣೆಯಲ್ಲಿ ಸರಸ್ವತಿ ಭಾರತೀಯ ಸಂಸ್ಕಾರ ಕೇಂದ್ರದ ಉದ್ಘಾಟನೆಯನ್ನು ಬಾಲ ಪ್ರತಿಭೆ ಡಾ ಪೃಥು ಪಿ ಅದ್ವೈತ್ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ವಿಶ್ವ ಹಿಂದೂ ಪರಿಷತ್ ಮೈಸೂರು ಜಿಲ್ಲೆಯ ಅಧ್ಯಕ್ಷರಾದ ಶ್ರೀಯುತ ಮಹೇಶ್ ಕಾಮತ್ ರವರು ಇಂದಿನ ಒತ್ತಡದ ಜೀವನದಲ್ಲಿ ನಮಗೆ ಸನಾತನ ಧರ್ಮದ ಜಾಗೃತಿ, ಆಚರಣೆ ಮಾಡುವುದು ಕಡಿಮೆ ಆಗುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದರು.
ಸರಸ್ವತಿ ಭಾರತೀಯ ಸಂಸ್ಕಾರ ಕೇಂದ್ರದ ಪುನೀತ್ ಜಿ ಕೂಡ್ಲೂರು ಮಾತನಾಡಿ, ನಮ್ಮ ಈ ಸಂಸ್ಕಾರ ಕೇಂದ್ರದಲ್ಲಿ ಶ್ಲೋಕ, ವೇದ, ಭಾರತೀಯ ಆಚರಣೆ, ವಿಷ್ಣು ಸಹಸ್ರನಾಮ, ಲಲಿತಾ ಸಹಸ್ರನಾಮ, ಭಜನೆ ಹೀಗೆ ವಿವಿಧ ತರಗತಿಗಳು ನಡೆಯಲಿವೆ ಎಂದರು. ಇದೇ ಕೇಂದ್ರದಲ್ಲಿ ಕೂಡ್ಲೂರು ಗುಂಡಪ್ಪ ಪ್ರತಿಷ್ಠಾನದ ವತಿಯಿಂದ ಧರ್ಮ, ಸಂಸ್ಕಾರ, ಸಾಹಿತ್ಯ, ಸಂಗೀತ, ಕಲೆ ಹೀಗೆ ವಿವಿಧ ಕಾರ್ಯಕ್ರಮಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಶ್ರೀಮತಿ ಇಂದಿರಮ್ಮ ಗುಂಡಪ್ಪ ವೇದಿಕೆ ನಿರ್ಮಿಸಲಾಗಿದೆ ಎಂದರು.
ಆಸಕ್ತರು ತಮ್ಮ ಧಾರ್ಮಿಕ, ಸಾಂಸ್ಕೃತಿಕ, ಸಾಮಾಜಿಕ ಕಾರ್ಯಕ್ರಮಗಳನ್ನು ನಮ್ಮ ಈ ಸಭಾ ಭವನದಲ್ಲಿ ಮಾಡಬಹುದು ಇದರಿಂದ ನಮ್ಮ ಭಾರತೀಯ ಕಲೆ, ಸಂಸ್ಕಾರಗಳ ಉಳಿವಿಗಾಗಿ ನಮ್ಮ ವೇದಿಕೆ ಸಹಕಾರಿಯಾಗಲಿದೆ ಎಂದು ತಿಳಿಸಿದರು.
ಸ್ಥಳಾವಕಾಶಕ್ಕಾಗಿ ಸಂಯೋಜಕರಾದ ಗಣೇಶ್ 9449408936 ಅಥವಾ 8105366574 ಮೊಬೈಲ್ ಸಂಪರ್ಕಿಸ ಬಹುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಂಸ್ಕಾರ ಕೇಂದ್ರದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ, ವಿಷ್ಣು ಸಹಸ್ರನಾಮ ಪಾರಾಯಣ, ವಿಶ್ವ ಹಿಂದೂ ಪರಿಷತ್ ಸತ್ಸಂಗ ಪ್ರಮುಖರಾದ ಶ್ರೀಮತಿ ರಾಧಾ ಲಕ್ಮಣರಾಜು ರವರ ಸಂಗೀತ ಕಾರ್ಯಕ್ರಮ ನೆರವೇರಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news