ಕಲ್ಪ ಮೀಡಿಯಾ ಹೌಸ್ | ಮೈಸೂರು |
ನೈಋತ್ಯ ರೈಲ್ವೆ ಮೈಸೂರು ವಿಭಾಗವು South Western Railway Mysore division ಆಯೋಜಿಸಿದ್ದ ಬಹು ನಿರೀಕ್ಷಿತ ಅಂತರ ವಿಭಾಗ ನಾಟಕ ಸ್ಪರ್ಧೆಯನ್ನು Inter-departmental drama competition ಯಶಸ್ವಿಯಾಯಿತು.
ರೈಲ್ವೆ ನೌಕರರ ಸೃಜನಶೀಲತೆ, ಕಲಾತ್ಮಕ ಪ್ರತಿಭೆ ಹಾಗೂ ಸಾಂಸ್ಕೃತಿಕ ಚೈತನ್ಯವನ್ನು ಪ್ರತಿಬಿಂಬಿಸಿದ ಈ ಸ್ಪರ್ಧೆಯಲ್ಲಿ ನೌಕರರು ಉತ್ಸಾಹದಿಂದ ಪಾಲ್ಗೊಂಡಿದ್ದರು.
ನೌಕರರಲ್ಲಿನ ಸಾಂಸ್ಕೃತಿಕ ಚಟುವಟಿಕೆಗಳನ್ನು ಉತ್ತೇಜಿಸುವುದು ಹಾಗೂ ಅವರಲ್ಲಿರುವ ಅಡಗಿದ ಪ್ರತಿಭೆಗಳನ್ನು ಅನಾವರಣಗೊಳಿಸಲು ಪ್ರೋತ್ಸಾಹಿಸುವ ಉದ್ದೇಶದಿಂದ ಈ ಸ್ಪರ್ಧೆಯನ್ನು ಆಯೋಜಿಸಲಾಯಿತು. ನೌಕರರ ಸಮಗ್ರ ವ್ಯಕ್ತಿತ್ವ ವಿಕಾಸ ಮತ್ತು ಮಾನಸಿಕ ಕ್ಷೇಮಾಭಿವೃದ್ಧಿಗೆ ಮೈಸೂರು ವಿಭಾಗ ಬದ್ಧವಾಗಿದೆ ಎಂಬುದನ್ನು ಈ ಕಾರ್ಯಕ್ರಮವು ತೋರಿಸಿತು.
ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಮುದಿತ್ ಮಿತ್ತಲ್ ಅವರು ಮಾತನಾಡಿ, ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ನೌಕರರ ಸೃಜನಶೀಲತೆ, ತಂಡ ಸಹಕಾರ ಹಾಗೂ ವೈಯಕ್ತಿಕ ಬೆಳವಣಿಗೆಯನ್ನು ಉತ್ತೇಜಿಸುತ್ತವೆ ಎಂದು ತಿಳಿಸಿದರು.
ಕೆಲಸದ ಹೊರತಾಗಿಯೂ ತಮ್ಮ ಆಸಕ್ತಿಗಳನ್ನು ಬೆಳೆಸಿಕೊಳ್ಳಲು ಇಂತಹ ವೇದಿಕೆಗಳು ಸಹಕಾರಿಯಾಗುತ್ತವೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ವಿಭಿನ್ನ ಇಲಾಖೆಗಳ ಐದು ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿ ಉತ್ಸಾಹಭರಿತ ಹಾಗೂ ಮನಮೋಹಕ ನಾಟಕ ಪ್ರದರ್ಶನಗಳನ್ನು ನೀಡಿದವು. ತೀರ್ಪುಗಾರರ ಸಮಗ್ರ ಮೌಲ್ಯಮಾಪನದ ನಂತರ ವಾಣಿಜ್ಯ ಇಲಾಖೆ ಒಟ್ಟಾರೆ ಅತ್ಯುತ್ತಮ ತಂಡ ಹಾಗೂ ಅತ್ಯುತ್ತಮ ನಾಟಕ ಪ್ರಶಸ್ತಿಯನ್ನು ಪಡೆದುಕೊಂಡಿತು. ಎಂಜಿನಿಯರಿಂಗ್ ಇಲಾಖೆ ರನ್ನರ್-ಅಪ್ ಸ್ಥಾನವನ್ನು ಗಳಿಸಿತು.
ಪ್ರಖ್ಯಾತ ರಂಗಭೂಮಿ ಕಲಾವಿದರಾದ ರಾಮಸ್ವಾಮಿ ಹಾಗೂ ನಾಗೇಂದ್ರಕುಮಾರ್ ಅವರು ಸ್ಪರ್ಧೆಗೆ ತೀರ್ಪುಗಾರರಾಗಿ ಆಹ್ವಾನಿತರಾಗಿದ್ದು, ತಮ್ಮ ಅಮೂಲ್ಯ ಮಾರ್ಗದರ್ಶನ ಮತ್ತು ಅನುಭವದ ಮೂಲಕ ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಿದರು.
ಬಹುಮಾನ ವಿತರಣೆ ಸಮಾರಂಭದಲ್ಲಿ ಮುದಿತ್ ಮಿತ್ತಲ್ , ವಿಭಾಗೀಯ ರೈಲ್ವೆ ವ್ಯವಸ್ಥಾಪಕರು, ಶಮ್ಮಾಸ್ ಹಮೀದ್, ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕರು, ಹಿರಿಯ ಅಧಿಕಾರಿಗಳು ಹಾಗೂ ಗಣ್ಯ ತೀರ್ಪುಗಾರರು ಉಪಸ್ಥಿತರಿದ್ದರು. ಅವರ ಉಪಸ್ಥಿತಿ ಮತ್ತು ಪ್ರೋತ್ಸಾಹವು ಸ್ಪರ್ಧಾಳುಗಳಿಗೆ ಪ್ರೇರಣೆಯಾಯಿತು.
ಸ್ಪರ್ಧೆಯು ಉತ್ಸಾಹಭರಿತ ಹಾಗೂ ಸ್ಮರಣೀಯ ಕ್ಷಣಗಳೊಂದಿಗೆ ಯಶಸ್ವಿಯಾಗಿ ಮುಕ್ತಾಯಗೊಂಡಿತು. ನೈಋತ್ಯ ರೈಲ್ವೆ ಮೈಸೂರು ವಿಭಾಗವು ಮುಂದುವರೆದೂ ಇಂತಹ ಸಾಂಸ್ಕೃತಿಕ ಚಟುವಟಿಕೆಗಳನ್ನು ಉತ್ತೇಜಿಸಿ, ನೌಕರರ ಪ್ರತಿಭೆ ಮತ್ತು ಸೃಜನಶೀಲತೆಯನ್ನು ಬೆಳೆಸಲು ಬದ್ಧವಾಗಿದೆ ಎಂದು ಇಲಾಖೆ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















