ಕಲ್ಪ ಮೀಡಿಯಾ ಹೌಸ್ | ಮೈಸೂರು |
ಇಲ್ಲಿನ ನಾಗಮಲೆ ಕ್ಷೇತ್ರಕ್ಕೆ ಭಕ್ತರು ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ವೇಳೆ ಚಿರತೆಯೊಂದು ದಾಳಿ ನಡೆಸಿದ್ದು, 10 ವರ್ಷದ ಬಾಲಕ ಬಲಿಯಾಗಿರುವ ದಾರುಣ ಘಟನೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ Male Mahadeshwara Hill ಬಳಿಯ ನಾಗಮಲೆಯಲ್ಲಿ ನಡೆದಿದೆ.
ಮೃತ ಬಾಲಕನನ್ನು ಹರ್ಷಿತ್(10) ಎಂದು ಗುರುತಿಸಲಾಗಿದೆ.
ಬಾಲಕ ಹರ್ಷಿತ್ ಮತ್ತು ಅವನ ಕುಟುಂಬಸ್ಥರು ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿದ್ದರು. ಈ ವೇಳೆ ಈ ದಾರುಣ ಘಟನೆ ನಡೆದಿದೆ.
ಕುಟುಂಬಸ್ಥರು ನಾಗಮಲೆ ಕ್ಷೇತ್ರಕ್ಕೆ ಕಾಲ್ನಡಿಗೆಯಲ್ಲಿ ಹೋಗುತ್ತಿದ್ದಾಗ ಚಿರತೆ ಬಾಲಕನ ಮೇಲೆ ಎರಗಿದ್ದು, ಪೋಷಕರ ಮುಂದೆಯೇ ಬಾಲಕನ್ನು ಹೊತ್ತೊಯ್ದು ಕೊಂದು Boy killed by leopard ಹಾಕಿದೆ.
Also read: ನೆಂಟರ ಮದುವೆಗೆ ಹೊರಟು ಬಸ್ ಹತ್ತುತ್ತಿದ್ದ ಮಹಿಳೆ ಬ್ಯಾಗ್ ಕಳ್ಳತನ | ಕಳೆದುಕೊಂಡಿದ್ದು ಚಿನ್ನದ ಮೌಲ್ಯ ಎಷ್ಟು?
ಸುಮಾರು ಅರ್ಧ ಗಂಟೆಯ ನಂತರ ಕುತ್ತಿಗೆ ಮತ್ತು ಇತರ ಭಾಗಗಳು ರಕ್ತಸಿಕ್ತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ ಎಂದು ವರದಿಯಾಗಿದೆ.
ಅರಣ್ಯ ವೀಕ್ಷಕರು ಹಾಗೂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇನ್ನು, ಘಟನೆ ಹಿನ್ನೆಲೆಯಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಭಕ್ತರು ಹಾಗೂ ಸ್ಥಳೀಯರು ಈ ಪ್ರದೇಶದಲ್ಲಿ ಕಾಡು ಪ್ರಾಣಿಗಳು ಇರುವ ಕುರಿತಾಗಿ ಅರಣ್ಯ ಇಲಾಖೆ ಯಾವುದೇ ರೀತಿಯ ಫಲಕಗಳನ್ನು ಹಾಕಲಾಗಿಲ್ಲ ಎಂದು ಕಿಡಿ ಕಾರಿದರು.
ಭಕ್ತರು ಕಾಲ್ನಡಿಗೆಯಲ್ಲಿ ತೆರಳುವಾಗ ಅರಣ್ಯ ಇಲಾಖೆ ಸಿಬ್ಬಂದಿ ಜೊತೆಯಲ್ಲಿ ತೆರಳುವಂತೆ, ಪ್ರಾಣಿಗಳ ಸಂಚಾರ ಹೆಚ್ಚಿರುವ ಕಡೆಗಳಲ್ಲಿ ಎಚ್ಚರಿಕೆ ಫಲಕಗಳನ್ನು ಹಾಕುವಂತೆ, ಪ್ರಮುಖವಾಗಿ ಚಿರತೆಗಳನ್ನು ಸೆರೆ ಹಿಡಿಯುವಂತೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















