ಕಲ್ಪ ಮೀಡಿಯಾ ಹೌಸ್ | ಮೈಸೂರು |
ಟಿ. ನರಸೀಪುರ ತಾಲ್ಲೂಕಿನ ರಾಮೇಗೌಡನಪುರ ಗ್ರಾಮದ ಮಹಿಳೆಯೋರ್ವಳು ಎರಡು ಮಕ್ಕಳನ್ನು ಕೊಂದು ನೇಣಿಗೆ ಶರಣಾಗಿರುವ ಘಟನೆ ನಡದಿದೆ
ಸರೋಜ (32) ಮೃತ ಮಹಿಳೆಯಾಗಿದ್ದು, ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಮಾವಿನಹಳ್ಳಿ ಗ್ರಾಮದ ನಿಂಗರಾಜು ಎಂಬಾತನ ಜೊತೆ ವಿವಾಹವಾಗಿದ್ದ ಸರೋಜ, ಕೆಲ ದಿನಗಳ ಹಿಂದೆ ಗಂಡನ ಮನೆಯಿಂದ ಸ್ವಗ್ರಾಮ ರಾಮೇಗೌಡನಪುರಕ್ಕೆ ಆಗಮಿಸಿದ್ದರು. ಮನೆಯಲ್ಲಿ ಯಾರು ಇಲ್ಲದ ವೇಳೆ ಮಕ್ಕಳನ್ನು ಕೊಂದು ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ.
Also read: ಜೂ.29ರಂದು ಜೆಎನ್ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮಲೆನಾಡು ಮೇಳ…
ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post