ಕಲ್ಪ ಮೀಡಿಯಾ ಹೌಸ್ | ಮೈಸೂರು |
ಇಲ್ಲಿನ ಪ್ರತಿಷ್ಠಿತ ಮೂಕಾಂಬಿಕಾ ಸಮೃದ್ಧಿ ಬಡಾವಣೆಯಲ್ಲಿ ದೀಪಾವಳಿ ಹಬ್ಬ ಹಾಗೂ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಡಾ. ಸೌಮ್ಯ, ಇಂದು ಭಾರತವನ್ನು ಹಲವಾರು ರೋಗಗಳು ಕಾಡುತ್ತಿವೆ ಮಧುಮೇಹ ಮತ್ತು ಕ್ಯಾನ್ಸರ್ 40 ವರ್ಷ ಒಳಪಟ್ಟವರಲ್ಲೂ ಸಹ ಈಗ ಕಾಣಿಸುತ್ತಿರುವುದು ಆಘಾತಕಾರಿ ವಿಷಯವಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಸ್ಥಳೀಯ ಪಟ್ಟಣ ಪಂಚಾಯ್ತಿಯ ಪೌರಕಾರ್ಮಿಕರು ಸೇರಿದಂತೆ ನೂರಕ್ಕೂ ಹೆಚ್ಚು ಜನರು ಈ ಆರೋಗ್ಯ ತಪಾಸಣಾ ಶಿಬಿರದಲ್ಲಿ ಭಾಗವಹಿಸಿ ಅನುಕೂಲ ಪಡೆದರು.
Also read: ಸುಬ್ಬಯ್ಯ ಟ್ರಸ್ಟ್ ಚೇರ್ಮನ್ ನಿಧನ | ಸಚಿವ ಮಧು ಬಂಗಾರಪ್ಪ ಸಂತಾಪ
ಈ ಸಂದರ್ಭದಲ್ಲಿ ಕೂಡ್ಲೂರು ಗುಂಡಪ್ಪ ಪ್ರತಿಷ್ಠಾನದ ಅಧ್ಯಕ್ಷರಾದ ಕೆ.ಆರ್. ಗಣೇಶ್ ರವರು ದೀಪಾವಳಿಯ ಪ್ರಯುಕ್ತ ಎಲ್ಲರಿಗೂ ದೀಪಗಳ ವಿತರಣೆ ಮಾಡಿದರು.
ಕಾರ್ಯಕ್ರಮ ಆಯೋಜನೆ ಮಾಡಿದ್ದ ಪುನೀತ್ ಜಿ ಕೂಡ್ಲೂರು ಮಾತನಾಡಿ, ವಿಶ್ವ ಹಿಂದೂ ಪರಿಷತ್ ಹಾಗೂ ಮೂಕಾಂಬಿಕಾ ಸಮೃದ್ದಿ ಬಡಾವಣೆ ನಿವಾಸಿಗಳ ಹಿತರಕ್ಷಣಾ ಸಮಿತಿಯ ಸಹಯೋಗದಲ್ಲಿ ಸ್ವಚ್ಚ ಹಾಗೂ ಆರೋಗ್ಯ ದೀಪಾವಳಿ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಆಯೋಜಿಸಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಿ ನಾವೆಲ್ಲರೂ ಆರೋಗ್ಯವಾಗಿ ಇರಬೇಕು ಎಂದರು.
ಈ ಕಾರ್ಯಕ್ರಮಕ್ಕೆ ವಿಶೇಷವಾಗಿ ನಮ್ಮ ಬಡಾವಣೆಗೆ ಪ್ರತಿ ದಿನ ಸ್ವಚ್ಚ ಸೇವೆ ನೀಡುವ ಪೌರಕಾರ್ಮಿಕರು ಆಹ್ವಾನಿತರು ಎಲ್ಲಾ ತರಹದ ಇನ್ಫೆಕ್ಷನ್’ಗಳಿಗೆ ಮೊದಲು ಗುರಿಯಾಗುವವರೆ ಅವರು. ಅವರಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ಔಷಧಿ ನೀಡಿ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಹಾಗೂ ಈ ಬಗ್ಗೆ ತಿಳಿಸುವುದು ನಮ್ಮ ಜವಾಬ್ದಾರಿ ಎಂದು ತಿಳಿಸಿದರು.

ವಿಶ್ವ ಹಿಂದೂ ಪರಿಷತ್ ಕಾರ್ಯದರ್ಶಿ ಮಧುಶಂಕರ್, ನಿರ್ದೇಶಕರಾದ ಶುಭಾ ಅರುಣ್, ಪೂಜಾ, ಉಪಾಧ್ಯಕ್ಷ ರಾಮಕೃಷ್ಣ, ನಾಗಭೂಷಣ ಆಚಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಶ್ರೀರಾಂಪುರದ ಮೂಕಾಂಬಿಕಾ ಸಮೃದ್ದಿ ಬಡಾವಣೆಯಲ್ಲಿ ವಿಶ್ವ ಹಿಂದೂ ಪರಿಷತ್, ಮೂಕಾಂಬಿಕಾ ಸಮೃದ್ದಿ ಬಡಾವಣೆ ನಿವಾಸಿಗಳ ಹಿತರಕ್ಷಣ ಸಮಿತಿ, ಕೂಡ್ಲೂರು ಗುಂಡಪ್ಪ ಪ್ರತಿಷ್ಠಾನ ದ ವತಿಯಿಂದ ಮಾತಾ ಅಮೃತಾ ಕೃಪಾ ಆಸ್ಪತ್ರೆ ಆಶ್ರಯದಲ್ಲಿ ಸ್ವಚ್ಚ ಹಾಗೂ ಆರೋಗ್ಯ ದೀಪಾವಳಿ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗಿತ್ತು.
ಶಿಬಿರದಲ್ಲಿ ರಕ್ತದೊತ್ತಡ, ಮಧುಮೇಹ, ಹೃದಯ ಸಂಬಂಧಿ, ಥೈರಾರ್ಡ್, ಸ್ತನ ಕ್ಯಾನ್ಸರ್ ಹಾಗೂ ಗರ್ಭಕೋಶ ಕ್ಯಾನ್ಸರ್ ಸೇರಿದಂತೆ ಹಲವಾರು ಆರೋಗ್ಯ ತಪಾಸಣೆಯನ್ನು ಮಾಡಲಾಯಿತು. ಮಾತಾ ಅಮೃತಾ ಕೃಪಾ ಆಸ್ಪತ್ರೆಯ ಸುಸಜ್ಜಿತ ಚಲಿಸುವ ಆಸ್ಪತ್ರೆ ವಾಹನದೊಳಗೆ ಇಸಿಜಿ, ಎಕ್ಸ್ ರೇ, ಸ್ಕ್ಯಾನಿಂಗ್ ಸೇರಿದಂತೆ ಹಲವಾರು ರಕ್ತ ಪರೀಕ್ಷೆಗಳನ್ನು ಉಚಿತವಾಗಿ ಮಾಡಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news







Discussion about this post