No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Saturday, April 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಮೈಸೂರು | ಸುಂದರ ಸಂಜೆಗೆ “ಭಾರತೀಯತೆಯ” ಕಳೆ: ನಗರದಲ್ಲಿ ಗಾಂಧರ್ವ ಲೋಕ ಸೃಷ್ಟಿಸಿದ ವಿದ್ಯಾರ್ಥಿಗಳು

ಕಾಶ್ಮೀರದಲ್ಲಿ ನಮ್ಮ ಗಡಿಗಳನ್ನು ರಕ್ಷಿಸುತ್ತಿರುವ ವೀರಯೋಧರಿಗೆ ನೃತ್ಯ ರೂಪಕದ ಮೂಲಕ ವಂದನೆ- ಅಭಿವಂದನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 7, 2024
in ಮೈಸೂರು
0
ಮೈಸೂರು | ಸುಂದರ ಸಂಜೆಗೆ “ಭಾರತೀಯತೆಯ” ಕಳೆ: ನಗರದಲ್ಲಿ ಗಾಂಧರ್ವ ಲೋಕ ಸೃಷ್ಟಿಸಿದ ವಿದ್ಯಾರ್ಥಿಗಳು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಭಾನುವಾರ ಗೋಧೂಳಿ ಸಮಯ. ನಗರದ ಆಗಸದಿಂದ ಇನ್ನೇನು ಸೂರ್ಯ ಮುಳುಗುತ್ತಿದ್ದಾನೆ… ಅಮಾವಾಸ್ಯೆಯ ಕತ್ತಲು ಆವರಿಸುತ್ತಿದೆ ಅನ್ನುವ ಕ್ಷಣದಲ್ಲಿ, ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ಘಟಿಕೋತ್ಸವ ಭವನದಲ್ಲಿ ಹೊಸದೊಂದು ಗಾಂಧರ್ವ ಲೋಕ ಸೃಷ್ಟಿಯಾಗುತ್ತಿತ್ತು. ಮುಂದಿನ ಎರಡು ಗಂಟೆಗಳ ಕಾಲ ಅಲ್ಲಿ ಮಿನಿ ಭಾರತೀಯ ಸಾಂಸ್ಕೃತಿಕ ಮಾಯಾಲೋಕವೊಂದು ಸೃಷ್ಟಿಯಾಗಿತ್ತು.

ನಗರದ ಪೂರ್ಣ ಚೇತನ ಶಾಲೆಯ ಪೂರ್ವ ಪ್ರಾಥಮಿಕದಿಂದಿಡಿದು, ಹತ್ತನೇ ತರಗತಿಯವರೆಗಿನ ಸುಮಾರು 550 ವಿದ್ಯಾರ್ಥಿಗಳು ಅಲ್ಲಿ ನೃತ್ಯಗಳ ಮೂಲಕವೇ ಮಾಯಾ ಲೋಕವೊಂದನ್ನು ಸೃಷ್ಟಿಸಿದ್ದರು. ಯಾವುದೇ ವಿರಾಮವಿಲ್ಲದೆ, ಎರಡು ಗಂಟೆಗಳ ಕಾಲ ಸತತವಾಗಿ, ಹಿಮಾಲಯದಲ್ಲಿ ಹುಟ್ಟಿ, ಈ ನೆಲವನ್ನು ಪಾವನಗೊಳಿಸುವ ಗಂಗೆಯ ಪ್ರವಾಹದಂತೆ, ಪಶ್ಚಿಮ ಘಟ್ಟದಲ್ಲಿ ಹುಟ್ಟಿ ಝರಿಗಳಲ್ಲಿ ಹರಿಯುತ್ತಾ ಬಯಲು ಪ್ರದೇಶದಲ್ಲಿ ಗಂಭೀರವದನೆಯಾಗಿ ಸಾಗುವ ತುಂಗೆಯಂತೆ, ವಿದ್ಯಾರ್ಥಿಗಳು ಈ ನೆಲದ ಹೆಮ್ಮೆಯ ನೃತ್ಯಗಳನ್ನು, ಪ್ರತಿ ಭಾರತೀಯರು ಎದೆ ಉಬ್ಬಿಸಿ ಹೆಮ್ಮೆ ಪಡುವಂತೆ ಪ್ರದರ್ಶಿಸಿದರು. ಮಕ್ಕಳ ನೃತ್ಯ ಪ್ರದರ್ಶನ ಕೊನೆಗೊಳ್ಳುತ್ತಿದ್ದಂತೆ, ಮಾರ್ಧನಿಸಿದ ಪ್ರೇಕ್ಷಕರ ಚಪ್ಪಾಳೆ, ಭಾರತ್ ಮಾತಾಕಿ ಜೈ ಅನ್ನುವ ಘೋಷಣೆಗಳು ಪ್ರತಿಯೊಬ್ಬರಲ್ಲೂ ವಿದ್ಯುತ್ ಸಂಚಾರವಾದಂತಹ ಅನುಭವ ನೀಡಿತು.

ಈ ಎಲ್ಲಾ ಪ್ರದರ್ಶನಗಳಿಗೂ ಕಿರೀಟ ಸದೃಶದಂತೆ ವಿದ್ಯಾರ್ಥಿಗಳು ಪ್ರಸ್ತುತ ಪಡಿಸಿದ ಕಾಶ್ಮೀರದಲ್ಲಿ ಈ ನಾಡಿನ ಮಣ್ಣಿನ ರಕ್ಷಣೆಗೆ ಜೀವ ತ್ಯಾಗಗೈಯುವ ವೀರ ಯೋಧರ ಬಲಿದಾನದ ಸಾಹಸ ಗಾಥೆ ಎಲ್ಲೆಡೆ ವಂದೇ ಮಾತರಂ ಘೋಷಣೆ ಪ್ರತಿಧ್ವನಿಸುವಂತೆ ಮಾಡಿತು.


ಅಮರನಾಥಯಾತ್ರೆಯ ಸಂದರ್ಭದಲ್ಲಿ ಭಯೋತ್ಪಾದಕರ ದಾಳಿಯ ಕತೆಯ ಎಳೆಯ ಈ ನೃತ್ಯ ರೂಪಕ ನಮ್ಮ ವೀರ ಸೈನಿಕರ ಸಾಹಸ, ತ್ಯಾಗ, ಅಪ್ರತಿಮ ವೀರ ಸಂಕಲ್ಪಕ್ಕೆ ನಮ್ಮೆಲ್ಲರ ಕೃತಜ್ಞತೆಯಾಗಿತ್ತು. ಪಾಕ್ ಪ್ರೇರಿತ ಭಯೋತ್ಪಾದಕರ ಹುಟ್ಟಡಗಿಸುತ್ತಾ, ಅಪ್ರತಿಮ ಸಾಹಸ ತೋರುವ ಸೈನಿಕರಿಗೆ ಮಕ್ಕಳೆಲ್ಲಾ ವೀರ ವಂದನೆ ಸಲ್ಲಿಸಿದ ಕ್ಷಣ ಅಲ್ಲೊಂದು ದೇಶಾಭಿಮಾನದ ವಾತಾವರಣ ಸೃಷ್ಟಿಸಿತು. ಈ ನೃತ್ಯ ರೂಪಕ ಅಲ್ಲಿ ನೆರೆದಿದ್ದ ಪ್ರತಿಯೊಬ್ಬರಲ್ಲಿಯೂ ಕಣ್ಣೀರು ಜಿನುಗುವಂತೆ ಮಾಡಿತ್ತು.

ಈಶಾನ್ಯ ಭಾರತದ ಪ್ರಸಿದ್ಧ ಬಿದಿರು ನೃತ್ಯ, ಕರ್ನಾಟಕದ ಪಿಳಿ ನಲಿಕೆ, ವೀರಗಾಸೆ, ಕೋಲಾಟ, ಡೊಳ್ಳು ಕುಣಿತ, ಜಾರ್ಖಂಡ್‌ನ ಪೈಕಾ, ಲಡಾಕ್‌ನ ಕಥೋಕ್ ಚೆನ್ಮೋ , ಮಧ್ಯಪ್ರದೇಶದ ಮಟ್ಕಿ, ನಾಗಾಲ್ಯಾಂಡ್ ರಾಜ್ಯದ ಚಾಂಗ್ ಲೂ, ಹಿಮಾಚಲ ಪ್ರದೇಶದ ನಾತಿ, ತ್ರಿಪುರಾದ ಹೊಜಗಿರಿ ಹೀಗೆ ಮೈಸೂರಿನ ನೃತ್ಯಪ್ರಿಯರಿಗೆ ಅಪರಿಚಿತವಾದ ಸುಮಾರು 36 ಬಗೆಯ ನೃತ್ಯಗಳನ್ನು ವಿದ್ಯಾರ್ಥಿಗಳು ಪ್ರದರ್ಶಿಸಿದರು. ಎಳೆಯ ಮಕ್ಕಳು ತಮ್ಮ ಮುಖ ಭಾವ, ವಾದ್ಯ -ತಾಳಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುತ್ತಾ, ವೈವಿಧ್ಯತೆಯಲ್ಲಿ ಏಕತೆಯ ಸಂದೇಶ ಸಾರಿದರು.

Also read: ತೀರ್ಥಹಳ್ಳಿ | ಮಾತ್ರೆ ತಿಂದ ಕಾಲೇಜು ವಿದ್ಯಾರ್ಥಿಗಳು ಅಸ್ವಸ್ಥ | ಕಾರಣವಾದರೂ ಏನು?

ಪೂರ್ಣ ಚೇತನ ಶಾಲೆಯ ಅಧ್ಯಕ್ಷ ಡಾ. ವಿದ್ಯಾಸಾಗರ್ ಪ್ರಕಾರ, ಈ ನೃತ್ಯಗಳು ಹಾಗು ನೃತ್ಯ ರೂಪಕದ ಮೂಲಕ ವಿಶ್ವದಾಖಲೆ ಸೃಷ್ಟಿಸಿದ ಪ್ರಯತ್ನದ ಹಿಂದಿನ ಮೂಲ ಉದ್ದೇಶ ನಮ್ಮ ಮುಂದಿನ ಪೀಳಿಗೆಗೆ ಈ ದೇಶದ ಶ್ರೇಷ್ಠತೆ, ಪರಂಪರೆ, ಹಾಗು ತಾಯ್ನಾಡಿಗಾಗಿ ತ್ಯಾಗದ ಸಂದೇಶ ರವಾನೆ.

“ಈಶಾನ್ಯ ಭಾರತದ ನೃತ್ಯ ಪ್ರಕಾರಗಳು ದಕ್ಷಿಣ ಭಾರತೀಯರಿಗೆ ಇನ್ನು ಪೂರ್ಣವಾಗಿ ಪರಿಚಯವಾಗಿಲ್ಲ. ಅದಕ್ಕೆ ಬೇಕಾದ ಉಡುಗೆ-ತೊಡುಗೆಗಳು ಇಲ್ಲಿ ದೊರಕುವುದಿಲ್ಲ. ನೃತ್ಯ ಸಂಯೋಜನೆ ಕೂಡಾ ತೀರಾ ಹೊಸತು. ಇದರ ಎಲ್ಲಾ ಜವಾಬ್ದಾರಿಗಳನ್ನು ನಾವೇ ವಹಿಸಿಕೊಂಡು ಈ ಹೊಸ ಪ್ರಯತ್ನ ಮಾಡಿದೆವು,” ಎಂದು ಶಾಲೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ ದರ್ಶನ್ ರಾಜ್ ತಿಳಿಸಿದರು.

ಖ್ಯಾತ ಕಲಾವಿದೆಯೂ ಆಗಿರುವ ಶಾಲೆಯ ಮುಖ್ಯ ಆಡಳಿತಾಧಿಕಾರಿ ಮಾಧುರ್ಯ ರಾಮಸ್ವಾಮಿ ಮಾತನಾಡಿ ಎಳವೆಯಲ್ಲೇ ದೇಶ ಸೇವೆಯ ಪ್ರೇರೇಪಣೆಯನ್ನು ನಮ್ಮ ಮಕ್ಕಳಿಗೆ ನೀಡುವುದು ನಮ್ಮ ಪ್ರಮುಖ ಗುರಿ ಎಂದು ತಿಳಿಸಿದರು.
ಎಲೈಟ್ ವರ್ಲ್ಡ್ ರೆಕಾರ್ಡ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಲು ಥಿನ್ ಪೋಹ್ ಟಾಯ್ ವನ್ ಚಿಂಗ್ ಮಾತನಾಡಿ ಇಂತಹ ಒಂದು ಪ್ರಯತ್ನವನ್ನು ತಾವು ಎಲ್ಲಿಯೂ ಇಂದಿನವರೆಗೆ ನೋಡಿಲ್ಲ. ವಿದ್ಯಾರ್ಥಿಗಳ ಪ್ರದರ್ಶನ ಒಂದು ಅನನ್ಯ ಸಾಧನೆ ಎಂದು ಬಣ್ಣಿಸಿದರು.

ಎಲೈಟ್ ವರ್ಲ್ಡ್ ರೆಕಾರ್ಡ್ಸ್, ಸಿಂಗಾಪುರದ ತೀರ್ಪುಗಾರ್ತಿ ಶ್ರೀಮತಿ ಟಾಯ್ ವಾನ್ ಚಿಂಗ್, ಎಲೈಟ್ ವರ್ಲ್ಡ್ ರೆಕಾರ್ಡ್ಸ್ ರಾಯಭಾರಿ ಮತ್ತು ಹಿರಿಯ ತೀರ್ಪುಗಾರ್ತಿ ಅಮೀತ್ ಕೆ ಹಿಂಗೋರಾಣಿ, ಏಷ್ಯನ್ ರೆಕಾರ್ಡ್ಸ್ ಅಕಾಡೆಮಿಯ ರಾಯಭಾರಿ ಮತ್ತು ಹಿರಿಯ ತೀರ್ಪುಗಾರ ಡಾ.ಎ.ಕೆ. ಸೆಂಥಿಲ್ ಕುಮಾರ್, ಇಂಡಿಯಾ ರೆಕಾರ್ಡ್ಸ್ ಅಕಾಡೆಮಿ ರೆಕಾರ್ಡ್ಸ್ ಮ್ಯಾನೇಜರ್ ಕೆ.ಆರ್. ವೆಂಕಟೇಶ್ವರನ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಶಾಲೆಗೆ ವಿಶ್ವದಾಖಲೆಯ ಪ್ರಮಾಣ ಪತ್ರ ವಿತರಿಸಿ, ಅಭಿನಂದಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      

Tags: Kannada News WebsiteKannada_NewsKannada_News_LiveKannada_News_OnlineKannada_WebsiteLatest News KannadamysoreNews_in_KannadaNews_Kannadaಮೈಸೂರು
Share198Tweet123Send
Previous Post

ತೀರ್ಥಹಳ್ಳಿ | ಮಾತ್ರೆ ತಿಂದ ಕಾಲೇಜು ವಿದ್ಯಾರ್ಥಿಗಳು ಅಸ್ವಸ್ಥ | ಕಾರಣವಾದರೂ ಏನು?

Next Post

Students of Purna Chetana school students pays a tribute to Indian soldiers through a ballet

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮೈಸೂರು | ಸುಂದರ ಸಂಜೆಗೆ “ಭಾರತೀಯತೆಯ” ಕಳೆ: ನಗರದಲ್ಲಿ ಗಾಂಧರ್ವ ಲೋಕ ಸೃಷ್ಟಿಸಿದ ವಿದ್ಯಾರ್ಥಿಗಳು

Students of Purna Chetana school students pays a tribute to Indian soldiers through a ballet

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಅಡಿಕೆ ತೋಟದಲ್ಲಿ ಔಷಧಿ ಸಿಂಪಡಣೆ ಮಾಡುತ್ತಿದ್ದ ಕಾರ್ಮಿಕ ಸಾವು

ಗಂಟಲಲ್ಲಿ ಆಹಾರ ಸಿಲುಕಿಕೊಂಡು ಯುವಕ ಸಾವು

April 18, 2026
ಲೋಕಸಭೆ, ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಸ್ವಾಗತಾರ್ಹ: ಲಕ್ಷ್ಮೀದೇವಿ ಗೋಪಿನಾಥ್

ಲೋಕಸಭೆ, ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಸ್ವಾಗತಾರ್ಹ: ಲಕ್ಷ್ಮೀದೇವಿ ಗೋಪಿನಾಥ್

April 17, 2026
ಮೈಸೂರು ರೈಲ್ವೆ ನಿಲ್ದಾಣಕ್ಕೆ ವಿಕಲಾಂಗ ಕುರ್ಚಿ, ನೀರಿನ ಮಡಕೆಗಳ ಕೊಡುಗೆ

ಮೈಸೂರು ರೈಲ್ವೆ ನಿಲ್ದಾಣಕ್ಕೆ ವಿಕಲಾಂಗ ಕುರ್ಚಿ, ನೀರಿನ ಮಡಕೆಗಳ ಕೊಡುಗೆ

April 17, 2026
ಮಳೆಗಾಲ ಆರಂಭಕ್ಕೂ ಮುನ್ನ ಸಮಸ್ಯೆ ಸರಿಪಡಿಸಿ: ಅಧಿಕಾರಿಗಳಿಗೆ ಶಾಸಕ ಚನ್ನಬಸಪ್ಪ ತಾಕೀತು

ಮಳೆಗಾಲ ಆರಂಭಕ್ಕೂ ಮುನ್ನ ಸಮಸ್ಯೆ ಸರಿಪಡಿಸಿ: ಅಧಿಕಾರಿಗಳಿಗೆ ಶಾಸಕ ಚನ್ನಬಸಪ್ಪ ತಾಕೀತು

April 17, 2026
ಯೋಗೀಶ್ ಹತ್ಯೆ ಪ್ರಕರಣ | ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

ಯೋಗೀಶ್ ಹತ್ಯೆ ಪ್ರಕರಣ | ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

April 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL