ಕಲ್ಪ ಮೀಡಿಯಾ ಹೌಸ್ | ಮೈಸೂರು |
ಶ್ರೀರಾಂಪುರ ಪಟ್ಟಣ ಪಂಚಾಯ್ತಿ ವ್ಯಾಪ್ತಿಯಲ್ಲಿರುವ ಮೂಕಾಂಬಿಕಾ ಸಮೃದ್ಧಿ ಬಡಾವಣೆಯಲ್ಲಿ ವನಮಹೋತ್ಸವವನ್ನು ಆಚರಿಸಿ, ಸುಮಾರು 30ಕ್ಕೂ ಅಧಿಕ ಬಗೆಯ ಸಸಿಗಳನ್ನು ನೆಟ್ಟು ಪರಿಸರ ಉಳಿವಿಗೆ ಹೆಜ್ಜೆಯಿರಿಸಲಾಯಿತು.
ಈ ವೇಳೆ ಮಾತನಾಡಿದ ಪ್ರೊ.ಪಿ.ಟಿ. ಮಹೇಶಪ್ಪ, ಗಿಡಗಳನ್ನು ನೆಟ್ಟು ಪರಿಸರ ಕಾಪಾಡುವುದು ನಮ್ಮ ಜವಾಬ್ದಾರಿ. ಅದರ ಭಾಗವಾಗಿ ಮುಖ್ಯಾಧಿಕಾರಿ ಶ್ರೀಧರ್ ಅವರು ನಮ್ಮ ಬಡಾವಣೆಯನ್ನು ಗಿಡ ಮರಗಳಿಂದ ಸಮೃದ್ದಿ ಗೊಳಿಸಲು ಈಗಾಗಲೇ 15 ಗಿಡಗಳನ್ನು ನೀಡಿದ್ದು, ಅದೆಲ್ಲವೂ ಈಗಾಗಲೇ ಬೆಳೆದಿದೆ ಎಂದರು.
ಮೂಕಾಂಬಿಕಾ ಸಮೃದ್ದಿ ಬಡಾವಣೆಯ ನಿವಾಸಿಗಳ ಹಿತರಕ್ಷಣ ಸಮಿತಿಯ ಪ್ರಧಾನ ಕಾರ್ಯದರ್ಶಿ ಪುನೀತ್ ಜಿ ಮಾತನಾಡಿ, ಮೈಸೂರಿನ ನಮ್ಮಂತಹ ಸಣ್ಣ ಸಣ್ಣ ಬಡಾವಣೆಗಳನ್ನು ಪರಿಗಣಿಸಿ ಶ್ರೀರಾಂಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸಹಕರಿಸುವುದು ಮುಖ್ಯಾಧಿಕಾರಿಗಳ ಕಾರ್ಯಕ್ಷಮತೆಗೆ ಸಾಕ್ಷಿಯಾಗಿದೆ ಎಂದರು.
Also read: ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವ ಮೂಲಕ ಉದ್ಯಮ ಕ್ಷೇತ್ರದ ಆರೋಗ್ಯಕರ ಪ್ರಗತಿಗೆ ಮುಂದಾಗಿ: ಸಿಎಂ ಸಿದ್ಧರಾಮಯ್ಯ ಕರೆ
ಮೂಕಾಂಬಿಕಾ ಸಮೃದ್ದಿ ಬಡಾವಣೆ ನಿವಾಸಿಗಳ ಹಿತರಕ್ಷಣ ಸಮಿತಿಯು ಶ್ರೀರಾಂಪುರ ಪಟ್ಟಣ ಪಂಚಾಯ್ತಿ ಸಹಭಾಗಿತ್ವದಲ್ಲಿ ವನಮಹೋತ್ಸವ ಆಚರಿಸಲಾಯಿತು.
ಮೂಕಾಂಬಿಕಾ ಸಮೃದ್ದಿ ಬಡಾವಣೆಯ ಉದ್ಯಾನವನದಲ್ಲಿ ಹಲಸು, ಮಾವು, ಅಘನಾಶಿನಿ, ಬಿಲ್ವಪತ್ರೆ , ನೇರಳೆ, ಸಂಪಿಗೆ ಸೇರಿದಂತೆ ಸುಮಾರು 30ಕ್ಕೂ ಹೆಚ್ಚು ಗಿಡಗಳನ್ನು ಮೈಸೂರು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕರಾದ ಪ್ರೊ.ಮಹೇಶಪ್ಪ ಪಿ.ಟಿ. ಅವರ ಮಾರ್ಗದರ್ಶನದಲ್ಲಿ ನೆಡಲಾಯಿತು.
ಈ ವನಮಹೋತ್ಸವಕ್ಕೆ ಶ್ರೀರಾಂಪುರ ಪಟ್ಟಣ ಪಂಚಾಯಿತಿಯ ಮುಖ್ಯ ಅಧಿಕಾರಿ ಶ್ರೀಧರ್, ಆರೋಗ್ಯಾಧಿಕಾರಿ ಪರಮೇಶ್ವರ್ ಹಾಜರಿದ್ದರು.
ಮೂಕಾಂಬಿಕಾ ಸಮೃದ್ದಿ ಬಡಾವಣೆಯ ನಿವಾಸಿಗಳ ಹಿತರಕ್ಷಣ ಸಮಿತಿಯ ಅಧ್ಯಕ್ಷರಾದ ಗಣೇಶ್, ಉಪಾಧ್ಯಕ್ಷ ರಾಮಕೃಷ್ಣ, ಕಾರ್ಯದರ್ಶಿ ನಾಗಭೂಷಣ ಆಚಾರ್, ಖಜಾಂಚಿಗಳಾದ ನಾಗರಾಜ್, ನಿರ್ದೇಶಕರಾದ ಮಹೇಶಪ್ಪ ಪಿ.ಟಿ. ಯಶ್ವಂತ್, ನೀತು, ಪೃಥು ಪಿ. ಅದ್ವೈತ್, ಪುಟ್ಟರಾಜು, ಬಸವರಾಜು ಹಾಗೂ ಪಟ್ಟಣ ಪಂಚಾಯ್ತಿ ಸಿಬ್ಬಂದಿಗಳು ಹಾಜರಿದ್ದರು.
(ವರದಿ: ಪುನೀತ್ ಜಿ. ಕೂಡ್ಲೂರು, ಮೈಸೂರು)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post