No Result
View All Result
Naija Hegde’s Inspiring Rise to Success
English Articles

From Coast to Glory: Naija Hegde’s Inspiring Rise to Success

by ಕಲ್ಪ ನ್ಯೂಸ್
June 21, 2026
0

Kalpa Media House  |  Special Article by Satish Shetty Cherkady  | Certain achievements do not merely bring happiness; they move...

Read moreDetails
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

Periodicity of Bhubaneswar–Yesvantpur Special Train Extended

June 19, 2026
Blood Donation Camp Successfully Organised at Mysuru Division

Blood Donation Camp Successfully Organised at Mysuru Division

June 16, 2026
yoga | Participate online

India Launches Worldwide Campaign for International Day of Yoga 2026

June 13, 2026
  • Advertise With Us
  • Grievances
  • About Us
  • Contact Us
Monday, June 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಕರ್ನಾಟಕ ಪೊಲೀಸ್ ಅಧಿಕಾರಿಗಳಿಗೆ ಎನ್‌ಡಿಎ ಮಾದರಿಯಲ್ಲಿ  ತರಬೇತಿ: ಸಚಿವ ಬಸವರಾಜ ಬೊಮ್ಮಾಯಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 15, 2021
in ಮೈಸೂರು
0
ಕೇರಳದಿಂದ ಬಂದವರಿಂದ ಮಂಗಳೂರಿನಲ್ಲಿ ಹಿಂಸಾಚಾರ: ಗೃಹ ಸಚಿವ

File Photo

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಮೈಸೂರು: ಆಡಳಿತಾತ್ಮಕ ಸುಧಾರಣೆಗೆ ಎಲ್ಲರೂ ಕಾಲಕ್ಕೆ ತಕ್ಕಂತೆ ಬದಲಾಗಬೇಕು.‌ ಈ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳಿಗೆ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ (NDA) ಮಾದರಿಯಲ್ಲಿ ಅತ್ಯುತ್ತಮ ಗುಣಮಟ್ಟದ ತರಬೇತಿ ನೀಡಲು ತೀರ್ಮಾನಿಸಲಾಗಿದೆ ಎಂದು ಗೃಹ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ್ ಬೊಮ್ಮಾಯಿ ತಿಳಿಸಿದರು.

ಮೈಸೂರಿನ ಕರ್ನಾಟಕ ಪೊಲೀಸ್ ಅಕಾಡೆಮಿ ಆವರಣದಲ್ಲಿ ಏರ್ಪಡಿಸಲಾಗಿದ್ದ 35ನೇ ಪ್ರೊಬೆಷನರಿ ಪೋಲೀಸ್ ಉಪ ಅಧೀಕ್ಷಕರು ಹಾಗೂ ಅಬಕಾರಿ ಉಪ ಅಧೀಕ್ಷಕರು ಮತ್ತು 43 ಮೇ ತಂಡದ ಪ್ರೊಬೇಶನರಿ ಪೊಲೀಸ್ ಉಪ ನಿರೀಕ್ಷಕರ ನಿರ್ಗಮನ ಪಥಸಂಚಲನ ಕಾರ್ಯಕ್ರಮದಲ್ಲಿ ಪ್ರಶಿಕ್ಷಣಾರ್ಥಿಗಳಿಂದ ಗೌರವ ವಂದನೆ ಸ್ವೀಕರಿಸಿ ಅವರು ಮಾತನಾಡಿದರು.

ಪೊಲೀಸ್ ಸೇವೆಯಲ್ಲಿ ಇರುವವರಿಗೆ ವಿಶೇಷ ಹಾಗೂ ರೆಫ್ರೇಶರ್ ತರಬೇತಿಯನ್ನು ನೀಡಲಾಗುವುದು. ಬದಲಾದ ಸನ್ನಿವೇಶದಲ್ಲಿ ಪೊಲೀಸ್ ಅಧಿಕಾರಿಗಳು ಉತ್ತಮ ಆಡಳಿತಗಾರ ಆಗಬೇಕು. ಈ ಹಿನ್ನೆಲೆಯಲ್ಲಿ ತರಬೇತಿ ಸ್ವರೂಪ ಬದಲಾಗಬೇಕು. ಹೀಗಾಗಿ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ನೀಡುವ ತರಬೇತಿಯ ಮಾದರಿಯಲ್ಲಿಯೇ ರಾಜ್ಯದ ಪೊಲೀಸ್ ಅಧಿಕಾರಿಗಳಿಗೂ ತರಬೇತಿ ನೀಡಲಾಗುವುದು ಎಂದು ಅವರು ಹೇಳಿದರು.

ತರಬೇತಿ ಪಠ್ಯಕ್ರಮ ಬದಲಾವಣೆಗೆ ಸಮೀತಿ ರಚನೆ
ಇತ್ತೀಚಿಗೆ ಅಪರಾಧ ಕೃತ್ಯಕ್ಕೆ ತಂತ್ರಜ್ಞಾನ ಮತ್ತು ತಂತ್ರಾಂಶ ಬಳಕೆ ಹೆಚ್ಚಾಗುತ್ತಿದೆ. ಸೈಬರ್ ಕ್ರೈಮ್ ಮೂಲಕ ಆರ್ಥಿಕ ಅಪರಾಧಗಳು ಹೆಚ್ಚುತ್ತಿವೆ. ಆಧುನಿಕ ತಂತ್ರಜ್ಞಾನ ದಿಂದ ಮಹಿಳೆ ಮತ್ತು ಮಕ್ಕಳ ಮೇಲೆ ದೌರ್ಜನ್ಯ ಮಾಡಲಾಗುತ್ತಿದೆ. ಹೀಗಾಗಿ ಆಧುನಿಕ ಅಪರಾಧಕ್ಕೆ ನಮ್ಮ ಪೊಲೀಸರು ತಕ್ಕ ಉತ್ತರ ನೀಡಬೇಕಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರಿಗೆ ಈಗ ನೀಡಲಾಗುತ್ತಿರುವ ತರಬೇತಿ ಕಾರ್ಯಕ್ರಮ ಮತ್ತು ಪಠ್ಯಕ್ರಮದಲ್ಲಿ ಆಮೂಲಾಗ್ರ ಬದಲಾವಣೆ ಆಗಬೇಕಾಗಿದೆ. ಈ ಸಂಬಂಧ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಜೊತೆ ಮಾಡಿದ್ದೇನೆ. ಇದಕ್ಕಾಗಿ ತರಬೇತಿ ವಿಭಾಗದ ಎಡಿಜಿಪಿ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗುವುದು. ಇದಕ್ಕಾಗಿ ಪರಿಣಿತರನ್ನು ಸಮಿತಿಯೊಂದಿಗೆ ಜೋಡಣೆ ಮಾಡಲಾಗುವುದು. ಮೂರು ತಿಂಗಳಲ್ಲಿ ಸಮಿತಿ ತನ್ನ ವರದಿಯನ್ನು ನೀಡಲಿದೆ. ಆ ವರದಿಯ ಶಿಫಾರಸುಗಳನ್ನು ಆಧಾರವಾಗಿಟ್ಟುಕೊಂಡು ತರಬೇತಿ ಕಾರ್ಯಕ್ರಮಗಳಿಗೆ ಆಧುನಿಕ ಸ್ಪರ್ಶ ನೀಡಲಾಗುವುದು ಬಸವರಾಜ ಬೊಮ್ಮಾಯಿ ವಿವರಿಸಿದರು.

ಸಾಧನೆ ಯಶಸ್ಸಿಗಿಂತ ದೊಡ್ಡದು. ಸಾವಿನ ನಂತರವೂ ಬದುಕುವುದು ಸಾಧನೆ. ಪೊಲೀಸರಿಗೆ ವಿಶೇಷ ಅಧಿಕಾರವಿದೆ. ಅಧಿಕಾರವನ್ನು ನಿಮ್ಮ ವಿವೇಚನೆಗೆ ಸದುಪಯೋಗ ಮಾಡಿಕೊಂಡು ಸಮಾಜಕ್ಕೆ ಒಳ್ಳೆಯದಾಗುವ ಕೆಲಸ ಮಾಡಿ ಎಂದು ಶಿಬಿರಾರ್ಥಿಗಳಿಗೆ ಅವರು ಕರೆ ನೀಡಿದರು.

ನ್ಯಾಯವೇ ನನ್ನ ತಂದೆ. ಸತ್ಯವೇ ನನ್ನ ತಾಯಿ. ಕಾನೂನು ಪರಿಪಾಲಿಸುವುದೇ ನನ್ನ ಗುರಿ ಎಂದು ಕರ್ತವ್ಯ ನಿರ್ವಹಿಸಿ. ಯಾವುದೇ ರೀತಿಯ ಗೊಂದಲ ಇಲ್ಲದೆ ನ್ಯಾಯ ಪರವಾಗಿ ಕೆಲಸ ನಿರ್ವಹಿಸಿ. ಆದರೆ ಅನ್ಯಾಯಕ್ಕೊಳಗಾದವರ ಬಗ್ಗೆ ದಾಕ್ಷಿಣ್ಯ ಇರಲಿ ಎಂದು ಪ್ರಶಿಕ್ಷಣಾರ್ಥಿಗಳಿಗೆ ಬಸವರಾಜ ಬೊಮ್ಮಾಯಿ ಕಿವಿಮಾತು ಹೇಳಿದರು.

ನಮ್ಮ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗ ಪೊಲೀಸ್ ಇಲಾಖೆಯಲ್ಲಿ ಒಟ್ಟು 27 ಸಾವಿರ ಹುದ್ದೆಗಳು ಖಾಲಿ ಇದ್ದವು. ಕಳೆದ ಎರಡು ವರ್ಷಗಳ ಅವಧಿಯಲ್ಲಿ 14000 ಪೊಲೀಸ್ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಮುಂದಿನ ಎರಡು ವರ್ಷಗಳ ಅವಧಿಯಲ್ಲಿ ಖಾಲಿ ಇರುವ ಎಲ್ಲಾ 13000 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು

ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ ಸೂದ್, ಕರ್ನಾಟಕ ಪೊಲೀಸ್ ಅಕಾಡೆಮಿ ನಿರ್ದೇಶಕ ವಿಪುಲ್ ಕುಮಾರ್, ತರಬೇತಿ ವಿಭಾಗದ ಪ್ರಭಾರ ಎಡಿಜಿಪಿ ಹರಿಶೇಖರನ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteKarnataka PoliceLatest News KannadaMinister Basavaraja BommaimysoreNDANews in KannadaNews KannadaState Newsಎನ್‌ಡಿಎಕರ್ನಾಟಕ ಪೊಲೀಸ್ಮೈಸೂರುಸಚಿವ ಬಸವರಾಜ ಬೊಮ್ಮಾಯಿ
Share202Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಸ್ತೆಯ ಪಕ್ಕದಲ್ಲೇ ಅವಧಿ ಮೀರಿರುವ ಚಾಕ್ಲೇಟ್ ರಾಶಿ: ಸ್ಥಳೀಯರಿಂದ ನಗರಸಭೆಗೆ ದೂರು

Next Post

ಹೊಸಪೇಟೆ: ಪ್ರವೇಶ ಶುಲ್ಕ ಹೆಚ್ಚಳ ಹಿನ್ನೆಲೆ: ಖಾಸಗಿ ಶಾಲೆ ವಿರುದ್ಧ ಪೋಷಕರ ಪ್ರತಿಭಟನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಹೊಸಪೇಟೆ: ಪ್ರವೇಶ ಶುಲ್ಕ ಹೆಚ್ಚಳ ಹಿನ್ನೆಲೆ: ಖಾಸಗಿ ಶಾಲೆ ವಿರುದ್ಧ ಪೋಷಕರ ಪ್ರತಿಭಟನೆ

ಹೊಸಪೇಟೆ: ಪ್ರವೇಶ ಶುಲ್ಕ ಹೆಚ್ಚಳ ಹಿನ್ನೆಲೆ: ಖಾಸಗಿ ಶಾಲೆ ವಿರುದ್ಧ ಪೋಷಕರ ಪ್ರತಿಭಟನೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
B Y Raghavendra Yoga Day

ದೇಹ – ಮನಸ್ಸನ್ನು ಸದೃಢಗೊಳಿಸಲು ಯೋಗ ಸಹಕಾರಿ | ಸಂಸದ ರಾಘವೇಂದ್ರ ಅಭಿಮತ

June 22, 2026
ಮುಸಲ್ಮಾನ ಗೂಂಡಾಗಳಿಗೆ ಕಾಂಗ್ರೆಸ್ ಸರ್ಕಾರ ಬೆಂಬಲ ನೀಡುತ್ತಿರುವುದೇ ಗಲಭೆಗೆ ಕಾರಣ | ಈಶ್ವರಪ್ಪ ಕಿಡಿ

ಭಕ್ತಿಯನ್ನು ರಾಜಕೀಯಕ್ಕೆ ಬಳಸುವುದು ಮಹಾ ಪಾಪ: ಮಾಜಿ ಡಿಸಿಎಂ ಈಶ್ವರಪ್ಪ

June 22, 2026
ಮಂಗಳೂರು: ಲಾರಿಗೆ ಬೈಕ್ ಡಿಕ್ಕಿ – ಯುವಕ ಸ್ಥಳದಲ್ಲೇ ಸಾವು

ಮಂಗಳೂರು: ಲಾರಿಗೆ ಬೈಕ್ ಡಿಕ್ಕಿ – ಯುವಕ ಸ್ಥಳದಲ್ಲೇ ಸಾವು

June 22, 2026
ನನ್ನ 32 ಎಕರೆ ಜಮೀನು ಕೊಡ್ತೀನಿ, ಸರ್ಕಾರ ಟೌನ್ ಶಿಪ್ ಕೈಬಿಡುತ್ತಾ?  ನಿಖಿಲ್ ಕುಮಾರಸ್ವಾಮಿ ಪ್ರಶ್ನೆ

ನನ್ನ 32 ಎಕರೆ ಜಮೀನು ಕೊಡ್ತೀನಿ, ಸರ್ಕಾರ ಟೌನ್ ಶಿಪ್ ಕೈಬಿಡುತ್ತಾ?  ನಿಖಿಲ್ ಕುಮಾರಸ್ವಾಮಿ ಪ್ರಶ್ನೆ

June 22, 2026
ಶಿವಮೊಗ್ಗ | ಕಾರ್ಖಾನೆಗೆ ಬಂತು ನಕಲಿ ಇಮೇಲ್ | ನಂಬಿದ ಮ್ಯಾನೇಜರ್ ಕಳೆದುಕೊಂಡಿದ್ದು ಎಷ್ಟು ಹಣ?

ತೀರ್ಥಹಳ್ಳಿ | ಕೇರಳ ಲಾಟರಿ ಹೆಸರಿನಲ್ಲಿ ಸೈಬರ್ ವಂಚನೆ, ₹1.99 ಲಕ್ಷ ವಂಚನೆ

June 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL