Sunday, June 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಮೈಸೂರು

ಸನಾತನ ಯೋಗ ವಿದ್ಯೆ, ಧ್ಯಾನ ಕ್ರಿಯೆಗೆ ವಿಶ್ವ ಮಾನ್ಯತೆಯಿದೆ: ಬಾದರಾಯಣಾಚಾರ್ಯ ಅಭಿಮತ

ಭಾಗವತ ವಿಶ್ವಮಾನ್ಯ ಗ್ರಂಥ | ನಮ್ಮ ಹಿರಿಯರು ತಂತ್ರಜ್ಞಾನವೇ ಇಲ್ಲದೇ ದೇಹದ ಅನಾಟಮಿ ಅರಿತಿದ್ದರು

December 28, 2022
in ಮೈಸೂರು
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಮೈಸೂರು  |  ಸಾರ ಸಂಗ್ರಹ: ರಘುರಾಮ  |

ಶ್ರೀಮದ್ ಭಾಗವತ ಕೇವಲ ಪಂಡಿತರ ಅಧ್ಯಯನ ಗ್ರಂಥವಲ್ಲ, ಅದು ವಿಶ್ವದ ಪ್ರತಿಯೊಬ್ಬರ ಬದುಕನ್ನು ಸಮಗ್ರವಾಗಿ ಸಾರ್ಥಕ್ಯಗೊಳಿಸುವ ಮಹೋನ್ನತ ಕೃತಿಯಾಗಿದೆ ಎಂದು ಪಂಡಿತ ಬಾದರಾಯಣಾಚಾರ್ಯ ಹೇಳಿದರು.

ಅವರು ಚಾಮರಾಜ ಜೋಡಿರಸ್ತೆ ವೆಂಕಟಾಚಲಧಾಮ ಆವರಣದ `ಪೂರ್ಣಪ್ರಜ್ಞ’ದಲ್ಲಿ ಭಾಗವತ ಪ್ರವಚನ ಸಪ್ತಾಹದಲ್ಲಿ ಬುಧವಾರ ಮಾತನಾಡಿದರು.

ಭಾಗವತ ಗ್ರಂಥ ದೇಹ, ಮಹತ್ತು, ಮನಸ್ಸುಗಳ ಆರೋಗ್ಯದ ಬಗ್ಗೆ ಸಮಗ್ರವಾಗಿ ಹೇಳಿದೆ. ಜೀವಿತವಾಗಿ ಇರುವಷ್ಟು ದಿನ ಸ್ವಧರ್ಮ ಆಚರಿಸಿ. ಪರ ಧರ್ಮದ ಕಡೆಗೆ ಯಾವತ್ತೂ ನೋಡದಿರಿ. ಮಿತವಾದ, ಮೇಧ್ಯವಾದ ಆಹಾರಗಳನ್ನೇ ಸೇವಿಸಿ. ಸದಾ ಸುಖಾಸನದಲ್ಲೇ ಕೂಡಿ, ಪ್ರಾಣಾಯಾಮ ಮತ್ತು ಧ್ಯಾನಗಳನ್ನು ಅನುಷ್ಠಾನ ಮಾಡಿಕೊಳ್ಳಿ ಎಂಬುದನ್ನು ತಿಳಿಸಿದೆ ಎಂದರು.
ನಮ್ಮ ಇಂದ್ರಿಯಗಳೆಲ್ಲವೂ ಹೊರಮುಖಿಯಾಗಿವೆ. ಅವೆಲ್ಲವೂ ಸದಾ ಹೊರಗಿನ ಪ್ರಪಂಚವನ್ನೇ ನೋಡುತ್ತಾ ಬಹಿರ್ಮುಖಿ ಆಗಿರುತ್ತವೆ. ಹೇಗೆ ಒಂದು ಆಮೆ ತನ್ನ ಎಲ್ಲ ಇಂದ್ರಿಯಗಳನ್ನು ಒಳಗೆ ಎಳೆದುಕೊಂಡು ಸುರಕ್ಷಿತವಾಗಿರುವುದೋ ಹಾಗೆ ನಾವು ನಮ್ಮ ಇಂದ್ರಿಯಗಳನ್ನು ನಿಗ್ರಹ ಮಾಡಿಕೊಂಡು ಅಂತರ್ಮುಖಿಗಳಾಗಬೇಕು. ಜ್ಞಾನಿಯಾದವನು ಮಾತ್ರ ಈ ಸಾಧನೆ ಮಾಡಲು ಸಾಧ್ಯ. ಹಾಗಾಗಿ ನಾವು ಸದಾ ಅಪರೋಕ್ಷ ಜ್ಞಾನದ ಕಡೆ ಮುಖ ಮಾಡಬೇಕು ಎಂಬುದನ್ನು ಭಾಗವತ ಹೇಳಿದೆ ಎಂದರು.

ಭಾರತೀಯರು ಸಾವಿರಾರು ವರ್ಷಗಳಿಂದ ಯೋಗ ಸಾಧಕರಾಗಿಯೇ ಇದ್ದಾರೆ. ಯಾವುದೇ ಸ್ಕಾನಿಂಗ್ ಇಲ್ಲದೇ, ಎಂಆರ್‌ಐ ನಂತರ ಆಧುನಿಕ ತಂತ್ರಜ್ಞಾನದ ಪರೀಕ್ಷಾ ಯಂತ್ರಗಳಿಲ್ಲದೇ ನಮ್ಮವರು ಇಡೀ ದೇಹದ ಅನಾಟಮಿಯನ್ನು ಅರಿತಿದ್ದರು. ಹಾಗಾಗಿಯೇ ಸನಾತನ ಭಾರತೀಯ ಮೂಲದ ಯೋಗ ವಿದ್ಯೆ ಮತ್ತು ಧ್ಯಾನ ಕ್ರಿಯೆಗಳಿಗೆ ವಿಶ್ವ ಮಾನ್ಯತೆ ಇದೆ ಇದೆ ಎಂದು ಪಂಡಿತ ಬಾದರಾಯಣಾಚಾರ್ಯರು ಹೇಳಿದರು.

ಯೋಗ ಮತ್ತು ಧ್ಯಾನ ಎಂದು ನೆನಪಿಸಿಕೊಂಡರೆ ನಮ್ಮ ಯತಿವರೇಣ್ಯರು ಕಣ್ಣೆದುರು ಬರುತ್ತಾರೆ. ಪ್ರತಿ ನಿತ್ಯದ ಧ್ಯಾನದಿಂದ ಜೀವನವು ಹೇಗೆ ವಿಶೇಷ ಸಾಧನೆಗಳಿಗೆ ಸ್ಪಂದಿಸುತ್ತದೆ ಎಂಬುದನ್ನು ಶ್ರೀ ಸತ್ಯನಾಥ ತೀರ್ಥರು, ಶ್ರೀ ವಿಷ್ಣುತೀರ್ಥರು ಸಾಧಿಸಿ ತೋರಿಸಿದ್ದಾರೆ. ಗೀತೆ ಹೇಳಿದ ಯೋಗ ಮಾರ್ಗದಲ್ಲಿ ಇವರು ಮಹತ್ವದ ಹೆಜ್ಜೆಗಳನ್ನು ಇರಿಸಿ ನಮಗೆ ಮಾರ್ಗದರ್ಶಿಯಾಗಿದ್ದಾರೆ ಎಂದು ಬಾದರಾಯಣಾಚಾರ್ಯರು ಸಾಂದರ್ಭಿಕವಾಗಿ ಉಲ್ಲೇಖಿಸಿದರು.

ದೇವಹೂತಿಯ ಕತೆಯನ್ನು ವಿವರಿಸಿದ ಆಚಾರ್ಯರು, `ಮೌನ’ ದ ಅಭ್ಯಾಸ ಮಾಡಿಕೊಳ್ಳುವುದು ಆತ್ಮಸೈರ್ಯ ಹೆಚ್ಚಿಸುತ್ತದೆ ಎಂದರು. ಉಪವಾಸ, ವನವಾಸ, ಕಷ್ಟ ಸಹಿಷ್ಣುತೆಗಳನ್ನು ನಾವು ಭಾಗವತದಿಂದ ಕಲಿಯಬೇಕು ಎಂದರು.
ಖಿನ್ನತೆಗೆ ಒಳಗಾಗದಿರಿ
ಇಂದಿನ ವಿದ್ಯಾರ್ಥಿಗಳು, ಯುವಕರು ಸಣ್ಣಪುಟ್ಟ ಸಂಗತಿಗಳನ್ನು ಎದುರಿಸಲಾಗದೇ ಖಿನ್ನತೆಗೆ ಒಳಗಾಗುತ್ತಿದ್ದಾರೆ. ಅದನ್ನೂ ಮೀರಿ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಇದು ಅತ್ಯಂತ ಖೇದನೀಯ ಸಂಗತಿ. ಬದುಕನ್ನು ಎದುರಿಸುವ ಸಾಮರ್ಥ್ಯ ಮಾತೆಯಿಂದ, ಮನೆಯಿಂದ ಮತ್ತು ಪುರಾಣ ಗ್ರಂಥಗಳಿಂದ ಕಲಿಯಬೇಕು. ಯಾರಿಗೆ ಈ ಸಂಸ್ಕಾರ, ಸಂಸ್ಕೃತಿ ಇಲ್ಲವೋ ಅವರು ಬದುಕನ್ನು ಹಾಳು ಮಾಡಿಕೊಳ್ಳುತ್ತಿರುವುದನ್ನು ನಾವು ನೋಡುತ್ತಿದ್ದೇವೆ. ಇಂತಹಾ ಸಂದರ್ಭದಲ್ಲಿ ಭಾಗವತ ನಮ್ಮ ಬದುಕನ್ನು ಸಮರ್ಥವಾಗಿ ಕಟ್ಟಿಕೊಡುವ ನಿಟ್ಟಿನಲ್ಲಿ ಮಹದುಪಕಾರ ಮಾಡುವ ಮಹೋನ್ನತ ಗ್ರಂಥವಾಗಿದೆ ಎಂದರು.

ಹಿರಿಯರ ತಪ್ಪುಗಳನ್ನೂ ತಿದ್ದಿ
ದಕ್ಷ ಪ್ರಜಾಪತಿ, ಉಮಾದೇವಿ ಮತ್ತು ರುದ್ರದೇವರ ಕಥಾ ಪ್ರಸಂಗ ವಿವರಿಸಿದ ಆಚಾರ್ಯರು (ದಕ್ಷಯಜ್ಞದ ಸಂದರ್ಭ) ಹಿರಿಯರು ತಪ್ಪು ಮಾಡಿದರೂ ಅದನ್ನು ಸಹನೆ ಮಾಡುವ ಗುಣ ರೂಢಿಸಿಕೊಳ್ಳಬೇಕು. ತಿತಿಕ್ಷಾ ಗುಣ ನಮ್ಮನ್ನು ಎತ್ತರಕ್ಕೆ ಬೆಳೆಸುತ್ತದೆ. ಒಂದು ಪಕ್ಷ ಹಿರಿಯರು ತಪ್ಪು ಮಾಡಿದರೂ ಅದನ್ನು ಸೂಕ್ತವಾಗಿ ತಿದ್ದಿ ಹೇಳಬೇಕು ಎಂದು ಭಾಗವತ ಸಂದೇಶ ನೀಡಿದೆ ಎಂದರು.
ಧ್ರುವನಂತಹ ಮಕ್ಕಳು ಜನಿಸಲಿ
ಉತ್ಥಾನಪಾದ ರಾಜ, ಆತನ ಪತ್ನಿಯರಾದ ಸುರುಚಿ ಮತ್ತು ಸುನೀತಿಯರ ಕಥಾನಕವನ್ನು ಸೋದಾಹರಣವಾಗಿ ವಿವರಿಸಿದ ಬಾದರಾಯಣಾಚಾರ್ಯರು, ನಾವು ಬದುಕಿನಲ್ಲಿ ನೀತಿ (ಸುನೀತಿ)ಗೆ ಬೆಲೆ ಕೊಟ್ಟರೆ `ಧ್ರುವ’ ನಂತಹಾ ಸಾಧಕ ಮಕ್ಕಳನ್ನು ಪಡೆಯಬಹುದು ಎಂದರು. ಅವರು ದೇವರನ್ನು ಕಂಡು, ದೇಶವನ್ನು ಆಳಿ, ವಿಶ್ವಖ್ಯಾತರಾಗಿ ಮುಂದೆ ಮೋಕ್ಷಕ್ಕೂ ಅರ್ಹರಾಗುತ್ತಾರೆ. ನಾವು ರುಚಿ (ಸುರುಚಿ)ಗೆ ಮಾರುಹೋದರೆ ಕೇವಲ `ಉತ್ತಮ’ ಮಕ್ಕಳು ಜನಿಸುತ್ತಾರೆ. ಆಯ್ಕೆಯನ್ನು ಭಾಗವತ ನಮಗೆ ಬಿಟ್ಟಿದೆ ಎಂದರು.

ನಂತರ ಪೃಥು ಮಹಾರಾಜನ ಕಥೆಯನ್ನು ಸೋದಾಹರಣವಾಗಿ ವಿವರಿಸಿದರು. ಕುಟುಂಬದ ಪ್ರತಿಯೊಬ್ಬ ಹಿರಿಯರು, ಯಜಮಾನರು ಪೃಥುವಿನಂತೆ ಇರಬೇಕು. ಪ್ರತಿ ಗೃಹವೂ ಧರ್ಮಾಚರಣೆಗಳ ಆಲಯವಾಗಬೇಕು. ಆಗ ರಾಮರಾಜ್ಯ ನಿರ್ಮಾಣವಾಗುತ್ತದೆ ಎಂದು ಭಾಗವತ ಹೇಳಿದೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Bhagavata PravachanaBhagavata PuranaDhyanaKannada News WebsiteLatest News KannadameditationmysorePandit BadarayanacharyaYogaಧ್ಯಾನಪಂಡಿತ ಬಾದರಾಯಣಾಚಾರ್ಯಪೂರ್ಣಪ್ರಜ್ಞ'ಭಾಗವತ ಪ್ರವಚನಮೈಸೂರುಯೋಗಶ್ರೀಮದ್ ಭಾಗವತ
Previous Post

ಸಾರಿಗೆ ಬಸ್-ಕಾರು ಮುಖಾಮುಖಿ ಢಿಕ್ಕಿ: ಇಬ್ಬರು ಸಾವು, ನಾಲ್ವರಿಗೆ ಗಾಯ

Next Post

ಸದೃಢ ಆರೋಗ್ಯವಂತ ಯುವ ಸಮುದಾಯ ನಿರ್ಮಾಣ ನಮ್ಮೆಲ್ಲರ ಗುರಿ: ಸಂಸದ ರಾಘವೇಂದ್ರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
File Image

ಸದೃಢ ಆರೋಗ್ಯವಂತ ಯುವ ಸಮುದಾಯ ನಿರ್ಮಾಣ ನಮ್ಮೆಲ್ಲರ ಗುರಿ: ಸಂಸದ ರಾಘವೇಂದ್ರ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

May 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!