No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Saturday, September 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಸರ್ಕಾರದ ಆಡಳಿತದಲ್ಲಿ ಸಿಎಂ ಕುಟುಂಬದವರ ಹಸ್ತಕ್ಷೇಪ ಇಲ್ಲ: ಸಚಿವ ಎಸ್‌.ಟಿ.ಸೋಮಶೇಖರ್

kalpa News by kalpa News
April 5, 2021
in ಮೈಸೂರು
0
ಸಹಕಾರ ಇಲಾಖೆಗಳಲ್ಲಿ ಹಣ ದುರುಪಯೋಗ ಮಾಡಿದವರ ವಿರುದ್ಧ ಕ್ರಿಮಿನಲ್ ಕೇಸ್

File Photo

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಮೈಸೂರು: ಸರ್ಕಾರದ ಆಡಳಿತದಲ್ಲಿ ಮುಖ್ಯಮಂತ್ರಿಗಳ ಕುಟುಂಬದವರ ಹಸ್ತಕ್ಷೇಪವಿಲ್ಲ. ಇದು ಸತ್ಯಕ್ಕೆ ದೂರವಾದ ಮಾತು ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್‌.ಟಿ‌.ಸೋಮಶೇಖರ್ ಅವರು ಹೇಳಿದರು‌.

ಸೋಮವಾರ ಮೈಸೂರಿನ ರೈಲ್ವೆ ನಿಲ್ದಾಣದ ಬಳಿ ಮಾಜಿ ಉಪ ಪ್ರಧಾನ ಮಂತ್ರಿಗಳಾದ ದಿವಂಗತ ಡಾ.ಬಾಬು ಜಗಜೀವನರಾಂ ಅವರ ಜನ್ಮದಿನೋತ್ಸವದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಸಚಿವರು ಮಾತನಾಡಿದರು.
ಕೆಲವರು ಮುಖ್ಯಮಂತ್ರಿ ಅವರ ಪುತ್ರ ವಿಜಯೇಂದ್ರ ಅವರ ಹೆಸರೇಳಿ ರಾಜಕೀಯ ಬೇಳೆ ಬೆಯಿಸಿಕೊಳ್ಳುತ್ತಿದ್ದಾರೆ. ಸರ್ಕಾರದಲ್ಲಿ ಮಂತ್ರಿಗಳಿದ್ದೀವಿ, ಜಿಲ್ಲಾಡಳಿತ ಇದೆ, ಶಾಸಕರಿದ್ದಾರೆ, ಆಡಳಿತ ನಡೆಸುವವರಿದ್ದಾರೆ‌. ಆದರೆ ಪದೇ ಪದೇ ಮುಖ್ಯಮಂತ್ರಿ ಅವರ ಕುಟುಂಬದವರನ್ನು ಎಳೆದು ತರುವುದು ಸರಿಯಲ್ಲ ಎಂದು ತಿಳಿಸಿದರು.

ಮುಖ್ಯಮಂತ್ರಿಗಳು ಮಾಡುವ ಒಳ್ಳೆಯ ಕೆಲಸಗಳನ್ನು ವಿರೋಧ ಪಕ್ಷದವರಿಂದ ಹೇಳಲು ಸಾಧ್ಯವಾಗುತ್ತಿಲ್ಲ. ಕೆಲವರು ತಮ್ಮ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ಈ ರೀತಿಯ ಆರೋಪ ಮಾಡುತ್ತಿದ್ದಾರೆ‌. ನಮ್ಮ ಸಹಕಾರ ಇಲಾಖೆಗೂ ಯಾರೂ ಹಸ್ತಕ್ಷೇಪ ಮಾಡಿಲ್ಲ. ಮೈಸೂರು ಉಸ್ತುವಾರಿ ಆಡಳಿತವನ್ನು ಸ್ವತಂತ್ರವಾಗಿ ನಡೆಸಲು ಮುಕ್ತ ಅವಕಾಶವಿದೆ ಎಂದು ಸ್ಪಷ್ಟನೆ ನೀಡಿದರು.
ವಿಜಯೇಂದ್ರ ಅವರು ಪಕ್ಷದಲ್ಲಿ ಉಪಾಧ್ಯಕ್ಷರಾಗಿದ್ದಾರೆ. ಅವರ ಸಲಹೆ ಪಕ್ಷಕ್ಕೆ ಮಾತ್ರ ಸೀಮಿತ. ಸರ್ಕಾರ ನಡೆಸಲು ಮುಖ್ಯಮಂತ್ರಿಗಳು ಸಮರ್ಥರಿದ್ದಾರೆ‌. ನಾಲ್ಕು ಭಾರಿ ಮುಖ್ಯಮಂತ್ರಿಗಳಾಗಿ ಕೆಲಸ ಮಾಡಿದ ಅನುಭವ ಅವರಿಗಿದೆ. ಅವರಿಗೆ ಎಲ್ಲಾ ರೀತಿಯ ನಿರ್ಧಾರ ಕೈಗೊಳ್ಳುವ ಪರಮಾಧಿಕಾರವಿದೆ ಎಂದು ತಿಳಿಸಿದರು.

ಸರ್ಕಾರದ ಆಡಳಿತದಲ್ಲಿ ಹಸ್ತಕ್ಷೇಪ ಎಂಬುದು ವಿರೋಧ ಪಕ್ಷದವರಿಂದ ಮಾತ್ರ ಇದೆ. ರಾಜ್ಯದಲ್ಲಿ ಯಾವಾವ ಮುಖ್ಯಮಂತ್ರಿಗಳ ಕಾಲದಲ್ಲಿ ಯಾರಾರು ಅಧಿಕಾರ ನಡೆಸಿದ್ದಾರೆ ಎಂಬುದು ಕರ್ನಾಟಕದ ಜನತೆಗೂ ಗೊತ್ತಿದೆ. ಸೂಕ್ತ ಸಮಯ ಬಂದಾಗ ನಾವೂ ಕೂಡ ಅದನ್ನೆಲ್ಲ ತಿಳಿಸಲಾಗುವುದು ಎಂದು ಹೇಳಿದರು.

ವಿಧಾನ ಸಭೆ ನಡೆಯುವ ಸಂದರ್ಭದಲ್ಲಿ ಯಾವತ್ತಾದರೂ ಒಂದು ದಿವಸ ವಿರೋಧ ಪಕ್ಷದವರು ರಾಜ್ಯದ ಅಭಿವೃದ್ಧಿ ವಿಚಾರವಾಗಿ ಚರ್ಚಿಸಲಿಲ್ಲ. ಜನರ ಸಮಸ್ಯೆಗಳನ್ನು ಪ್ರಸ್ತಾಪಿಸಲಿಲ್ಲ. ಸಿಡಿ ಪ್ರಕರಣವನ್ನು ಮುಂದಿಟ್ಟುಕೊಂಡು ಕಾಲಾಹರಣ ಮಾಡಿದರು. ವಿಧಾನ ಸಭೆಯಲ್ಲಿ ನಡೆಯುವ ಚರ್ಚೆಯನ್ನು ರಾಜ್ಯದ ಜನರೆಲ್ಲಾ ವೀಕ್ಷಿಸುತ್ತಿರುತ್ತಾರೆ. ಜನರ ಕಷ್ಟ ಸುಖದ ಬಗ್ಗೆ ಮಾತನಾಡದೆ ಪ್ರತಿಭಟನೆ ನಡೆಸಿದರು ಎಂದರು‌.
ಕಾಂಗ್ರೆಸ್ ಶಾಸಕರ ಕ್ಷೇತ್ರಗಳು ಅನುದಾನ ಕೊರತೆ ಮಾಡಲಾಗುತ್ತಿದೆ ಎಂಬ ವಿಷಯ ಕುರಿತು ಮಾತನಾಡಿದ ಸಚಿವರು, ಈ ಆರೋಪದಲ್ಲಿ ಹುರುಳಿಲ್ಲ. ಮುಖ್ಯಮಂತ್ರಿಗಳಿಗೆ ರಾಜ್ಯದ 224 ಕ್ಷೇತ್ರಗಳು ಕೂಡ ಒಂದೆ. ಇದರಲ್ಲಿ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಎಂದು ತಾರತಮ್ಯ ಮಾಡುತ್ತಿಲ್ಲ. ಮುಖ್ಯಮಂತ್ರಿಗಳು ಎಲ್ಲಾ ಕ್ಷೇತ್ರಗಳಿಗೂ ಅನುದಾನ ನೀಡುತ್ತಿದ್ದಾರೆ ಎಂದರು.

ಇತ್ತೀಚಿಗೆ ಮೈಸೂರಿನಲ್ಲಿ ಕೊರೊನಾ ಹೆಚ್ಚು ಹರಡುತ್ತಿರುವ ಸಂಬಂಧ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದೇನೆ. ಕಳೆದ ಬಾರಿಯೂ ಅಧಿಕಾರಿ ಸಭೆ ನಡೆಸಿ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳನ್ನು ಸೂಚಿಸಲಾಗಿತ್ತು. ಈಗಲೂ ಕೂಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಹಾಗೂ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳ ಬಗ್ಗೆ ಚರ್ಚಿಸಲಾಗುವುದು ಎಂದು ತಿಳಿಸಿದರು.

ತಮಿಳುನಾಡಿನ ಚುನಾವಣೆಯಲ್ಲಿ ನನಗೆ ಒಂದು ಕ್ಷೇತ್ರಕ್ಕೆ ಉಸ್ತುವಾರಿ ನೀಡಲಾಗಿತ್ತು. ಅಲ್ಲಿ ಸ್ಪರ್ಧಿಸುತ್ತಿರುವ ಭೋಜರಾಜನ್ ಅವರು ಬಿಜೆಪಿ ಪಕ್ಷದ ಆಕಾಂಕ್ಷೆಯಾಗಿರಲಿಲ್ಲ. ಅಲ್ಲಿನ ಸ್ಥಳೀಯರು, ಎಲ್ಲಾ ಸಮುದಾಯದವರು ಹಾಗೂ ಸಂಘಸಂಸ್ಥೆಗಳು ಸೇರಿ ಅವರನ್ನು ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸಲು ಒತ್ತಾಯಿಸಿದರು. ಅಲ್ಲಿನ ಮತದಾರರ ಸಂಪೂರ್ಣ ಬೆಂಬಲವಿದ್ದು, ನೂರಕ್ಕೆ ನೂರು ಭೋಜರಾಜನ್ ಅವರು 20 ಸಾವಿರ ಮತಗಳ ಅಂತರದಲ್ಲಿ ಗೆಲುವು ಸಾಧಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಊಟಿಯಲ್ಲಿ ಬಹುತೇಕ ಮಂದಿ ಕರ್ನಾಟಕದಿಂದ ವಲಸೆ ಹೋದವರಿದ್ದಾರೆ. ಹಾಸನ, ಮಂಡ್ಯ, ಕೊಲಾರ, ನಾಗಮಂಗಲದವರಿದ್ದು, ಕನ್ನಡದವರೇ ಆಗಿದ್ದಾರೆ. ಅಲ್ಲಿರುವ ಕನ್ನಡಿಗರು ಸಂತೋಷವಾಗಿ ವ್ಯವಸ್ಥಿತ ಬದುಕನ್ನು ನಡೆಸುತ್ತಿದ್ದಾರೆ. ಯಾರೂ ಕೂಡ ತೊಂದರೆ ಅನುಭವಿಸುತ್ತಿದ್ದಾರೆ ಎಂಬ ನಿದರ್ಶನೆವೇ ಇಲ್ಲ ಎಂದು ಮಾಹಿತಿ ನೀಡಿದರು.

ಸಿಡಿ ಪ್ರಕರಣದ ತನಿಖೆ ಮಾಡುತ್ತಿರುವ ಎಸ್‌ಐಟಿ ತಂಡದಲ್ಲಿ ಸಮರ್ಥ ಅಧಿಕಾರಿಗಳಿದ್ದಾರೆ. ಮುಖ್ಯಮಂತ್ರಿಗಳಾಗಲಿ, ಗೃಹಮಂತ್ರಿಗಳಾಗಲೀ ಯಾರೂ ಕೂಡ ಹಸ್ತಕ್ಷೇಪ ಮಾಡುತ್ತಿಲ್ಲ. ಅಧಿಕಾರಿಗಳು ಯಾರ ಹಸ್ತಕ್ಷೇಪಕ್ಕೆ ಒಳಗಾಗದೆ, ನಿಷ್ಪಕ್ಷಪಾತವಾಗಿ ತನಿಖೆ ನಡೆಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: CD CaseCM BS YadiyurappaCM Son VijayendraKannada News WebsiteLatest News KannadamysorePolitical NewsS.T.SomashekarState Newsಎಸ್‌_ಟಿ_ಸೋಮಶೇಖರ್ಮುಖ್ಯಮಂತ್ರಿಮುಖ್ಯಮಂತ್ರಿ ಪುತ್ರ ವಿಜಯೇಂದ್ರಮೈಸೂರುಸಿಡಿ ಪ್ರಕರಣ
Share223Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನಿಮ್ ಪಕ್ಷದಲ್ಲೇ ನಿಮ್ಮನ್ನ ಯಾರೂ ಕೇಳಲ್ಲ, ಇನ್ನು ನನ್ ಬಗ್ಗೆ ಮಾತಾಡ್ತೀರಾ: ಸಿದ್ದರಾಮಯ್ಯ ವಿರುದ್ಧ ಈಶ್ವರಪ್ಪ ವಾಗ್ದಾಳಿ

Next Post

ದೇಶದಲ್ಲಿ ಕೋವಿಡ್-19 ಕೆಟ್ಟದಿಂದ ಅತಿಕೆಟ್ಟ ಪರಿಸ್ಥಿತಿಗೆ: 24 ಗಂಟೆಗಳಲ್ಲಿ 1 ಲಕ್ಷಕ್ಕೂ ಅಧಿಕ ಪ್ರಕರಣ

kalpa News

kalpa News

Next Post
ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು

ದೇಶದಲ್ಲಿ ಕೋವಿಡ್-19 ಕೆಟ್ಟದಿಂದ ಅತಿಕೆಟ್ಟ ಪರಿಸ್ಥಿತಿಗೆ: 24 ಗಂಟೆಗಳಲ್ಲಿ 1 ಲಕ್ಷಕ್ಕೂ ಅಧಿಕ ಪ್ರಕರಣ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL