ಕಲ್ಪ ಮೀಡಿಯಾ ಹೌಸ್ | ಮೈಸೂರು |
ರಾಜ್ಯದ ಇತಿಹಾಸಲ್ಲೇ ಇದೇ ಮೊದಲ ಬಾರಿಗೆ ಐತಿಹಾಸಿಕ ಕ್ಷಣಕ್ಕೆ ನಾಡಹಬ್ಬ ದಸರಾ ಉದ್ಘಾಟನೆ ಸಾಕ್ಷಿಯಾಗಿದ್ದರೆ ರಾಷ್ಟ್ರಪತಿ ದ್ರೌಪದಿ ಮುರ್ಮು President Droupadi Murmu ಅವರಿಗೂ ಸಹ ಜೀವಮಾನದಲ್ಲಿ ಮರೆಯಲಾದ ದಿನ ಇದಾಗಿದೆ.
ಇತ್ತೀಚೆಗಷ್ಟೇ ರಾಷ್ಟ್ರಪತಿಯಾಗಿ ಆಯ್ಕೆಯಾದ ದ್ರೌಪದಿ ಮುರ್ಮು ಅವರು ಅಧಿಕೃತವಾಗಿ ಭೇಟಿ ನೀಡಿರುವ ಮೊದಲ ರಾಜ್ಯ ಕರ್ನಾಟಕ ಆಗಿದ್ದು, ಇದು ಕನ್ನಡಿಗರಿಗೆ ಹೆಮ್ಮೆಯ ವಿಚಾರವಾಗಿದೆ.
ದಸರಾ ಉದ್ಘಾಟನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ದ್ರೌಪದಿ ಮುರ್ಮು ಅವರನ್ನು ಉದ್ಘಾಟನೆಗೆ ಆಹ್ವಾನಿಸಲು ತಿರ್ಮಾನಿಸಿ ಸ್ವತಃ ಮುಖ್ಯಮಂತ್ರಿಗಳು ರಾಷ್ಟ್ರಪತಿಗಳಿಗೆ ಮನವಿ ಮಾಡಿದ್ದರು. ಬೆಳಗ್ಗೆ ಮನವಿ ಮಾಡಿದರೆ ಅಂದು ಸಂಜೆಯೇ ಅತ್ಯಂತ ಸಂತಸದಿಂದ ಬರುವುದಾಗಿ ರಾಷ್ಟ್ರಪತಿಗಳು ಒಪ್ಪಿಕೊಂಡಿದ್ದರು.
ನಾವು ರಾಷ್ಟ್ರಪತಿಯಾದ ನಂತರ ಭೇಟಿ ನೀಡುತ್ತಿರುವ ಅಧಿಕೃತ ಭೇಟಿ ಕರ್ನಾಟಕಕ್ಕೆ ಆಗುತ್ತದೆ. ಅದರಲ್ಲೂ ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸುವ ಅವಕಾಶ ದೊರೆತಿರುವುದು ನನ್ನ ಭಾಗ್ಯ ಖಂಡಿತ ಆಗಮಿಸುತ್ತೇನೆ ಎಂದು ಮುಖ್ಯಮಂತ್ರಿಗಳ ಬಳಿ ಸಂತೋಷ ವ್ಯಕ್ತಪಡಿಸಿದ್ದರು.
ಇದರಂತೆ ಇಂದು ಮೈಸೂರಿಗೆ ಆಗಮಿಸಿ ನಾಡಹಬ್ಬಕ್ಕೆ ಅಧಿಕೃತ ಚಾಲನೆ ನೀಡಿದ್ದಾರೆ. ಈ ಮೂಲಕ ರಾಷ್ಟ್ರಪತಿಯೊಬ್ಬರು ಮೈಸೂರು ದಸರಾ ಉದ್ಘಾಟನೆ ಮಾಡುವಂತಹ ಅಪರೂಪದ ಕ್ಷಣಕ್ಕೆ ಸಾಂಸ್ಕೃತಿಕ ರಾಜಧಾನಿ ಮಾತ್ರವಲ್ಲ ಇಡೀ ರಾಜ್ಯ ಸಾಕ್ಷಿಯಾಗಿದೆ.
Also read: ಮನದೊಳಗಿನ ಮಹಿಷಾಸುರನನ್ನು ಸಂಹಾರ ಮಾಡಿ, ಶ್ರೇಷ್ಠರಾಗೋಣ: ಸಿಎಂ ಬೊಮ್ಮಾಯಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post