ಕಲ್ಪ ಮೀಡಿಯಾ ಹೌಸ್ | ಮೈಸೂರು |
ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಭರತನಾಟ್ಯ ಕ್ಷೇತ್ರದಲ್ಲಿ ನಾಲ್ಕು ದಶಕಗಳಿಂದ ಸುವಿಖ್ಯಾತವಾಗಿರುವ ನೃತ್ಯಾಲಯ ಟ್ರಸ್ಟ್ ಪ್ರದರ್ಶಕ ಕಲೆಗಳ ಅಕಾಡೆಮಿಯು ‘ನಲಿವಿನ ಪಯಣ-45 ’ ಎಂಬ ಹರಿದಾಸ ಸಾಹಿತ್ಯ, ಸಂಗೀತ ನೃತ್ಯ ಸಂಭ್ರಮ ಕಾರ್ಯಕ್ರಮವನ್ನು ಜ. 25ರಂದು ಹಮ್ಮಿಕೊಂಡಿದೆ.
ಮೈಸೂರಿನ ಜೆಎಲ್ಬಿ ರಸ್ತೆಯ ನಾದಬ್ರಹ್ಮ ಸಭಾ ಭವನದಲ್ಲಿ ಆಯೋಜನೆಗೊಂಡಿರುವ ಈ ಕಾರ್ಯಕ್ರಮದಲ್ಲಿ ಜ. 25ರ ಸಂಜೆ 5ಕ್ಕೆ ನೃತ್ಯಾಲಯ ತಂಡದಿಂದ ಹರಿಭಜನೆ, 5.30ಕ್ಕೆ ಹಿರಿಯ ವಿದ್ಯಾರ್ಥಿಗಳಿಂದ ಮುಖಚಾಲಿ ನೃತ್ಯ, 5.30ಕ್ಕೆ ಸಭಾ ಕಾರ್ಯಕ್ರಮವಿದೆ.
ಗಂಗೂಬಾಯಿ ಹಾನಗಲ್ ಸಂಗೀತ ವಿವಿ ಕುಲಪತಿ ಪ್ರೊ. ನಾಗೇಶ ಬೆಟ್ಟಕೋಟೆ, ಖ್ಯಾತ ಭರತನಾಟ್ಯ ಕಲಾವಿದ ಬೆಂಗಳೂರಿನ ವಿದ್ವಾನ್ ಸತ್ಯ ನಾರಾಯಣ ರಾಜು, ಖ್ಯಾತ ವೈದ್ಯೆ ಡಾ, ಪ್ರತಿಭಾ ಪರೇರಾ ಅವರನ್ನು ಸನ್ಮಾನಿಸಲಾಗುವುದು. ಖ್ಯಾತ ಕಲಾವಿದೆ ಮತ್ತು ನೃತ್ಯಾಲಯ ಟ್ರಸ್ಟ್ ಮುಖ್ಯಸ್ಥೆ ಡಾ.ತುಳಸೀ ರಾಮಚಂದ್ರ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಜೆ 6.50ರಿಂದ ಸಂಸ್ಥೆಯ ವಿದ್ಯಾರ್ಥಿನಿಯರಿಂದ ‘ನರ್ತನ ನಿನಾದ’ ಪ್ರಸ್ತುತಿ ಇದೆ.
Also read: ರಸ್ತೆ ಅಪಘಾತ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಸಣ್ಣಪುಟ್ಟ ಗಾಯ
ಶ್ರೀ ರಾಮಕಥಾ ಪ್ರಸ್ತುತಿ:
ಸಂಜೆ 7.30ಕ್ಕೆ ಬೆಂಗಳೂರಿನ ವಿದ್ವಾನ್ ಸತ್ಯನಾರಾಯಣ ರಾಜು ಅವರಿಂದ ‘ಶ್ರೀ ರಾಮಕಥಾ- ವಿಷಯಾಧಾರಿತ ಏಕವ್ಯಕ್ತಿ ಭರತನಾಟ್ಯ ಪ್ರದರ್ಶನವಿದೆ. ಡಾ. ಆರ್.ಕೆ. ಉಷಾ ಅವರ ಪರಿಕಲ್ಪನೆಯಲ್ಲಿ, ವಿದ್ವಾನ್ ಡಿ.ಎಸ್. ಶ್ರೀವತ್ಸ ಅವರ ಸಂಗೀತ ಸಂಯೋಜನೆ ಮತ್ತು ನಟುವಾಂಗ ಸಹಕಾರದಲ್ಲಿ ‘ ಶ್ರೀ ರಾಮಕಥಾ’ ಮೂಡಿಬರಲಿರುವುದು ವಿಶೇಷ. ಆಸಕ್ತರು ಆಗಮಿಸಲು ನೃತ್ಯಾಲಯ ಟ್ರಸ್ಟ್ ಕೋರಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post