ಕಲ್ಪ ಮೀಡಿಯಾ ಹೌಸ್ | ಮೈಸೂರು |
ನೈರುತ್ಯ ರೈಲ್ವೆಯ #SWR ಮೈಸೂರು ವಿಭಾಗವು “ತಾಯಿ ಭೂಮಿಯ ಮುಂದೆ ಇರುವ ಸವಾಲುಗಳು – ಹವಾಮಾನ ಬದಲಾವಣೆ” ಎಂಬ ವಿಷಯದಡಿ ಮೇ 15ರಿಂದ ಜೂನ್ 5ರವರೆಗೆ ಹಮ್ಮಿಕೊಂಡಿದ್ದ #WorldEnvironmentDay ವಿಶ್ವ ಪರಿಸರ ದಿನಾಚರಣೆ–2026 ಅಭಿಯಾನವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ.
ಅಭಿಯಾನಕ್ಕೆ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಮುದಿತ್ ಮಿತ್ತಲ್ ಚಾಲನೆ ನೀಡಿದ್ದು, ಈ ಸಂದರ್ಭದಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಪರಿಸರ ಪ್ರತಿಜ್ಞೆ ಬೋಧಿಸಿದರು.
Also Read>> ಶಿಕಾರಿಪುರ | ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ | ಬಿ.ವೈ. ಉಮಾದೇವಿ
ಮೈಸೂರು, #Davanagere ದಾವಣಗೆರೆ, ಶಿವಮೊಗ್ಗ ಟೌನ್, ಹರಿಹರ, ಅರಸೀಕೆರೆ, ಸಕಲೇಶಪುರ, ಕಬಕ ಪುತ್ತೂರು, #KabakaPuttur ಅಶೋಕಪುರಂ ಸೇರಿದಂತೆ ಹಲವು ಸ್ಥಳಗಳಲ್ಲಿ ವಿವಿಧ ಪರಿಸರ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಯಿತು.
ಅಭಿಯಾನದ ಭಾಗವಾಗಿ ಸ್ವಚ್ಛತಾ ಅಭಿಯಾನಗಳು, ಪ್ಲಾಸ್ಟಿಕ್ ವಿರೋಧಿ ಜಾಗೃತಿ, ಜಾಥಾಗಳು ಹಾಗೂ ಮನೆ ಮನೆಗೆ ಭೇಟಿ ನೀಡಿ ಕಸದ ವಿಂಗಡಣೆ ಮತ್ತು ಸರಿಯಾದ ವಿಲೇವಾರಿ ಕುರಿತು ಜನಜಾಗೃತಿ ಮೂಡಿಸಲಾಯಿತು. ನೀರಿನ ಸಂರಕ್ಷಣೆ ಹಾಗೂ ಪರಿಸರ ಸ್ನೇಹಿ ಜೀವನಶೈಲಿಯನ್ನು ಉತ್ತೇಜಿಸುವ ಕಾರ್ಯಕ್ರಮಗಳು ಘೋಷಣೆಗಳು ಮತ್ತು ಸಾರ್ವಜನಿಕ ಜಾಗೃತಿ ಚಟುವಟಿಕೆಗಳ ಮೂಲಕ ನಡೆದವು.
ಮೈಸೂರು ರೈಲ್ವೆ ವಸ್ತುಸಂಗ್ರಹಾಲಯ, ಲಲಿತಾ ಶಾಲೆ ಹಾಗೂ ಅಶೋಕಪುರಂ ವರ್ಕ್ಶಾಪ್ನಲ್ಲಿ ಚಿತ್ರಕಲೆ, ರೇಖಾಚಿತ್ರ ಮತ್ತು ಪ್ರಶ್ನೋತ್ತರ ಸ್ಪರ್ಧೆಗಳು ಆಯೋಜಿಸಲಾಯಿತು. ಕುಕ್ಕರಹಳ್ಳಿ ಕೆರೆಯ ಬಳಿ ನಡೆದ ನಡಿಗೆ ಜಾಥಾ ಹಾಗೂ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಮೈಸೂರು ರೈಲ್ವೆ ನಿಲ್ದಾಣದಲ್ಲಿ ನಡೆದ ನೂಕಡ್ ನಾಟಕ ಜನರ ಗಮನ ಸೆಳೆಯಿತು.
Also Read>> ಹುಬ್ಬಳ್ಳಿ | ಸಸಿ ನೆಡುವ ಮೂಲಕ ಪರಿಸರ ಸಂರಕ್ಷಣೆಯ ಸಂದೇಶ ಸಾರಿದ ಡಿಆರ್ಎಂ ಬೇಲಾ ಮೀನಾ
ಜೂನ್ 5ರಂದು ಮೈಸೂರು ರೈಲ್ವೆ ಆಸ್ಪತ್ರೆ, ರೈಲ್ವೆ ಮ್ಯೂಸಿಯಂ, ಅಧಿಕಾರಿಗಳ ಕಾಲೊನಿ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಸಸಿ ನೆಡುವ ಕಾರ್ಯಕ್ರಮಗಳು ನಡೆಯಿತು. ಚಾಮುಂಡಿ ಕ್ಲಬ್ನಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಈ ಅಭಿಯಾನದಲ್ಲಿ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸದಸ್ಯರು ಸಕ್ರಿಯವಾಗಿ ಭಾಗವಹಿಸಿದ್ದು, ಪರಿಸರ ಸಂರಕ್ಷಣೆ ಹಾಗೂ ಸುಸ್ಥಿರ ಅಭಿವೃದ್ಧಿಯತ್ತ ಮೈಸೂರು ರೈಲ್ವೆ ವಿಭಾಗದ ಬದ್ಧತೆಯನ್ನು ಪ್ರತಿಬಿಂಬಿಸಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿಸಂಪರ್ಕಿಸಿ: Whatsapp: 9008761663, 9481252093 – info@kalpa.news



















