No Result
View All Result
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ
English Articles

South Western Railway | Praveen Takes Charge as Hubballi Divisional Public Relations Officer

by ಕಲ್ಪ ನ್ಯೂಸ್
March 28, 2026
0

Kalpa Media House  |  Hubballi | S.P. Praveen, an officer of the Indian Railway Service of Signal Engineers (IRSSE), 2015...

Read moreDetails
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?

Critical Condition Turned Around with Timely Medical Intervention

March 27, 2026
Yogada Satsang Society brings out Kannada version on Kriya Yoga today

Yogada Satsang Society brings out Kannada version on Kriya Yoga today

March 25, 2026
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
  • Advertise With Us
  • Grievances
  • About Us
  • Contact Us
Saturday, March 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಮೈಸೂರು | ಸಕಲ ಕಾರ್ಯಕ್ಕೂ ಪ್ರೇರಕ ಶಕ್ತಿ ಶ್ರೀಕೃಷ್ಣ | ಸೋಸಲೆ ವಿದ್ಯಾಶ್ರೀಶ ಶ್ರೀ ಅಭಿಮತ

ಸೋಸಲೆ ಶ್ರೀ ವ್ಯಾಸರಾಜರ ಮಹಾ ಸಂಸ್ಥಾನದಲ್ಲಿ ಗುರುಗಳ ಚಾರ್ತುಮಾಸ್ಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 26, 2024
in ಮೈಸೂರು
0
ಮೈಸೂರು | ಸಕಲ ಕಾರ್ಯಕ್ಕೂ ಪ್ರೇರಕ ಶಕ್ತಿ ಶ್ರೀಕೃಷ್ಣ | ಸೋಸಲೆ ವಿದ್ಯಾಶ್ರೀಶ ಶ್ರೀ ಅಭಿಮತ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಸಕಲ ಕಾರ್ಯಕ್ಕೂ ಶ್ರೀಕೃಷ್ಣನೇ #SriKrishna ಪ್ರೇರಕ ಶಕ್ತಿಯಾಗಿದ್ದಾನೆ ಎಂದು ಸೋಸಲೆ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ ಹೇಳಿದರು.

ಸೋಸಲೆ ಗ್ರಾಮದಲ್ಲಿ 8ನೇ ಚಾತುರ್ಮಾಸ್ಯ ವ್ರತದಲ್ಲಿರುವ ಅವರು ಜನ್ಮಾಷ್ಟಮಿ #KrishnaJanmashtami ಸಂದರ್ಭದಲ್ಲಿ ಸೋಮವಾರ ವಿಶೇಷ ಅನುಗ್ರಹ ಸಂದೇಶ ನೀಡಿದರು.

ಸಕಲ ಕಾರ್ಯಕ್ಕೆ ಪ್ರೇರಕ ಅವನೇ ಆಗಿದ್ದಾನೆ. ಇಡೀ ಲೋಕವೇ ಅವನ ಅಧೀನವಾಗಿದೆ. ಹಾಗಾಗಿ ಸಕಲ ವೇದ, ಉಪನಿಷತ್ತುಗಳು, ಭಾಗವತಾದಿ ಪುರಾಣಗಳು ಅವನನ್ನು ಅನಂತಕೋಟಿ ಬ್ರಹ್ಮಾಂಡ ನಾಯಕ ಎಂದು ವರ್ಣಿಸಿವೆ ಎಂದರು.

ದೇವರ ಅಸಾದೃಶ ಅವತಾರವಾದ ಶ್ರೀಕೃಷ್ಣ ನಿತ್ಯವೂ ನಮ್ಮೆಲ್ಲರ ಹೃದಯದಲ್ಲಿ ನೆಲೆ ನಿಂತು ಉತ್ತಮೋತ್ತಮ ಕಾರ್ಯಗಳಿಗೆ ಪ್ರೇರಣೆ ನೀಡಲಿ ಎಂದರು.
ದಶಾವತಾರಗಳಲ್ಲಿ #Dashavatara ಶ್ರೀ ಕೃಷ್ಣಾವತಾರ ಬಹು ವಿಶೇಷ. ಅವನನ್ನು ಸಂಪೂರ್ಣ ಅರಿತವರು ಯಾರೂ ಇಲ್ಲ. ಆತನನ್ನು ಸೆರೆ ಹಿಡಿಯುವ ಸಾಮರ್ಥ್ಯ ಯಾರಿಗೂ ಬರಲೇ ಇಲ್ಲ. ಹಾಗಾಗಿ ಕೃಷ್ಣನನ್ನು ನಮ್ಮ ನಮ್ಮ ಜ್ಞಾನ, ಅರಿವು ಮತ್ತು ಅಧ್ಯಯನದ ಯೋಗ್ಯತಾನುಸಾರ ತಿಳಿದುಕೊಳ್ಳಲು ಪ್ರಯತ್ನ ಮಾಡಬೇಕು. ಅಲ್ಲಿ ನಮ್ಮ ನಮ್ಮ ಜವಾಬ್ದಾರಿ, ಕರ್ತವ್ಯ ಮತ್ತು ನಾಡಿಗೆ ಸೇವೆ ಸಲ್ಲಿಸಲು ಕಂಕಣಬದ್ಧರಾಗಬೇಕು. ಈ ಪ್ರವೃತ್ತಿಗಳೇ ಇಂದು ಸಮಾಜಕ್ಕೆ ಅತಿ ಮುಖ್ಯವಾಗಿ ಬೇಕಾಗಿರುವುದು ಎಂದು ಶ್ರೀಗಳು ಹೇಳಿದರು.
Also read: ಶಿಮುಲ್ ಚುನಾವಣೆ | ಅಧ್ಯಕ್ಷರಾಗಿ ವಿದ್ಯಾಧರ್, ಉಪಾಧ್ಯಕ್ಷರಾಗಿ ಚೇತನ್ ಆಯ್ಕೆ

ಸಾಮಾನ್ಯ ಗೊಲ್ಲರ ನಡುವೆಯೇ ಗೋಪಾಲಕನಾಗಿ ಬದುಕಿ ತೋರಿಸಿದ ಕೃಷ್ಣ ಅಸಾಮಾನ್ಯ ಶಕ್ತಿಯ ದರ್ಶನವನ್ನೂ ಮಾಡಿಸಿದ. ಸಾಮಾನ್ಯರ ಕರೆಗೆ ಓಗೊಟ್ಟು ಓಡಿ ಬಂದ ಆತ ಒಂದೂ ಶಸ್ತ್ರ ಹಿಡಿಯದೇ ಮಹಾಭಾರತ ಯುದ್ಧದ ಸೂತ್ರಧಾರನಾದ. ಯುದ್ಧ ಭೂಮಿಯಲ್ಲೇ ಭಗವದ್ಗೀತೆ #Bhagavadgeeta ಬೋಧನೆ ಮಾಡಿದ. ಸಂಕಷ್ಟಗಳ ಸಾಗರದ ನಡುವೆಯೇ ನಾವು ಕೊಂಚ ವಿರಾಮ ಪಡೆದು ಸಮಸ್ಯೆಗಳನ್ನು ಯುಕ್ತಿಯಿಂದ ಜಯಿಸಬೇಕು ಎಂಬ ಸಂದೇಶ ಸಾರಿದ್ದಾನೆ ಎಂದು ಸ್ವಾಮೀಜಿ ಹೇಳಿದರು.
ನಿಮ್ಮ ನಿಮ್ಮ ಕರ್ಮಗಳನ್ನು ಶ್ರದ್ಧೆಯಿಂದ ಮಾಡಿ. ಫಲದ ಅಪೇಕ್ಷೆ ನನಗೆ ಬಿಟ್ಟುಬಿಡಿ ಎಂದು ಕೃಷ್ಣ ಲೋಕಕ್ಕೆ ಸಂದೇಶ ನೀಡಿದ. ದುಷ್ಟರ ಸಂಹಾರವನ್ನು ಎಳವೆಯಿಂದಲೇ ಮಾಡಿದ ಕೃಷ್ಣ ಧರ್ಮಸಂರಕ್ಷಣೆಯ ಮಹತ್ವವನ್ನು ಲೋಕಕ್ಕೆ ತಿಳಿಸಿದ್ದಾನೆ. ದ್ರೌಪದಿ ದೇವಿಯ ಮಾನ ಸಂರಕ್ಷಿಸುವ ಮೂಲಕ ಸ್ತ್ರೀಯರನ್ನು ಹೇಗೆ ಗೌರವದಿಂದ ಕಾಣಬೇಕು ಎಂಬ ಸಂದೇಶ ನೀಡಿದ್ದಾನೆ. ಇವೆಲ್ಲವೂ ಎಲ್ಲ ದೇಶ- ಕಾಲಗಳಿಗೆ ಇಂದಿಗೂ ಅನ್ವಯ ಎಂಬುದನ್ನು ಮರೆಯಬಾರದು ಎಂದು ಶ್ರೀಗಳು ಹೇಳಿದರು.

ರಾಧೆಯ ಮನದ ರಮಣನಾದ ಕೃಷ್ಣ, ಬಾಲ್ಯದ ಸಖನಾದ ಸುಧಾಮನ ಮಿತ್ರತ್ವಕ್ಕೆ ಮಾನ್ಯತೆ ನೀಡಿದ. ಏನು ಬೇಡದಿದ್ದದರೂ ಸರ್ವವನ್ನೂ ದಯಪಾಲಿಸಿದ. ಒಬ್ಬ ರಾಜತಾಂತ್ರಿಕ ಹೇಗಿರಬೇಕು ಎಂಬ ಪಾಠವನ್ನೂ ವಿಶ್ವಕ್ಕೆ ಹೇಳಿದ ಕೃಷ್ಣ, ಕೇವಲ ಅವತಾರ ಮಾತ್ರವಾಗದೇ ನಿತ್ಯ ನೂತನನಾಗಿದ್ದಾನೆ ಎಂದು ನುಡಿದರು.

http://kalpa.news/wp-content/uploads/2024/04/VID-20240426-WA0008.mp4

ಅಧರ್ಮ, ಅರಾಜಕತೆ, ಅನ್ಯಾಯದ ಆಡಳಿತಗಳು ಇಂದು ಹಲವೆಡೆ ವಿಜೃಂಭಿಸುತ್ತಿವೆ. ಇಂಥ ಕಾಲಘಟ್ಟದಲ್ಲಿ ಭಗವದ್ಗೀತೆ ನಾಡಿಗೆ ಆದರ್ಶವಾದರೆ ಮಾತ್ರ ನಾವು ಸುಭಿಕ್ಷ ರಾಮರಾಜ್ಯವನ್ನು ಕಾಣಲು ಸಾಧ್ಯ. ಯೌವ್ವನ, ಭೋಗ, ಸಂಪತ್ತು, ಅಧಿಕಾರ, ಪ್ರತಿಷ್ಠೆಗಳನ್ನು ಯಾವಾಗ, ಹೇಗೆ, ಎಷ್ಟು ಅನುಭವಿಸಬೇಕು, ಭವದ ಜೀವನ ಹೇಗೆ ದಾಟಬೇಕು, ಪಾರಮಾರ್ಥಿಕ ಹಾದಿಗೆ ಹೇಗೆ ಮುನ್ನುಗ್ಗಿ ಜೀವನ ಸಾರ್ಥಕ ಮಾಡಿಕೊಳ್ಳಬೇಕು ಎಂಬ ಆದರ್ಶ ಕೃಷ್ಣನಲ್ಲಿ ಇದೆ. ಆದ ಕಾರಣ ಅವನು ಲೋಕಗುರು. ಆತನ ಜಯಂತಿ ವಿಶ್ವಕ್ಕೆ ಹಬ್ಬವಾಗಲಿ ಎಂದು ಸ್ವಾಮೀಜಿ ಆಶಿಸಿದರು. ಮಠದ ವಿದ್ವಾಂಸರು, ಪಂಡಿತರು ಹಾಜರಿದ್ದರು.

ನಂತರ ಸಂಸ್ಥಾನ ಪ್ರತಿಮೆಗಳಿಗೆ ಮತ್ತು ಮೂಲ ಗೋಪಾಲಕೃಷ್ಣ ದೇವರಿಗೆ ವಿಶೇಷ ಪೂಜೆ, ಮಂಗಳಾರತಿ ಸಮರ್ಪಣೆ ಮಾಡಿದರು. ಕೃಷ್ಣನಿಗೆ ಅರ್ಘ್ಯ ಸಮರ್ಪಣೆ ಮಾಡಿದ್ದು ವಿಶೇಷವಾಗಿತ್ತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     
Kalahamsa Infotech private limited

Tags: ChaturmasyaKannada News WebsiteLatest News KannadamysoreSosaleಉಪನಿಷತ್ತುಚಾತುರ್ಮಾಸ್ಯದಶಾವತಾರಭಾಗವತಾದಿ ಪುರಾಣಗಳುಮೈಸೂರುವಿದ್ಯಾಶ್ರೀಶ ತೀರ್ಥ ಸ್ವಾಮೀಜಿವೇದಶ್ರೀ ಕೃಷ್ಣಾವತಾರಶ್ರೀಕೃಷ್ಣಸೋಸಲೆ
Share196Tweet123Send
Previous Post

ಮಿಸ್ ಇಂಡಿಯಾ ಪಟ್ಟಿಯಲ್ಲಿ ಈ ಸಮುದಾಯದವರು ಇಲ್ಲ: ರಾಹುಲ್ ಹೇಳಿಕೆಗೆ ಸಚಿವ ರಿಜಿಜು ಟಕ್ಕರ್

Next Post

ಈಡಿಸ್ ಸೊಳ್ಳೆಗಳಿಗೆ ಖೆಡ್ಡ ತೋಡಲು ಆರೋಗ್ಯ ಇಲಾಖೆ, ಬಿಬಿಎಂಪಿಯ ಮಾಸ್ಟರ್ ಪ್ಲಾನ್ ಹೇಗಿದೆ ನೋಡಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಈಡಿಸ್ ಸೊಳ್ಳೆಗಳಿಗೆ ಖೆಡ್ಡ ತೋಡಲು ಆರೋಗ್ಯ ಇಲಾಖೆ, ಬಿಬಿಎಂಪಿಯ ಮಾಸ್ಟರ್ ಪ್ಲಾನ್ ಹೇಗಿದೆ ನೋಡಿ

ಈಡಿಸ್ ಸೊಳ್ಳೆಗಳಿಗೆ ಖೆಡ್ಡ ತೋಡಲು ಆರೋಗ್ಯ ಇಲಾಖೆ, ಬಿಬಿಎಂಪಿಯ ಮಾಸ್ಟರ್ ಪ್ಲಾನ್ ಹೇಗಿದೆ ನೋಡಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

South Western Railway | Praveen Takes Charge as Hubballi Divisional Public Relations Officer

March 28, 2026
ಶಿವಮೊಗ್ಗ ಜಿಲ್ಲಾ ಪೊಲೀಸ್ | ಮೂವರಿಗೆ ಮುಖ್ಯಮಂತ್ರಿಗಳ ಪದಕ

ಶಿವಮೊಗ್ಗ ಜಿಲ್ಲಾ ಪೊಲೀಸ್ | ಮೂವರಿಗೆ ಮುಖ್ಯಮಂತ್ರಿಗಳ ಪದಕ

March 28, 2026
ಎಲ್ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ₹4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ

ಎಲ್ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ₹4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ

March 28, 2026
ತಂತ್ರಜ್ಞಾನ, ವಿವೇಚನೆಗಳು ಮಾತ್ರ ಜಗತ್ತನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯಲು ಸಾಧ್ಯ: ಬಿ. ವೈ. ವಿಜಯೇಂದ್ರ

ತಂತ್ರಜ್ಞಾನ, ವಿವೇಚನೆಗಳು ಮಾತ್ರ ಜಗತ್ತನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯಲು ಸಾಧ್ಯ: ಬಿ. ವೈ. ವಿಜಯೇಂದ್ರ

March 28, 2026
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

March 28, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL