ಕಲ್ಪ ಮೀಡಿಯಾ ಹೌಸ್ | ಮೈಸೂರು |
ಬದುಕಿನ ಯಾತ್ರೆ ಮುಕ್ತಾಯಗೊಳಿಸಿದ ಅಕ್ಷರ ಮಾಂತ್ರಿಕ ಎಸ್.ಎಲ್. ಭೈರಪ್ಪ #S L Byrappa ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರಗಳೊಂದಿಗೆ ನಡೆದಿದ್ದು, ಪಂಚಭೂತಗಳಲ್ಲಿ ಲೀನರಾದರು.
ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಚಿತಾಗಾರದಲ್ಲಿ ಭೈರಪ್ಪ ಅವರ ಅಂತ್ಯಕ್ರಿಯೆ ಬ್ರಾಹ್ಮಣ ಸಂಪ್ರದಾಯದಂತೆ ನೆರವೇರಿತು. ಭೈರಪ್ಪ ಅವರ ಮಾನಸ ಪುತ್ರಿ ಸಹನಾ ವಿಜಯ್ ಕುಮಾರ್ ಅವರು ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ನಂತರ ಪುತ್ರರು ಅಗ್ನಿಸ್ಪರ್ಶ ಮಾಡಿದರು.
ಭೈರಪ್ಪನವರ ಪಾರ್ಥೀವ ಶರೀರದ ಮೇಲೆ ತ್ರಿವರ್ಣಧ್ವಜ ಹೊದಿಸಿ, ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಸರ್ಕಾರಿ ಗೌರವ ಸಲ್ಲಿಸಲಾಯಿತು. ಇದೇ ವೇಳೆ ಚಿತಾಗಾರದ ಬಳಿಕ ಪೊಲೀಸ್ ತುಕಡಿ ಪೊಲೀಸ್ ಬ್ಯಾಂಡ್ ನಡೆಸಿಕೊಟ್ಟರು. ಬಳಿಕ ಬೈರಪ್ಪ ಪುತ್ತರ ಕೈಗೆ ಪೊಲೀಸರು ರಾಷ್ಟçಧ್ವಜ ಹಸ್ತಾಂತರಿಸಿದರು.
ಈ ಪ್ರಕ್ರಿಯೆ ಮುಗಿದ ಬಳಿಕ ಭೈರಪ್ಪ ಪುತ್ರರಾದ ಉದಯ್ ಶಂಕರ್, ರವಿಶಂಕರ್, ಮಾನಸ ಪುತ್ರಿ ಸಹನಾ ವಿಜಯ್ ಕುಮಾರ್, ತೇಜಸ್ವಿನಿ ಅನಂತ ಕುಮಾರ್ ಅಂತಿಮ ವಿಧಿವಿಧಾನ ನೆರವೇರಿಸಿದರು. ಬಳಿಕ ಇಬ್ಬರು ಪುತ್ರರು ಭೈರಪ್ಪ ಚಿತೆಗೆ ಅಗ್ನಿಸ್ಪರ್ಶ ನೆರವೇರಿಸಿದರು.
ಭೈರಪ್ಪ ಅವರ ಅಂತ್ಯಕ್ರಿಯೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯ ಸಚಿವರಾದ ಎಚ್.ಸಿ. ಮಹದೇವಪ್ಪ, ಕೆ.ವೆಂಕಟೇಶ್, ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿ ಹಲವು ಗಣ್ಯರು ಪಾಲ್ಗೊಂಡಿದ್ದರು.
ಅಂತ್ಯಕ್ರಿಯೆಯ ಹಿನ್ನೆಲೆಯಲ್ಲಿ ಮೈಸೂರು ಎಡಿಸಿ ಶಿವರಾಜು ಅವರ ನೇತೃತ್ವದಲ್ಲಿ ಬಿಗಿ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 






















