No Result
View All Result
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
English Articles

Hennur Sparsh Hospital Completes One Year | A Reflection of Multispecialty Care

by ಕಲ್ಪ ನ್ಯೂಸ್
May 25, 2026
0

Kalpa Media House  |  Bengaluru  | SPARSH Hospital, Hennur Road has completed one year of operations, with its first-year clinical...

Read moreDetails
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
  • Advertise With Us
  • Grievances
  • About Us
  • Contact Us
Wednesday, May 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಯೋಗದಿಂದ ದೈಹಿಕ, ಮಾನಸಿಕ, ಭಾವನಾತ್ಮಕ ಸಮಸ್ಯೆಗೆ ಪರಿಹಾರ | ಡಾ.ಎಚ್.ಎ. ಶಶಿರೇಖಾ ಅಭಿಮತ

ಮೈಸೂರು | ರಾಜ್ಯಮಟ್ಟದ ಮುಕ್ತ ಯೋಗಾಸನ ಸ್ಪರ್ಧೆ | ಶಿವಮೊಗ್ಗಕ್ಕೆ ಹಲವು ಬಹುಮಾನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 1, 2024
in ಮೈಸೂರು
0
ಯೋಗದಿಂದ ದೈಹಿಕ, ಮಾನಸಿಕ, ಭಾವನಾತ್ಮಕ ಸಮಸ್ಯೆಗೆ ಪರಿಹಾರ | ಡಾ.ಎಚ್.ಎ. ಶಶಿರೇಖಾ ಅಭಿಮತ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಮೈಸೂರು ಯೋಗ ಒಕ್ಕೂಟ, ವತಿಯಿಂದ ನಗರದ ಮೈಸೂರು ವಿಶ್ವ ವಿದ್ಯಾಲಯದ ಯೋಗ ಭವನದಲ್ಲಿ ಭಾನುವಾರ ರಾಜ್ಯಮಟ್ಟದ ಮುಕ್ತ ಯೋಗಾಸನ ಸ್ಪರ್ಧೆ ಹಮ್ಮಿಕೊಂಡಿತ್ತು.

ಮೈಸೂರು, ಮಂಡ್ಯ, ಚಾಮರಾಜನಗರ, ಗದಗ, ಬಳ್ಳಾರಿ, ರಾಯಚೂರು, ಹುಬ್ಬಳ್ಳಿ, ದಾವಣಗೆರೆ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ 500ಕ್ಕೂ ಹೆಚ್ಚು ಸ್ಪರ್ಧಿಗಳು ಪಾಲ್ಗೊಂಡಿದ್ದರು.
ಸ್ಪರ್ಧೆಯು 8 ವರ್ಷಕ್ಕಿಂತ ಒಳಗಿನವರು, 8 ರಿಂದ 10 ವರ್ಷ, 11 ರಿಂದ 14 ವರ್ಷ, 15 ರಿಂದ 20 ವರ್ಷ, 21 ರಿಂದ 30 ವರ್ಷ, 31 ರಿಂದ 40 ವರ್ಷ, 41 ರಿಂದ 50 ವರ್ಷ ಹಾಗೂ 50 ವರ್ಷ ಮೇಲ್ಪಟ್ಟವರ ವಿಭಾಗದಲ್ಲಿ ಸ್ಪರ್ಧೆ ಆಯೋಜಿಸಲಾಗಿತ್ತು. ಪ್ರತಿ ವಿಭಾಗದಲ್ಲೂ ಬಾಲಕ, ಬಾಲಕಿ, ಯುವಕ, ಯುವತಿ ಹಾಗೂ ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕ ಬಹುಮಾನ ನೀಡಲಾಯಿತು. ಸೋಲೋ ಆರ್ಟಿಸ್ಟಿಕ್ ಯೋಗಾಸನ ಸ್ಪರ್ಧೆಯಲ್ಲಿ ಬಾಲಕ ಮತ್ತು ಬಾಲಕಿಯರಿಗೆ ಪ್ರತ್ಯೇಕ ವಿಭಾಗದಲ್ಲಿ ಸ್ಪರ್ಧೆ ನಡೆಯಿತು.

ಭಾವನಾತ್ಮಕ, ಸಾಮಾಜಿಕ ಸಮಸ್ಯೆಗಳಿಗೆ ಪರಿಹಾರ
ಮೈಸೂರು ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜಿನ ಸ್ಥಾನಿಕ ವೈದ್ಯಾಧಿಕಾರಿ ಡಾ.ಎಚ್.ಎ. ಶಶಿರೇಖಾ ಮಾತನಾಡಿ, ದೈನಂದಿನ ಜೀವನದಲ್ಲಿ ಯೋಗ ಪ್ರಮುಖ ಪಾತ್ರ ವಹಿಸುತ್ತದೆ. ದೈಹಿಕ ಆರೋಗ್ಯ, ಮಾನಸಿಕ ಆರೋಗ್ಯ, ಸಾಮಾಜಿಕ ಆರೋಗ್ಯ ಸುಸ್ಥಿರತೆಗೆ ಯೋಗ ಅಡಿಪಾಯವಾಗಿದೆ. ಯೋಗದ ಮೊರೆ ಹೋದವರು ದೈಹಿಕ, ಮಾನಸಿಕ, ಭಾವನಾತ್ಮಕ ಹಾಗೂ ಸಾಮಾಜಿಕ ಸಮಸ್ಯೆಗಳಿಗೆ ಪರಿಹಾರ ಕಂಡು ಕೊಂಡಿದ್ದಾರೆ ಎಂದರು.
ಮೈಸೂರು ಅರಸರ ಕೊಡುಗೆ ದೊಡ್ಡದು:
ಯೋಗಗುರು ಡಾ.ಗಣೇಶ್ ಕುಮಾರ್ ಮಾತನಾಡಿ, ಮೈಸೂರು ಅರಸರು ಯೋಗಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ. ಆ ಪರಂಪರೆಯನ್ನು ನಾವು ಮತ್ತಷ್ಟು ಹೆಚ್ಚಿಸಬೇಕಿದೆ. ಒಲಿಂಪಿಕ್ಸ್‌ನಲ್ಲಿ ಯೋಗವನ್ನು ಒಂದು ಕ್ರೀಡೆಯಾಗಿ ಸೇರ್ಪಡೆ ಮಾಡಲಾಗಿದೆ. ಇದರ ಜತೆಗೆ 2036ಕ್ಕೆ ಭಾರತದಲ್ಲಿ ಒಲಿಂಪಿಕ್ಸ್ ಆಯೋಜಿಸಲು ಚಿಂತನೆ ನಡೆಸಲಾಗಿದೆ. ಇದರಲ್ಲಿ ನಮ್ಮ ಯೋಗ ಪಟುಗಳು ಪಾಲ್ಗೊಂಡು ದೇಶದ ಕೀರ್ತಿ ಹೆಚ್ಚಿಸಲು ವಿದ್ಯಾರ್ಥಿಗಳನ್ನು ಅಣಿಗೊಳಿಸಬೇಕಿದೆ ಎಂದು ಸಲಹೆ ನೀಡಿದರು.

ಮೈಸೂರು ಯೋಗ ಒಕ್ಕೂಟದ ಅಧ್ಯಕ್ಷ ಶ್ರೀಹರಿ ಮಾತನಾಡಿ, ಬಲಿಷ್ಠ ಭಾರತಕ್ಕಾಗಿ ಪ್ರತಿಯೊಬ್ಬರೂ ಯೋಗಾಭ್ಯಾಸ ಮಾಡಬೇಕು ಎಂದರು.
ಮಂಡ್ಯ ಜಿಲ್ಲಾ ಕಾರಾಗೃಹ ಅಧೀಕ್ಷಕ ಟಿ.ಕೆ.ಲೋಕೇಶ್ ಮಾತನಾಡಿ, ಕೋಪ ತಾಪದಿಂದ ನಾನಾ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ಕೈದಿಗಳು ಜೈಲಿನಲ್ಲಿ ಬಂಧಿಯಾಗಿದ್ದಾರೆ. ನಮ್ಮಲ್ಲಿ ಅಂಥವರಿಗೆ ನಿತ್ಯ ಯೋಗಾಭ್ಯಾಸ ಮಾಡಿಸಲಾಗುತ್ತಿದೆ. ಇದರಿಂದ ಅವರಲ್ಲಿ ಸಾಕಷ್ಟು ಬದಲಾವಣೆಯಾಗಿದೆ. ಈ ನಿಟ್ಟಿನಲ್ಲಿ ಯೋಗ ಪರಿಣಾಮಕಾರಿಯಾಗಿ ಕೆಲಸ ಮಾಡಿದೆ ಎಂದು ತಿಳಿಸಿದರು.

ಗಣೇಶ್ ಕುಮಾರ್, ಶಶಿರೇಖಾಗೆ ಗುರುವಂದನೆ
ಯೋಗಗುರು ಡಾ.ಗಣೇಶ್ ಕುಮಾರ್ ಹಾಗೂ ಡಾ.ಎಚ್.ಎ.ಶಶಿರೇಖಾ ಅವರಿಗೆ ಶಿಷ್ಯರಿಂದ ಗುರುವಂದನೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಮೈಸೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶಕ ಡಾ.ಸಿ.ವೆಂಕಟೇಶ, ಮೈಸೂರು ಯೋಗ ಒಕ್ಕೂಟದ ಗೌರವಾಧ್ಯಕ್ಷ ಡಾ.ಚಂದ್ರಶೇಖರ್, ಅಧ್ಯಕ್ಷ ಟಿ.ಜಲೇಂದ್ರ ಕುಮಾರ್, ಯೋಗ ಫೆಡರೇಷನ್ ಆಫ್ ಮೈಸೂರಿನ ಕಾರ್ಯದರ್ಶಿ ಶಶಿಕುಮಾರ್, ಯೋಗ ಸ್ಪೋರ್ಟ್ಸ್ ಫೌಂಡೇಷನ್ ಖಜಾಂಚಿ ಎಂ.ಎನ್.ಮೋಹನ್, ರಾಜ್ಯ ಅಮೆಚೂರ್ ಯೋಗ ಅಸೋಸಿಯೇಷನ್ ಉಪಾಧ್ಯಕ್ಷ ಗಿರೀಶ್, ಕಾರ್ಯದರ್ಶಿ ಎ.ನಟರಾಜು, ಬಸವಮಾರ್ಗ ಸಂಸ್ಥೆಯ ಎಸ್.ರಾಜು, ಯೋಗ ಗುರುಗಳಾದ ಗೀತಾ ಕುಮಾರ್, ಪ್ರೇಮ್ ಕುಮಾರ್ ಇತರರು ಇದ್ದರು.
ಶಿವಮೊಗ್ಗಕ್ಕೆ ಹಲವು ಬಹುಮಾನ, ಯೋಗ ಸ್ಪರ್ಧೆ ವಿಜೇತರ ವಿವರ
8 ವರ್ಷದ ಒಳಗಿನ ಬಾಲಕರ ವಿಭಾಗದಲ್ಲಿ ನಗರದ ಎಸ್‌ಜಿಎಸ್ ಯೋಗ ಕೇಂದ್ರದ ರುಚಿತ್ (ಪ್ರಥಮ), ಅದೇ ಕೇಂದ್ರದ ನಿತಿನ್ (ದ್ವಿತೀಯ), ನಗರದ ಚಿರಂತ್ (ತೃತೀಯ), ನಗರದ ಸಹನಾಯೋಗ ಕೇಂದ್ರದ ಪುಣ್ಯವರ್ಧನ್ ಎಸ್. ರಾಜ್, ನಗರದ ಶ್ರೀಕಾರ್ ಬಿ.ದೀಪಕ್, ರಾಘವ್ ಸಮಾಧಾನಕರ ಬಹುಮಾನ ಪಡೆದರು. ಬಾಲಕಿಯರ ವಿಭಾಗದಲ್ಲಿ ಶಿವಮೊಗ್ಗದ ಶ್ರೀ ಗುರುಕುಲ ಯೋಗ ಕೇಂದ್ರದ ಹರ್ಷಾ (ಪ್ರ), ಅದೇ ಕೇಂದ್ರದ ಸನ್ನಿಧಿ (ದ್ವಿ), ಸಮೃದ್ಧಿ (ತೃ), ಮಾರುತಿ ಯೋಗ ಸಾಧನ ಕೇಂದ್ರ ಶರದಿ ಎಸ್.ರಾವ್, ಗಾನವಿ, ಶಿವಯೋಗ ತಂಡದ ಅರುಷಿ ಸಮಾಧಾನಕರ ಬಹುಮಾನ ತಮ್ಮದಾಗಿಸಿಕೊಂಡರು.

15 ವರ್ಷ 20 ವರ್ಷ ಯುವಕರ ವಿಭಾಗದಲ್ಲಿ ನಗರದ ಎಂ.ವಿ.ಯೋಗದ ಕವೀಶ್ (ಪ್ರ), ದೊಡ್ಡಬಳ್ಳಾಪುರ ನಿಸರ್ಗ ಯೋಗ ಕೇಂದ್ರದ ವಿನಯ್ ಕುಮಾರ್ (ದ್ವಿ), ಬೆಂಗಳೂರಿನ ಕೆಎಂವೈ ಕೇಂದ್ರದ ಅಭಿಷೇಕ್ ಹೆಗ್ಗಡೆ (ತೃ), ಚಿಕ್ಕಬಳ್ಳಾಪುರದ ನಾಗಶ್ರೀ ಶೈಲ್, ಧಾರವಾಡದ ಶಿವಾನಂದ್, ನಗರದ ದುರ್ಗಾಲಯದ ನಂದೀಶ್ ಸಮಾಧಾನಕರ ಬಹುಮಾನ, ಯುವತಿಯರ ವಿಭಾಗದಲ್ಲಿ ದೊಡ್ಡಬಳ್ಳಾಪುರದ ನಿಸರ್ಗ (ಪ್ರ), ಯೋಗಾ ಕೇಂದ್ರದ ಮಧುಶಾಲಿನಿ (ದ್ವಿ), ಶಿವಮೊಗ್ಗದ ಶ್ರೀ ಗುರುಕುಲದ ಕಾವ್ಯಾ (ತೃ),ನಗರದ ಎಂ.ವಿ.ಯೋಗಾ ಶಾಲೆಯ ಅಂಕಿತಾ, ದೊಡ್ಡಬಳ್ಳಾಪುರದ ನಿಸರ್ಗಾ ಯೋಗಾ ಕೇಂದ್ರದ ಜಾಹ್ನವಿ, ಬೆಂಗಳೂರಿನ ಸೌಂದರ್ಯ ಯೋಗಾ ಕೇಂದ್ರದ ಮೋನಿಷಾ, ನಂಜನಗೂಡಿನ ದೀಕ್ಷಾ ಸಮಾಧಾನಕರ ಬಹುಮಾನ ಪಡೆದರು.
21 ರಿಂದ 30 ವರ್ಷದ ಯುವಕರ ವಿಭಾಗದಲ್ಲಿ ಬೆಂಗಳೂರಿನ ಭರತ್ ಗೌಡ (ಪ್ರ), ನಂಜನಗೂಡಿನ ಶರತ್(ದ್ವಿ), ಸಂದೇಶ (ತೃ), ಬೆಂಗಳೂರಿನ ಅರುಣ್, ಆದಿತ್ಯಾ, ನಗರದ ಯೋಗೇಶ್ ಸಮಾಧಾನಕರ ಬಹುಮಾನ, ಯುವತಿಯರ ವಿಭಾಗದಲ್ಲಿ ಶಿವಮೊಗ್ಗದ ಗಾನಶ್ರೀ (ಪ್ರ), ಶಿವಮೊಗ್ಗದ ದೀಪಾ(ದ್ವಿ), ನಂಜನಗೂಡಿನ ಸ್ಪಂದನಾ(ತೃ), ಬೆಂಗಳೂರಿನ ಸುಚಿತ್ರಾ, ನಗರದ ಭರತ್, ಲಕ್ಷ್ಮೀ ಯಾದವ್ ಸಮಾಧಾನಕರ ಬಹುಮಾನ ಪಡೆದುಕೊಂಡರು.

31 ರಿಂದ 40 ಪುರುಷರ ವಿಭಾಗದಲ್ಲಿ ನಗರದ ವಿನೋದ್‌ರಾಜ್ (ಪ್ರ), ಸನೀಶ್ (ದ್ವಿ), ಫರಾನ್ (ತೃ), ಶಿವಮೊಗ್ಗದ ಆದಶ್ ಸಮಾಧಾನಕರ ಬಹುಮಾನ, ಮಹಿಳಾ ವಿಭಾಗದಲ್ಲಿ ಬೆಂಗಳೂರಿನ ವೀಣಾ (ಪ್ರ), ನಗರದ ಸ್ಮಿತಾ (ದ್ವಿ), ಸ್ಪಂದನಾ (ತೃ), ಚೈತ್ರಾ, ರಶ್ಮಿ, ಪ್ರಿಯಾ ಸಮಾಧಾನಕರ ಬಹುಮಾನ ಗಳಿಸಿದರು.
50 ವರ್ಷ ಪುರುಷ ಮೇಲ್ಪಟ್ಟವರ ವಿಭಾಗದಲ್ಲಿ ಬೆಂಗಳೂರಿನ ಅಶ್ವತ್ಥ ನಾರಾಯಣ (ಪ್ರ), ರವಿ ಪ್ರಕಾಶ್ (ದ್ವಿ), ಹುಬ್ಬಳಿಯ ವಿಜಯ್ ರಘುನಾಥ್ (ತೃ), ಕೆ.ಆರ್.ನಗರದ ರಾಮಸ್ವಾಮಿ, ಮಹದೇವ ನಾಯಕ್, ನಗರದ ಗೋಪಾಲ್, ಜಗದೀಶ್ ಸಮಾಧಾನಕರ ಬಹುಮಾನ, ಮಹಿಳಾ ವಿಭಾಗದಲ್ಲಿ ಬೆಂಗಳೂರಿನ ಸರೋಜಾ (ಪ್ರ), ನಗರದ ಶಶಿಬಾಲ (ದ್ವಿ), ಸುಬ್ಬಲಕ್ಷ್ಮೀ (ತೃ), ಸರೋಜಾ, ರೂಪಾ ಎನ್.ರಾವ್, ಮಂಡ್ಯದ ಲಲಿತಾ ಸಮಾಧಾನಕರ ಬಹುಮಾನ ಪಡೆದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4
Tags: Kannada News WebsiteKannada_NewsKannada_News_LiveKannada_News_OnlineKannada_WebsiteLatest News KannadamysoreNews_in_KannadaNews_Kannadaಮೈಸೂರು
Share199Tweet123Send
Previous Post

ಗೋಹತ್ಯೆ? ಹಾಗಾದರೆ ಈ ವೀಡಿಯೋ ಸುಳ್ಳೇ? ಕೆಡಿಪಿ ಸಭೆಯಲ್ಲಿ ಎಂಎಲ್’ಸಿ ಬಲ್ಕಿಷ್ ಬಾನುಗೆ ಶಾಸಕ ಚೆನ್ನಿ ಟಕ್ಕರ್

Next Post

PM Modi congratulates T20 World cup winning Indian Cricket Team over phone call

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
PM Modi congratulates T20 World cup winning Indian Cricket Team over phone call

PM Modi congratulates T20 World cup winning Indian Cricket Team over phone call

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
“ನೂತನ ಗಣಿತದ ಸಂಪನ್ಮೂಲ ಪುಸ್ತಕ” ಲೋಕಾರ್ಪಣೆ | ವಿದ್ಯಾರ್ಥಿ ಸ್ನೇಹಿ ಗಣಿತ ಕಲಿಕೆಗೆ ನೂತನ ಪ್ರಯತ್ನ

“ನೂತನ ಗಣಿತದ ಸಂಪನ್ಮೂಲ ಪುಸ್ತಕ” ಲೋಕಾರ್ಪಣೆ | ವಿದ್ಯಾರ್ಥಿ ಸ್ನೇಹಿ ಗಣಿತ ಕಲಿಕೆಗೆ ನೂತನ ಪ್ರಯತ್ನ

May 27, 2026
ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದರೂ ಅದು ತಾತ್ಕಾಲಿಕ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭವಿಷ್ಯ

ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದರೂ ಅದು ತಾತ್ಕಾಲಿಕ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭವಿಷ್ಯ

May 27, 2026
ಸಂಸ್ಕೃತಿ ಚಿಂತಕ ಸುರೇಶ್ ಋಗ್ವೇದಿ ಅವರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಸಂಸ್ಕೃತಿ ಚಿಂತಕ ಸುರೇಶ್ ಋಗ್ವೇದಿ ಅವರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

May 27, 2026
ಹಿಂದೂ ವಿವಾಹ ಪದ್ಧತಿ ಪಾಲಿಸದ ಮದುವೆಯು ಅಮಾನ್ಯ: ಸುಪ್ರೀಂ ಕೋರ್ಟ್

SIR ಪ್ರಕ್ರಿಯೆ ವಿರುದ್ಧ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು: ನ್ಯಾಯಪೀಠದ ಸ್ಪಷ್ಟನೆಯೇನು?

May 27, 2026
ಯಶಸ್ಸಿನ ಗುರಿ ತಲುಪಲು ಕಠಿಣ ಪರಿಶ್ರಮ ಅಗತ್ಯ: ನೂತನ ನ್ಯಾಯಾಧೀಶೆ ಅನನ್ಯ ಶಾಸ್ತ್ರೀ

ಯಶಸ್ಸಿನ ಗುರಿ ತಲುಪಲು ಕಠಿಣ ಪರಿಶ್ರಮ ಅಗತ್ಯ: ನೂತನ ನ್ಯಾಯಾಧೀಶೆ ಅನನ್ಯ ಶಾಸ್ತ್ರೀ

May 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL