Monday, September 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಮೈಸೂರು

ವಿಶ್ವದ ಭಾಷೆಗಳ ಮೇಲೆ ಪ್ರಭುತ್ವ ಸಾಧಿಸಲು ಸಂಸ್ಕೃತ ಪೂರಕ | ವಿದ್ಯಾಶ್ರೀಶ ಸ್ವಾಮೀಜಿ ಅಭಿಮತ

August 30, 2024
in ಮೈಸೂರು
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಸಂಸ್ಕೃತ #Sanskrit ಭಾಷಾ ಕಲಿಕೆಯು ಮನುಷ್ಯನನ್ನು ಸುಸಂಸ್ಕೃತನನ್ನಾಗಿಸುತ್ತದೆ ಎಂದು ಶ್ರೀಮನ್ ಮಧ್ವಾಚಾರ್ಯ ಮೂಲ ಮಹಾಸಂಸ್ಥಾನ ಸೋಸಲೆ #Sosale ವ್ಯಾಸರಾಜರ ಮಠಾಧೀಶ ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ ಹೇಳಿದರು.

ಸಂಸ್ಕೃತ ಮಾಸಾಚರಣೆ ಅಂಗವಾಗಿ ಸೋಸಲೆ ವ್ಯಾಸರಾಜ ಮಠ ಮತ್ತು ತಿ. ನರಸೀಪುರದ ವಿಶ್ವಚೇತನ ಸಂಸ್ಕೃತ ಪಾಠಶಾಲೆ ಸಂಯುಕ್ತವಾಗಿ ಸೋಸಲೆ ಗ್ರಾಮದ ಶ್ರೀಮಠದಲ್ಲಿ ‘ಅಸ್ಮಾಕಂ ಸಂಸ್ಕೃತಂ’ ಶೀರ್ಷಿಕೆಯಡಿ ಹಮ್ಮಿಕೊಂಡಿದ್ದ ಸಂಸ್ಕೃತೋತ್ಸವ ಹಾಗೂ ಶ್ರೀ ಕೃಷ್ಣ ಜಯಂತ್ಯುತ್ಸವ #KrishnaJayanthi ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.

ಸಂಸ್ಕೃತ ಅತ್ಯಂತ ಸಮೃದ್ಧವಾದ ಭಾಷೆ. ಅದರ ಆಳವಾದ ಅಧ್ಯಯನದಿಂದ ನಮ್ಮ ಜ್ಞಾನ ವಿಸ್ತಾರವಾಗುತ್ತದೆ. ವಿಶ್ವದ ಬಹುತೇಕ ಭಾಷೆಗಳ ಮೇಲೆ ಪ್ರಭುತ್ವ ಸಾಧಿಸಲು ಪೂರಕವಾಗುತ್ತದೆ. ಇದರಿಂದ ವ್ಯಕ್ತಿತ್ವಕ್ಕೆ ಶೋಭೆ ಬರುತ್ತದೆ ಎಂದವರು ಅಭಿಪ್ರಾಯಪಟ್ಟರು.
ಕೃಷ್ಣ ಭಕ್ತಿ ಜಾಗೃತವಾಗಬೇಕು
ಶ್ರೀ ಕೃಷ್ಣ ಸಜ್ಜನರನ್ನ ರಕ್ಷಿಸಿ, ದುರ್ಜನರನ್ನು ಸಂಹಾರ ಮಾಡಲು ದ್ವಾಪರಯುಗದಲ್ಲಿ ಅವತಾರ ತಾಳಿದ. ಇಂದು ಅಂದರೆ ಕಲಿಗಾಲದಲ್ಲಿ ನಮ್ಮ ಹೃದಯದಲ್ಲೇ ಇರುವ ದುಷ್ಟತನವನ್ನು ನಿವಾರಿಸಿಕೊಳ್ಳುವುದು, ದೈವಿಕ ಶಕ್ತಿಗಳನ್ನು ಜಾಗೃತಗೊಳಿಸಿಕೊಳ್ಳುವ ಕಾರ್ಯ ಸಾಧನೆ ಆಗಬೇಕು. ಅದಕ್ಕಾಗಿ ನಮ್ಮಲ್ಲಿ ಕೃಷ್ಣ ಭಕ್ತಿ ಜಾಗೃತವಾಗಬೇಕು. ಇದು ಅತ್ಯಂತ ಪ್ರಮುಖವಾಗಿ ಕಾರ್ಯರೂಪಕ್ಕೆ ಬಂದರೆ ಮಾತ್ರ ಸುಖೀ ಸಮಾಜವನ್ನು, ಸಮೃದ್ಧ ಭಾರತವನ್ನು ನಾವು ನೋಡಲು ಸಾಧ್ಯವಾಗುತ್ತದೆ ಎಂದು ಸ್ವಾಮೀಜಿ ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಸ್. ಶಿವಮೂರ್ತಿ ಮಾತನಾಡಿ, ವಿದ್ಯಾರ್ಥಿಗಳು ಸ್ಪರ್ಧಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಆಗ ಕಲಿಕೆ ಮತ್ತು ಬೆಳವಣಿಗೆ ಎರಡೂ ಏಕ ಕಾಲದಲ್ಲಿ ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ವಿಜಯ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ವೀರಭದ್ರ ಸ್ವಾಮಿ ಮಾತನಾಡಿ, ಸಂಸ್ಕೃತ ಕಲಿಕೆ ಮತ್ತು  ಕೃಷ್ಣ ಭಕ್ತಿ ಎರಡೂ ನಮ್ಮೆಲ್ಲರಿಗೆ ಪ್ರಮಖ ಧ್ಯೇಯ ಆಗಬೇಕು. ಆಗ ಬದುಕು ನಂದನವನ ಆಗುತ್ತದೆ. ವಿದ್ಯಾರ್ಥಿ ದಿಸೆಯಲ್ಲಿಯೇ ಈ ರೀತಿಯ ಸಂಸ್ಕಾರ ರೂಢಿಸಿಕೊಂಡರೆ ಮಕ್ಕಳು ಜವಾಬ್ದಾರಿಯುತ ಪ್ರಜೆಗಳಾಗಲು ಮತ್ತು ಸಾಂಸ್ಕೃತಿಕ ರಾಯಭಾರಿಗಳಾಗಲು ನೆರವಾಗುತ್ತದೆ ಎಂದರು.
ಭಾಷೆಗೆ ಸೀಮಿತ ಚೌಕಟ್ಟು ಇಲ್ಲ
ಕಾರ್ಯಕ್ರಮದ ಪ್ರಧಾನ ಸಂಯೋಜಕ ಡಾ. ಸಿ.ಎಚ್. ಗುರುರಾಜ ರಾವ್ ಮಾತನಾಡಿ, ಅಂತರ್ಲೋಕೀಯ ಭಾಷೆಯಾದ ಸಂಸ್ಕೃತವು ಯಾವುದೇ ಒಂದು ಜಾತಿ, ಮತ ಅಥವಾ ಪಂಗಡದ ನುಡಿ ಅಲ್ಲ. ಇದಕ್ಕೆ ಯಾವುದೇ ಪ್ರದೇಶದ ಗಡಿ-ಮಿತಿಗಳು ಇಲ್ಲ. ಸಾರ್ವಕಾಲಿಕ ಮತ್ತು ಸಾರ್ವತ್ರಿಕ ಮಾನ್ಯತೆ ಹೊಂದಿರುವ ಭಾಷೆ ಸಂಸ್ಕೃತ. ಇದನ್ನು ಒಂದು ವರ್ಗದ ಕಲಿಕೆಗೆ ಮಿತಿ ಮಾಡಿ ಇಟ್ಟರೆ ನಮಗೆ ನಾವೇ ಅನ್ಯಾಯ ಮಾಡಿಕೊಂಡಂತೆ. ಅನಗತ್ಯ ಟೀಕೆ, ಸಲ್ಲದ ವಿಚಾರವಂತಿಕೆ ಬಿಟ್ಟು ಪುರಾತನ ಭಾಷಾ ಕಲಿಕೆ ಮೂಲಕ ಜೀವನಾನುಭವ ವಿಸ್ತರಿಸಿಕೊಳ್ಳೋಣ ಎಂದು ಅವರು ಹೇಳಿದರು.

ವಿಶ್ವಚೇತನ ಸಂಸ್ಕೃತ ಪಾಠಶಾಲೆ ಅಧ್ಯಕ್ಷ ಎಂ.ಎಂ. ನಾಗರಾಜು ಅಧ್ಯಕ್ಷತೆ ವಹಿಸಿದ್ದರು.
ಚಿಣ್ಣರಿಂದ ಭಾಷಾ ಜಾಗೃತಿ ಜಾಥಾ
‘ಅಸ್ಮಾಕಂ ಸಂಸ್ಕೃತಂ’ ಎಂಬ ಧ್ಯೇಯ ವಾಕ್ಯದೊಡನೆ ಹಮ್ಮಿಕೊಂಡಿದ್ದ ‘ಸಂಸ್ಕೃತ ವಸ್ತು ಪ್ರದರ್ಶನಿ’ಗೆ ಬಿಇಒ ಸಿ.ಎಸ್. ಶಿವಮೂರ್ತಿ ಚಾಲನೆ ನೀಡಿದರು.

‘ಪಠತ ಸಂಸ್ಕೃತಂ-ವದತ ಸಂಸ್ಕೃತಂ-ಜಯತು ಭಾರತಂ-ಮುಂತಾದ ಘೋಷಣೆಗಳೊಂದಿಗೆ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಮಕ್ಕಳು ಭಾಷಾ ಜಾಗೃತಿ ಜಾಥಾ ನಡೆಸಿ ಗಮನ ಸೆಳೆದರು. ವಿವಿಧ ಶಾಲೆಗಳ ಶಿಕ್ಷಕರು, ಪಾಲಕರು, ಗ್ರಾಮಸ್ಥರು ಭಾಗಿಗಳಾಗಿದ್ದರು.

ವಿವಿಧ ಸ್ಪರ್ಧೆ
ಈ ಸಂದರ್ಭದಲ್ಲಿ ಗೀತಾ ಕಂಠಪಾಠ ಸ್ಪರ್ಧೆ, ಕೃಷ್ಣ- ರಾಧೆ ವೇಷಭೂಷಣ ಸ್ಪರ್ಧೆ, ದೇವರನಾಮ ಸ್ಪರ್ಧೆ ಹಾಗೂ ಚಿತ್ರಕಲಾ ಸ್ಪರ್ಧೆಗಳಲ್ಲಿ ತಿ. ನರಸೀಪುರ ತಾಲೂಕಿನ 52 ಶಾಲೆಗಳ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿಜೇತರಿಗೆ ಸೋಸಲೆ ಶ್ರೀಗಳು ಬಹುಮಾನ ವಿತರಿಸಿದರು.

ಬಾಗಲಕೋಟೆಯ 9 ವರ್ಷದ ಬಾಲಕ ಸುಧಾಂಶು ಕಟ್ಟಿ ಕೊಳಲು ವಾದನ, ಸುಘೋಷನ ದಾಸವಾಣಿ ಗಮನ ಸೆಳೆಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Kalahamsa Infotech private limited

Tags: Kannada News WebsiteLatest News KannadamysoreSosaleVyasaraja Mathaಮಧ್ವಾಚಾರ್ಯರುಮೈಸೂರುವ್ಯಾಸರಾಜ ಮಠಶ್ರೀ ಕೃಷ್ಣಶ್ರೀ ಕೃಷ್ಣ ಜಯಂತ್ಯುತ್ಸವಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿಸಂಸ್ಕೃತಸಂಸ್ಕೃತ ಪಾಠಶಾಲೆಸೋಸಲೆ
Previous Post

ಶಿವಮೊಗ್ಗ | ಗಾಂಜಾ ಮಾರಾಟ: ಇಬ್ಬರ ಬಂಧನ

Next Post

ಚೆಸ್ ಸ್ಪರ್ಧೆ | ಸತತ 6ನೇ ಬಾರಿಗೆ ರಾಜ್ಯಮಟ್ಟಕ್ಕೆ ಆಯ್ಕೆ | ದಾಖಲೆ ಮೆರೆದ ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿನಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಚೆಸ್ ಸ್ಪರ್ಧೆ | ಸತತ 6ನೇ ಬಾರಿಗೆ ರಾಜ್ಯಮಟ್ಟಕ್ಕೆ ಆಯ್ಕೆ | ದಾಖಲೆ ಮೆರೆದ ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿನಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ತಾಳಗುಪ್ಪ-ಮೈಸೂರು ರೈಲು ಪ್ರಯಾಣಿಕರಿಗೆ ಬಿಗ್ ಗುಡ್ ನ್ಯೂಸ್ ಕೊಟ್ಟ ಎಂಪಿ ರಾಘವೇಂದ್ರ

September 1, 2025

ಯೂಟ್ಯೂಬ್’ನಲ್ಲಿ ಫಯರ್ ಎಬ್ಬಿಸುತ್ತಿದೆ `ಭದ್ರಾವತಿ ಗೋಲ್ಡ್’ ಸಾಂಗ್ | ನೀವೂ ನೋಡಿ

September 1, 2025

ಸ್ಕೇಟಿಂಗ್ | ಚಿನ್ನ, ಬೆಳ್ಳಿ, ಕಂಚು ಪದಕ ಪಡೆಯುವ ಮೂಲಕ ಶಿವಮೊಗ್ಗಕ್ಕೆ ಕೀರ್ತಿ ತಂದ ಪ್ರತಿಭೆಗಳಿವರು

September 1, 2025

ಊಟ ಮಾಡುತ್ತಿದ್ದ ವೇಳೆ ಅನ್ನದ ಅಗುಳು ಗಂಟಲಲ್ಲಿ ಸಿಲುಕಿ ಯುವಕ ಸಾವು

September 1, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ತಾಳಗುಪ್ಪ-ಮೈಸೂರು ರೈಲು ಪ್ರಯಾಣಿಕರಿಗೆ ಬಿಗ್ ಗುಡ್ ನ್ಯೂಸ್ ಕೊಟ್ಟ ಎಂಪಿ ರಾಘವೇಂದ್ರ

September 1, 2025

ಯೂಟ್ಯೂಬ್’ನಲ್ಲಿ ಫಯರ್ ಎಬ್ಬಿಸುತ್ತಿದೆ `ಭದ್ರಾವತಿ ಗೋಲ್ಡ್’ ಸಾಂಗ್ | ನೀವೂ ನೋಡಿ

September 1, 2025

ಸ್ಕೇಟಿಂಗ್ | ಚಿನ್ನ, ಬೆಳ್ಳಿ, ಕಂಚು ಪದಕ ಪಡೆಯುವ ಮೂಲಕ ಶಿವಮೊಗ್ಗಕ್ಕೆ ಕೀರ್ತಿ ತಂದ ಪ್ರತಿಭೆಗಳಿವರು

September 1, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!