No Result
View All Result
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
English Articles

Hennur Sparsh Hospital Completes One Year | A Reflection of Multispecialty Care

by ಕಲ್ಪ ನ್ಯೂಸ್
May 25, 2026
0

Kalpa Media House  |  Bengaluru  | SPARSH Hospital, Hennur Road has completed one year of operations, with its first-year clinical...

Read moreDetails
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
  • Advertise With Us
  • Grievances
  • About Us
  • Contact Us
Tuesday, May 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಕನ್ನಡ ಇತಿಹಾಸ, ಸಾಹಿತ್ಯನ್ನು ಮಕ್ಕಳಿಗೆ ಕಲಿಸಿ | ಕಸಾಪ ಗೌರವ ಕಾರ್ಯದರ್ಶಿ ಲತಾಮೋಹನ್ ಕರೆ

ಮೈಸೂರು | ಮೂಕಾಂಬಿಕಾ ಸಮೃದ್ಧಿ ಬಡಾವಣೆಯಲ್ಲಿ ಕನ್ನಡ ರಾಜ್ಯೋತ್ಸವ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 2, 2024
in Small Bytes, ಮೈಸೂರು
0
ಕನ್ನಡ ಇತಿಹಾಸ, ಸಾಹಿತ್ಯನ್ನು ಮಕ್ಕಳಿಗೆ ಕಲಿಸಿ | ಕಸಾಪ ಗೌರವ ಕಾರ್ಯದರ್ಶಿ ಲತಾಮೋಹನ್ ಕರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ನಮ್ಮ ಮಕ್ಕಳಿಗೆ ಕನ್ನಡದ ಇತಿಹಾಸ ಹಾಗೂ ಸಾಹಿತ್ಯವನ್ನು ತಿಳಿಸಿದಾಗ ಮಾತ್ರ ಮುಂದಿನ ಪೀಳಿಗೆಗೆ ಕನ್ನಡದ ಮಹತ್ವದ ಬಗ್ಗೆ ಅರಿವಾಗುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ಮ.ನ. ಲತಾ ಮೋಹನ್ ಕರೆ ನೀಡಿದರು.

ಶ್ರೀರಾಂಪುರದ ಮೂಕಾಂಬಿಕಾ ಸಮೃದ್ಧಿ ಬಡಾವಣೆ ನಿವಾಸಿಗಳ ಹಿತರಕ್ಷಣಾ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಸುವರ್ಣ ಕರ್ನಾಟಕ ಕನ್ನಡ ಹಬ್ಬದಲ್ಲಿ ಅವರು ಮಾತನಾಡಿದರು.

ಹಲವಾರು ಪ್ರಥಮಗಳಿಗೆ ಕನ್ನಡ ಹಾಗೂ ಕರುನಾಡು ಸಾಕ್ಷಿಯಾಗಿದೆ. ಭಾರತದಲ್ಲಿ ಅತಿಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದ ರಾಜ್ಯ ನಮ್ಮದು ಆದರೆ ಇಂದು ಮನೆಗಳಲ್ಲಿ ಹಾಗೂ ಶಾಲೆಗಳಲ್ಲಿ ನಾವು ಮಕ್ಕಳೊಂದಿಗೆ ಕೇವಲ ಇಂಗ್ಲಿಷ್’ನಲ್ಲೇ ಮಾತನಾಡುತ್ತೇವೆ. ಮಕ್ಕಳು ಕನ್ನಡ ಬಳಸಬೇಕು, ಕನ್ನಡದ ಇತಿಹಾಸ, ಸಾಹಿತ್ಯ ಎಲ್ಲವನ್ನೂ ತಿಳಿಯ ಬೇಕು ಹಾಗಾದರೆ ಮಾತ್ರ ಮುಂದಿನ ಪೀಳಿಗೆಗೆ ಕನ್ನಡದ ಮಹತ್ವದ ಅರಿವಾಗುತ್ತದೆ ಎಂದರು.
ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಉಪನ್ಯಾಸಕರಾದ ಸುರೇಶ್ ಋಗ್ವೇದಿ ಮಾತನಾಡಿ, ಮೈಸೂರು ಮಹಾರಾಜರ ಕೊಡುಗೆ ಅಪಾರವಾದುದು ಅವರು ಮಾಡಿದ ಅಭಿವೃದ್ಧಿ, ಆಡಳಿತ ದಿಂದ ನಾವು ಇಷ್ಟು ಮುಂದುವರೆದಿದ್ದೇವೆ. ಹಲವಾರು ರಾಷ್ಟ್ರ ಪುರುಷರ ತ್ಯಾಗ ಬಲಿದಾನದಿಂದ ನಾವು ಇಂದು ನೆಮ್ಮದಿಯಾಗಿ ಇದ್ದೇವೆ ಎಂದರು.

ಕರ್ನಾಟಕದ ಕುಲಪುರೋಹಿತ ಆಲೂರು ವೆಂಕಟರಾಯರು ಅಂದು ಮಾಡಿದ ಏಕೀ ಕರಣದ ಹೋರಾಟದ ಫಲ ಇಂದು ನಾವು ನೋಡುತ್ತಿದ್ದೇವೆ. ಕನ್ನಡ ಭಾಷೆಯ ಹಾಗೂ ರಾಷ್ಟ್ರದ ಸೇವೆಗೆ ಪ್ರತಿ ನಾಗರೀಕನು ಸ್ವ ಇಚ್ಚೆಯಿಂದ ಮುಂದೆ ಬರಬೇಕು ಹಾಗೆ ಬಂದಾಗಲೆ ನಾವು ಸಮರ್ಥ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ ಎಂದು ತಿಳಿಸಿದರು.

ಸಾಲು ಗಿಡಗಳ ಸಾಧಕ ಸಿ.ಎಂ. ವೆಂಕಟೇಶ್ ಮಾತನಾಡಿ, ದೆಹಲಿ ಮಹಾನಗರ ಇಂದು ಉಸಿರಾಡಲು ಆಗದಂತೆ ಆಗುತ್ತಿದೆ. ಆದರೆ, ನಮ್ಮ ಭಾಗ್ಯ ಕರ್ನಾಟಕ ಉತ್ತಮವಾದ ಅರಣ್ಯ ಸಂಪತ್ತು ಹೊಂದಿದೆ. ಪ್ರತಿ ಮನುಷ್ಯನೂ ಸಹ ಗಿಡ ನೆಡುವ ಮೂಲಕ ಭಾರತವನ್ನು ಸಸ್ಯ ಶ್ಯಾಮಲೆಯಾಗಿಯೂ ಕರ್ನಾಟಕವನ್ನು ನಿತ್ಯ ಹರಿದ್ವರ್ಣವಾಗಿಯೂ ಮಾಡಬೇಕು. ಇದೇ ನಾವು ಮುಂದಿನ ಸಮಾಜಕ್ಕೆ ನೀಡುವ ದೊಡ್ಡ ಕೊಡುಗೆ ಎಂದು ತಿಳಿಸಿದರು.

ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಸುರೇಶ್ ಮಾತನಾಡಿ, ಕರ್ನಾಟಕದಲ್ಲಿ ಕನ್ನಡವನ್ನು ಉಳಿಸಿಕೊಂಡು ಬೆಳೆಸಿಕೊಂಡು ಹೋಗುವ ಜವಾಬ್ದಾರಿ ಇವತ್ತಿನ ಮಕ್ಕಳ ಕೈಯಲ್ಲಿ ಇದೆ ಎಂದು ತಿಳಿಸಿದರು.

ಮೂಕಾಂಬಿಕಾ ಸಮೃದ್ದಿ ಬಡಾವಣೆ ನಿವಾಸಿಗಳ ಹಿತರಕ್ಷಣಾ ಸಮಿತಿ ಅಧ್ಯಕ್ಷ ಕೆ.ಆರ್. ಗಣೇಶ್ ಮಾತನಾಡಿ, ಮನೆಗಳಲ್ಲಿ ಎಲ್ಲರೂ ಮಕ್ಕಳೊಂದಿಗೆ ಕನ್ನಡದಲ್ಲೇ ಮಾತನಾಡಬೇಕು. ಪ್ರತಿಯೊಬ್ಬರು ಸಹ ಪ್ರತಿದಿನ ಕನ್ನಡ ದಿನಪತ್ರಿಕೆಗಳನ್ನು ಮಕ್ಕಳು ಓದುವಂತೆ ಮಾಡಬೇಕು. ದಿನಪತ್ರಿಕೆ ಓದುವುದು ಮಕ್ಕಳಿಗೆ ಹವ್ಯಾಸವಾದರೆ ಅವರಿಗೆ ಸಾಮಾಜಿಕ ಜ್ಞಾನ ತಾನಾಗಿಯೇ ಬರುತ್ತದೆ. ಇದು ಮಕ್ಕಳ ಬೆಳವಣಿಗೆಗೆ ಪೂರಕ ಎಂದು ತಿಳಿಸಿದರು.

ವಿಶ್ವ ದಾಖಲೆ ನಿರ್ಮಿಸಿರುವ ಬಾಲಕ ಪೃಥು ಪಿ. ಅದ್ವೈತ್ ಮಾತನಾಡಿ, ಸ್ವಾತಂತ್ರ ಸಂಗ್ರಾಮದ ಸಮಯದಲ್ಲಿ ಶಿವಮೊಗ್ಗದ ಈಸೂರು ಗ್ರಾಮ ಸ್ವಾತಂತ್ರ ಪಡೆದ ಮೊದಲ ಹಳ್ಳಿ ಹೇಗಾಯಿತೆಂದು ತಿಳಿಸಿದರು. ಮಾತನಾಡುವ ಗೊಂಬೆ ಕಲಾವಿದೆ ಎಂ. ಕಾವ್ಯ ಮಾತನಾಡುವ ಗೊಂಬೆಯ ಮೂಲಕ ಹಾಸ್ಯದ ಲೋಕವನ್ನೇ ಸೃಷ್ಟಿಸಿದರು.
ಈ ಸಂದರ್ಭದಲ್ಲಿ ಬಡಾವಣೆಯಲ್ಲಿ ವಿಶೇಷ ಸಾಧನೆ ಮಾಡಿರುವ ವ್ಯಕ್ತಿಗಳನ್ನು ಗುರುತಿಸಿ ಸನ್ಮಾನಿಸಿ ಪ್ರತಿಭಾ ಪುರಸ್ಕಾರ ಮಾಡಲಾಯಿತು.

ಮೂಕಾಂಬಿಕಾ ಸಮೃದ್ದಿ ಬಡಾವಣೆ ನಿವಾಸಿಗಳ ಹಿತರಕ್ಷಣಾ ಸಮಿತಿ ಪ್ರಧಾನ ಕಾರ್ಯದರ್ಶಿ ಪುನೀತ್ ನಿರೂಪಿಸಿದರು. ಕುಮಾರಿ ಮೈತ್ರೇಯಿ ಪ್ರಾರ್ಥಿಸಿದರು. ಮೂಕಾಂಬಿಕಾ ಸತ್ಸಂಗ ಬಳಗದಿಂದ ನಾಡಗೀತೆ, ವರ್ಷ ಭರತನಾಟ್ಯ, ಮೂಕಾಂಬಿಕಾ ಸಮೃದ್ದಿ ಬಡಾವಣೆಯ ಮಕ್ಕಳಿಂದ ಸಾಮೂಹಿಕ ನೃತ್ಯ, ವೆಂಟಕರಾಘವ ಗಾಯನ ಕಾರ್ಯಕ್ರಮ ನಡೆಸಿದರು.

ಪೃಥು ಪಿ ಅದ್ವೈತ್ ಜಾನಪದ ಗಾಯನ, ಹರಣ್ ಪಿ. ಜೈನ್ ಕರಾಟೆ ಪ್ರದರ್ಶನ, ಸೋನಾ ಸಹೋದರಿಯರಿಂದ ನೃತ್ಯ ಹಾಗೂ ಮೂಕಾಂಬಿಕಾ ಸಮೃದ್ದಿ ಬಡಾವಣೆಯ ಮಹಿಳೆಯರಿಂದ ಸಾಮೂಹಿಕ ಜಾನಪದ ನೃತ್ಯ ಪ್ರದರ್ಶನ ಸೇರಿದಂತೆ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಸಾಲುಮರದ ವೆಂಕಟೇಶ್, ಸಮಿತಿಯ ಅಧ್ಯಕ್ಷ ಗಣೇಶ್, ಉಪಾಧ್ಯಕ್ಷ ರಾಮಕೃಷ್ಣ, ಕಾರ್ಯದರ್ಶಿ ನಾಗಭೂಷಣ ಆಚಾರ್, ಪುನೀತ್, ಪಾರ್ಶ್ವನಾಥ ಜೈನ್, ಮಂಜುನಾಥ್, ಮೋಹನ್, ರಚನಾ, ಪೂಜಾ ಸೇರಿದಂತೆ ಬಡಾವಣೆಯ ನಿವಾಸಿಗಳು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  
Kalahamsa Infotech private limited

Tags: Kannada News WebsiteKannada RajyotsavaLatest News Kannadamysoreಕನ್ನಡ ಇತಿಹಾಸಕನ್ನಡ ರಾಜ್ಯೋತ್ಸವಕನ್ನಡ ಸಾಹಿತ್ಯ ಪರಿಷತ್ಮೈಸೂರು
Share196Tweet123Send
Previous Post

ಪರಸ್ಪರ ಸಹಕಾರದಿಂದ ಸಮಾಜದ ಸ್ವಾಸ್ಥ್ಯ ರೂಪುಗೊಳ್ಳಲು ಸಾಧ್ಯ | ರವಿಚಂದ್ರನ್

Next Post

ತಮಿಳುನಾಡು | ಜಲಪ್ರಳಯ ಸೃಷ್ಠಿಸಿದ ಫೆಂಗಲ್ ತೂಫಾನ್ | ಕೊಚ್ಚಿ ಹೋದ ಬೃಹತ್ ವಾಹನಗಳು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ತಮಿಳುನಾಡು | ಜಲಪ್ರಳಯ ಸೃಷ್ಠಿಸಿದ ಫೆಂಗಲ್ ತೂಫಾನ್ | ಕೊಚ್ಚಿ ಹೋದ ಬೃಹತ್ ವಾಹನಗಳು

ತಮಿಳುನಾಡು | ಜಲಪ್ರಳಯ ಸೃಷ್ಠಿಸಿದ ಫೆಂಗಲ್ ತೂಫಾನ್ | ಕೊಚ್ಚಿ ಹೋದ ಬೃಹತ್ ವಾಹನಗಳು

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿಕಾರಿಪುರ | ತಾಲೂಕಿನ ಮೂರು ಹಳ್ಳಿಗಳ ವ್ಯಾಪ್ತಿಯಲ್ಲಿ ಚಿರತೆ ದಾಳಿ | ಮೂವರಿಗೆ ತೀವ್ರ ಗಾಯ

ಹೊಸನಗರ, ಕಡಸೂರು ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ | ಗ್ರಾಮಸ್ಥರಲ್ಲಿ ಆತಂಕ!

May 25, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

May 25, 2026
ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ! ಮೇ 26ರಂದು ಭದ್ರಾವತಿಯ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

May 25, 2026
ಮೈತ್ರಿ ಪ್ರಾಥಮಿಕ, ಕುಮದ್ವತಿ ಪ್ರೌಢಶಾಲೆಯಲ್ಲಿ ಶೈಕ್ಷಣಿಕ ವರ್ಷ ಆರಂಭ | ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

ಮೈತ್ರಿ ಪ್ರಾಥಮಿಕ, ಕುಮದ್ವತಿ ಪ್ರೌಢಶಾಲೆಯಲ್ಲಿ ಶೈಕ್ಷಣಿಕ ವರ್ಷ ಆರಂಭ | ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

May 25, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL