ಕಲ್ಪ ಮೀಡಿಯಾ ಹೌಸ್ | ಮೈಸೂರು |
ಪ್ರಧಾನಿ ನರೇಂದ್ರ ಮೋದಿ PM Narendra Modi ಅವರ ಸಹೋದರ ಪ್ರಹ್ಲಾದ್ ಮೋದಿ ಹಾಗೂ ಕುಟುಂಬಸ್ಥರು ಪ್ರಯಾಣಿಸುತ್ತಿದ್ದ ಕಾರು ಮೈಸೂರಿನ ಕಡಕೊಲ ಬಳಿ ಭೀಕರ ಅಪಘಾತಕ್ಕೀಡಾಗಿದ್ದು, ಇದರಲ್ಲಿದ್ದವರು ತೀವ್ರವಾಗಿ ಗಾಯಗೊಂಡಿದ್ದಾರೆ.
ಪ್ರಹ್ಲಾದ್ ಮೋದಿ ಅವರ ಪುತ್ರ ಹಾಗೂ ಸೊಸೆ ಬೆನ್ಜ್ ಕಾರಿನಲ್ಲಿ ಬಂಡೀಪುರಕ್ಕೆ ಖಾಸಗಿ ಪ್ರವಾಸಕ್ಕಾಗಿ ತೆರಳುತ್ತಿದ್ದರು. ಕಡಕೊಲ ಕೈಗಾರಿಕಾ ಪ್ರದೇಶದ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ವಿಭಜಕಕ್ಕೆ ಢಿಕ್ಕಿ ಹೊಡೆದು ಹಾರಿ ನಿಂತಿದೆ. ಪ್ರಹ್ಲಾದ್ ಮೋದಿ ಅವರ ಮುಖಕ್ಕೆ ಹೊಡೆತ ಬಿದ್ದಿದ್ದು, ಅವರ ಸೊಸೆಯ ತಲೆಗೆ ತೀವ್ರವಾಗಿ ಗಾಯವಾಗಿದೆ.
ಇತರರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ತತಕ್ಷಣವೇ ಎಲ್ಲರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಎಸ್ಪಿ ಸೀಮಾ ಲಾಟ್ಕರ್ ಮುಂದಿನ ಕ್ರಮ ಕೈಗೊಂಡಿದ್ದು, ಮುಖ್ಯಮಂತ್ರಿ ಅವರ ಕಾರ್ಯಾಲಯಕ್ಕೆ ಮಾಹಿತಿ ನೀಡಿದ್ದು, ಈ ಮೂಲಕ ಪ್ರಧಾನಿ ಅವರಿಗೂ ವಿಷಯ ತಲುಪಿದೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post