ಕಲ್ಪ ಮೀಡಿಯಾ ಹೌಸ್
ಮೈಸೂರು: ಮುಖ್ಯಮಂತ್ರಿ ಹುದ್ದೆ ಅನ್ನೋದು ಮೈಸೂರು ದಸರಾ ಅಂಬಾರಿ ಹೊರುವ ಆನೆಯಿದ್ದಂತೆ ಅದೇನು ಶಾಶ್ವತ ಅಲ್ಲ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ಸಿಎಂ ಖುರ್ಚಿಯ ಬಗ್ಗೆ ನಿಗೂಢವಾಗಿ ಮಾತನಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಸಿಎಂ ಕುರ್ಚಿಯನ್ನು ಮೈಸೂರು ದಸರಾ ಅಂಬಾರಿಗೆ ಹೋಲಿಸಿದರು. ಅಂಬಾರಿಯನ್ನು ತಾಯಿ ಚಾಮುಂಡೇಶ್ವರಿಯನ್ನು ನಾವು ಗೌರವಿಸುತ್ತೇವೆ. ಸಿಎಂ ಆದವರು ಸಂವೇದಶೀಲರಾಗಿರಬೇಕು. ಆದರ್ಶ ಆಲೋಚನೆಯೊಂದಿಗೆ ಸಮರ್ಥವಾಗಿರಬೇಕು ಎಂದು ಹೇಳಿದರು.
ಆನೆ ತೂಕ ಮಾತ್ರ ಪ್ರಾಮುಖ್ಯ ಅಗಲ್ಲ. ಕೊನೆ ತನಕ ಯಶಸ್ವಿಯಾಗಿ ಅಂಬಾರಿ ತಲುಪಿಸುವ ಆನೆಯಾಗಿರಬೇಕು. ಸಿಎಂ ಅನ್ನೋದು ವೈಭವ, ಘನತೆ ಅಲ್ಲ. ಅದು ಜನಪರ ಕಾಳಜಿ ಇರುವ ಸಂವೇದಶೀಲವಾದ ಹುದ್ದೆ. ಸಿಎಂ ಸಿದ್ದರಾಮಯ್ಯ ಸಾಕು ಅಂದಿದ್ರು, ಈಗ ಬೇಕು ಅಂತಾ ಇದ್ದಾರೆ. ಅಂಬಾರಿ ಹೊರುವ ಆನೆಯನ್ನು ಆಗಾಗ ಬದಲಾಯಿಸಲಾಗುತ್ತದೆ. ಬದಲಾವಣೆ ಜಗದ ನಿಯಮ ಎಂದು ಮಾರ್ಮಿಕವಾಗಿ ನುಡಿದರು.
ಅರ್ಜುನ, ಅಭಿಮನ್ಯು, ಬಲರಾಮ ಎಲ್ಲರೂ ಅಂಬಾರಿ ಹೊತ್ತಿದ್ದಾರೆ. ಅರ್ಜುನ ಅಂಬಾರಿ ಹೊತ್ತ ಅಂತಾ ಮರಿ ಆನೆಗೆ ಅಂಬಾರಿ ಹೊರಿಸಲು ಸಾಧ್ಯವಿಲ್ಲ. ಕರ್ನಾಟಕ ಆನೆ, ಹುಲಿಗಳಿಗೆ ಜಾಸ್ತಿ ಹೆಸರುವಾಸಿ. ಖಂಡಿತಾ ಸಮರ್ಥವಾಗಿ ಅಂಬಾರಿ ಹೊರುವ ಆನೆ ಸಿಗುತ್ತದೆ. ಇನ್ನೇನು ದಸರಾ ಬರುತ್ತದೆ ಅಷ್ಟರಲ್ಲಿ ಅಂಬಾರಿ ಹೊರುವ ಆನೆ ಹೈ ಕಮಾಂಡ್ಗೆ ಸಿಗಲಿದೆ ಎಂದು ಸಚಿವ ಸಿ.ಪಿ. ಯೋಗೇಶ್ವರ್ ಹೇಳಿದ್ದಾರೆ.
ಇದು ನನ್ನ ಸರ್ಕಾರ ಅನ್ನೋ ಅಭಿಮಾನ ನನಗೆ ಬರುತ್ತಿಲ್ಲ. ನನಗೆ ಆಗುತ್ತಿರುವ ನೋವು ಚಿತ್ರಹಿಂಸೆಯನ್ನು ಹೇಳುತ್ತಿದ್ದೇನೆ. ಅದರಲ್ಲಿ ಎಲ್ಲವನ್ನೂ ಹೇಳಲು ಸಾಧ್ಯವಿಲ್ಲ. ರಾಜ್ಯದಲ್ಲಿ ನಮ್ಮ ಸರ್ಕಾರ ಇದ್ದರೂ, ವಿರೋಧ ಪಕ್ಷದವರ ಕೈ ಮೇಲಾಗುತ್ತಿದೆ. ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಮೀಸಲಾತಿ ಸಹಾ ಹೆಚ್.ಡಿ. ಕುಮಾರಸ್ವಾಮಿ ಹೇಳಿದ ರೀತಿ ಆಗಿದೆ. ಈ ರೀತಿ ಚಿತ್ರಹಿಂಸೆ ಸಾಕಷ್ಟು ಬಾರಿ ಆಗಿದೆ. ಅವರ ಅನುಕೂಲಕ್ಕೆ ತಕ್ಕಂತೆ ವಿಂಗಡನೆ ಮಾಡಿಕೊಂಡಿದ್ದಾರೆ. ನಾವು ಹೇಗೆ ಸ್ಪರ್ಧೆ ಮಾಡೋದು. ಈ ಸರ್ಕಾರದಲ್ಲಿ ಜನರಿಗೆ ಸಾಮಾಜಿಕ ನ್ಯಾಯ ಕೊಡಿಸಲು ಆಗುತಿಲ್ಲ ಎಂದು ಆತಂಕ ವ್ಯಕ್ತಪಡಿಸಿದರು.
ಡಿ.ಕೆ. ಶಿವಕುಮಾರ್, ಕುಮಾರಸ್ವಾಮಿ ಅವರ ಜೊತೆ ಯಡಿಯೂರಪ್ಪ ಹೊಂದಾಣಿಕೆ ಸದಾ ಇದೆ. ವಿರೋಧ ಪಕ್ಷಗಳೇ ರಾಜ್ಯದಲ್ಲಿ ಸತ್ತು ಹೋಗಿವೆ ಎಂದು ಆಕ್ರೋಶ ಹೊರಹಾಕಿದರು.
ಯಡಿಯೂರಪ್ಪ ಅವರನ್ನು ಸಿಎಂ ಮಾಡಲು ಸಾಕಷ್ಟು ಶ್ರಮ ವಹಿಸಿದ್ದೇವೆ. ಕೆಲವರು ಅದನ್ನು ತಡೆಹಿಡಿಯುವ ಕೆಲಸ ಮಾಡಿದ್ದಾರೆ. ಆದರೆ ನನ್ನ ಪರಿಸ್ಥಿತಿ ದೇವಸ್ಥಾನದ ಗೋಪುರದ ಅಡಿಗಲ್ಲಿನಂತೆ ಆಗಿದೆ. ಬಂದವರೆಲ್ಲಾ ಚಪ್ಪಲಿ ಬಿಟ್ಟು ಕೈ ಮುಗಿದು ಹೋಗುತ್ತಿದ್ದಾರೆ. ಯಾರಿಗೂ ನಾನು ಮಾಡಿದ ಕೆಲಸ ಕಾಣುತ್ತಿಲ್ಲ ಎಂದು ಸಚಿವ ಯೋಗೇಶ್ವರ್ ತಮ್ಮ ನೋವು ತೋಡಿಕೊಂಡರು.
ನಾನು ವಿಜಯೇಂದ್ರ ವಿರುದ್ಧ ಮಾತನಾಡುವುದಿಲ್ಲ. ಯಾಕೆಂದರೆ ಅವರಿಗೆ ಸರ್ಕಾರದಲ್ಲಿ ಅಧಿಕೃತ ಹುದ್ದೆ ಇಲ್ಲ. ಸೂಕ್ಷ್ಮವಾಗಿ ನನ್ನ ವಿಚಾರವನ್ನು ಹೇಳಿದ್ದೇನೆ. ನಾನೇನು ಸರ್ಕಾರ ಅಥವಾ ಪಕ್ಷದ ವಿರುದ್ಧ ಇಲ್ಲ. ತಮ್ಮನ್ನು ಯಡಿಯೂರಪ್ಪನವರ ವಿಲನ್ ರೀತಿ ಬಿಂಬಿಸಬೇಡಿ. ತಮ್ಮನ್ನು ಅವರು ಸರ್ಕಾರದಲ್ಲಿ ಮಂತ್ರಿ ಮಾಡಿಕೊಂಡಿದ್ದಾರೆ ಎಂದರು.
ಸಚಿವ ಶ್ರೀರಾಮುಲು ಪಿಎ ಬಂಧನ ಬಿಡುಗಡೆ ವಿಚಾg. ಇದರ ಸರಿ ತಪ್ಪು ಚರ್ಚೆ ನಾನು ಮಾಡಲ. ನಾನು ಏನು ಮಾತನಾಡಿದರು ವಿವಾದವಾಗುತ್ತದೆ. ಈಗ ಆಗಿದ್ದನ್ನು ನಾನು ಒಪ್ಪುವುದಿಲ್ಲ. ಈ ಬಗ್ಗೆ ಕರೆದು ಕೇಳಬಹುದಿತು. ಅಂಗೈ ಹುಣ್ಣಿಗೆ ಕನ್ನಡಿ ಏಕೆ? ಎಂದು ಯೋಗೇಶ್ವರ್ ಮಾಧ್ಯಮದವರನ್ನು ಪ್ರಶ್ನಿಸಿದರು.
ರಮೇಶ್ ಜಾರಕಿಹೋಳಿ ಷಡ್ಯಂತರಕ್ಕೆ ಬಲಿಯಾಗಿದ್ದಾರೆ. ಅವರಿಗೆ ಸಿಗಬೇಕಾದ ನ್ಯಾಯ ಸಿಕ್ಕಿಲ. ದುರುದ್ದೇಶದಿಂದಲೇ ತನಿಖೆಯನ್ನು ವಿಳಂಬ ಮಾಡಲಾಗುತ್ತಿದೆ. ಈ ನೋವು ಚಡಪಡಿಕೆ ಅವರಿಗೆ ಇದೆ. ಇದು ನನಗೂ ಸಹಾ ಗೊತ್ತಿದೆ. ಅವರು ಸಮಯಕ್ಕೆ ಕಾಯುತ್ತಿದ್ದಾರೆ. ಷಡ್ಯಂತರಕ್ಕೆ ಒಳಗಾಗಿದ್ದಾರೆ ಅನ್ನೋದು ಜಗಜ್ಹಾಹಿರಾಗಿದೆ ಎಂದು ಅಭಿಪ್ರಾಯಪಟ್ಟರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post