Tuesday, July 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಮೈಸೂರು

ಸಂಕಷ್ಟದ ಪರಿಸ್ಥಿತಿಯಲ್ಲೂ ನೈಋತ್ಯ ರೈಲ್ವೆ ಮೈಸೂರು ವಿಭಾಗದ ಅಭೂತಪೂರ್ವ ಸಾಧನೆ

ಶೇ.1152ರಷ್ಟು ಪ್ರಗತಿ ಸಾಧಿಸಿ, 59.95 ಕೋಟಿ ರೂ. ಆದಾಯ ಗಳಿಕೆ

June 4, 2021
in ಮೈಸೂರು
0 0
0
Internet Image

Internet Image

Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್

ಮೈಸೂರು: ಪ್ರಸ್ತುತ ಕೋವಿಡ್ ಸಾಂಕ್ರಾಮಿಕ ಖಾಯಿಲೆಯ ಇಂತಹ ಸಂಕಷ್ಟ ಕಾಲದಲ್ಲೂ ಸಹ ನೈಋತ್ಯ ರೈಲ್ವೆಯ ಮೈಸೂರು ವಿಭಾಗ ಅಭೂತಪೂರ್ವ ಸಾಧನೆ ಮಾಡಿದ್ದು, ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ.

ಅಗತ್ಯ ವಸ್ತುಗಳ ಸರಕು ಸಾಗಾಣೆಯು ಪ್ರಬಲ ಸವಾಲಾಗಿರುವ ಈ ಸಂದರ್ಭದಲ್ಲಿ ಭಾರತೀಯ ರೈಲ್ವೆ ಅವಶ್ಯ ವಸ್ತುಗಳನ್ನು ದೇಶ ನಾನಾಮೂಲೆಗಳಿಗೂ ತಲುಪಿಸುವ ಕಾರ್ಯಕ್ಕೆ ಬದ್ಧವಾಗಿದೆ ಎಂಬುದನ್ನು ಸಾಬೀತು ಮಾಡಿದೆ.

ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಸರಕು ಸಾಗಾಣಿಕೆಯಲ್ಲಿ ಶೇ. 1152 ರಷ್ಟು ಪ್ರಗತಿ ಸಾಗಣೆಯಲ್ಲಿ ಸಾಧಿಸಿದ್ದು, ಇದರಿಂದಾಗಿ ₹ 59.95 ಕೋಟಿ ಆದಾಯ ಗಳಿಸಿದೆ. 2021ರ ಮೇ ತಿಂಗಳಿಗೆ ಅಂತ್ಯವಾದಂತೆ ಈ ಸಾಧನೆಯಾಗಿದ್ದು, ಇದು ಕಳೆದ ವರ್ಷಕ್ಕಿಂತ ಅಧಿಕವಾಗಿದೆ ಎಂಬುದು ಗಮನಾರ್ಹ.

ಮೈಸೂರು ವಿಭಾಗವು 2020ರ ಮೇ ತಿಂಗಳಿಗೆ 0.082 (ಎಂಟಿ)ಮೆಟ್ರಿಕ್ ಟನ್ನುಗಳ ಸರಕು ಸಾಗಣೆ ಮಾಡಿತ್ತು. ಈ ವರ್ಷದ ಮೇ ತಿಂಗಳಿಗೆ ಅದು 0.0768 ಮೆಟ್ರಿಕ್ ಟನ್’ಗಳಿಗೆ ತಲುಪಿದ್ದು, ಇದರಿಂದ ಶೇ. 836.59 ಪ್ರಗತಿ ಸಾಧಿಸಿದಂತಾಗಿದೆ.

ಪ್ರತೀ ತಿಂಗಳು 0.067 ಎಂಟಿ ಕಬ್ಬಿಣ ಅದಿರನ್ನು ತುಂಬಿಸುತ್ತಿದ್ದು, ಇದರಿಂದ ₹53.83 ಕೋಟಿ ಆದಾಯ ಬರುತ್ತಿದೆ. ಎರಡು ತಾಣಗಳಿಂದ ಅದಿರನ್ನು ತುಂಬಿಸುವ ಕಾರ್ಯವು ನವೀಕರಿಸಿರುವ ಮೈಸೂರು ವಿಭಾಗದ ಕಡಕೊಳ ಮತ್ತು ಬೆಂಗಳೂರು ವಿಭಾಗದ ಮಾಲೂರು ಟಿಲ್ಲರ್’ಗಳಿಂದ ನಡೆಯುತ್ತಿದೆ. ಇದರೊಂದಿಗೆ ವ್ಯವಹಾರ ಅಭಿವೃದ್ಧಿ ಘಟಕದ ಪ್ರಯತ್ನದಿಂದಾಗಿ ಹಾವೇರಿಯಿಂದ ನವೀ ಮುಂಬೈಗೆ ಸಕ್ಕರೆ ಸಾಗಾಣೆ ಮಾಡುವ ನೂತನ ಕಾರ್ಯವೂ ಸಹ ನಡೆದಿದೆ. ಇದರಿಂದಾಗಿ 0.002 ಮೆಟ್ರಿಕ್ ಟನ್ ಸಕ್ಕರೆಯನ್ನು ಸಾಗಾಣೆ ಮಾಡಿ 20.65 ಲಕ್ಷ ಹೆಚ್ಚುವರಿ ಆದಾಯವನ್ನು ಗಳಿಸಲಾಗಿದೆ.

ಬಿಡಿಯು ಘಟಕದ ನಿರಂತರ ಮಾರುಕಟ್ಟೆ ಪ್ರಯತ್ನದಿಂದ ಈ ಪ್ರಗತಿ ಸಾಧ್ಯವಾಗಿದೆ. ಈ ಸಂಕಷ್ಟ ಪರಿಸ್ಥಿತಿಯಲ್ಲಿ ಘಟಕವು ಸಾಗಣೆ ವಿಭಾಗವನ್ನು ಪುನಃಶ್ಚೇತನಗೊಳಿಸಿ ಇಷ್ಟೆಲ್ಲ ಯಶಸ್ಸು ತಂದಿದೆ. ಅದೇ ರೀತಿ ಒಟ್ಟು ವಸ್ತು ರವಾನೆಯಲ್ಲೂ (ಪಾರ್ಸೆಲ್) ಏರಿಕೆ ಕಂಡಿದೆ. ಕಳೆದ ವರ್ಷದ ಮೇ ತಿಂಗಳಿನಲ್ಲಿ ₹5.93. ಲಕ್ಷವಿದ್ದ ಆದಾಯ, 2021ರ ಮೇ ತಿಂಗಳಲ್ಲ ₹16.15 ಲಕ್ಷಕ್ಕೆ ಏರಿಕೆಯಾಗಿದೆ.
ಸಾಂಪ್ರದಾಯಿಕ ಬಳಕೆ ಅವಶ್ಯಕಗಳಾದ ಕಬ್ಬಿಣದ ಅದಿರು, ಪೆಟ್ರೋಲಿಯಂ ಉತ್ಪನ್ನಗಳು, ಸಿಮೆಂಟು, ಆಹಾರ ಧಾನ್ಯಗಳಾದ ಮುಸುಕಿನ ಜೋಳ, ಸಕ್ಕರೆ ಇತ್ಯಾದಿಗಳನ್ನು ಸಾಸಲು, ರಾಣಿಬೆನ್ನೂರು, ಅಮರಾವತಿ ಕಾಲೋನಿ, ಅಮ್ಮಸಂದ್ರ, ಚಿಕ್ಕಜಾಜೂರು, ಹಾವೇರಿ ಮತ್ತು ಹಾಸನ ನಿಲ್ದಾಣಗಳಿಂದ ಇವುಗಳನ್ನು ಸಾಗಾಣೆ ಮಾಡಲಾಗಿದೆ.

ಇನ್ನು ಈ ಕುರಿತಂತೆ ಮಾತನಾಡಿರುವ ಭಾರತೀಯ ರೈಲ್ವೆಯ ಮೈಸೂರು ವಿಭಾಗದ ಹಿರಿಯ ವಿಭಾಗೀಯ ಮ್ಯಾನೇಜರ್ ಡಾ.ಮಂಜುನಾಥ ಕನಮಾಡಿ ಅವರು, ರೈಲ್ವೆಯ ಪುರುಷ ಮತ್ತು ಮಹಿಳಾ ಸಿಬ್ಬಂದಿಗಳ ಅವಿರತ ಶ್ರಮದ ಫಲವಾಗಿ ಈ ಉನ್ನತ ಗುರಿಯನ್ನ ಮುಟ್ಟಲು ಸಾಧ್ಯವಾಗಿದೆ. ಇಂತಹ ಸಂಕಟ ಸ್ಥಿತಿಯಲ್ಲೂ ಅಗತ್ಯವುಳ್ಳ ಸಮುದಾಯಕ್ಕೆ ಈ ಸೇವೆ ಸಕಾಲದಲ್ಲಿ ಮುಟ್ಟುವಂತೆ ತಮ್ಮನ್ನೇ ಅರ್ಪಿಸಿಕೊಂಡು ಸ್ತುತ್ಯರ್ಹ ಕೆಲಸ ಮಾಡಿದ್ದಾರೆ. ಈ ಕರ್ತವ್ಯ ನಿರ್ವಹಿಸಿರುವುದಕ್ಕೆ ಸಿಬ್ಬಂದಿ ಮತ್ತು ಬಿಡಿಯು ಸಿಬ್ಬಂದಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದಿದ್ದಾರೆ.

ವಿಭಾಗೀಯ ರೈಲ್ವೆ ಮ್ಯಾನೇಜರ್ ರಾಹುಲ್ ಅಗ್ರವಾಲ್ ಅವರು ಮಾತನಾಡಿ, ಅಧಿಕಾರಿಗಳು ಮತ್ತು ಸಿಬ್ಬಂದಿಗಳ ವಿಶೇಷ ಪ್ರಯತ್ನದ ಫಲವಾಗಿ ಈ ಪ್ರಗತಿ ಸಾಧಿಸಲಾಗಿದೆ. ಕೋವಿಡ್ ಸಾಂಕ್ರಾಮಿಕತೆಯಿಂದ ಲಾಕ್ ಡೌನ್ ಆಗಿದ್ದರೂ ರೈಲ್ವೆ ಇಲಾಖೆಯ ಸರಕು ಸೇವೆಗಳಲ್ಲಿ ತೊಂದರೆಯಾಗದಂತೆ ನೋಡಿಕೊಂಡಿದ್ದಾರೆ. ಮುಂಬರುವ ತಿಂಗಳುಗಳಲ್ಲಿಯೂ ಸರಕು ಸಾಗಣೆ ವಹಿವಾಟಿನಲ್ಲಿ ಪ್ರಸ್ತುತ ಇರುವ ವೇಗದ ಮನಃಸ್ಥಿತಿಯನ್ನೇ ಮುಂದುವರೆಸುವುದಾಗಿ ಭರವಸೆ ವ್ಯಕ್ತಪಡಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: CovidKannada NewsKannada News LiveKannada News OnlineKannada News WebsiteKannada WebsiteLatest News KannadamysoreNews in KannadaNews KannadaSouth Western RailwayState Newsಕೋವಿಡ್ನೈಋತ್ಯ ರೈಲ್ವೆ ಮೈಸೂರುಮೈಸೂರು
Previous Post

ಕೆರೆ ಏರಿಯ ಅಚ್ಚುಕಟ್ಟು ರಸ್ತೆ ಕಾಮಗಾರಿಗೆ ಕಾಡಾ ಅಧ್ಯಕ್ಷೆ  ಪವಿತ್ರ ರಾಮಯ್ಯ ಚಾಲನೆ

Next Post

Mysore division records growth trend in freight traffic

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Internet Image

Mysore division records growth trend in freight traffic

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

File Image

ದಾವಣಗೆರೆ | ಕೆಎಸ್’ಆರ್’ಟಿಸಿಯಿಂದ ವೀಕೆಂಡ್ ಸ್ಪೆಷಲ್ ಟೂರ್ ಪ್ಯಾಕೇಜ್ | ಇಲ್ಲಿದೆ ವಿವರ

July 8, 2025
Internet Image

ಗಮನಿಸಿ! ಜು. 9ರಂದು ಶಿವಮೊಗ್ಗ ಸುತ್ತಮುತ್ತಲಿನ ಈ ಗ್ರಾಮಗಳಲ್ಲಿ ಕರೆಂಟ್ ಇರಲ್ಲ

July 8, 2025

ಶಿವಮೊಗ್ಗ | ವಿಪ್ರ ಯುವ ಮಹೋತ್ಸವ | ಹೊಸದಿಸೆಗೆ ಮುನ್ನುಡಿಯಾದ ಕಾರ್ಯಕ್ರಮ

July 8, 2025

ಮಡಿಕೇರಿ | ಜುಲೈ 9ರಂದು ಉದ್ಯೋಗ ಮೇಳ | ಯಾವೆಲ್ಲಾ ಕಂಪೆನಿ ಭಾಗಿ? ಯಾರೆಲ್ಲಾ ಪಾಲ್ಗೊಳ್ಳಬಹುದು?

July 8, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

File Image

ದಾವಣಗೆರೆ | ಕೆಎಸ್’ಆರ್’ಟಿಸಿಯಿಂದ ವೀಕೆಂಡ್ ಸ್ಪೆಷಲ್ ಟೂರ್ ಪ್ಯಾಕೇಜ್ | ಇಲ್ಲಿದೆ ವಿವರ

July 8, 2025
Internet Image

ಗಮನಿಸಿ! ಜು. 9ರಂದು ಶಿವಮೊಗ್ಗ ಸುತ್ತಮುತ್ತಲಿನ ಈ ಗ್ರಾಮಗಳಲ್ಲಿ ಕರೆಂಟ್ ಇರಲ್ಲ

July 8, 2025

ಶಿವಮೊಗ್ಗ | ವಿಪ್ರ ಯುವ ಮಹೋತ್ಸವ | ಹೊಸದಿಸೆಗೆ ಮುನ್ನುಡಿಯಾದ ಕಾರ್ಯಕ್ರಮ

July 8, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!