Wednesday, June 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಮೈಸೂರು

ಮನವನ್ನು ಶುದ್ಧವಾಗಿಟ್ಟುಕೊಂಡರೆ ಮಾತ್ರ ವೈರಾಗ್ಯ ಭಾವ ಹತ್ತಿರ: ಪಂಡಿತ ಅನಿರುದ್ಧಾಚಾರ್ಯ

July 24, 2023
in ಮೈಸೂರು
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಮೈಸೂರು  |

ದೇವರು ನೀಡಿದ ಅಮೂಲ್ಯವಾದ ಮಾನವ ಜನ್ಮದಲ್ಲಿ ಆಯುಷ್ಯವನ್ನು ಸಾರ್ಥಕ ಕಾರ್ಯಗಳಿಗೆ ಬಳಸಿಕೊಳ್ಳಬೇಕು ಎಂದು ಪಂಡಿತ ಅನಿರುದ್ಧಾಚಾರ್ಯ ಪಾಂಡುರಂಗಿ ಹೇಳಿದರು.

ಅಗ್ರಹಾರದ ಉತ್ತರಾದಿ ಮಠದ ಶ್ರೀ ಧನ್ವಂತರಿ ಸನ್ನಿಧಿಯಲ್ಲಿ ಅಧಿಕ ಶ್ರಾವಣ ಮಾಸದ ಅಂಗವಾಗಿ ಆಯೋಜಿಸಿರುವ ಒಂದು ತಿಂಗಳ ಸರಣಿ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮನವನ್ನು ಶುದ್ಧವಾಗಿ ಇಟ್ಟುಕೊಂಡರೆ ಮಾತ್ರ ವೈರಾಗ್ಯ ಭಾವ ಹತ್ತಿರವಾಗುತ್ತದೆ. ಲೋಕದ ವಸ್ತುಗಳಿಂದ ಆದಷ್ಟು ದೂರ ಇದ್ದು, ದೇವರ ಅವತಾರಗಳ ಚಿಂತನೆಗೆ ಸಾಕಷ್ಟು ಸಮಯ ವಿನಿಯೋಗಿಸಿ. ಆಗ ಇಹ ಮತ್ತು ಪರದಲ್ಲಿ ಮುಕ್ತಿ ದೊರಕುತ್ತದೆ ಎಂಬುದು ಭಾಗವತದ ಸಂದೇಶ ಎಂದು ಅವರು ಹೇಳಿದರು.

ಜ್ಞಾನ ಇಲ್ಲದೇ ಯಾವ ಲೋಕದ ಸುಖವೂ ಪ್ರಾಪ್ತಿ ಆಗುವುದಿಲ್ಲ. ಇದಕ್ಕೆ ಭಕ್ತಿಯೇ ಮೂಲ. ದೇವರು ನೀಡಿದ ಆಯುಷ್ಯದಲ್ಲಿ ಅರ್ಧ ಭಾಗ ನಿದ್ರೆಯಲ್ಲೇ ಕಳೆಯುತ್ತೇವೆ. ಉಳಿದ ಸಮಯ ಆಹಾರ, ವಿಹಾರ, ದುಡಿಮೆ, ಸಂಸಾರಕ್ಕೆ ವಿನಿಯೋಗ ಆಗುತ್ತದೆ. ಯೌವ್ವನದ ಸುಖಭೋಗ ಅನುಭವಿಸುವುದೇ ಬದುಕಿನ ಉದ್ದೇಶ ಎಂಬ ಭ್ರಮೆಯಲ್ಲಿ ಕೆಲ ವರ್ಷ ಕಳೆಯುತ್ತೇವೆ. ಹೀಗಿರುವಾಗ ಅಧ್ಯಾತ್ಮ ಜ್ಞಾನ, ದೇವರ ಚಿಂತನೆಗಳಿಗೆ ಮನ ಪಕ್ವವಾಗುವುದರೊಳಗೆ ವೃದ್ಧಾಪ್ಯ ಕಾಲಿಡುತ್ತದೆ. ಯಾವ ಸಂಪ್ರದಾಯ, ವ್ರತ, ಅನುಷ್ಠಾನಮಾಡಲು ಕಷ್ಟವಾಗುತ್ತದೆ. ಕಣ್ಣು, ಕಿವಿಗಳು ಮಂದವಾಗುತ್ತವೆ. ಕೈಕಾಲುಗಳು ನಿತ್ರಾಣ ಅನುಭವಿಸುತ್ತವೆ. ಹೀಗಿರುವ ಜೀವನದಲ್ಲಿ ಬಾಲ್ಯದಿಂದಲೇ ನಮ್ಮ ಸನಾತನ ಸಂಸ್ಕೃತಿ ಹೇಳಿದ ವ್ರತಾನುಷ್ಠಾನ ಮಾಡಬೇಕು. ಇಂದಿನ ದಿನವೇ ಶುಭ ಪುಣ್ಯ ದಿನ ಎಂದು ಸಂಕಲ್ಪ ಮಾಡಿ ಜ್ಞಾನ ಸಂಪಾದನೆಗೆ ಮುಂದಾಗಬೇಕು ಎಂಬುದೇ ಭಾಗವತದ ಆಶಯ ಎಂದರು.
ಹಿಂಸೆ ಮಾಡಬಾರದು:
ನಮಗೆ ಕಷ್ಟ ಬಂದಿದೆ ಎಂದು ಇತರರನ್ನು ಹಿಂಸೆ ಮಾಡಬಾರದು. ಪ್ರತಿಯಾಗಿ ಯಾರಿಗೂ ಕೋಪ ಮಾಡಬಾರದು. ದೇವರು ಅನೇಕ ಪ್ರಸಂಗಗಳಲ್ಲಿ ನಮ್ಮನ್ನು ರಕ್ಷಣೆ ಮಾಡಿದ್ದನ್ನು ಸ್ಮರಿಸಿಕೊಳ್ಳಬೇಕು. ದೇವರ ರೂಪ ಚಿಂತನೆ ಮಾಡಿದರೆ ಯಾವ ಸಂಕಷ್ಟವೂ ಹೆಚ್ಚಾಗಿ ಕಾಡುವುದಿಲ್ಲ. ಶರಶಯ್ಯೆಯಲ್ಲಿ ಮಲಗಿದ್ದ ಭೀಷ್ಮಾಚಾರ್ಯರೇ ಇದಕ್ಕೆ ಉದಾಹರಣೆ ಎಂದು ಪಂಡಿತ ಅನಿರುದ್ಧಾಚಾರ್ಯ ಹೇಳಿದರು.

Also read: ಜಲಪಾತ ವೀಕ್ಷಿಸುತ್ತಿದ್ದ ಭದ್ರಾವತಿ ಯುವಕ ಕಾಲುಜಾರಿ ಬಿದ್ದು ನೀರು ಪಾಲು

ಭಕ್ತಿ ಮತ್ತು ವೈರಾಗ್ಯ ಮೂಡಿಸುವ ಗ್ರಂಥ:
ಭಕ್ತಿ ಮತ್ತು ವೈರಾಗ್ಯ ಮೂಡಿಸುವ ಮಹಾನ್ ಗ್ರಂಥವೇ ಶ್ರೀಮದ್ ಭಾಗವತ. ಪಾಂಡವರ ಕಥೆ ಹೇಳುತ್ತಲೇ ಇದು ಶ್ರೀ ಕೃಷ್ಣನಲ್ಲಿ ಭಕ್ತಿ ಉಂಟುಮಾಡುವ ಶಕ್ತಿ ಹೊಂದಿದೆ. ಸತ್ಕರ್ಮ ಮಾಡಲು ವ್ಯಕ್ತಿ ಶುದ್ಧನಾಗಿರಬೇಕು, ಸ್ಥಳವೂ ಶುದ್ಧವಾಗಿರಬೇಕು ಎಂಬ ಮಾರ್ಗದರ್ಶನ ನೀಡಿದೆ. ದತ್ತಾತ್ರೇಯ, ವೃಷಭ, ಧನ್ವಂತರಿ (ಮೋಹಿನಿ), ನರಸಿಂಹ, ವಾಮನ, ಪರಶುರಾಮ, ವೇದವ್ಯಾಸ ಮತ್ತು ರಾಮನ ಅವತಾರಗಳನ್ನು ನಿರೂಪಿಸುತ್ತಲೇ ದೇವರು ಸಕಲ ಪದಾರ್ಥಗಳಲ್ಲೂ ಇದ್ದಾನೆ ಎಂಬುದನ್ನು ಪ್ರಮಾಣಗಳ ಮೂಲಕ ಭಾಗವತ ಗ್ರಂಥ ಪ್ರತಿಪಾದಿಸಿದೆ. ಇದನ್ನು ಅನುಸರಿಸಿದರೆ ನಮ್ಮ ಜೀವನ ಸಾರ್ಥಕ ಎಂದು ಅನಿರುದ್ಧಾಚಾರ್ಯ ನುಡಿದರು.
ನಂತರ ಶ್ರೀ ಭಾಗವತ ಗ್ರಂಥಕ್ಕೆ ವಿಶೇಷ ಮಂಗಳಾರತಿ, ಮಂತ್ರಾಕ್ಷತೆ ವಿತರಣೆ, ಶ್ರೀ ಧನ್ವಂತರಿ ದೇವರಿಗೆ ಕ್ಷೀರಾಭಿಷೇಕ, ಅಲಂಕಾರ ಸೇವೆ ನೆರವೇರಿತು. ನೂರಾರು ಭಕ್ತರು ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2023/05/VID-20230516-WA0005.mp4

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadamysoreNewsinKannadaNewsKannadaಮೈಸೂರು
Previous Post

ಜಲಪಾತ ವೀಕ್ಷಿಸುತ್ತಿದ್ದ ಭದ್ರಾವತಿ ಯುವಕ ಕಾಲುಜಾರಿ ಬಿದ್ದು ನೀರು ಪಾಲು

Next Post

ವಾರಣಾಸಿಯ ಜ್ಞಾನವಾಪಿ ಮಸೀದಿ ವೈಜ್ಞಾನಿಕ ಸರ್ವೆಗೆ ಸುಪ್ರೀಂ ತಾತ್ಕಾಲಿಕ ತಡೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Internet Image

ವಾರಣಾಸಿಯ ಜ್ಞಾನವಾಪಿ ಮಸೀದಿ ವೈಜ್ಞಾನಿಕ ಸರ್ವೆಗೆ ಸುಪ್ರೀಂ ತಾತ್ಕಾಲಿಕ ತಡೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮಾದಕ ವ್ಯಸನ ವಿರೋಧಿ ದಿನ: ಎಚ್‌ಪಿಆರ್ ನರ್ಸಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

June 25, 2025

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

June 25, 2025

ಮುಸ್ಲಿಮರಿಗೆ ವಸತಿ ಯೋಜನೆಯಲ್ಲಿ ಶೇ.15ರಷ್ಟು ಮೀಸಲಾತಿ ಕೂಡಲೇ ಹಿಂಪಡೆಯಿರಿ

June 25, 2025

ಜೂನ್ 30ಕ್ಕೆ ಅನ್ವಯಿಸುವಂತೆ ಮೈಸೂರು-ಶಿವಮೊಗ್ಗ-ತಾಳಗುಪ್ಪ ಎಕ್ಸ್’ಪ್ರೆಸ್ ರೈಲಿನ ಬಿಗ್ ಅಪ್ಡೇಟ್

June 25, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮಾದಕ ವ್ಯಸನ ವಿರೋಧಿ ದಿನ: ಎಚ್‌ಪಿಆರ್ ನರ್ಸಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

June 25, 2025

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

June 25, 2025

ಮುಸ್ಲಿಮರಿಗೆ ವಸತಿ ಯೋಜನೆಯಲ್ಲಿ ಶೇ.15ರಷ್ಟು ಮೀಸಲಾತಿ ಕೂಡಲೇ ಹಿಂಪಡೆಯಿರಿ

June 25, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!