No Result
View All Result
Cervical Cancer | Early Detection and Prevention Can Save Lives
English Articles

Cervical Cancer | Early Detection and Prevention Can Save Lives

by ಕಲ್ಪ ನ್ಯೂಸ್
January 16, 2026
0

Kalpa Media House  |  Special Article  |Cervical cancer remains one of the most preventable yet life-threatening cancers affecting women worldwide....

Read moreDetails
From Global Gold to Mumbai Spirit: Andre De Grasse Brings Olympic Legacy to the Tata Mumbai Marathon

From Global Gold to Mumbai Spirit: Andre De Grasse Brings Olympic Legacy to the Tata Mumbai Marathon

January 16, 2026
ಟಾಟಾ ಮುಂಬೈ ಮ್ಯಾರಥಾನ್ 2026ರಲ್ಲಿ ದಾಖಲೆ ನಿಧಿ ಸಂಗ್ರಹ

Haseena Themali Raises Over ₹5 Lakh for Palliative Care at the Tata Mumbai Marathon 2026 in her bid

January 15, 2026
ಚಳಿಗಾಲದ ಸೋಂಕುಗಳು & ಆಂಟಿಬಯೋಟಿಕ್ ದುರ್ಬಳಕೆ | ವೈರಲ್ ಯಾವುದು? ಅಪಾಯಕಾರಿ ಯಾವುದು?

Winter Infections and Antibiotic Misuse: What Is Viral? What Is Dangerous?

January 12, 2026
ಶಿವಮೊಗ್ಗ | ಜ.5-9 | ಕೃಷಿ ವಿವಿಯಲ್ಲಿ ನಡೆಯಲಿದೆ ಅಂತಾರಾಷ್ಟ್ರೀಯ ಮಹತ್ವದ ಕಾರ್ಯಾಗಾರ

Shivamogga | An international workshop will be held at the Agricultural University from Jan 5-9

January 1, 2026
  • Advertise With Us
  • Grievances
  • About Us
  • Contact Us
Tuesday, January 20, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕೃಷಿಗೆ ಉತ್ತೇಜನ ನೀಡಲು ನೇರ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲು ಒತ್ತು: ಸಚಿವ ಅಶ್ವತ್ಥನಾರಾಯಣ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 24, 2021
in ಬೆಂಗಳೂರು ನಗರ
0
ಕೃಷಿಗೆ ಉತ್ತೇಜನ ನೀಡಲು ನೇರ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲು ಒತ್ತು: ಸಚಿವ ಅಶ್ವತ್ಥನಾರಾಯಣ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ನಾಗಪುರ  |

ಕರ್ನಾಟಕದಲ್ಲಿ ಸ್ಟಾರ್ಟ್ ಅಪ್ ಗಳಿಗೆ ಮತ್ತು ತಾಂತ್ರಿಕ ಉದ್ಯಮಶೀಲರಿಗೆ ಕೃಷಿ ಹಾಗೂ ಕೃಷಿಪೂರಕ ಕ್ಷೇತ್ರಗಳಲ್ಲಿ ತೊಡಗಿಸಿಕೊಳ್ಳಲು ಉತ್ತೇಜನ ನೀಡುವ ಜೊತೆಗೆ, ಕೃಷಿ/ಆಹಾರ ತಾಂತ್ರಿಕ ಕಂಪನಿಗಳು ಹಾಗೂ ಕೃಷಿ ಉತ್ಪಾದಕ ಸಂಸ್ಥೆಗಳ ನಡುವೆ ನೇರ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲು ಒತ್ತು ಕೊಡಲಾಗಿದೆ  ಎಂದು ರಾಜ್ಯದ ಐಟಿ/ಬಿಟಿ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದರು.

ಪ್ರತಿ ವರ್ಷ ಇಲ್ಲಿ ನಡೆಯುವ ಮಧ್ಯಭಾರತದ ಅತ್ಯಂತ ದೊಡ್ಡ ಕೃಷಿಮೇಳವಾದ ‘ಅಗ್ರೋವಿಷನ್’ನ ಉದ್ಘಾಟನಾ ಸಮಾರಂಭದಲ್ಲಿ ಶುಕ್ರವಾರ ಪಾಲ್ಗೊಂಡಿದ್ದ ಅವರು ‘ತಂತ್ರಜ್ಞಾನದಿಂದ ಕೃಷಿಯ ಪರಿವರ್ತನೆ- ಆವಿಷ್ಕಾರ ಮತ್ತು ನವೋದ್ಯಮಗಳು’ ಕುರಿತು ಮಾತನಾಡಿದರು.

ಕರ್ನಾಟಕದಲ್ಲಿ ಕೃಷಿಕಲ್ಪದಂತಹ ಸಾಮಾಜಿಕ ಉದ್ಯಮಗಳ ಮೂಲಕ ನೇರ ಮಾರುಕಟ್ಟೆ ವ್ಯವಸ್ಥೆಗೆ ಸೌಕರ್ಯ ಕಲ್ಪಿಸಲಾಗಿದೆ. ಆಯ್ದ ಜಿಲ್ಲೆಗಳಲ್ಲಿ ಇದನ್ನು ಪ್ರಾಯೋಗಿಕವಾಗಿ ಜಾರಿಗೊಳಿಸಲಾಗಿದ್ದು, ಇದುವರೆಗೆ ರಾಜ್ಯದಲ್ಲಿ ಕೃಷಿ ಉತ್ಪನ್ನಗಳಿಗೆ ಈ ವ್ಯವಸ್ಥೆಯಿಂದ ರೂ 7 ಕೋಟಿ ಮೌಲ್ಯದ ಮಾರುಕಟ್ಟೆಯನ್ನು ಒದಗಿಸಲಾಗಿದೆ. ಇದರಿಂದಾಗಿ ರೈತರಿಗೆ 1.2 ಕೋಟಿ ರೂಪಾಯಿ ಹೆಚ್ಚಿನ ಆದಾಯ ಬಂದಿರುವುದರ ಜೊತೆಗೆ ಕೃಷಿ ಉತ್ಪಾದಕ ಸಂಸ್ಥೆಗಳಿಗೆ 80 ಲಕ್ಷಕ್ಕಿಂತ ಹೆಚ್ಚಿನ ಲಾಭವಾಗಿದೆ ಎಂದು ವಿವರಿಸಿದರು.

ರೈತರನ್ನು ಗಮನದಲ್ಲಿರಿಸಿಕೊಂಡು ಕೃಷಿ ಪೂರೈಕೆ ಸರಪಳಿಗೆ ಹೊಸ ರೂಪ ಕೊಡುವುದು ಅತ್ಯಗತ್ಯವಾಗಿದೆ. ಪ್ರತಿಯೊಬ್ಬ ಕೃಷಿಕನನ್ನೂ ಒಬ್ಬ ಸಣ್ಣ ಉದ್ಯಮಿಯನ್ನಾಗಿಸುವುದರ ಮಹತ್ವವನ್ನು ತಿಳಿದುಕೊಳ್ಳಬೇಕಾಗಿದೆ. ಮುಂಬರುವ ತಲೆಮಾರಿನ ರೈತರು ಹೆಚ್ಚಿನ ತಾಂತ್ರಿಕ ಜ್ಞಾನ ಹೊಂದಿದವರಾಗಿರುತ್ತಾರೆ. ಬ್ರಾಡ್ ಬ್ಯಾಂಡ್ ಸೇರಿದಂತೆ ಆಧುನಿಕ ತಂತ್ರಜ್ಞಾನಗಳು ಕುಗ್ರಾಮವನ್ನೂ ತಲುಪಲಿವೆ. ಇಂತಹ ಸನ್ನಿವೇಶದಲ್ಲಿ ನಾವು ಈ ತಾಂತ್ರಿಕ ಬೆಳವಣಿಗೆಯನ್ನು ಕೃಷಿ ಇಳುವರಿ ಹೆಚ್ಚಿಸಲು,  ಉತ್ಪಾದಕತೆ ಅಧಿಕವಾಗಿಸಲು, ಮಾರುಕಟ್ಟೆ ಸಂಪರ್ಕಗಳನ್ನು ಕಲ್ಪಿಸಲು ಬಳಸಿಕೊಳ್ಳುವ ಬಗ್ಗೆ ಆಲೋಚಿಸಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.

ಈಗ ಬೆಳೆಗೆ ಏನೇನು ಹಾಕಬೇಕೆಂಬ ಸೂಚನೆಯನ್ನು ತಂತ್ರಜ್ಞಾನವೇ ಒದಗಿಸುತ್ತದೆ.  ಐಒಟಿ ತಾಂತ್ರಿಕತೆಯಿಂದ ಹವಾಮಾನ ವರದಿಯನ್ನು ಬಹುತೇಕ ನಿಖರವಾಗಿ ಕೊಡಬಹುದು. 3 ಗಂಟೆಗಳಿಗಿಂತ ಕಡಿಮೆ ಸಮಯದಲ್ಲಿ 18 ಟನ್ ಗಳಷ್ಟು ಹಣ್ಣನ್ನು ಗ್ರೇಡ್ ಗಳಿಗೆ ತಕ್ಕಂತೆ ವಿಂಗಡಿಸಬಹುದಾದ ತಂತ್ರಜ್ಞಾನ ಅಭಿವೃದ್ಧಿಯಾಗಿದೆ. 30 ನಿಮಿಷಕ್ಕಿಂತ ಕಡಿಮೆ ಸಮಯದಲ್ಲಿ ಮಣ್ಣು ಪರೀಕ್ಷೆಯ ಫಲಿತಾಂಶ ಕೊಡಬಹುದಾಗಿದೆ. ಕೃತಕ ಬುದ್ಧಿಮತ್ತೆ ಮತ್ತು ಮಷೀನ್ ಲರ್ನಿಂಗ್ ಬಳಸಿ ಕೊಯ್ಲಿಗೆ ಬಂದ ಬೆಳೆ ಪ್ರಮಾಣ, ಪ್ರಕೃತಿ ವಿಕೋಪಗಳಿಂದಾದ ಬೆಳೆ ಹಾನಿ, ಇತ್ಯಾದಿಯನ್ನು ಲೆಕ್ಕಹಾಕಬಹುದಾಗಿದೆ ಎಂದು ವಿವರಿಸಿದರು.

ದೇಶದಲ್ಲಿ ಕೃಷಿ ತಾಂತ್ರಿಕ ನವೋದ್ಯಮಗಳು ಹೆಚ್ಚಾಗುತ್ತಿವೆ. ಕಳೆದ 11 ತಿಂಗಳಲ್ಲಿ ಈ ಕ್ಷೇತ್ರದಲ್ಲಿ 5000 ಕೋಟಿ ರೂಪಾಯಿ ಹೂಡಿಕೆಯಾಗಿದೆ. ಈಗ ದೇಶದಾದ್ಯಂತ 70ಕ್ಕೂ ಹೆಚ್ಚು ಸ್ಟಾರ್ಟ್ ಅಪ್ ಗಳು ಕೃಷಿ ಉತ್ಪನ್ನಗಳಿಗೆ ನೇರ ಮಾರುಕಟ್ಟೆ ಒದಗಿಸುವಲ್ಲಿ ತೊಡಗಿಸಿಕೊಂಡಿದ್ದು, ಸುಮಾರು 8000 ಕೋಟಿ ರೂಪಾಯಿ ಮೊತ್ತದ ವಹಿವಾಟಿಗೆ ಅನುವು ಮಾಡಿಕೊಟ್ಟಿವೆ. ಇದರಿಂದಾಗಿ ಸಂಬಂಧಪಟ್ಟ ರೈತರ ಆದಾಯವು ಒಂದೂವರೆಯಿಂದ ಎರಡು ಪಟ್ಟು ಹೆಚ್ಚಾಗಿದೆ. ‘ಸ್ಥಳೀಯ ಪ್ರಯತ್ನಗಳು ಹಾಗೂ ಜಾಗತಿಕ ಉಪಯೋಗಗಳು’ ಎಂಬುದು ನಮ್ಮ ಮಂತ್ರವಾಗಬೇಕು. ಪ್ರತಿಯೊಂದು ಜಿಲ್ಲೆ/ತಾಲ್ಲೂಕು ಮಟ್ಟದಲ್ಲಿ ಕೊಯ್ಲೋತ್ತರ ಪರಿಹಾರ ಕೇಂದ್ರಗಳ ಸ್ಥಾಪನೆಗೆ ಒತ್ತು ಕೊಡುವ ಮೂಲಕ ರೈತರ ಆದಾಯವನ್ನು ಶೇ 20ರಷ್ಟು ಹೆಚ್ಚಿಸಿ ಯುವಜನತೆಯನ್ನು ಕೃಷಿ ಉದ್ಯಮಶೀಲತೆಯಲ್ಲಿ ಪಾಲ್ಗೊಳ್ಳಲು ಪ್ರೇರೇಪಿಸಬಹುದು ಎಂದರು.

ಮೋದಿ ಅವರ ನೇತೃತ್ವದಲ್ಲಿ ಪ್ರತಿಯೊಂದು ಸವಾಲನ್ನೂ ಅವಕಾಶವನ್ನಾಗಿ ಪರಿವರ್ತಿಸಿಕೊಂಡು ಮುನ್ನಡೆಯಲಾಗುತ್ತಿದೆ. ಪ್ರತಿಯೊಂದು ಸ್ಟಾರ್ಟ್ ಅಪ್ ಜಿಲ್ಲೆಯಲ್ಲಿ 5ರಿಂದ 10 ಹಳ್ಳಿಗಳನ್ನು ದತ್ತು ತೆಗೆದುಕೊಂಡು ಅಲ್ಲಿ ಕೃಷಿ ಕ್ಷೇತ್ರದಲ್ಲಿ ತಂತ್ರಜ್ಞಾನ ಬಳಕೆ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯಬೇಕು. 2017ರಿಂದ 20ರ ಅವಧಿಯಲ್ಲಿ ದೇಶಕ್ಕೆ ಕೃಷಿ ತಾಂತ್ರಿಕತೆ ಅನುದಾನವಾಗಿ 100 ಕೋಟಿ ಡಾಲರ್ ಹಣ ಬಂದಿದೆ. 2022-25ರ ಅವಧಿಯಲ್ಲಿ ಇದು ಮೂರು ಪಟ್ಟು ಹೆಚ್ಚಾಗುವ ಅಂದಾಜಿದೆ ಎಂದು ಅಶ್ವತ್ಥ ನಾರಾಯಣ ಹೇಳಿದರು.

ದೇಶದಲ್ಲಿ ಈಗ 1000ಕ್ಕೂ ಹೆಚ್ಚು ನವೋದ್ಯಮಗಳು ಕೃಷಿ ಹಾಗೂ ಕೃಷಿ ಪೂರಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿವೆ. ಈ ಸಂಖ್ಯೆ ಕನಿಷ್ಠ ಇನ್ನೂ 10 ಪಟ್ಟು ಹೆಚ್ಚಾಗುವ ಅಗತ್ಯವಿದೆ. ಸಮೀಕ್ಷೆಗಳ ಪ್ರಕಾರ ದೇಶದಲ್ಲಿ 35 ಶತಕೋಟಿ ಡಾಲರ್ ಮೌಲ್ಯದಷ್ಟು ಕೃಷಿ ಉತ್ಪನ್ನಗಳ ಇ-ಮಾರಾಟಕ್ಕೆ ಅವಕಾಶವಿದೆ. ಸದ್ಯ ದೇಶದಲ್ಲಿ ಕೃಷಿ ಅವಲಂಬಿತರ ಸಂಖ್ಯೆಗೂ, ಅವರಿಂದ ಆಗುತ್ತಿರುವ ಉತ್ಪಾದಕತೆಗೂ ತುಂಬಾ ಅಂತರವಿದೆ. ಇಲ್ಲಿ ಶೇ 55ರಷ್ಟು ಜನ ಕೃಷಿ ಅವಲಂಬಿತರಾಗಿದ್ದರೂ ಜಾಗತಿಕ ಕೃಷಿ ವಹಿವಾಟಿಗೆ ನಮ್ಮ ಕೊಡುಗೆ ಶೇ 2.15ಕ್ಕಿಂತ ಕಡಿಮೆ ಇದ್ದರೆ, ಜಿಡಿಪಿ ಕೊಡುಗೆ ಶೇ 15ಕ್ಕಿಂತ ಕಡಿಮೆ ಇದೆ. ಈ ಪರಿಸ್ಥಿತಿ ಬದಲಾಗಿ, ಭಾರತವು ಹೈ-ಟೆಕ್ ನೆಲೆಯಾಗುವ ಜೊತೆಗೆ ಕೃಷಿ ತಾಂತ್ರಿಕತೆಯ ಪ್ರಶಸ್ತ ತಾಣವೂ ಆಗಬೇಕು ಎಂದರು.

ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಸೇರಿದಂತೆ ಹಲವರು ಹಾಜರಿದ್ದರು. ಈ ಕೃಷಿ ಮಹಾಮೇಳವು 4 ದಿನಗಳ ಕಾಲ ನಡೆಯಲಿದೆ.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaMinister AshwathnarayanNagpuraNews in KannadaNews KannadaState Newsಅಗ್ರೋವಿಷನ್’ನಾಗಪುರಸಚಿವ ಅಶ್ವತ್ಥನಾರಾಯಣ
Share197Tweet123Send
Previous Post

ಗಮನಿಸಿ! ಡಿ.26ರಂದು ಗಾಜನೂರು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಇರುವುದಿಲ್ಲ

Next Post

ದೊಡ್ಮನೆ ಸೊಸೆ ದೊಡ್ಡತನ: ಪುನೀತ್ ಪಡೆದಿದ್ದ ಅಡ್ವಾನ್ಸ್ ಕೇಳುವ ಮುನ್ನ ಹಿಂದಿರುಗಿಸಿದ ಅಶ್ವಿನಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ದೊಡ್ಮನೆ ಸೊಸೆ ದೊಡ್ಡತನ: ಪುನೀತ್ ಪಡೆದಿದ್ದ ಅಡ್ವಾನ್ಸ್ ಕೇಳುವ ಮುನ್ನ ಹಿಂದಿರುಗಿಸಿದ ಅಶ್ವಿನಿ

ದೊಡ್ಮನೆ ಸೊಸೆ ದೊಡ್ಡತನ: ಪುನೀತ್ ಪಡೆದಿದ್ದ ಅಡ್ವಾನ್ಸ್ ಕೇಳುವ ಮುನ್ನ ಹಿಂದಿರುಗಿಸಿದ ಅಶ್ವಿನಿ

Leave a Reply Cancel reply

Your email address will not be published. Required fields are marked *

  • Trending
  • Latest
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತೀರ್ಥಹಳ್ಳಿ ಭೀಕರ ಅಪಘಾತ | ನಾಲ್ಕಕ್ಕೆ ಏರಿದ ಸಾವಿನ ಸಂಖ್ಯೆ

ತೀರ್ಥಹಳ್ಳಿ ಭೀಕರ ಅಪಘಾತ | ನಾಲ್ಕಕ್ಕೆ ಏರಿದ ಸಾವಿನ ಸಂಖ್ಯೆ

January 14, 2026
ಶಿವಮೊಗ್ಗ | ಹೃದಯಾಘಾತದಿಂದ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

ಶಿವಮೊಗ್ಗ | ಹೃದಯಾಘಾತದಿಂದ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

January 9, 2026
ಜ.14ರಂದು ಶಿವಯೋಗಿ ಶ್ರೀ ಸಿದ್ದರಾಮೇಶ್ವರರ 853ನೇ ಜಯಂತಿ ಆಚರಣೆ: ರವಿಕುಮಾರ್

ಜ.14ರಂದು ಶಿವಯೋಗಿ ಶ್ರೀ ಸಿದ್ದರಾಮೇಶ್ವರರ 853ನೇ ಜಯಂತಿ ಆಚರಣೆ: ರವಿಕುಮಾರ್

January 12, 2026
ಇಂದಿನ ಪಂಚಾಂಗ : 2026ರ ಜನವರಿ 7, ಮಂಗಳವಾರ

ಇಂದಿನ ಪಂಚಾಂಗ | 2026ರ ಜನವರಿ 20, ಮಂಗಳವಾರ

January 19, 2026
ಉಡುಪಿ: ಕೃಷ್ಣಾಪುರ ಮಠದ ಪರ್ಯಾಯ ವೈಭವ ಆರಂಭ, ವಿದ್ಯಾಸಾಗರ ತೀರ್ಥರ ಪೀಠಾರೋಹಣ

ಉಡುಪಿ ಮಠಕ್ಕೆ ಹೋಗ್ತೀರಾ? ಹಾಗಾದ್ರೆ ಇನ್ಮುಂದೆ ಈ ನಿಯಮ ಪಾಲನೆ ಕಡ್ಡಾಯ

January 19, 2026
ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರಿಗೆ `ಶಿಕ್ಷಣ ಬಂಗಾರ’ ಬಿರುದು ಪ್ರದಾನ

ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರಿಗೆ `ಶಿಕ್ಷಣ ಬಂಗಾರ’ ಬಿರುದು ಪ್ರದಾನ

January 19, 2026
ಇತಿಹಾಸ ಅನುಮಾನಿಸುವವರಿಗೆ ಪ್ರಾಚೀನ ನಾಣ್ಯಗಳೇ ನೈಜ ಸಾಕ್ಷಿ: ಸಂಸದ ಯದುವೀರ ಒಡೆಯರ್

ಇತಿಹಾಸ ಅನುಮಾನಿಸುವವರಿಗೆ ಪ್ರಾಚೀನ ನಾಣ್ಯಗಳೇ ನೈಜ ಸಾಕ್ಷಿ: ಸಂಸದ ಯದುವೀರ ಒಡೆಯರ್

January 19, 2026
ವಿದಾಯ ಭಾಷಣ ಹೇಳಲು ಸಿದ್ಧರಾಮಯ್ಯ ವಿಶೇಷ ಅಧಿವೇಶನ ಕರೆದಿರಬೇಕು : ಶಾಸಕ ಚನ್ನಬಸಪ್ಪ ವ್ಯಂಗ್ಯ

ವಿದಾಯ ಭಾಷಣ ಹೇಳಲು ಸಿದ್ಧರಾಮಯ್ಯ ವಿಶೇಷ ಅಧಿವೇಶನ ಕರೆದಿರಬೇಕು : ಶಾಸಕ ಚನ್ನಬಸಪ್ಪ ವ್ಯಂಗ್ಯ

January 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL