ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಾರಾಯಣ ಹೆಲ್ತ್ ವತಿಯಿಂದ ಶಿವಮೊಗ್ಗದಲ್ಲಿ ಮತ್ತೊಂದು ಸೂಪರ್ ಸ್ಪೆಷಾಲಿಟಿ ಕ್ಲಿನಿಕ್ ಆರಂಭಿಸಿರುವುದು ಜನರು ಈ ಸಂಸ್ಥೆಯ ಮೇಲೆ ಹೊಂದಿರುವ ನಂಬಿಕೆಯ ಪ್ರತೀಕವಾಗಿದೆ ಎಂದು ಖ್ಯಾತ ನಟಿ ಅದಿತಿ ಪ್ರಭುದೇವ ಅಭಿಪ್ರಾಯಪಟ್ಟರು.
ನಾರಾಯಣ ಹೆಲ್ತ್ ವತಿಯಿಂದ ನಗರದ ಗೋಪಾಳದಲ್ಲಿ ನೂತನವಾಗಿ ಆರಂಭಿಸಿರುವ ಎರಡನೇ ಸೂಪರ್ ಸ್ಪೆಷಾಲಿಟಿ ಕ್ಲಿನಿಕ್ ಉದ್ಘಾಟಿಸಿ ಅವರು ಮಾತನಾಡಿದರು.
ನಾರಾಯಣ ಹೆಲ್ತ್ ಸಂಸ್ಥೆ ರಾಜ್ಯದಾದ್ಯಂತ ಜನರ ವಿಶ್ವಾಸವನ್ನು ಗಳಿಸಿಕೊಂಡಿರುವ ಪ್ರಮುಖ ಆರೋಗ್ಯ ಸಂಸ್ಥೆಯಾಗಿದ್ದು, ಶಿವಮೊಗ್ಗದಲ್ಲಿ ಮತ್ತೊಂದು ಕ್ಲಿನಿಕ್ ಆರಂಭಿಸಿರುವುದು ಸಂಸ್ಥೆಯ ಮೇಲಿನ ಜನರ ನಂಬಿಕೆಯ ಪ್ರತೀಕವಾಗಿದೆ.
-ಅದಿತಿ ಪ್ರಭುದೇವ, ಖ್ಯಾತ ನಟಿ
ಆರೋಗ್ಯ ಸೇವೆಯ ಮಹತ್ವವನ್ನು ಉಲ್ಲೇಖಿಸಿದ ಅವರು, ಯಾವುದೇ ಸಂಕಷ್ಟದ ಸಂದರ್ಭದಲ್ಲೂ ವೈದ್ಯರು ತಮ್ಮ ಕುಟುಂಬಕ್ಕಿಂತ ಸೇವೆಗೆ ಆದ್ಯತೆ ನೀಡುತ್ತಾರೆ. ವೈದ್ಯೋ ನಾರಾಯಣೋ ಹರಿ’ ಎಂಬ ನುಡಿ ನಿಜವಾಗಿಯೂ ವೈದ್ಯರ ಸೇವೆಗೆ ಅನ್ವಯಿಸುತ್ತದೆ ಎಂದು ಹೇಳಿದರು.
ನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ. ಉತ್ತಮ್ ಶರ್ಮಾ ಮಾತನಾಡಿ, ಗೋಪಾಳ ಹಾಗೂ ಸುತ್ತಮುತ್ತಲಿನ ಪ್ರದೇಶದ ಜನರಿಗೆ ಗುಣಮಟ್ಟದ ಮತ್ತು ಸುಲಭ ಲಭ್ಯವಾಗುವ ಆರೋಗ್ಯ ಸೇವೆ ಒದಗಿಸುವ ಉದ್ದೇಶದಿಂದ ಈ ಕ್ಲಿನಿಕ್ ಸ್ಥಾಪಿಸಲಾಗಿದೆ ಎಂದು ತಿಳಿಸಿದರು.
ಉದ್ಘಾಟನಾ ಅಂಗವಾಗಿ ಶಿವಮೊಗ್ಗದ ನಾಗರಿಕರಿಗಾಗಿ ರೂ.1,999ಕ್ಕೆ ಸಮಗ್ರ ಆರೋಗ್ಯ ತಪಾಸಣಾ ಪ್ಯಾಕೇಜ್ ಪರಿಚಯಿಸಲಾಗಿದೆ ಎಂದು ಹೇಳಿದರು.
Also Read>> ರಾಜ್ಯಪಾಲರನ್ನು ಭೇಟಿಯಾಗಿ ಮಹತ್ವದ ಮನವಿ ಸಲ್ಲಿಸಿದ ಸಂಸದ ರಾಘವೇಂದ್ರ
ಈ ಪ್ಯಾಕೇಜ್ ಮೂಲಕ ಸಾಮಾನ್ಯ ಜನರಿಗೆ ಕೈಗೆಟುಕುವ ದರದಲ್ಲಿ ಆರೋಗ್ಯ ಪರಿಶೀಲನೆ ಸೌಲಭ್ಯ ಒದಗಿಸುವುದು ಸಂಸ್ಥೆಯ ಉದ್ದೇಶವಾಗಿದೆ ಎಂದು ವಿವರಿಸಿದರು.
ನಾರಾಯಣ ಹೆಲ್ತ್ ಸಂಸ್ಥೆಯ ಮಾರ್ಕೆಟಿಂಗ್ ಹಾಗೂ ಗ್ರೋಥ್ ಕ್ಲಸ್ಟರ್ ಮುಖ್ಯಸ್ಥ ರಾಜಾಸಿಂಗ್ ಮಾತನಾಡಿ, ಗೋಪಾಳವು ಶಿವಮೊಗ್ಗದ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ವಸತಿ ಪ್ರದೇಶಗಳಲ್ಲಿ ಒಂದಾಗಿದೆ. ಇಲ್ಲಿ ವೈದ್ಯರು, ಉದ್ಯಮಿಗಳು ಹಾಗೂ ಮಧ್ಯಮವರ್ಗದ ಕುಟುಂಬಗಳು ಹೆಚ್ಚಿನ ಸಂಖ್ಯೆಯಲ್ಲಿ ವಾಸವಾಗಿದ್ದು, ಅವರಿಗೆ ಮನೆ ಸಮೀಪದಲ್ಲೇ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ಅಗತ್ಯತೆ ಇದ್ದು, ಅದನ್ನು ಮನಗಂಡು ಕ್ಲಿನಿಕ್ ಆರಂಭಿಸಲಾಗಿದೆ ಎಂದು ಹೇಳಿದರು.
ಹೊಸ ಕ್ಲಿನಿಕ್’ನಲ್ಲಿ ಎಕ್ಸ್-ರೇ, ಎಕೋ, ಟಿಎಂಟಿ, ರಕ್ತ ಪರೀಕ್ಷೆಗಳ ಮಾದರಿ ಸಂಗ್ರಹ ಕೇಂದ್ರ, ಫಾರ್ಮಸಿ, ಫಿಸಿಯೋಥೆರಪಿ ಸೇರಿದಂತೆ ವಿವಿಧ ತಜ್ಞ ವೈದ್ಯರ ಸಲಹೆಗಳು ಒಂದೇ ಸೂರಿನಡಿ ಲಭ್ಯವಿವೆ. ಇದರಿಂದ ಸ್ಥಳೀಯರಿಗೆ ತ್ವರಿತ ಮತ್ತು ಸಮಗ್ರ ಆರೋಗ್ಯ ಸೇವೆ ದೊರೆಯುವ ನಿರೀಕ್ಷೆಯಿದೆ.
Also Read>> ಫಾರ್ಮಸಿಸ್ಟ್ ವೃತ್ತಿ ಸಾಮಾಜಿಕ ಬದ್ಧತೆಯ ಜವಾಬ್ದಾರಿ: ಡಾ. ಖಾಲಿದ್ ಅಹಮದ್ ಖಾನ್
ಈ ಸಂದರ್ಭದಲ್ಲಿ ಹಿರಿಯ ವೈದ್ಯ ಡಾ. ಎನ್.ಎಲ್. ನಾಯ್ಕ್ ಅವರಿಗೆ ಸನ್ಮಾನಿಸಲಾಯಿತು. ಡಾ. ಎಂ.ಎಲ್. ಚೇತನ್, ನಾರಾಯಣ ಹೆಲ್ತ್ ಡೆಪ್ಯೂಟಿ ಜನರಲ್ ಮ್ಯಾನೇಜರ್ ಸಂತ ಕುಮಾರ, ಮಾರುಕಟ್ಟೆ ವಿಭಾಗದ ಮುಖ್ಯಸ್ಥ ಎಸ್.ಎನ್. ಶೈಲೇಶ್ ಸೇರಿದಂತೆ ವೈದ್ಯರು, ಸಿಬ್ಬಂದಿ ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಒಟ್ಟಾರೆ, ಗೋಪಾಳ ಪ್ರದೇಶದಲ್ಲಿ ನಾರಾಯಣ ಹೆಲ್ತ್ ಕ್ಲಿನಿಕ್ ಆರಂಭವು ಸ್ಥಳೀಯ ಜನತೆಗೆ ಸಮೀಪದಲ್ಲೇ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ದಿಸೆಯಲ್ಲಿ ಮಹತ್ವದ ಹೆಜ್ಜೆಯಾಗಿ ಪರಿಗಣಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

















