ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ನವದೆಹಲಿ: ರಾಜ್ಯ ಹಾಗೂ ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಳವಾಗಿರುವ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.
ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾಹಿತಿ ಪಡೆದು, ಹಲವು ಸೂಚನೆಗಳನ್ನು ಅವರು ನೀಡಿದ್ದಾರೆ.
ಸೋಂಕಿತ ವ್ಯಕ್ತಿಯ ಮನೆಯ ಸುತ್ತ ಮೈಕ್ರೋ ಕಂಟೈನ್ಮೆಂಟ್ ಝೋನ್ ಆಗಿ ಪರಿವರ್ತಿಸಿ, ಸೋಂಕು ಅಕ್ಕಪಕ್ಕದವರಿಗೆ ಹರಡದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ.
ಮನೆಯಲ್ಲಿಯೇ ಐಸೋಲೇಶನ್’ನಲ್ಲಿರುವ ಸೋಂಕಿತರ ಕುರಿತಾಗಿ ಹೆಚ್ಚಿನ ನಿಗಾ ವಹಿಸಬೇಕಿದ್ದು, ಇದಕ್ಕೆ ಮೇಲ್ವಿಚಾರಣೆಗೆ ಅವರು ಸೂಚಿಸಿದ್ದಾರೆ.
ಮುಂದಿನ ಕನಿಷ್ಠ 6 ವಾರಗಳ ಕಾಲ ಕಟ್ಟೆಚ್ಚರ ವಹಿಸಲು ಪ್ರಧಾನಿಯವರು ಸೂಚಿಸಿದ್ದು, ರ್ಯಾಪಿಡ್ ಟೆಸ್ಟ್’ನಲ್ಲಿ ನೆಗೆಟಿವ್ ಬಂದರೂ ಆಂಟಿಜನ್ ಟೆಸ್ಟ್ ಮಾಡಲು ಆದೇಶಿಸಿದ್ದಾರೆ.
ಈ ಹಿಂದೆ ರಾಜ್ಯದಾದ್ಯಂತ ಸೀಲ್ ಡೌನ್ ಪ್ರಕ್ರಿಯೆ ನಡೆದಿತ್ತು. ಆದರೆ, ಜನರ ವಿರೋಧ ಹಾಗೂ ಸಾಮಾಜಿಕ ಬಹಿಷ್ಕಾರದಂತೆ ಜನರು ನೋಡುವ ಪರಿಸ್ಥಿತಿ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಸೀಲ್ ಡೌನ್ ಸ್ಥಗಿತಗೊಳಿಸಲಾಗಿತ್ತು. ಆದರೆ, ಈಗ ಕೊರೋನಾ ಹೆಚ್ಚಳದ ಹಿನ್ನೆಲೆಯಲ್ಲಿ ಮೈಕ್ರೋ ಕಂಟೈನ್ಮೆಂಟ್ ಝೋನ್ ಮಾಡಲು ಸ್ವತಃ ಪ್ರಧಾನಿಯವರೇ ಸೂಚಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತಗಳೂ ಯಾವ ರೀತಿ ನಿರ್ಧಾರ ಕೈಗೊಳ್ಳಲಿದೆ ಎಂಬುದನ್ನು ಕಾದುನೋಡಬೇಕಿದೆ.
Get In Touch With Us info@kalpa.news Whatsapp: 9481252093
Discussion about this post