ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಮುಂಬೈ: ದೇಶದ ಖಾಸಗಿ ಬ್ಯಾಂಕ್’ಗಳಲ್ಲಿ ಒಂದಾದ ಲಕ್ಷ್ಮಿ ವಿಲಾಸ್ ಬ್ಯಾಂಕ್ ದಿವಾಳಿ ಅಂಚಿಗೆ ತಲುಪಿದೆ ಎಂದು ವರದಿಯಾಗಿದ್ದು, ಇದಕ್ಕೆ ಪೂರಕವೆಂಬಂತೆ ಹಣ ವಿತ್ ಡ್ರಾ ಮಿತಿಯನ್ನು 25 ಸಾವಿರ ರೂ.ಗೆ ನಿಗದಿಪಡಿಸಲಾಗಿದೆ.
Central Government places The Lakshmi Vilas Bank Ltd under a moratorium for 30 days, caps withdrawal limit from the bank at Rs 25,000 till December 16: Reserve Bank of India
— ANI (@ANI) November 17, 2020
ಈ ಕುರಿತಂತೆ ಭಾರತೀಯ ರಿಸರ್ವ್ ಬ್ಯಾಂಕ್ ಮಾಹಿತಿ ಬಿಡುಗಡೆ ಮಾಡಿದ್ದು, ಸರ್ಕಾರದ ಆದೇಶದಂತೆ ಲಕ್ಷ್ಮೀ ವಿಲಾಸ್ ಬ್ಯಾಂಕ್ ಮೇಲೆ ಒಂದು ತಿಂಗಳ ತಾತ್ಕಾಲಿಕ ನಿಷೇಧ ಹೇರಿದ್ದು, ಬ್ಯಾಂಕ್ ಖಾತೆದಾರರಿಗೆ ಹಣ ಹಿಂಪಡೆಯುವ ಗರಿಷ್ಠ ಮಿತಿಯನ್ನು 25 ಸಾವಿರ ರೂ.ಗೆ ನಿಗದಿಪಡಿಸಲಾಗಿದೆ. ಭಾರತೀಯ ರಿಸರ್ವ್ ಬ್ಯಾಂಕ್ನ ಸಲಹೆ ಮೇರೆಗೆ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.
ಅತ್ಯಂತ ಪ್ರಮುಖವಾಗಿ ಈ ಬ್ಯಾಂಕ್ ನಿರ್ದೇಶಕರ ಮಂಡಳಿಯನ್ನು ರದ್ದುಪಡಿಸಲಾಗಿದ್ದು, ಕೆನರಾ ಬ್ಯಾಂಕ್’ನ ಮಾಜಿ ನಾನ್ಎಕ್ಸಿಕ್ಯುಟಿವ್ ಚೇರ್ಮನ್ ಟಿ.ಎನ್.ಮನೋಹರನ್ ಅವರನ್ನು ಬ್ಯಾಂಕ್ನ ಆಡಳಿತಾಧಿಕಾರಿಯಾಗಿ ನೇಮಿಸಲಾಗಿದೆ ಎಂದು ವರದಿಯಾಗಿದೆ.
ಲಕ್ಷ್ಮಿ ವಿಲಾಸ್ ಬ್ಯಾಂಕ್ನ ಹಣಕಾಸು ಪರಿಸ್ಥಿತಿ ಹದಗೆಡುತ್ತಿದ್ದ ಬೆನ್ನಲ್ಲೇ ಈ ನಿರ್ಧಾರಕ್ಕೆ ಬರಲಾಗಿದ್ದು, ಆರ್’ಬಿಐ ಪ್ರಕಟಣೆಯಲ್ಲಿ ಠೇವಣಿದಾರರ ಹಿತಾಸಕ್ತಿ ರಕ್ಷಿಸಲು, ಹಣಕಾಸು ಮತ್ತು ಬ್ಯಾಂಕಿಂಗ್ ವಲಯದ ಭದ್ರತೆಗಾಗಿ ಕೇಂದ್ರ ಸರ್ಕಾರದಿಂದ ತಾತ್ಕಾಲಿಕ ನಿರ್ಬಂಧ ಹೇರುವ ಹೊರತು ಬೇರೆ ಮಾರ್ಗಗಳು ಕಂಡು ಬಂದಿಲ್ಲ. ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆ, 1949ರ ಸೆಕ್ಷನ್ 45ರ ಅಡಿಯಲ್ಲಿ ನಿರ್ಬಂಧ ವಿಧಿಸಲಾಗಿದೆ ಎಂದು ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post